Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 24:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಪುನಃ ಇಸ್ರಾಯೇಲರ ಮೇಲೆ ಕೋಪಗೊಂಡು ದಾವೀದನನ್ನು ಇಸ್ರಾಯೇಲ್ ಮತ್ತು ಯೆಹೂದ ಕುಲಗಳವರ ಜನಗಣತಿ ಮಾಡುವುದಕ್ಕೆ ಪ್ರೇರೇಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರಸ್ವಾಮಿ ಮತ್ತೆ ಇಸ್ರಯೇಲರ ಮೇಲೆ ಕೋಪಗೊಂಡರು. ಇಸ್ರಯೇಲ್ ಹಾಗು ಯೆಹೂದ್ಯಕುಲಗಳವರ ಜನಗಣತಿ ಮಾಡುವುದಕ್ಕೆ ದಾವೀದನನ್ನು ಪ್ರೇರೇಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ತಿರಿಗಿ ಇಸ್ರಾಯೇಲ್ಯರ ಮೇಲೆ ಕೋಪಗೊಂಡು ದಾವೀದನನ್ನು ಇಸ್ರಾಯೇಲ್ ಯೆಹೂದ್ಯ ಕುಲಗಳವರ ಖಾನೇಷುಮಾರಿಮಾಡುವದಕ್ಕೆ ಪ್ರೇರೇಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನು ಇಸ್ರೇಲರ ಮೇಲೆ ಮತ್ತೆ ಕೋಪಗೊಂಡು ಇಸ್ರೇಲರ ವಿರುದ್ಧನಾಗುವಂತೆ ದಾವೀದನನ್ನು ಪ್ರೇರೇಪಿಸಿದನು. ದಾವೀದನು, “ಇಸ್ರೇಲಿನ ಮತ್ತು ಯೆಹೂದದ ಜನಗಣತಿ ಮಾಡಿರಿ” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರ ಕೋಪವು ತಿರುಗಿ ಇಸ್ರಾಯೇಲಿಗೆ ವಿರೋಧವಾಗಿ ಉರಿಯಿತು. ಆಗ ದೇವರು, “ಯೆಹೂದ ಮತ್ತು ಇಸ್ರಾಯೇಲರ ಜನಗಣತಿ ಮಾಡು,” ಎಂದು ದಾವೀದನನ್ನು ಪ್ರೇರೇಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 24:1
23 ತಿಳಿವುಗಳ ಹೋಲಿಕೆ  

ಸೈತಾನನು ಇಸ್ರಾಯೇಲರಿಗೆ ವಿರುದ್ಧ ಎದ್ದು, ಇಸ್ರಾಯೇಲರ ಜನಗಣತಿ ಮಾಡುವುದಕ್ಕೆ ದಾವೀದನನ್ನು ಪ್ರೇರೇಪಿಸಿದನು.


ನಿನ್ನ ಕೈಯೂ ನಿನ್ನ ಸಂಕಲ್ಪವೂ ಮೊದಲು ನೇಮಿಸಿದ್ದನ್ನೇ ನಡಿಸಿದರು.


“ಇದಲ್ಲದೆ, ನಾನೇ ಯೆಹೋವನು ಎಂದು ಅವರು ತಿಳಿದುಕೊಳ್ಳುವಂತೆ ನಾನು ಅವರಿಗೆ ಅಹಿತವಾದ ಆಜ್ಞೆಗಳನ್ನೂ, ಜೀವಾಧಾರವಲ್ಲದ ವಿಧಿಗಳನ್ನೂ ನೇಮಿಸಿದೆನು.


“ಒಬ್ಬ ಪ್ರವಾದಿಯು ಮರುಳುಗೊಂಡು ದೈವೋಕ್ತಿಯನ್ನು ನುಡಿದರೆ, ಆ ಪ್ರವಾದಿಯನ್ನು ಮರುಳುಗೊಳಿಸಿದವನು ಯೆಹೋವನಾದ ನಾನೇ; ನಾನು ಅವನ ಮೇಲೆ ಕೈಯೆತ್ತಿ ಇಸ್ರಾಯೇಲರಾದ ನನ್ನ ಜನರೊಳಗಿಂದ ಅವನನ್ನು ಕಿತ್ತು ನಿರ್ನಾಮಮಾಡುವೆನು.


ಅದಕ್ಕೆ ಅರಸನು, “ಚೆರೂಯಳ ಮಕ್ಕಳೇ, ನಾನು ನಿಮಗೇನು ಮಾಡಿದೆ? ಬಹುಶಃ ಅವನು ನನ್ನನ್ನು ಶಪಿಸಿದ್ದಾನೆ, ಏಕೆಂದರೆ, ‘ದಾವೀದನನ್ನು ಶಪಿಸು’ ಎಂದು ಯೆಹೋವನೇ ಅವನಿಗೆ ಆಜ್ಞಾಪಿಸಿದ ಮೇಲೆ ‘ನೀನು ಹೀಗೇಕೆ ಮಾಡಿದಿ?’ ಎಂದು ಅವನನ್ನು ಕೇಳುವವರು ಯಾರು?” ಎಂದು ಉತ್ತರ ಕೊಟ್ಟನು.


ಯೆಹೋವನಾದ ನನ್ನ ಮಾತನ್ನು ಕೇಳು. ನಾನು ನಿನ್ನ ಮನೆಯವರಿಂದಲೇ ನಿನಗೆ ಕೇಡು ಉಂಟಾಗುವಂತೆ ಮಾಡುವೆನು. ನಿನ್ನ ಹೆಂಡತಿಯರನ್ನು ತೆಗೆದು ನಿನ್ನೆದುರಿನಲ್ಲಿಯೇ ಇನ್ನೊಬ್ಬನಿಗೆ ಕೊಡುವೆನು. ಅವನು ಹಗಲಿನಲ್ಲಿಯೇ ಅವರ ಕೂಡ ಮಲಗುವನು. ನೀನು ಅದನ್ನು ಗುಪ್ತವಾಗಿ ಮಾಡಿರುವೆ.


ಯಾವ ಪಾಪಕ್ಕೆ ಕೈಹಾಕಿದೆನು? ನನ್ನ ಅರಸನಾದ ಒಡೆಯನು ದಯವಿಟ್ಟು ತನ್ನ ಸೇವಕನ ಮಾತುಗಳನ್ನು ಲಾಲಿಸಬೇಕು. ನಿನ್ನನ್ನು ನನಗೆ ವಿರೋಧವಾಗಿ ಎಬ್ಬಿಸಿದವನು ಯೆಹೋವನೇ ಆಗಿರುವ ಪಕ್ಷದಲ್ಲಿ, ಆತನಿಗೆ ಘಮಘಮಿಸುವ ನೈವೇದ್ಯವನ್ನು ಅಂಗೀಕರಿಸಬೇಕು. ಮನುಷ್ಯರಾಗಿದ್ದರೆ ಯೆಹೋವನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಿರಲಿ ಯಾಕೆಂದರೆ ಯೆಹೋವನ ಸ್ವತ್ತಿನಲ್ಲಿ ನನಗೆ ಪಾಲು ಸಿಕ್ಕದಂತೆ ‘ಹೋಗಿ ಅನ್ಯದೇವತೆಗಳನ್ನು ಸೇವಿಸು’ ಎಂದು ನನ್ನನ್ನು ತಳ್ಳಿಬಿಟ್ಟರು.


ಆದರೂ ನಾನು ಫರೋಹನ ಮನಸ್ಸಿನಲ್ಲಿ ಹಠವನ್ನು ಹುಟ್ಟಿಸಿ, ಐಗುಪ್ತದೇಶದಲ್ಲಿ ಅನೇಕ ಸೂಚಕಕಾರ್ಯಗಳನ್ನೂ ಮತ್ತು ಅದ್ಭುತಕಾರ್ಯಗಳನ್ನೂ ಮಾಡಿ ನನ್ನ ಶಕ್ತಿಯನ್ನು ತೋರಿಸುವೆನು.


ನೀವಂತೂ ನನಗೆ ಕೇಡಾಗಬೇಕೆಂದು ಎಣಿಸಿದಿರಿ. ಆದರೆ ದೇವರು ನನ್ನನ್ನು ಮೇಲಾಗಬೇಕೆಂದು ಸಂಕಲ್ಪಿಸಿದನು; ಆದುದರಿಂದ ಇಂದು ನೀವು ಕಾಣುವಂತೆ, ಅನೇಕ ಜನರ ಪ್ರಾಣವು ಸಂರಕ್ಷಿಸಲ್ಪಟ್ಟಿತ್ತು” ಎಂದನು.


ನೀವು ನನ್ನನ್ನು ಹಾಗೆ ಮಾರಿದ್ದಕ್ಕಾಗಿ ವ್ಯಸನಪಟ್ಟು ದುಃಖಿಸಬೇಡಿರಿ. ಪ್ರಾಣ ಸಂರಕ್ಷಣೆಗಾಗಿ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದನು.


ಇದೇ ಕಾರಣದಿಂದ ದೇವರು ಗಾಢಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಒಳಪಡಿಸುತ್ತಾನೆ.


ಮೋಶೆ ಆರೋನನಿಗೂ ಅವನ ಮಕ್ಕಳಾದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬುವವರಿಗೆ, “ನೀವು ತಲೆಯನ್ನು ಕೆದರಿಕೊಳ್ಳಬಾರದು; ಬಟ್ಟೆಗಳನ್ನು ಹರಿದುಕೊಳ್ಳಬಾರದು. ಹಾಗೆ ಮಾಡಿದರೆ ನೀವೂ ಸಾಯುವಿರಿ; ಅದಲ್ಲದೆ ಯೆಹೋವನಿಗೆ ಜನಸಮೂಹದವರೆಲ್ಲರ ಮೇಲೆ ಸಿಟ್ಟು ಉಂಟಾಗುವುದು. ಯೆಹೋವನು ಹೊತ್ತಿಸಿದ ಈ ಬೆಂಕಿಯ ದೆಸೆಯಿಂದ ನಿಮ್ಮ ಸಹೋದರರಾಗಿರುವ ಎಲ್ಲಾ ಇಸ್ರಾಯೇಲರ ಮನೆತನದವರೇ ದುಃಖಿಸಲಿ.


ಹೀಗೆ ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಮೋಶೆ ಸೀನಾಯಿ ಅರಣ್ಯದಲ್ಲಿ ಅವರನ್ನು ಲೆಕ್ಕಮಾಡಿ ಮೊಟ್ಟಮೊದಲು ಜನಗಣತಿ ಪ್ರಾರಂಭಿಸಿದನು.


ತೋಲನ ಮಕ್ಕಳಾದ, ಉಜ್ಜೀ, ರೆಫಾಯ, ಯೆರೀಯೇಲ್, ಯಹ್ಮೈ, ಇಬ್ಸಾಮ್ ಮತ್ತು ಸಮುವೇಲ್. ಇವರು ತೋಲನ ವಂಶದ ಕುಟುಂಬಗಳಲ್ಲಿ ಪ್ರಧಾನ ಪುರುಷರೂ, ರಣವೀರರೂ ಆಗಿದ್ದರು. ತೋಲ ವಂಶದವರ ಸಂಖ್ಯೆಯು ದಾವೀದನ ಕಾಲದಲ್ಲಿ ಇಪ್ಪತ್ತೆರಡು ಸಾವಿರದ ಆರುನೂರು.


ಆಗ ಯೆಹೋವನ ಕೋಪವು ಅವರ ಮೇಲೆ ಹೆಚ್ಚಾಯಿತು. ಆತನು ಅವರನ್ನು ಸೂರೆಮಾಡುವವರ ಕೈಗೆ ಒಪ್ಪಿಸಲು ಅವರು ಅವರನ್ನು ಸೂರೆಮಾಡಿದರು. ಆತನು ಅವರನ್ನು ಸುತ್ತಣ ವೈರಿಗಳಿಗೆ ಮಾರಿಬಿಟ್ಟನು. ಅವರು ಆ ಶತ್ರುಗಳ ಮುಂದೆ ನಿಲ್ಲಲಾರದವರಾದರು.


ಆದ್ದರಿಂದ ಯೆಹೋವನ ಕೋಪವು ಇಸ್ರಾಯೇಲರ ಮೇಲೆ ಹೆಚ್ಚಾಯಿತು. ಆತನು, “ಈ ಜನರ ಪೂರ್ವಿಕರಿಗೆ ನಾನು ಕೊಟ್ಟ ಒಡಂಬಡಿಕೆಯನ್ನು ಇವರು ಕೈಕೊಳ್ಳಲಿಲ್ಲ; ನನ್ನ ಮಾತಿಗೆ ಕಿವಿಗೊಡಲಿಲ್ಲ.


ಆದುದರಿಂದ ಅರಸನಾದ ಯೋರಾಮನು ಕೂಡಲೆ ಇಸ್ರಾಯೇಲರನ್ನು ಸೇರಿಸಿಕೊಂಡು ಸಮಾರ್ಯದಿಂದ ಹೊರಟು ಬಂದನು.


ಇವರೆಲ್ಲರು ಆಶೇರ್ಯರಲ್ಲಿ ಗೋತ್ರಪ್ರಧಾನರೂ, ಯುದ್ಧಪ್ರವೀಣರಾದ ರಣವೀರರೂ ಮತ್ತು ಶ್ರೇಷ್ಠ ನಾಯಕರೂ ಆಗಿದ್ದರು. ಇವರ ವಂಶಾವಳಿಯ ಪಟ್ಟಿಯ ಪ್ರಕಾರ ಯುದ್ಧ ಪ್ರವೀಣರಾದ ಭಟರ ಸಂಖ್ಯೆ ಇಪ್ಪತ್ತಾರು ಸಾವಿರ.


ಆದರೆ ಹಿಜ್ಕೀಯನು ಈ ಉಪಕಾರಕ್ಕೆ ತಕ್ಕಂತೆ ನಡೆಯದೆ ಅಹಂಕಾರಿಯಾದನು. ಆದುದರಿಂದ ಯೆಹೂದದ ಮೇಲೆಯೂ ಯೆರೂಸಲೇಮಿನವರ ಮೇಲೆಯೂ ದೇವರ ಕೋಪವುಂಟಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು