Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 6:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಇದಕ್ಕಿಂತ ಇನ್ನೂ ಹೆಚ್ಚಾಗಿ ತಿರಸ್ಕಾರ ಹೊಂದುವುದಕ್ಕೂ ನನ್ನನ್ನು ಅಲ್ಪನೆಂದು ಭಾವಿಸಿಕೊಳ್ಳುವುದಕ್ಕೂ ಸಿದ್ಧನಾಗಿದ್ದೇನೆ. ನೀನು ಹೇಳಿದ ದಾಸಿಯರಾದರೋ ಹೇಗೂ ನನ್ನನ್ನು ಸನ್ಮಾನಿಸುವರು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಇದಕ್ಕಿಂತಲೂ ಹೆಚ್ಚಾದ ತಿರಸ್ಕಾರ ಹೊಂದುವುದಕ್ಕೂ ನನ್ನನ್ನೇ ಅಲ್ಪನೆಂದು ಭಾವಿಸಿಕೊಳ್ಳುವುದಕ್ಕೂ ನಾನು ಸಿದ್ಧನು. ನೀನು ಹೇಳಿದ ದಾಸಿಯರಾದರೋ ನನ್ನನ್ನು ಹೇಗೂ ಸನ್ಮಾನಿಸುವರು!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಇದಕ್ಕಿಂತ ಇನ್ನೂ ಹೆಚ್ಚಾಗಿ ತಿರಸ್ಕಾರಹೊಂದುವದಕ್ಕೂ ನನ್ನನ್ನು ಅಲ್ಪನೆಂದು ಭಾವಿಸಿಕೊಳ್ಳುವದಕ್ಕೂ ಸಿದ್ಧನಾಗಿದ್ದೇನೆ. ನೀನು ಹೇಳಿದ ದಾಸಿಯರಾದರೋ ಹೇಗೂ ನನ್ನನ್ನು ಸನ್ಮಾನಿಸುವರು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆತನ ಮುಂದೆ ಇನ್ನೂ ಹೀನವಾಗಿ ಕಾಣಿಸಿಕೊಳ್ಳುವುದಕ್ಕೂ ನನ್ನನ್ನು ನಾನು ಕಡೆಗಣಿಸಿಕೊಳ್ಳುವುದಕ್ಕೂ ಸಿದ್ಧನಿದ್ದೇನೆ. ಬಹುಶಃ ನೀನು ನನ್ನನ್ನು ಗೌರವಿಸದಿರಬಹುದು, ಆದರೆ ನೀನು ಯಾವ ದಾಸಿಯರ ಬಗ್ಗೆ ಮಾತನಾಡಿದೆಯೋ ಅವರು ನನ್ನನ್ನು ಗೌರವಿಸುತ್ತಾರೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ನಾನು ಇನ್ನೂ ಇದಕ್ಕಿಂತ ಅಲ್ಪನಾಗಿರುವುದಕ್ಕೂ, ಹೀನೈಸಿಕೊಳ್ಳುವುದಕ್ಕೂ, ಸಿದ್ಧನಾಗಿದ್ದೇನೆ. ಆದರೆ ನೀನು ಹೇಳಿದ ದಾಸಿಯರಿಂದ ನಿಶ್ಚಯವಾಗಿ ಘನತೆಯನ್ನು ಹೊಂದುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 6:22
16 ತಿಳಿವುಗಳ ಹೋಲಿಕೆ  

ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಧನ್ಯರು. ಮಹಿಮೆಯ ಆತ್ಮನಾಗಿರುವ ದೇವರಾತ್ಮನು ನಿಮ್ಮಲ್ಲಿ ನೆಲೆಗೊಂಡಿದ್ದಾನಲ್ಲಾ.


ಧರ್ಮವನ್ನರಿತು ನನ್ನ ಉಪದೇಶವನ್ನು ಹೃದಯದಲ್ಲಿಟ್ಟುಕೊಂಡಿರುವ ಜನರೇ ಕಿವಿಗೊಡಿರಿ, ಮನುಷ್ಯರ ದೂರಿಗೆ ಹೆದರಬೇಡಿರಿ, ಅವರ ದೂಷಣೆಗೆ ಅಂಜದಿರಿ.


ಕ್ರಿಸ್ತಯೇಸು ಪಾಪಿಗಳನ್ನು ರಕ್ಷಿಸುವುದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂಬ ವಾಕ್ಯವು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಇದೆ, ಯಾಕೆಂದರೆ ಆ ಎಲ್ಲಾ ಪಾಪಿಗಳಲ್ಲಿ ನಾನೇ ಪ್ರಮುಖನು.


ನಾನು ಹೊಡೆಯುವವರಿಗೆ ಬೆನ್ನುಕೊಟ್ಟು, ಕೂದಲು ಕೀಳುವವರಿಗೆ ಗಡ್ಡವನ್ನು ಒಡ್ಡಿದೆನು. ಉಗುಳಿಸಿಕೊಳ್ಳುವ ಅವಮಾನಕ್ಕೆ ನನ್ನ ಮುಖವನ್ನು ಮರೆಮಾಡಿಕೊಳ್ಳಲಿಲ್ಲ.


ಆದಕಾರಣ ನಾನು ಆಡಿದ್ದನ್ನು ತಿರಸ್ಕರಿಸಿ ಧೂಳಿನಲ್ಲಿಯೂ, ಬೂದಿಯಲ್ಲಿಯೂ ಕುಳಿತು ಪಶ್ಚಾತ್ತಾಪಪಡುತ್ತೇನೆ” ಎಂದನು.


“ಅಯ್ಯೋ, ನಾನು ಅಲ್ಪನೇ ಸರಿ, ನಿನಗೆ ಪ್ರತ್ಯುತ್ತರವಾಗಿ ಏನು ಹೇಳಲಿ? ಬಾಯಿಯ ಮೇಲೆ ಕೈಯಿಟ್ಟುಕೊಳ್ಳುವೆನು.


ನೀನು ನಿನ್ನ ದಾಸನಾದ ನನ್ನ ಮೇಲೆ ಎಷ್ಟೋ ನಂಬಿಕೆಯನ್ನಿಟ್ಟು ನಿನ್ನ ವಾಗ್ದಾನವನ್ನು ನೆರವೇರಿಸಿದ್ದೀಯಲ್ಲಾ. ನಾನು ಅದಕ್ಕೆ ಕೇವಲ ಅಯೋಗ್ಯನು. ನಾನು ಮೊದಲು ಈ ಯೊರ್ದನ್ ನದಿಯನ್ನು ದಾಟಿದಾಗ ನನ್ನ ಬಳಿಯಲ್ಲಿ ಒಂದು ಕೋಲು ಮಾತ್ರವೇ ಇತ್ತು. ಈಗ ಎರಡು ಗುಂಪುಗಳಿಗೆ ಒಡೆಯನಾಗಿದ್ದೇನೆ.


ಹೀಗಿರುವುದರಿಂದ ದೇವರ ಬಲವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ. ಆತನು ತಕ್ಕ ಕಾಲದಲ್ಲಿ ನಿಮ್ಮನ್ನು ಮೇಲಕ್ಕೆ ಎತ್ತುವನು.


ಇಸ್ರಾಯೇಲಿನ ದೇವರಾದ ಯೆಹೋವನು ಹೇಳುವುದೇನೆಂದರೆ, ‘ನಿನ್ನ ಗೋತ್ರದವರೂ, ಸಂತಾನದವರೂ ನಿರಂತರವೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬೇಕೆಂದು ವಾಗ್ದಾನಮಾಡಿದ್ದೆನು. ಆದರೆ ಈಗ ನಾನು ತಿಳಿಸುವುದೇನಂದರೆ, ಅದು ನನಗೆ ದೂರವಾಗಿರಲಿ; ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.


ಇತ್ತಲಾಗಿ ಪೇತ್ರನು ಕೆಳಗೆ ಅಂಗಳದಲ್ಲಿ ಇದ್ದಾಗ ಮಹಾಯಾಜಕನ ದಾಸಿಯರಲ್ಲಿ ಒಬ್ಬಳು ಬಂದು ಅವನು ಚಳಿ ಕಾಯಿಸಿಕೊಳ್ಳುತ್ತಿರುವುದನ್ನು ಕಂಡು,


ಆಗ ದಾವೀದನು ಮೀಕಲಳಿಗೆ, “ಇದನ್ನು ಯೆಹೋವನ ಸನ್ನಿಧಿಯಲ್ಲಿ ಮಾಡಿದ್ದೇನಷ್ಟೇ, ನಿನ್ನ ತಂದೆಯನ್ನೂ ಅವರ ಮನೆಯವರೆಲ್ಲರನ್ನೂ ಬಿಟ್ಟು, ನನ್ನನ್ನೇ ಆರಿಸಿಕೊಂಡು, ತನ್ನ ಪ್ರಜೆಗಳಾದ ಇಸ್ರಾಯೇಲರ ಅರಸನನ್ನಾಗಿ ಮಾಡಿದ ಯೆಹೋವನ ಮುಂದೆ ಇನ್ನೂ ಸಂತೋಷದಿಂದ ಕುಣಿದಾಡುವೆನು.


ಸೌಲನ ಮಗಳಾದ ಮೀಕಲಳಿಗೆ ಜೀವದಿಂದಿರುವ ವರೆಗೂ ಮಕ್ಕಳೇ ಆಗಲಿಲ್ಲ.


ಯೆಹೋವನೇ, ನನ್ನ ಹೃದಯದಲ್ಲಿ ಗರ್ವವಿಲ್ಲ; ನನಗೆ ಸೊಕ್ಕಿನ ಕಣ್ಣುಗಳಿಲ್ಲ; ಅಸಾಧ್ಯ ಕಾರ್ಯಗಳಿಗೆ ಕೈಹಾಕುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು