Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 4:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ತನ್ನ ಆಳುಗಳಿಗೆ ಆಜ್ಞಾಪಿಸಲು ಅವರು ಇವರನ್ನು ಕೊಂದು, ಕೈಕಾಲುಗಳನ್ನು ಕತ್ತರಿಸಿ, ಶವಗಳನ್ನು ಹೆಬ್ರೋನಿನ ಕೆರೆಯ ಬಳಿಯಲ್ಲಿ ನೇತುಹಾಕಿದರು. ಈಷ್ಬೋಶೆತನ ತಲೆಯನ್ನು ಹೆಬ್ರೋನಿನಲ್ಲಿದ್ದ ಅಬ್ನೇರನ ಸಮಾಧಿಯಲ್ಲಿ ಹೂಳಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅಂತೆಯೇ ತನ್ನ ಆಳುಗಳಿಗೆ ಆಜ್ಞಾಪಿಸಿದನು. ಅವರು ಇವರನ್ನು ಕೊಂದು ಕೈಕಾಲುಗಳನ್ನು ಕತ್ತರಿಸಿ ಶವಗಳನ್ನು ಹೆಬ್ರೋನಿನ ಕೆರೆಯ ಬಳಿಯಲ್ಲಿ ನೇತುಹಾಕಿದರು. ಈಷ್ಬೋಶೆತನ ತಲೆಯನ್ನು ಹೆಬ್ರೋನಿನಲ್ಲಿದ್ದ ಇಬ್ನೇರನ ಸಮಾಧಿಯಲ್ಲಿ ಹೂಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ತನ್ನ ಆಳುಗಳಿಗೆ ಆಜ್ಞಾಪಿಸಲು ಅವರು ಇವರನ್ನು ಕೊಂದು ಕೈಕಾಲುಗಳನ್ನು ಕತ್ತರಿಸಿ ಶವಗಳನ್ನು ಹೆಬ್ರೋನಿನ ಕೆರೆಯ ಬಳಿಯಲ್ಲಿ ನೇತುಹಾಕಿದರು. ಈಷ್ಬೋಶೆತನ ತಲೆಯನ್ನು ಹೆಬ್ರೋನಿನಲ್ಲಿದ್ದ ಅಬ್ನೇರನ ಸಮಾಧಿಯಲ್ಲಿ ಇಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ದಾವೀದನು, ರೇಕಾಬನನ್ನು ಮತ್ತು ಬಾಣನನ್ನು ಕೊಲ್ಲಲು ಯುವಕರಿಗೆ ಆಜ್ಞಾಪಿಸಿದನು. ಆಗ ಆ ಯುವಕರು ರೇಕಾಬನ ಮತ್ತು ಬಾಣನ ಕೈಕಾಲುಗಳನ್ನು ಕತ್ತರಿಸಿಹಾಕಿ, ಹೆಬ್ರೋನಿನ ಕೊಳದ ಬಳಿಯಲ್ಲಿ ಅವರ ದೇಹಗಳನ್ನು ನೇತುಹಾಕಿದರು. ನಂತರ ಅವರು ಈಷ್ಬೋಶೆತನ ತಲೆಯನ್ನು ತೆಗೆದುಕೊಂಡು ಹೋಗಿ, ಹೆಬ್ರೋನಿನಲ್ಲಿ ಅಬ್ನೇರನನ್ನು ಸಮಾಧಿಮಾಡಿದ ಸ್ಥಳದಲ್ಲೇ ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ದಾವೀದನು ತನ್ನ ಜನರಿಗೆ ಆಜ್ಞಾಪಿಸಿದ್ದರಿಂದ, ಅವರು ಅವರನ್ನು ಕೊಂದುಹಾಕಿ, ಅವರ ಕೈಕಾಲುಗಳನ್ನು ಕಡಿದು, ಹೆಬ್ರೋನಿನ ಕೊಳದ ಬಳಿಯಲ್ಲಿ ತೂಗುಹಾಕಿದರು. ಈಷ್ಬೋಶೆತನ ತಲೆಯನ್ನು ತೆಗೆದುಕೊಂಡು, ಅದನ್ನು ಹೆಬ್ರೋನಿನಲ್ಲಿರುವ ಅಬ್ನೇರನ ಸಮಾಧಿಯಲ್ಲಿ ಹೂಳಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 4:12
8 ತಿಳಿವುಗಳ ಹೋಲಿಕೆ  

ಅಬ್ನೇರನ ಶವವನ್ನು ಹೆಬ್ರೋನಿನಲ್ಲಿ ಸಮಾಧಿಮಾಡಿದರು. ಅರಸನು ಅವನ ಸಮಾಧಿಯ ಹತ್ತಿರ ನಿಂತು ಗಟ್ಟಿಯಾಗಿ ಅತ್ತನು. ಜನರೆಲ್ಲರೂ ಅತ್ತರು.


ತನ್ನ ಆಳುಗಳಲ್ಲಿ ಒಬ್ಬನನ್ನು ಕರೆದು, “ಹೋಗಿ ಇವನನ್ನು ಕೊಂದುಹಾಕು” ಎಂದು ಆಜ್ಞಾಪಿಸಲು ಅವನು ಅಮಾಲೇಕ್ಯನನ್ನು ಹೊಡೆದು ಕೊಂದನು.


ನೀವು ಮಾಡುವ ತೀರ್ಪಿಗೆ ಸರಿಯಾಗಿ ನಿಮಗೂ ತೀರ್ಪಾಗುವುದು; ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು.


ದೇವರೇ, ನೀನು ದುಷ್ಟರನ್ನು ಪಾತಾಳದ ಕೆಳಕ್ಕೆ ದೊಬ್ಬಿಬಿಡುವಿ. ಕೊಲೆಪಾತಕರೂ ವಂಚಕರೂ ನರಾಯುಷ್ಯದ ಅರ್ಧಾಂಶವಾದರೂ ಬದುಕುವುದಿಲ್ಲ. ನಾನಂತೂ ನಿನ್ನನ್ನೆ ನಂಬಿಕೊಂಡಿರುವೆನು.


ಅವರು ಇವರನ್ನು ಕೊಂದು, ಗುಡ್ಡದ ಮೇಲೆ ಯೆಹೋವನ ಸನ್ನಿಧಿಯಲ್ಲಿ ನೇತುಹಾಕಿದರು. ಈ ಏಳು ಮಂದಿಯೂ ಏಕ ಕಾಲದಲ್ಲಿ ಸತ್ತುಹೋದರು. ಇವರನ್ನು ಕೊಂದಾಗ ಜವೆಗೋದಿಯ ಸುಗ್ಗಿ ಆರಂಭವಾಗಿತ್ತು


ಸೌಲನ ಸೇನಾಧಿಪತಿಯೂ ನೇರನ ಮಗನೂ ಆದ ಅಬ್ನೇರನು ಸೌಲನ ಮಗನಾದ ಈಷ್ಬೋಶೆತನನ್ನು ಹೊಳೆಯ ಆಚೆಯಲ್ಲಿರುವ ಮಹನಯಿಮಿಗೆ ಕರೆದುಕೊಂಡು ಹೋಗಿ


ಸೌಲನ ರಾಜ್ಯವನ್ನು ಕಸಿದುಕೊಂಡು ಅವನ ಮನೆಯವರನ್ನು ಕೊಂದದ್ದಕ್ಕಾಗಿ ಯೆಹೋವನು ನಿನಗೆ ಮುಯ್ಯಿ ತೀರಿಸಿದ್ದಾನೆ. ಆತನು ರಾಜ್ಯವನ್ನು ನಿನ್ನ ಮಗನಾದ ಅಬ್ಷಾಲೋಮನಿಗೆ ಕೊಟ್ಟು ಬಿಟ್ಟನು. ಕೊಲೆಗಾರನೇ ಇಗೋ, ನಿನಗೆ ಈಗ ತಕ್ಕ ಆಪತ್ತು ಬಂದಿದೆ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು