Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 24:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅರಸನು ತನ್ನ ಹತ್ತಿರದಲ್ಲಿದ್ದ ಸೇನಾಧಿಪತಿಯಾದ ಯೋವಾಬನಿಗೆ, “ಜನಸಂಖ್ಯೆ ಗೊತ್ತಾಗುವ ಹಾಗೆ ನೀನು ದಾನ್ ಊರಿನಿಂದ ಬೇರ್ಷೆಬದ ವರೆಗೆ ಸಂಚರಿಸಿ ಇಸ್ರಾಯೇಲ್ ಕುಲಗಳ ಜನಗಣತಿ ಮಾಡಿಕೊಂಡು ಬಾ” ಎಂದು ಅವನಿಗೆ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅರಸನು ತನ್ನ ಹತ್ತಿರದಲ್ಲಿದ್ದ ಸೇನಾಪತಿಯಾದ ಯೋವಾಬನಿಗೆ, “ಜನಸಂಖ್ಯೆ ಗೊತ್ತಾಗುವ ಹಾಗೆ ನೀನು ದಾನ್ ಊರಿನಿಂದ ಬೇರ್ಷೆಬದವರೆಗೆ ಸಂಚರಿಸಿ ಇಸ್ರಯೇಲ್ ಕುಲಗಳ ಎಲ್ಲ ಜನರನ್ನು ಲೆಕ್ಕಮಾಡಿಕೊಂಡು ಬಾ,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅರಸನು ತನ್ನ ಹತ್ತಿರದಲ್ಲಿದ್ದ ಸೇನಾಪತಿಯಾದ ಯೋವಾಬನಿಗೆ - ಜನಸಂಖ್ಯೆ ಗೊತ್ತಾಗುವ ಹಾಗೆ ನೀನು ದಾನ್ ಊರಿನಿಂದ ಬೇರ್ಷೆಬದವರೆಗೆ ಸಂಚರಿಸಿ ಇಸ್ರಾಯೇಲ್‍ಕುಲಗಳ ಎಲ್ಲಾ ಜನರನ್ನು ಲೆಕ್ಕಮಾಡಿಕೊಂಡು ಬಾ ಎಂದು ಅವನಿಗೆ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ರಾಜನಾದ ದಾವೀದನು ಸೈನ್ಯದ ಸೇನಾಧಿಪತಿಯಾದ ಯೋವಾಬನಿಗೆ, “ದಾನ್‌ನಿಂದ ಬೇರ್ಷೆಬದವರೆಗಿನ ಇಸ್ರೇಲಿನ ಎಲ್ಲಾ ಕುಲಗಳಲ್ಲಿ ಸಂಚರಿಸಿ ಜನರನ್ನು ಲೆಕ್ಕಹಾಕಿರಿ. ಆಗ ಅಲ್ಲಿ ಎಷ್ಟು ಜನರಿದ್ದಾರೆಂಬುದು ನನಗೆ ತಿಳಿಯುತ್ತದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅರಸನು ಸೈನ್ಯಾಧಿಪತಿಯಾದ ಯೋವಾಬನಿಗೆ, “ನಾನು ಜನರ ಲೆಕ್ಕವನ್ನು ತಿಳಿಯುವ ಹಾಗೆ, ನೀನು ದಾನಿನಿಂದ ಬೇರ್ಷೆಬದವರೆಗೂ ಇರುವ ಇಸ್ರಾಯೇಲ್ ಸಮಸ್ತ ಗೋತ್ರಗಳಲ್ಲಿ ಹೋಗಿ, ಯುದ್ಧಮಾಡಲು ಶಕ್ತರಾದ ಜನರನ್ನು ಲೆಕ್ಕಮಾಡಿಕೊಂಡು ಬಾ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 24:2
16 ತಿಳಿವುಗಳ ಹೋಲಿಕೆ  

ಯೆಹೋವನಾದ ದೇವರು ದಾವೀದನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸದೆ ಹೋದರೆ, ಆತನು ನನಗೆ ಬೇಕಾದದ್ದನ್ನು ಮಾಡಲಿ” ಅಂದನು.


ದಾನ್ ಪಟ್ಟಣದಿಂದ ಬೇರ್ಷೆಬದವರೆಗಿರುವ ಪ್ರಾಂತ್ಯಗಳಲ್ಲಿಯೂ, ಗಿಲ್ಯಾದಿನಲ್ಲಿಯೂ ಇರುವ ಇಸ್ರಾಯೇಲರೆಲ್ಲರೂ ಏಕಮನಸ್ಸಿನಿಂದ ಹೊರಟು ಮಿಚ್ಪೆಗೆ ಬಂದು ಯೆಹೋವನ ಸನ್ನಿಧಿಯಲ್ಲಿ ಸಭೆ ಸೇರಿದರು.


ಯೋವಾಬನು ಇಸ್ರಾಯೇಲರ ಮುಖ್ಯ ಸೇನಾಧಿಪತಿ. ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲುದಂಡುಗಳ ಅಧಿಪತಿ.


ಈ ಕಾರಣದಿಂದಲೂ ಮತ್ತು ನನಗೆ ತಿಳಿಸಲ್ಪಟ್ಟ ರಹಸ್ಯಗಳು ಬಹು ವಿಶೇಷವಾಗಿರುವುದರಿಂದಲೂ ನಾನು ಹೊಗಳಿಕೊಳ್ಳದೇ ಸುಮ್ಮನಿರುತ್ತೇನೆ. ನಾನು ನನ್ನನ್ನು ಅತಿಶಯವಾಗಿ ಹೆಚ್ಚಿಸಿಕೊಳ್ಳಬಾರದೆಂದು ಒಂದು ಶೂಲವು ನನ್ನನ್ನು ತಿವಿಯುವುದಕ್ಕಾಗಿ ನನ್ನ ದೇಹದೊಳಗೆ ಇರಿಸಲಾಗಿದೆ. ನಾನು ಅಹಂಕಾರಪಡದ ಹಾಗೆ ಇದು ನನ್ನನ್ನು ತಿವಿತಿವಿದು ಸೈತಾನನ ದೂತನಂತೆ ಕಾಡಿಸುತ್ತಿತ್ತು.


ಯೆಹೋವನು ಹೀಗೆನ್ನುತ್ತಾನೆ, “ಮಾನವ ಮಾತ್ರದವರಲ್ಲಿ ಭರವಸವಿಟ್ಟು, ನರಜನ್ಮದವರನ್ನು ತನ್ನ ಭುಜಬಲವೆಂದು ತಿಳಿದು, ಯೆಹೋವನನ್ನು ತೊರೆಯುವ ಮನಸ್ಸುಳ್ಳವನು ಶಾಪಗ್ರಸ್ಥನು.


ಗರ್ವವು ಮನುಷ್ಯನನ್ನು ದೀನಸ್ಥಿತಿಗೆ ತರುವುದು, ದೀನಮನಸ್ಸುಳ್ಳವನು ಮಾನವನ್ನು ಪಡೆಯುವನು.


ಆದರೂ ಅವನ ದೇಶದಲ್ಲಿ ಉಂಟಾದ ಅದ್ಭುತ ವಿಷಯವನ್ನು ವಿಚಾರಿಸುವುದಕ್ಕಾಗಿ ಬಾಬೆಲಿನ ಅರಸನ ರಾಯಭಾರಿಗಳು ಅವನ ಬಳಿಗೆ ಬಂದಾಗ, ದೇವರು ಅವನನ್ನು ಪರೀಕ್ಷಿಸುವುದಕ್ಕೂ ಹಾಗು ಅವನ ಸರ್ವಾಂತರ್ಯವನ್ನು ತಿಳಿದುಕೊಳ್ಳುವುದಕ್ಕೂ ಅವನನ್ನು ಬಿಟ್ಟುಕೊಟ್ಟನು


ದಾವೀದನು ಯೋವಾಬನನ್ನೂ ಮತ್ತು ಜನಾಧಿಪತಿಗಳನ್ನೂ ಕರೆದು, “ನನಗೆ ಜನರ ಲೆಕ್ಕ ಗೊತ್ತಾಗುವ ಹಾಗೆ ನೀವು ಬೇರ್ಷೆಬದಿಂದ ದಾನ್ ಊರಿನವರೆಗೂ ಸಂಚರಿಸಿ, ಇಸ್ರಾಯೇಲರನ್ನು ಲೆಕ್ಕ ಮಾಡಿಕೊಂಡು ಬನ್ನಿರಿ” ಎಂದು ಆಜ್ಞಾಪಿಸಿದನು.


ಅಮ್ಮೋನಿಯನಾದ ಚೆಲೆಕ್, ಬೇರೋತ್ಯನೂ ಚೆರೂಯಳ ಮಗನಾದ ಯೋವಾಬನ ಆಯುಧವಾಹಕನೂ ಆಗಿದ್ದ ನಹರೈ


ಹೀಗಿರುವುದರಿಂದ ನನ್ನ ಆಲೋಚನೆಯನ್ನು ಕೇಳು. ದಾನಿನಿಂದ ಬೇರ್ಷೆಬದ ವರೆಗೆ ವಾಸವಾಗಿರುವ ಇಸ್ರಾಯೇಲರೊಳಗಿನಿಂದ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಸೈನ್ಯವನ್ನು ಕೂಡಿಸಿ, ನೀನೂ ಅವರ ಜೊತೆಯಲ್ಲಿ ಯುದ್ಧಕ್ಕೆ ಹೋಗಬೇಕು.


ಚೆರೂಯಳ ಮಗನಾದ ಯೋವಾಬನೂ ಅವನ ಸೇನಾಧಿಪತಿಯೂ ಅಹೀಲೂದನ ಮಗನಾದ ಯೆಹೋಷಾಫಾಟನು ರಾಜವಂಶಸ್ಥದ ಇತಿಹಾಸಕಾರನಾಗಿದ್ದನು.


ಚೆರೂಯಳ ಮಗನಾದ ಯೋವಾಬನೂ ದಾವೀದನ ಸೇವಕರು ಹೊರಟು ಅವರನ್ನು ಗಿಬ್ಯೋನಿನ ಕೆರೆಯ ಹತ್ತಿರ ಸಂಧಿಸಿ, ಒಂದು ಗುಂಪು ಕೆರೆಯ ಈಚೆಯಲ್ಲಿಯೂ ಇನ್ನೊಂದು ಗುಂಪು ಆಚೆಯಲ್ಲಿಯೂ ಕುಳಿತುಕೊಂಡರು.


ಮಾರನೆಯ ದಿನ ಬೆಳಗ್ಗೆ ಅಬ್ರಹಾಮನು ಎದ್ದು, ಹಾಗರಳಿಗೆ ಬುತ್ತಿಯನ್ನೂ, ಒಂದು ತಿತ್ತಿ ತಣ್ಣೀರನ್ನೂ ಅವಳ ಹೆಗಲಿನ ಮೇಲೆ ಇಟ್ಟು, ಮಗುವನ್ನು ಒಪ್ಪಿಸಿ ಅವಳನ್ನು ಕಳುಹಿಸಿಬಿಟ್ಟನು. ಅವಳು ಹೊರಟು ಬೇರ್ಷೆಬದ ಕಾಡಿನಲ್ಲಿ ಅಲೆಯುತ್ತಿದ್ದಳು.


ಆಗ ಯೆಹೋವನು ಇಸ್ರಾಯೇಲರ ಮೇಲೆ ವ್ಯಾಧಿಯನ್ನು ಬರಮಾಡಿದನು. ಅದು ಹೊತ್ತಾರೆಯಿಂದ ನೇಮಕವಾದ ಹೊತ್ತಿನ ವರೆಗೂ ಇತ್ತು. ದಾನಿನಿಂದ ಬೇರ್ಷೆಬದ ವರೆಗೆ ವಾಸವಾಗಿರುವ ಇಸ್ರಾಯೇಲರಲ್ಲಿ ಎಪ್ಪತ್ತು ಸಾವಿರ ಜನರು ಸತ್ತುಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು