Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 6:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ದಾವೀದನು ನಾರಿನ ಏಫೋದನ್ನು ಧರಿಸಿಕೊಂಡವನಾಗಿ, ಯೆಹೋವನ ಸನ್ನಿಧಿಯಲ್ಲಿ ಪೂರ್ಣಾಸಕ್ತಿಯಿಂದ ಕುಣಿದಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ದಾವೀದನು ಏಫೋದೆಂಬ ನಾರುಮಡಿಯನ್ನು ಮಾತ್ರ ಉಟ್ಟುಕೊಂಡು ಸರ್ವೇಶ್ವರನ ಸನ್ನಿಧಿಯಲ್ಲಿ ಪೂರ್ಣಾವೇಶದಿಂದ ಕುಣಿದಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ದಾವೀದನು ನಾರಿನ ಏಫೋದನ್ನು ಧರಿಸಿಕೊಂಡವನಾಗಿ ಯೆಹೋವನ ಸನ್ನಿಧಿಯಲ್ಲಿ ಪೂರ್ಣಾಸಕ್ತಿಯಿಂದ ಕುಣಿದಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆಗ ದಾವೀದನು ಯೆಹೋವನ ಸನ್ನಿಧಿಯಲ್ಲಿ ತನ್ನ ಶಕ್ತಿಮೀರಿ ನರ್ತಿಸಿದನು. ಅವನು ಏಫೋದನ್ನು ಧರಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಇದಲ್ಲದೆ ದಾವೀದನು ನಾರಿನ ಏಫೋದನ್ನು ಧರಿಸಿಕೊಂಡು, ತನ್ನ ಪೂರ್ಣಬಲದಿಂದ ಯೆಹೋವ ದೇವರ ಮುಂದೆ ಕುಣಿದಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 6:14
20 ತಿಳಿವುಗಳ ಹೋಲಿಕೆ  

ಆದರೆ ಬಾಲಕನಾದ ಸಮುವೇಲನು ಏಫೋದೆಂಬ ನಾರು ಮಡಿಯಂಗಿಯನ್ನು ತೊಟ್ಟುಕೊಂಡು ಯೆಹೋವನ ಸೇವೆ ಮಾಡುತ್ತಿದ್ದನು.


ಆಗ ಪ್ರವಾದಿನಿಯಾಗಿದ್ದ ಆರೋನನ ಸಹೋದರಿ ಮಿರ್ಯಾಮಳು ಕೈಯಲ್ಲಿ ತಾಳವನ್ನು ತೆಗೆದುಕೊಂಡಳು. ಸ್ತ್ರೀಯರೆಲ್ಲರೂ ಕೈಗಳಲ್ಲಿ ತಾಳಗಳನ್ನು ಹಿಡಿದುಕೊಂಡು ನಾಟ್ಯವಾಡುತ್ತಾ, ಆಕೆಯ ಹಿಂದೆ ಹೋದರು.


ದಮ್ಮಡಿಯನ್ನು ಬಡಿಯುತ್ತಾ, ಕುಣಿಯುತ್ತಾ ಆತನನ್ನು ಸ್ತುತಿಸಿರಿ; ತಂತಿವಾದ್ಯಗಳಿಂದಲೂ, ಕೊಳಲುಗಳಿಂದಲೂ ಆತನನ್ನು ಸ್ತುತಿಸಿರಿ.


ಕುಣಿಯುತ್ತಾ ಆತನ ನಾಮವನ್ನು ಕೀರ್ತಿಸಲಿ; ದಮ್ಮಡಿ, ಕಿನ್ನರಿಗಳಿಂದ ಆತನನ್ನು ಭಜಿಸಲಿ.


ಯೆಪ್ತಾಹನು ಮಿಚ್ಪೆಯಲ್ಲಿದ್ದ ತನ್ನ ಮನೆಯನ್ನು ಸಮೀಪಿಸಿದಾಗ ಅವನ ಮಗಳು ದಮ್ಮಡಿಬಡಿಯುತ್ತಾ, ನೃತ್ಯಮಾಡುತ್ತಾ ಅವನನ್ನು ಎದುರುಗೊಳ್ಳುವುದಕ್ಕಾಗಿ ಬಂದಳು. ಆಕೆಯು ಅವನಿಗೆ ಒಬ್ಬಳೇ ಮಗಳಾಗಿದ್ದಳು. ಆಕೆಯ ಹೊರತು ಅವನಿಗೆ ಬೇರೆ ಗಂಡು ಹೆಣ್ಣು ಮಕ್ಕಳೇ ಇರಲಿಲ್ಲ.


ನೀವು ಯಾವ ಕೆಲಸವನ್ನು ಮಾಡಿದರೋ ಅದನ್ನು ಮನುಷ್ಯರಿಗೋಸ್ಕರವೆಂದು ಮಾಡದೇ ಕರ್ತನಿಗೋಸ್ಕರವೇ ಎಂದು ಮನಃಪೂರ್ವಕವಾಗಿ ಮಾಡಿರಿ.


ಆಗ ನೀನು ನನ್ನ ಗೋಳಾಟವನ್ನು ತಪ್ಪಿಸಿ, ಸಂತೋಷದಿಂದ ಕುಣಿದಾಡುವಂತೆ ಮಾಡಿದಿ; ನಾನು ಕಟ್ಟಿಕೊಂಡಿದ್ದ ಗೋಣಿತಟ್ಟನ್ನು ತೆಗೆದುಬಿಟ್ಟು, ಹರ್ಷವಸ್ತ್ರವನ್ನು ನನಗೆ ಧಾರಣೆಮಾಡಿಸಿದಿ.


ಇಸ್ರಾಯೇಲರ ಎಲ್ಲಾ ಕುಟುಂಬಗಳಿಂದ ಅವರನ್ನೇ ಯಾಜಕೋದ್ಯೋಗಕ್ಕೆ ಅಂದರೆ ಯಜ್ಞವನ್ನರ್ಪಿಸುವುದಕ್ಕೂ, ಧೂಪಹಾಕುವುದಕ್ಕೂ, ನನ್ನ ಸನ್ನಿಧಿಯಲ್ಲಿ ಏಫೋದನ್ನು ಧರಿಸಿಕೊಳ್ಳುವುದಕ್ಕೂ ಆರಿಸಿಕೊಂಡೆನು; ಅವರಿಗೆ ಇಸ್ರಾಯೇಲರ ಯಜ್ಞಶೇಷದ ಹಕ್ಕನ್ನು ಅನುಗ್ರಹಿಸಿದೆನು.


ಆದರೆ ಅವನ ಹಿರಿಯ ಮಗನು ಹೊಲದಲ್ಲಿದ್ದನು. ಅವನು ಮನೆಯ ಸಮೀಪಕ್ಕೆ ಬರುತ್ತಿರುವಾಗ ವಾದ್ಯಘೋಷಗಳನ್ನೂ ನರ್ತನಗಳನ್ನು ಕೇಳಿ,


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಸೇರಬೇಕಾದ ಸಮಾಧಿಯಲ್ಲಿ ಯಾವ ಕೆಲಸವೂ, ಯುಕ್ತಿಯೂ, ತಿಳಿವಳಿಕೆಯೂ, ಜ್ಞಾನವೂ ಇರುವುದಿಲ್ಲ.


ದಾವೀದನೂ ಮಂಜೂಷವನ್ನು ಹೊತ್ತ ಮತ್ತು ವಾದ್ಯನುಡಿಸುವ ಎಲ್ಲಾ ಲೇವಿಯರೂ, ಹೊರುವವರ ಮುಖ್ಯಸ್ಥನಾದ ಕೆನನ್ಯನೂ ನೂಲಿನ ನಿಲುವಂಗಿಗಳನ್ನು ಧರಿಸಿಕೊಂಡಿದ್ದನು. ದಾವೀದನು ಇದರ ಹೊರತಾಗಿ ನಾರಿನ ಏಫೋದನ್ನೂ ಧರಿಸಿಕೊಂಡಿದ್ದನು.


ಆದ್ದರಿಂದ ಸೌಲನು ಎದೋಮ್ಯನಾದ ದೋಯೇಗನಿಗೆ, “ನೀನು ಹೋಗಿ ಅವರನ್ನು ಕೊಲ್ಲು” ಎಂದು ಆಜ್ಞಾಪಿಸಲು, ಅವನು ನಾರು ಬಟ್ಟೆಯ ಎಪೋದನ್ನು ಧರಿಸಿಕೊಂಡಿದ್ದ ಎಂಭತ್ತೈದು ಯಾಜಕರನ್ನು ಆ ದಿನ ಕೊಂದುಹಾಕಿದನು.


ಶೀಲೋವಿನ ಕನ್ಯೆಯರು ಹೊರಗೆ ಬಂದು ನಾಟ್ಯವಾಡುವಾಗ, ನೀವು ತೋಟಗಳಿಂದ ಹೊರಗೆ ಬಂದು ಪ್ರತಿಯೊಬ್ಬನು ತನತನಗೆ ಶೀಲೋವಿನ ಕನ್ಯೆಯರಿಂದ ಒಬ್ಬಳನ್ನು ಹೆಂಡತಿಯಾಗಿ ತೆಗೆದುಕೊಂಡು ನಿಮ್ಮ ಸೀಮೆಗೆ ಓಡಿಹೋಗಿರಿ.


ನೀವು ನಿಮ್ಮ ದೇವರಾದ ಯೆಹೋವನನ್ನು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ಮತ್ತು ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು.


ನೀವು ನನಗೆ ಶ್ರೇಷ್ಠ ಯಾಜಕರೂ, ಪರಿಶುದ್ಧ ಜನರೂ ಆಗಿರುವಿರಿ’ ನೀನು ಇಸ್ರಾಯೇಲರಿಗೆ ಹೇಳಬೇಕಾದ ಮಾತುಗಳು ಇವೇ” ಅಂದನು.


ಮಿರ್ಯಾಮಳು ಅವರಿಗೆ ಹೀಗೆ ಹಾಡಿದಳು: “ಯೆಹೋವನಿಗೆ ಕೀರ್ತನೆ ಹಾಡಿರಿ, ಆತನು ಮಹೋನ್ನತನಾದ ದೇವರಾಗಿದ್ದಾನೆ. ಕುದುರೆಗಳನ್ನೂ, ರಾಹುತರನ್ನೂ ಸಮುದ್ರದಲ್ಲಿ ಮುಳುಗಿಸಿ ನಾಶಮಾಡಿದನು.”


ಹೀಗೆ ದಾವೀದನೂ ಎಲ್ಲಾ ಇಸ್ರಾಯೇಲರೂ ಅರ್ಭಟಿಸುತ್ತಾ, ತುತ್ತೂರಿ ಊದುತ್ತಾ, ಯೆಹೋವನ ಮಂಜೂಷವನ್ನು ತಂದರು.


ಅನಂತರ ದಾವೀದನು ತನ್ನ ಮನೆಯವರನ್ನು ಆಶೀರ್ವದಿಸುವುದಕ್ಕೆ ಹೋದಾಗ ಸೌಲನ ಮಗಳಾದ ಮೀಕಲಳು ಅವನೆದುರಿಗೆ ಬಂದು, “ಈ ಹೊತ್ತು ಇಸ್ರಾಯೇಲರ ಅರಸನು ಎಂಥ ಗೌರವದಿಂದ ನಡೆದುಕೊಂಡನು. ಹುಚ್ಚರಲ್ಲೊಬ್ಬನಂತೆ ತನ್ನ ಜನರ ದಾಸಿಯರ ಮುಂದೆ ಬೆತ್ತಲೆಯಾಗಿದ್ದನಲ್ಲಾ” ಅಂದಳು.


ಇವರು ಹಾಡುತ್ತಾ, ಕುಣಿಯುತ್ತಾ, “ನನ್ನ ಜೀವಜಲದ ಒರತೆಗಳೆಲ್ಲಾ ನಿನ್ನಲ್ಲಿಯೇ ಇವೆ” ಎಂದು ಹೇಳುವರು.


ಜನರು ಪ್ರವೇಶಿಸುವಾಗ ಅರಸನು ಅವರ ಮಧ್ಯದಲ್ಲಿ ಒಳಗೆ ಪ್ರವೇಶಿಸಲಿ. ಅವರು ಹೊರಗೆ ಹೋಗುವಾಗ ಅವರೂ ಹೊರಗೆ ಹೋಗಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು