Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 7:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅನಂತರ ದಾವೀದನು ಹೋಗಿ ಯೆಹೋವನ ಸನ್ನಿಧಿಯಲ್ಲಿ ಕುಳಿತುಕೊಂಡು, “ಕರ್ತನಾದ, ಯೆಹೋವನೇ, ನಾನೆಷ್ಟರವನು? ನನ್ನ ಮನೆ ಎಷ್ಟರದು? ನೀನು ನನ್ನನ್ನು ಇಲ್ಲಿಯವರೆಗೂ ತಂದಿದ್ದಿಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಬಳಿಕ ದಾವೀದನು ಸರ್ವೇಶ್ವರನ ಸನ್ನಿಧಿಗೆ ಹೋಗಿ ಅಲ್ಲಿ ಕುಳಿತುಕೊಂಡು, “ಹೇ ಸರ್ವೇಶ್ವರಾ, ಸರ್ವೇಶ್ವರಾ, ತಾವು ನನ್ನನ್ನು ಇಷ್ಟು ಮುಂದಕ್ಕೆ ತರಲು ನಾನೆಷ್ಟರವನು! ನನ್ನ ಕುಟುಂಬ ಎಷ್ಟರದು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅನಂತರ ದಾವೀದನು ಹೋಗಿ ಯೆಹೋವನ ಸನ್ನಿಧಿಯಲ್ಲಿ ಕೂತುಕೊಂಡು - ಕರ್ತನೇ, ಯೆಹೋವನೇ, ನಾನೆಷ್ಟರವನು? ನನ್ನ ಮನೆ ಎಷ್ಟರದು? ನೀನು ನನ್ನನ್ನು ಇಲ್ಲಿಯವರೆಗೂ ತಂದಿದ್ದೀಯಲ್ಲಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆಗ ರಾಜನಾದ ದಾವೀದನು ಹೋಗಿ ಯೆಹೋವನ ಸನ್ನಿಧಿಯಲ್ಲಿ ಕುಳಿತು, “ನನ್ನ ಒಡೆಯನಾದ ಯೆಹೋವನೇ, ನಾನೆಷ್ಟರವನು? ನನ್ನ ಕುಲ ಎಷ್ಟರದು? ನೀನು ನನ್ನನ್ನೇಕೆ ಇಷ್ಟು ಉದ್ಧರಿಸಿದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅನಂತರ ಅರಸನಾದ ದಾವೀದನು ಒಳಗೆ ಪ್ರವೇಶಿಸಿ, ಯೆಹೋವ ದೇವರ ಸನ್ನಿಧಿಯಲ್ಲಿ ಕುಳಿತುಕೊಂಡು, “ಸಾರ್ವಭೌಮ ಯೆಹೋವ ದೇವರೇ, ನನ್ನಂಥವನಿಗೆ ನೀವು ಈ ಪದವಿಯನ್ನು ಅನುಗ್ರಹಿಸಿ, ಇಷ್ಟು ಮುಂದಕ್ಕೆ ತರಲು ನಾನೆಷ್ಟರವನು? ನನ್ನ ಕುಟುಂಬ ಎಷ್ಟರದು?

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 7:18
15 ತಿಳಿವುಗಳ ಹೋಲಿಕೆ  

ಮನುಷ್ಯನು ಎಷ್ಟು ಮಾತ್ರದವನು, ಅವನನ್ನು ನೀನು ಏಕೆ ಸ್ಮರಿಸಬೇಕು? ಮಾನವನು ಎಷ್ಟರವನು? ಅವನಲ್ಲಿ ಏಕೆ ಲಕ್ಷ್ಯವಿಡಬೇಕು?


ಆಗ ಅರಸನಾದ ದಾವೀದನು ಹೋಗಿ ಯೆಹೋವನ ಸನ್ನಿಧಿಯಲ್ಲಿ ಕುಳಿತುಕೊಂಡು ಹೇಳಿದ್ದೇನೆಂದರೆ, “ದೇವರೇ, ಯೆಹೋವನೇ, ನನ್ನಂಥವನಿಗೆ ಈ ಪದವಿಯನ್ನು ಅನುಗ್ರಹಿಸಿದ್ದಿ, ನಾನೆಷ್ಟರವನು? ನನ್ನ ಮನೆ ಎಷ್ಟರದು?


ಅದಕ್ಕೆ ದಾವೀದನು “ಅರಸನ ಅಳಿಯನಾಗುವುದಕ್ಕೆ ನಾನು ಎಷ್ಟರವನು? ಇಸ್ರಾಯೇಲರಲ್ಲಿ ನನ್ನ ತಂದೆಯ ಕುಟುಂಬವೂ ಸಮಾನವೇ?” ಎಂದನು.


ನೀನು ನಿನ್ನ ದಾಸನಾದ ನನ್ನ ಮೇಲೆ ಎಷ್ಟೋ ನಂಬಿಕೆಯನ್ನಿಟ್ಟು ನಿನ್ನ ವಾಗ್ದಾನವನ್ನು ನೆರವೇರಿಸಿದ್ದೀಯಲ್ಲಾ. ನಾನು ಅದಕ್ಕೆ ಕೇವಲ ಅಯೋಗ್ಯನು. ನಾನು ಮೊದಲು ಈ ಯೊರ್ದನ್ ನದಿಯನ್ನು ದಾಟಿದಾಗ ನನ್ನ ಬಳಿಯಲ್ಲಿ ಒಂದು ಕೋಲು ಮಾತ್ರವೇ ಇತ್ತು. ಈಗ ಎರಡು ಗುಂಪುಗಳಿಗೆ ಒಡೆಯನಾಗಿದ್ದೇನೆ.


ಆಗ ಮೋಶೆಯು ದೇವರಿಗೆ, “ಫರೋಹನ ಬಳಿಗೆ ಹೋಗುವುದಕ್ಕೂ ಮತ್ತು ಇಸ್ರಾಯೇಲರನ್ನು ಐಗುಪ್ತದೇಶದಿಂದ ಕರೆದುಕೊಂಡು ಬರುವುದಕ್ಕೂ ನಾನು ಎಷ್ಟರವನು?” ಎಂದು ಹೇಳಿದನು.


ಸಮುವೇಲನು, “ನೀನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ಯೆಹೋವನು ನಿನಗೆ ಇಸ್ರಾಯೇಲ್ಯರಲ್ಲಿ ರಾಜ್ಯಾಭಿಷೇಕ ಮಾಡಿದ್ದರಿಂದ ನೀನು ಎಲ್ಲಾ ಕುಲಗಳಿಗೆ ಶಿರಸ್ಸನ್ನಾಗಿ ಮಾಡಿದನು.


ಕ್ರಿಸ್ತನ ಅಗಮ್ಯವಾದ ಐಶ್ವರ್ಯದ ಸುವಾರ್ತೆಯನ್ನು ಅನ್ಯಜನರಿಗೆ ಸಾರುವ ಹಾಗೆಯೂ


ಆಗ ಗಿದ್ಯೋನನು ಆತನಿಗೆ, “ಕರ್ತನೇ, ನಾನು ಇಸ್ರಾಯೇಲ್ಯರನ್ನು ರಕ್ಷಿಸುವುದು ಹೇಗೆ? ಮನಸ್ಸೆ ಕುಲದಲ್ಲಿ ನನ್ನ ಮನೆಯು ಕನಿಷ್ಠವಾದದ್ದು; ಮತ್ತು ನಾನು ನಮ್ಮ ಕುಟುಂಬದಲ್ಲಿ ಅಲ್ಪನು” ಅಂದನು.


ಅದಕ್ಕೆ ಸೌಲನು, “ನಾನು ಇಸ್ರಾಯೇಲ್ ಕುಲಗಳಲ್ಲಿ ಅಲ್ಪವಾಗಿರುವ ಬೆನ್ಯಾಮೀನ್ ಕುಲದವನಲ್ಲವೋ? ಬೆನ್ಯಾಮೀನ್ಯರ ಎಲ್ಲಾ ಕುಟುಂಬಗಳಲ್ಲಿ ನನ್ನದು ಕನಿಷ್ಠವಾದದ್ದು; ನನಗೆ ಇಂಥ ದೊಡ್ಡ ಮಾತನ್ನು ಯಾಕೆ ಹೇಳುತ್ತೀ?” ಎಂದನು.


ಹಿಜ್ಕೀಯನು ಆ ದೂತರು ತಂದ ಪತ್ರವನ್ನು ತೆಗೆದುಕೊಂಡು ಓದಿದ ನಂತರ ಯೆಹೋವನ ಆಲಯಕ್ಕೆ ಹೋಗಿ ಅದನ್ನು ಯೆಹೋವನ ಮುಂದೆ ತೆರೆದಿಟ್ಟನು.


ನಾತಾನನು ತನಗುಂಟಾದ ದರ್ಶನದ ಈ ಎಲ್ಲಾ ಮಾತುಗಳನ್ನು ದಾವೀದನಿಗೆ ಹೇಳಿದನು.


ನನ್ನ ಅಣ್ಣನಾದ ಏಸಾವನು ಬಂದು ನನ್ನನ್ನೂ, ನನ್ನ ಮಕ್ಕಳನ್ನೂ, ಅವರ ತಾಯಿಯರನ್ನೂ ಕೊಂದುಹಾಕುವನೋ ಎಂದು ನನಗೆ ಭಯವಿದೆ. ಅವನ ಕೈಗೆ ಸಿಕ್ಕದಂತೆ ನಮ್ಮನ್ನು ಕಾಪಾಡಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ,


ರೂತಳು ಅವನಿಗೆ ಸಾಷ್ಟಾಂಗನಮಸ್ಕಾರ ಮಾಡಿ “ಪರದೇಶಿಯಾದ ನನ್ನ ಮೇಲೆ ಇಷ್ಟು ಕಟಾಕ್ಷವಿಟ್ಟು ದಯೆ ತೋರಿಸಲು ಕಾರಣವೇನು?” ಎಂದು ಕೇಳಿದಳು.


ನನ್ನ ಮನೆಯು ಯೆಹೋವನ ಸನ್ನಿಧಿಯಲ್ಲಿ ಹೀಗೆಯೇ ಸ್ಥಿರವಾಗಿರುತ್ತದಲ್ಲವೇ? ಆತನು ನನ್ನೊಡನೆ ಒಡಂಬಡಿಕೆ ಮಾಡಿಕೊಂಡಿದ್ದಾನಲ್ಲವೋ? ಅದು ಎಂದಿಗೂ ಬಿದ್ದುಹೋಗದೆ ಎಲ್ಲಾ ವಿಷಯಗಳಲ್ಲಿಯೂ ಖಚಿತವಾಗಿರುತ್ತದೆ. ನನ್ನ ರಕ್ಷಣೆಯ ಮೂಲವೂ, ನನ್ನ ಅಭಿಲಾಷೆಯನ್ನು ಪೂರ್ತಿಗೊಳಿಸುವವನೂ ಆತನೇ ಅಲ್ಲವೋ?


ನಾವು ಸ್ವ ಇಚ್ಛೆಯಿಂದ ನಿನಗೆ ಕಾಣಿಕೆಗಳನ್ನು ಸಮರ್ಪಿಸಲು ನಾನಾಗಲಿ, ನನ್ನ ಪ್ರಜೆಗಳಾಗಲಿ ಸಮರ್ಥರಲ್ಲ. ಸಮಸ್ತವೂ ನಿನ್ನಿಂದಲೇ ಸಾಧ್ಯವಾಯಿತು, ನೀನು ಕೊಟ್ಟದ್ದನ್ನೇ ನಿನಗೆ ಕೊಟ್ಟೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು