Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 3:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆಹೋವನಾದ ದೇವರು ದಾವೀದನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸದೆ ಹೋದರೆ, ಆತನು ನನಗೆ ಬೇಕಾದದ್ದನ್ನು ಮಾಡಲಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆ ವಾಗ್ದಾನವನ್ನು ನಾನು ನೆರವೇರಿಸದೆ ಹೋದರೆ ಅವರು ನನಗೆ ಏನುಬೇಕಾದರೂ ಮಾಡಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೆಹೋವನಾದ ದೇವರು ದಾವೀದನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸದೆಹೋದರೆ ಆತನು ನನಗೆ ಬೇಕಾದದ್ದನ್ನು ಮಾಡಲಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ದಾವೀದನ ಸಿಂಹಾಸನವನ್ನು ದಾನಿನಿಂದ ಬೇರ್ಷೆಬದ ಮಟ್ಟಿಗೂ ಇರುವ ಇಸ್ರಾಯೇಲಿನ ಮೇಲೆಯೂ, ಯೆಹೂದದ ಮೇಲೆಯೂ ಸ್ಥಿರಪಡಿಸುವ ಹಾಗೆ ನಾನು ಮಾಡದೆ ಇದ್ದರೆ, ದೇವರು ಅಬ್ನೇರನಿಗೆ ಹೀಗೆಯೂ ಅಧಿಕವಾಗಿಯೂ ಮಾಡಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 3:10
9 ತಿಳಿವುಗಳ ಹೋಲಿಕೆ  

ಯೆಹೋವನು ಅವನನ್ನು ತನ್ನ ಪ್ರವಾದಿಯನ್ನಾಗಿ ನೇಮಿಸಿಕೊಂಡದ್ದು ದಾನ್ ಊರಿನಿಂದ ಬೇರ್ಷೆಬದವರೆಗಿದ್ದ ಎಲ್ಲಾ ಇಸ್ರಾಯೇಲರಿಗೆ ಗೊತ್ತಾಯಿತು.


ದಾನ್ ಪಟ್ಟಣದಿಂದ ಬೇರ್ಷೆಬದವರೆಗಿರುವ ಪ್ರಾಂತ್ಯಗಳಲ್ಲಿಯೂ, ಗಿಲ್ಯಾದಿನಲ್ಲಿಯೂ ಇರುವ ಇಸ್ರಾಯೇಲರೆಲ್ಲರೂ ಏಕಮನಸ್ಸಿನಿಂದ ಹೊರಟು ಮಿಚ್ಪೆಗೆ ಬಂದು ಯೆಹೋವನ ಸನ್ನಿಧಿಯಲ್ಲಿ ಸಭೆ ಸೇರಿದರು.


ಸೊಲೊಮೋನನ ಆಳ್ವಿಕೆಯಲ್ಲೆಲ್ಲಾ ದಾನ್ ಪಟ್ಟಣ ಮೊದಲುಗೊಂಡು ಬೇರ್ಷೆಬದವರೆಗಿರುವ ಸಮಸ್ತ ಇಸ್ರಾಯೇಲರೂ ಮತ್ತು ಯೆಹೂದ್ಯರೂ ತಮ್ಮ ತಮ್ಮ ದ್ರಾಕ್ಷಾಲತೆ, ಅಂಜೂರದ ಗಿಡ ಇವುಗಳ ನೆರಳಿನಲ್ಲಿ ವಾಸಮಾಡುತ್ತಾ ಸುರಕ್ಷಿತರಾಗಿದ್ದರು.


ಅರಸನು ತನ್ನ ಹತ್ತಿರದಲ್ಲಿದ್ದ ಸೇನಾಧಿಪತಿಯಾದ ಯೋವಾಬನಿಗೆ, “ಜನಸಂಖ್ಯೆ ಗೊತ್ತಾಗುವ ಹಾಗೆ ನೀನು ದಾನ್ ಊರಿನಿಂದ ಬೇರ್ಷೆಬದ ವರೆಗೆ ಸಂಚರಿಸಿ ಇಸ್ರಾಯೇಲ್ ಕುಲಗಳ ಜನಗಣತಿ ಮಾಡಿಕೊಂಡು ಬಾ” ಎಂದು ಅವನಿಗೆ ಆಜ್ಞಾಪಿಸಿದನು.


ಹೀಗಿರುವುದರಿಂದ ನನ್ನ ಆಲೋಚನೆಯನ್ನು ಕೇಳು. ದಾನಿನಿಂದ ಬೇರ್ಷೆಬದ ವರೆಗೆ ವಾಸವಾಗಿರುವ ಇಸ್ರಾಯೇಲರೊಳಗಿನಿಂದ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಸೈನ್ಯವನ್ನು ಕೂಡಿಸಿ, ನೀನೂ ಅವರ ಜೊತೆಯಲ್ಲಿ ಯುದ್ಧಕ್ಕೆ ಹೋಗಬೇಕು.


ಆಗ ಸಮುವೇಲನು ಅವನಿಗೆ, “ಯೆಹೋವನು ಈ ಹೊತ್ತು ಇಸ್ರಾಯೇಲಿನ ರಾಜ್ಯವನ್ನು ನಿನ್ನಿಂದ ಕಿತ್ತುಕೊಂಡು ನಿನಗಿಂತ ಉತ್ತಮನಾದ ಇನ್ನೊಬ್ಬನಿಗೆ ಕೊಟ್ಟಿದ್ದಾನೆ.


ಈಷ್ಬೋಶೆತನು ಅವನಿಗೆ ಹೆದರಿ ಏನೂ ಉತ್ತರಕೊಡಲಾರದೆ ಹೋದನು.


ಅಬ್ನೇರನು ದಾವೀದನಿಗೆ, “ನಾನು ಹೊರಟುಹೋಗಿ ಇಸ್ರಾಯೇಲರನ್ನೆಲ್ಲಾ ಕೂಡಿಸಿ, ನನ್ನ ಒಡೆಯನಾದ ಅರಸನ ಬಳಿಗೆ ಕರೆದುಕೊಂಡು ಬರುವೆನು. ಅವರು ನಿನ್ನ ಸಂಗಡ ಒಡಂಬಡಿಕೆ ಮಾಡಿಕೊಳ್ಳುವರು. ನೀನು ನಿನ್ನ ಅಪೇಕ್ಷೆಯಂತೆ ಎಲ್ಲರ ಮೇಲೆ ದೊರೆತನಮಾಡಬಹುದು” ಎಂದು ಹೇಳಲು ದಾವೀದನು ಅವನನ್ನು ಸಮಾಧಾನದಿಂದ ಕಳುಹಿಸಿಕೊಟ್ಟನು.


ಆತನು ನನ್ನ ಮುಖಾಂತರ ನಿನಗೆ ಹೇಳಿದ್ದನ್ನು ನೆರವೇರಿಸಿದ್ದಾನೆ. ರಾಜ್ಯವನ್ನು ನಿನ್ನಿಂದ ಕಿತ್ತುಕೊಂಡು ನಿನ್ನ ನೆರೆಯವನಾದ ದಾವೀದನಿಗೆ ಕೊಟ್ಟಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು