Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 4:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಹೆಬ್ರೋನಿನಲ್ಲಿದ್ದ ಅರಸನಾದ ದಾವೀದನ ಬಳಿಗೆ ಬಂದು, ಆ ತಲೆಯನ್ನು ಅವನಿಗೆ ತೋರಿಸಿ, “ಇಗೋ ನಿನ್ನ ಜೀವತೆಗೆಯಬೇಕೆಂದಿದ್ದ ನಿನ್ನ ಶತ್ರುವಾದ ಸೌಲನ ಮಗ ಈಷ್ಬೋಶೆತನ ತಲೆ. ಅರಸನಾದ ನಮ್ಮ ಒಡೆಯನಿಗಾಗಿ ಸೌಲನಿಗೂ ಅವನ ಸಂತಾನಕ್ಕೂ ಯೆಹೋವನು ಈ ಹೊತ್ತು ಮುಯ್ಯಿ ತೀರಿಸಿದ್ದಾನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಹೆಬ್ರೋನಿನಲ್ಲಿದ್ದ ಅರಸನಾದ ದಾವೀದನ ಬಳಿಗೆ ಬಂದು ಆ ತಲೆಯನ್ನು ಅವನಿಗೆ ತೋರಿಸಿದರು; “ಇಗೋ, ನಿಮ್ಮ ಜೀವತೆಗೆಯಬೇಕೆಂದಿದ್ದ ನಿಮ್ಮ ಶತ್ರುವಾದ ಸೌಲನ ಮಗ ಈಷ್ಬೋಶೆತನ ತಲೆ; ಅರಸರಾದ ನಮ್ಮ ಒಡೆಯರಿಗಾಗಿ ಸರ್ವೇಶ್ವರಸ್ವಾಮಿ ಸೌಲನಿಗೂ ಅವನ ಸಂತಾನಕ್ಕೂ ಈ ಹೊತ್ತು ಸೇಡುತೀರಿಸಿದ್ದಾರೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಹೆಬ್ರೋನಿನಲ್ಲಿದ್ದ ಅರಸನಾದ ದಾವೀದನ ಬಳಿಗೆ ಬಂದು ಆ ತಲೆಯನ್ನು ಅವನಿಗೆ ತೋರಿಸಿ - ಇಗೋ, ನಿನ್ನ ಜೀವತೆಗೆಯಬೇಕೆಂದಿದ್ದ ನಿನ್ನ ಶತ್ರುವಾದ ಸೌಲನ ಮಗ ಈಷ್ಬೋಶೆತನ ತಲೆ! ಅರಸನಾದ ನಮ್ಮ ಒಡೆಯನಿಗಾಗಿ ಸೌಲನಿಗೂ ಅವನ ಸಂತಾನಕ್ಕೂ ಯೆಹೋವನು ಈ ಹೊತ್ತು ಮುಯ್ಯಿತೀರಿಸಿದ್ದಾನೆ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಹೆಬ್ರೋನಿಗೆ ಬಂದು ಈಷ್ಬೋಶೆತನ ತಲೆಯನ್ನು ದಾವೀದನಿಗೆ ಕೊಟ್ಟರು. ರೇಕಾಬನು ಮತ್ತು ಬಾಣನು ರಾಜನಾದ ದಾವೀದನಿಗೆ, “ಸೌಲನ ಮಗನೂ ನಿನ್ನ ಶತ್ರುವೂ ಅದ ಈಷ್ಬೋಶೆತನ ತಲೆಯು ಇಲ್ಲಿದೆ. ಅವನು ನಿನ್ನನ್ನು ಕೊಲ್ಲಲು ಪ್ರಯತ್ನಿಸಿದನು. ನಿನಗಾಗಿ ಯೆಹೋವನು ಈ ದಿನ ಸೌಲನನ್ನೂ ಅವನ ಕುಲವನ್ನೂ ದಂಡಿಸಿದನು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅನಂತರ ಹೆಬ್ರೋನಿನಲ್ಲಿರುವ ದಾವೀದನ ಬಳಿಗೆ ಈಷ್ಬೋಶೆತನ ತಲೆಯನ್ನು ತಂದು ಅರಸನಿಗೆ, “ಇಗೋ, ನಿನ್ನ ಪ್ರಾಣವನ್ನು ಹುಡುಕಿದ ನಿನ್ನ ಶತ್ರುವಾಗಿದ್ದ ಸೌಲನ ಮಗ ಈಷ್ಬೋಶೆತನ ತಲೆಯು. ಈ ದಿನದಲ್ಲಿ ಯೆಹೋವ ದೇವರು ಅರಸನಾದ ನಮ್ಮ ಒಡೆಯನಿಗೋಸ್ಕರ ಸೌಲನಿಗೂ, ಅವನ ಸಂತಾನಕ್ಕೂ ಮುಯ್ಯಿ ತೀರಿಸಿದ್ದಾರೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 4:8
18 ತಿಳಿವುಗಳ ಹೋಲಿಕೆ  

ಯಾವನಾದರೂ ನನ್ನ ಒಡೆಯನಾದ ನಿನ್ನನ್ನು ಹಿಂಸಿಸಿ ಜೀವತೆಗೆಯಬೇಕೆಂದಿದ್ದರೂ, ಆ ನಿನ್ನ ಜೀವವು ನಿನ್ನ ದೇವರಾದ ಯೆಹೋವನ ರಕ್ಷಣೆಯಲ್ಲಿರುವ ಜೀವ ನಿಕ್ಷೇಪದಲ್ಲಿ ಭದ್ರವಾಗಿರಲಿ. ಆದರೆ ಆತನು ನಿನ್ನ ಶತ್ರುಗಳ ಜೀವವನ್ನು ಕವಣೆಯ ಕಲ್ಲನ್ನೋ ಎಂಬಂತೆ ಎಸೆದು ಬಿಡಲಿ.


ಆತನು ನನ್ನ ಶತ್ರುಗಳಿಗೆ ಪ್ರತಿದಂಡನೆಮಾಡುವ ದೇವರು. ಜನಾಂಗಗಳನ್ನು ನನಗೆ ಅಧೀನಪಡಿಸುತ್ತಾನೆ.


ಪರಲೋಕವೇ, ದೇವಜನರೇ, ಅಪೊಸ್ತಲರೇ, ಪ್ರವಾದಿಗಳೇ ಅವಳ ನಿಮಿತ್ತ ಜಯಘೋಷಮಾಡಿರಿ. ಏಕೆಂದರೆ ಇವಳು ನಿಮಗೆ ಮಾಡಿದ ಅನ್ಯಾಯಕ್ಕೆ ಸರಿಯಾಗಿ ದೇವರು ಇವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ.


ಅವರು, “ಸರ್ವಶಕ್ತನಾದ ಕರ್ತನೇ, ಪರಿಶುದ್ಧನೂ, ಸತ್ಯವಂತನೂ, ಆಗಿರುವಾತನೇ, ನಮ್ಮ ರಕ್ತವನ್ನು ಸುರಿಸಿದ ಭೂಲೋಕ ನಿವಾಸಿಗಳಿಗೆ ನೀನು ಇನ್ನೆಷ್ಟು ಸಮಯ ನ್ಯಾಯತೀರಿಸದೆಯೂ, ಪ್ರತಿದಂಡನೆ ಮಾಡದೆಯೂ ಇರುವಿ?” ಎಂದು ಮಹಾಶಬ್ದದಿಂದ ಕೂಗಿದರು.


“ನೀನು ಎದ್ದು ಕೂಸನ್ನೂ ಅದರ ತಾಯಿಯನ್ನೂ ಕರೆದುಕೊಂಡು ಇಸ್ರಾಯೇಲ್ ದೇಶಕ್ಕೆ ಹೋಗು; ಕೂಸಿನ ಪ್ರಾಣವನ್ನು ತೆಗೆಯಬೇಕೆಂದಿದ್ದವರು ಸತ್ತು ಹೋದರು” ಎಂದು ಹೇಳಿದನು.


ನನ್ನ ಕೇಡಿಗೆ ಪ್ರಯತ್ನಿಸಿದವರು ಆಶಾಭಂಗಪಟ್ಟು ಅಪಮಾನ ಹೊಂದಿದ್ದಾರೆ. ಆದುದರಿಂದ ನನ್ನ ನಾಲಿಗೆಯು ದಿನವೆಲ್ಲಾ ನಿನ್ನ ನೀತಿಸಾಧನೆಯನ್ನು ವರ್ಣಿಸುತ್ತಿರುವುದು.


ಅಷ್ಟರಲ್ಲಿ ಕೂಷ್ಯನು ಬಂದು, “ನನ್ನ ಒಡೆಯನಾದ ಅರಸನಿಗೆ ಶುಭವರ್ತಮಾನ ತಂದಿದ್ದೇನೆ. ಯೆಹೋವನು ನಿನಗೆ ವಿರೋಧವಾಗಿ ಎದ್ದವರೆಲ್ಲರಿಗೂ ಮುಯ್ಯಿತೀರಿಸಿದ್ದಾನೆ” ಎಂದನು.


ಚಾದೋಕನ ಮಗನಾದ ಅಹೀಮಾಚನು ಯೋವಾಬನಿಗೆ, “ಅಪ್ಪಣೆಯಾಗಲಿ ನಾನು ಅರಸನ ಬಳಿಗೆ ಓಡಿಹೋಗಿ ಯೆಹೋವನು ಅವನ ವೈರಿಗಳಿಗೆ ಮುಯ್ಯಿ ತೀರಿಸಿದ್ದಾನೆಂಬ ಶುಭ ವರ್ತಮಾನವನ್ನು ತಿಳಿಸುವೆನು” ಎಂದನು.


ಜನರು ದಾವೀದನಿಗೆ “ನಿನ್ನ ಶತ್ರುವನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು, ಆಗ ನೀನು ಅವನನ್ನು ಮನಸ್ಸಿಗೆ ಬಂದಂತೆ ನಡೆಸಬಹುದು ಎಂದು ಯೆಹೋವನು ನಿನಗೆ ಹೇಳಿದ ಮಾತು ನೆರವೇರುವ ದಿನ ಇದೇ” ಅಂದಾಗ ಅವನೆದ್ದು ಮೆಲ್ಲನೆ ಹೋಗಿ ಸೌಲನ ನಿಲುವಂಗಿಯ ತುದಿಯನ್ನು ಕತ್ತರಿಸಿಕೊಂಡನು.


ಸೌಲನು ತನ್ನನ್ನು ಕೊಲ್ಲಲು ಹೊರಟಿದ್ದಾನೆಂದು ದಾವೀದನು ತಿಳಿದು ಜೀಫ್ ಅರಣ್ಯದ ಹೋರೆಷದಲ್ಲಿ ಅಡಗಿಕೊಂಡಿದ್ದನು.


ದಾವೀದನು ರಾಮದ ನಯೋತಿನಿಂದ ತಪ್ಪಿಸಿಕೊಂಡು ಯೋನಾತಾನನ ಬಳಿಗೆ ಬಂದು ಅವನಿಗೆ, “ನಿನ್ನ ತಂದೆಯು ನನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನಲ್ಲ, ನಾನೇನು ಮಾಡಿದೆನು? ನನ್ನ ಅಪರಾಧವೇನು? ನಾನು ಅವನಿಗೆ ಮಾಡಿದ ದ್ರೋಹವು ಯಾವುದು?” ಎನ್ನಲು,


ಸೌಲನು ತಿರುಗಿ ತನ್ನ ಆಳುಗಳನ್ನು, “ನೀವು ಹೋಗಿ ನೋಡಿ ದಾವೀದನನ್ನು ಹಾಸಿಗೆಯೊಡನೆ ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ, ಕೊಂದುಹಾಕುತ್ತೇನೆ” ಎಂದು ಆಜ್ಞಾಪಿಸಿದನು.


ಆಗ ಸೌಲನು ದಾವೀದನನ್ನು ಗೋಡೆಗೆ ಸೇರಿಕೊಳ್ಳುವ ಹಾಗೆ ತಿವಿಯುವೆನು ಎಂದುಕೊಂಡು ಈಟಿಯನ್ನು ಎಸೆದನು. ದಾವೀದನು ಎರಡು ಸಾರಿ ತಪ್ಪಿಸಿಕೊಂಡನು.


ಸೌಲನ ಸೇನಾಧಿಪತಿಯೂ ನೇರನ ಮಗನೂ ಆದ ಅಬ್ನೇರನು ಸೌಲನ ಮಗನಾದ ಈಷ್ಬೋಶೆತನನ್ನು ಹೊಳೆಯ ಆಚೆಯಲ್ಲಿರುವ ಮಹನಯಿಮಿಗೆ ಕರೆದುಕೊಂಡು ಹೋಗಿ


ಸೌಲನು ದಾವೀದನನ್ನು ಕೊಲ್ಲಬೇಕೆಂದು ತನ್ನ ಮಗನಾದ ಯೋನಾತಾನನಿಗೂ, ಎಲ್ಲಾ ಪರಿವಾರದವರಿಗೂ ಆಜ್ಞಾಪಿಸಿದನು. ಆದರೆ ಯೋನಾತಾನನು ದಾವೀದನನ್ನು ಬಹಳವಾಗಿ ಪ್ರೀತಿಸುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು