Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 5:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅದರೂ ದಾವೀದನು ದಾವೀದನಗರ ಎನ್ನಿಸಿಕೊಳ್ಳುವ ಚೀಯೋನಿನ ಕೋಟೆಯನ್ನು ಸ್ವಾಧೀನಪಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆದರೂ ಅವನು, ಈಗ ‘ದಾವೀದನಗರ’ ಎನಿಸಿಕೊಳ್ಳುವ ಸಿಯೋನ್ ಕೋಟೆಯನ್ನು ಸ್ವಾಧೀನಪಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆದರೂ ಅವನು ಈಗ ದಾವೀದನಗರವೆನಿಸಿಕೊಳ್ಳುವ ಚೀಯೋನ್ ಕೋಟೆಯನ್ನು ಸ್ವಾಧೀನಪಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದರೆ ದಾವೀದನು ಚೀಯೋನ್ ಕೋಟೆಯನ್ನು ವಶಪಡಿಸಿಕೊಂಡನು. ಈ ಕೋಟೆಗೆ ದಾವೀದ ನಗರವೆಂದು ಹೆಸರಾಯಿತು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದರೂ ದಾವೀದನು ಚೀಯೋನಿನ ಕೋಟೆಯನ್ನು ವಶಪಡಿಸಿಕೊಂಡನು. ಅದೇ ದಾವೀದನ ಪಟ್ಟಣವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 5:7
27 ತಿಳಿವುಗಳ ಹೋಲಿಕೆ  

ಅನಂತರ ದಾವೀದನು ತನ್ನ ಪೂರ್ವಿಕರ ಬಳಿಗೆ ಸೇರಿದನು. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು.


ಮಂಜೂಷವು ದಾವೀದನಗರದೊಳಗೆ ಬರುತ್ತಿರುವಾಗ ಸೌಲನ ಮಗಳಾದ ಮೀಕಲಳು ಕಿಟಿಕಿಯಿಂದ ಇಣಿಕಿ ನೋಡಿ, ದಾವೀದನು ಯೆಹೋವನ ಮುಂದೆ ಜಿಗಿಯುತ್ತಾ, ಕುಣಿಯುತ್ತಾ ಇರುವುದನ್ನು ಕಂಡು, ಮನಸ್ಸಿನಲ್ಲಿ ಅವನನ್ನು ತಿರಸ್ಕರಿಸಿದಳು


ಯೆಹೋವನು ಹೀಗೆ ಮಂಜೂಷದ ದೆಸೆಯಿಂದ ಓಬೇದೆದೋಮನನ್ನೂ ಅವನಿಗಿರುವುದೆಲ್ಲವನ್ನೂ ಆಶೀರ್ವದಿಸಿದ್ದಾನೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ, ಅವನು ಹೋಗಿ ಓಬೇದೆದೋಮನ ಮನೆಯಲ್ಲಿದ್ದ ದೇವರ ಮಂಜೂಷವನ್ನು ಉತ್ಸಾಹದಿಂದ ದಾವೀದನಗರಕ್ಕೆ ತಂದನು.


ಆನಂತರ ನಾನು ನೋಡಲಾಗಿ ಯಜ್ಞದ ಕುರಿಮರಿಯಾದಾತನು ಚೀಯೋನ್ ಪರ್ವತದ ಮೇಲೆ ನಿಂತಿರುವುದನ್ನು ಕಂಡೆನು. ಆತನ ಜೊತೆಯಲ್ಲಿ ಒಂದು ಲಕ್ಷದ ನಲವತ್ತನಾಲ್ಕು ಸಾವಿರ ಮಂದಿ ಇದ್ದರು. ಅವರ ಹಣೆಯ ಮೇಲೆ ಆತನ ಹೆಸರೂ ಆತನ ತಂದೆಯ ಹೆಸರೂ ಬರೆಯಲ್ಪಟ್ಟಿದ್ದವು.


ಆದರೆ ನೀವು ಚೀಯೋನ್ ಪರ್ವತಕ್ಕೂ, ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ, ಉತ್ಸವ ಸಂಘದಲ್ಲಿ ಕೂಡಿರುವ ಕೋಟ್ಯಾನುಕೋಟಿ ದೇವದೂತರ ಬಳಿಗೂ,


ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು. ಧರ್ಮಶಾಸ್ತ್ರದಲ್ಲಿ ಹೀಗೆ ಬರೆಯಲ್ಪಟ್ಟಿದೆ, “ಇಗೋ ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇನೆ. ಆತನಲ್ಲಿ ನಂಬಿಕೆಯಿಡುವವನು ಆಶಾಭಂಗಪಡುವುದಿಲ್ಲ” ಎಂಬುದೇ.


ಹೊರಟುಬಂದ ಬಹು ದೇಶಗಳವರು, “ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ ಹೋಗೋಣ, ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆ ಮಾಡುವನು, ನಾವು ಆತನ ದಾರಿಗಳಲ್ಲಿ ನಡೆಯುವೆವು” ಎಂದು ಹೇಳುವರು. ಏಕೆಂದರೆ ಚೀಯೋನಿನಿಂದ ಧರ್ಮೋಪದೇಶವೂ, ಯೆರೂಸಲೇಮಿನಿಂದ ಯೆಹೋವನ ವಾಕ್ಯವೂ ಹೊರಡುವವು.


“ಒಬ್ಬ ವಿಮೋಚಕನು ಚೀಯೋನಿಗೂ, ದ್ರೋಹವನ್ನು ಬಿಟ್ಟುಬಿಟ್ಟ ಯಾಕೋಬ್ಯರ ಬಳಿಗೂ ಬರುವನು”, ಯೆಹೋವನೇ ಇದನ್ನು ನುಡಿದಿದ್ದಾನೆ.


ಚೀಯೋನಿನ ನಿವಾಸಿಗಳೇ, ಉತ್ಸಾಹ ಧ್ವನಿಮಾಡಿರಿ; ಜಯಘೋಷಮಾಡಿರಿ. ಇಸ್ರಾಯೇಲರ ಪರಿಶುದ್ಧನು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ” ಎಂಬುದೇ.


ನಿಶ್ಚಯವಾಗಿ ಯೆಹೋವನು ಚೀಯೋನನ್ನು ಅಪೇಕ್ಷಿಸಿ, ತನ್ನ ನಿವಾಸಕ್ಕಾಗಿ ಆರಿಸಿಕೊಂಡಿದ್ದಾನೆ.


ಆತನು ಯಾಕೋಬ್ ವಂಶದವರ ಎಲ್ಲಾ ನಿವಾಸಗಳಿಗಿಂತ, ಚೀಯೋನಿನ ದ್ವಾರಗಳನ್ನು ಹೆಚ್ಚಾಗಿ ಪ್ರೀತಿಸುತ್ತಾನೆ.


ಚೀಯೋನ್ ಪಟ್ಟಣವನ್ನು ಕಟಾಕ್ಷಿಸಿ ಅದಕ್ಕೆ ಶುಭವನ್ನುಂಟುಮಾಡು; ಯೆರೂಸಲೇಮಿನ ಪೌಳಿಗೋಡೆಯನ್ನು ಕಟ್ಟಿಸು.


ಚೀಯೋನ್ ಸಂಸ್ಥಾನದ ಸುತ್ತಲೂ ಸಂಚರಿಸಿ, ಅದರ ಬುರುಜುಗಳನ್ನು ಲೆಕ್ಕಿಸಿರಿ.


ಚೀಯೋನಿನಲ್ಲಿ ವಾಸಿಸುವ ಯೆಹೋವನನ್ನು ಕೀರ್ತಿಸಿರಿ; ಆತನ ಮಹತ್ಕಾರ್ಯಗಳನ್ನು ಜನಾಂಗಗಳಲ್ಲಿ ಪ್ರಕಟಿಸಿರಿ.


“ನಾನು ನೇಮಿಸಿದ ಅರಸನನ್ನು ಚೀಯೋನೆಂಬ ನನ್ನ ಪರಿಶುದ್ಧ ಪರ್ವತದಲ್ಲಿಯೇ ಸ್ಥಾಪಿಸಿದ್ದಾಯಿತು” ಎಂದು ಹೇಳುವನು.


ಅವನು ಇಸ್ರಾಯೇಲರ ಕುರಿತಾಗಿಯೂ ದೇವರ ಮತ್ತು ದೇವಾಲಯದ ವಿಷಯದಲ್ಲಿಯೂ ಸತ್ಕಾರ್ಯಗಳನ್ನು ಮಾಡಿದ್ದರಿಂದ ಅವನ ಶವವನ್ನು ದಾವೀದನಗರದೊಳಗೆ ರಾಜಸ್ಮಶಾನದಲ್ಲಿ ಸಮಾಧಿ ಮಾಡಿದರು.


ಆಗ ಸೊಲೊಮೋನನು ದಾವೀದನಗರವಾದ ಚೀಯೋನಿನಿಂದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತರುವುದಕ್ಕಾಗಿ ಇಸ್ರಾಯೇಲರ ಹಿರಿಯರೆಲ್ಲರನ್ನು, ಕುಲಾಧಿಪತಿಗಳೆಲ್ಲರನ್ನು ಹಾಗೂ ಇಸ್ರಾಯೇಲರ ಗಣ್ಯ ವ್ಯಕ್ತಿಗಳೆಲ್ಲರನ್ನು ಯೆರೂಸಲೇಮಿಗೆ ಕರೆಸಿಕೊಂಡನು.


ದಾವೀದನು ಆ ಕೋಟೆಯನ್ನು ತನ್ನ ವಾಸಸ್ಥಾನವನ್ನಾಗಿ ಮಾಡಿಕೊಂಡಿದ್ದರಿಂದ ಅದಕ್ಕೆ ದಾವೀದನಗರ ಎಂದು ಹೆಸರಾಯಿತು.


ಅನಂತರ ಅರಸನಾದ ಸೊಲೊಮೋನನು ದಾವೀದ ನಗರವಾದ ಚೀಯೋನಿನಿಂದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತರುವುದಕ್ಕಾಗಿ ಇಸ್ರಾಯೇಲರ ಹಿರಿಯರೂ ಕುಲಾಧಿಪತಿಗಳು ಇವರೇ ಮೊದಲಾದ ಇಸ್ರಾಯೇಲ್ ಪ್ರಧಾನಪುರುಷರನ್ನು ಯೆರೂಸಲೇಮಿಗೆ ತನ್ನ ಹತ್ತಿರಕ್ಕೆ ಕರೆಯಿಸಿಕೊಂಡನು.


ಸೊಲೊಮೋನನು ಐಗುಪ್ತದ ಅರಸನಾದ ಫರೋಹನ ಅಳಿಯನಾದನು. ಅವನು ಫರೋಹನ ಮಗಳನ್ನು ಮದುವೆಮಾಡಿಕೊಂಡು ತನ್ನ ಅರಮನೆಯನ್ನೂ, ಯೆಹೋವನ ಆಲಯವನ್ನೂ ಮತ್ತು ಯೆರೂಸಲೇಮಿನ ಸುತ್ತಣ ಗೋಡೆಯನ್ನೂ ಕಟ್ಟಿ ಮುಗಿಸುವ ತನಕ ಆಕೆಯನ್ನು ದಾವೀದನಗರದಲ್ಲಿ ಇರಿಸಿದನು.


ಅದನ್ನು ದಾವೀದನಗರಕ್ಕೆ ತರಲೊಲ್ಲದೆ ಗತ್ ಊರಿನ ಓಬೇದೆದೋಮನ ಮನೆಗೆ ಕಳುಹಿಸಿದನು.


ದಾವೀದನು ಆ ಕೋಟೆಗೆ ದಾವೀದ ನಗರವೆಂದು ಹೆಸರಿಟ್ಟು ಅಲ್ಲೇ ವಾಸಿಸುತ್ತಾ, ಅದರ ಸುತ್ತಲೂ ಮಿಲ್ಲೋವಿನಿಂದ ಪ್ರಾರಂಭಿಸಿ, ಒಳಗಣ ಪೌಳಿಗೋಡೆಯನ್ನು ಕಟ್ಟಿಸಿದನು.


ಆ ದಿನ ದಾವೀದನು, “ಯೆಬೂಸಿಯರನ್ನು ಜಯಿಸಬೇಕೆಂದಿರುವವನು, ಜಲದ್ವಾರದ ಮೂಲಕ ಹತ್ತಿ ಹೋಗಿ, ನನ್ನನ್ನು ದ್ವೇಷಿಸುವ ಕುರುಡರನ್ನು ಮತ್ತು ಕುಂಟರನ್ನು ಕಂದಕದಲ್ಲಿ ನಾಶಪಡಿಸಬೇಕು” ಎಂದು ಹೇಳಿದನು. ಆದುದರಿಂದ “ಕುರುಡರೂ ಕುಂಟರೂ ಅರಮನೆಯ ಒಳಗೆ ಬರಲಾಗದು” ಎಂಬ ಗಾದೆಯುಂಟು.


ಫರೋಹನ ಮಗಳು ದಾವೀದನಗರದಿಂದ ತನಗೋಸ್ಕರ ಕಟ್ಟಿಸಿದ ಅರಮನೆಗೆ ಬಂದಳು. ಅನಂತರ ಸೊಲೊಮೋನನು ಮಿಲ್ಲೋ ಕೋಟೆಯನ್ನು ಕಟ್ಟಿಸಿದನು.


ಆಹಾ, ತಗ್ಗಿನ ನಗರವೇ, ಬಯಲು ಭೂಮಿಯ ಶಿಖರದ ಮೇಲಣ ಪುರಿಯೇ, ನಾನು ನಿನ್ನ ವಿರುದ್ಧವಾಗಿದ್ದೇನೆ. “ಯಾರು ಇಳಿದು ನಮ್ಮ ಮೇಲೆ ಬಂದಾರು? ನಮ್ಮ ನಿವಾಸಗಳಲ್ಲಿ ಯಾರು ನುಗ್ಗುವರು?” ಎಂದು ಹೇಳುವವರೇ,


ಬುಗ್ಗೆ ಬಾಗಿಲನ್ನು ಜೀರ್ಣೋದ್ಧಾರ ಮಾಡಿದವನು ಮಿಚ್ಪದ ಒಡೆಯನೂ, ಕೊಲ್ಹೋಜೆಯ ಮಗನೂ ಆದ ಶಲ್ಲೂನ್. ಇವನು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಮಾಳಿಗೆಯನ್ನು ಹಾಕಿ ಬಾಗಿಲು, ತಿರುಗುಣಿ, ಅಗುಳಿಗಳನ್ನು ಹಾಕಿಸಿ ದಾವೀದ ನಗರದಿಂದ ಇಳಿದು ಬರುವ ಸೋಪಾನಗಳ ಈಚೆ ಅರಸನ ತೋಟದ ಬಳಿಯಲ್ಲಿರುವ ಸಿಲೋವ ಕೊಳದ ಗೋಡೆಯನ್ನು ಕಟ್ಟಿದನು.


ದೇವರು ಅದರ ಕೊತ್ತಲುಗಳಲ್ಲಿ, ತಾನೇ ಭದ್ರವಾದ ಬುರುಜೆಂದು ಕೀರ್ತಿಪಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು