Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 8:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ತೋವಿಗೂ ಹದದೆಜೆರನಿಗೂ ವಿರೋಧವಿತ್ತು. ದಾವೀದನು ಹದದೆಜೆರನ ಮೇಲೆ ದಾಳಿಮಾಡಿ, ಅವನನ್ನು ಸೋಲಿಸಿದ್ದರಿಂದ ತೋವು ದಾವೀದನನ್ನು ವಂದಿಸುವುದಕ್ಕೂ ಹರಸುವುದಕ್ಕೂ ತನ್ನ ಮಗನಾದ ಯೋರಾಮನನ್ನು ಕಳುಹಿಸಿದನು. ಇವನು ಬರುವಾಗ ದಾವೀದನಿಗೋಸ್ಕರ ತಾಮ್ರ, ಬೆಳ್ಳಿ, ಬಂಗಾರದ ಪಾತ್ರೆಗಳನ್ನು ತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ತೋವಿಗೂ ಹದದೆಜೆರನಿಗೂ ಹಗೆತನವಿತ್ತು. ದಾವೀದನು ಹದದೆಜೆರನ ಮೇಲೆ ದಾಳಿಮಾಡಿ ಅವನನ್ನು ಸೋಲಿಸಿದುದರಿಂದ ತೋವು ದಾವೀದನನ್ನು ಅಭಿನಂದಿಸುವುದಕ್ಕಾಗಿ ಹಾಗು ಹರಸುವುದಕ್ಕಾಗಿ ತನ್ನ ಮಗ ಯೋರಾಮನನ್ನು ಕಳುಹಿಸಿದನು. ಇವನು ಬರುವಾಗ ದಾವೀದನಿಗೆ ತಾಮ್ರ, ಬೆಳ್ಳಿ ಹಾಗು ಬಂಗಾರದ ಪಾತ್ರೆಗಳನ್ನು ತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 (ತೋವಿಗೂ ಹದದೆಜೆರನಿಗೂ ವಿರೋಧವಿತ್ತು.) ದಾವೀದನು ಹದದೆಜೆರನ ಮೇಲೆ ಬಿದ್ದು ಅವನನ್ನು ಸೋಲಿಸಿದದರಿಂದ ತೋವು ದಾವೀದನನ್ನು ವಂದಿಸುವದಕ್ಕೂ ಹರಸುವದಕ್ಕೂ ತನ್ನ ಮಗನಾದ ಯೋರಾಮನನ್ನು ಕಳುಹಿಸಿದನು. ಇವನು ಬರುವಾಗ ದಾವೀದನಿಗೋಸ್ಕರ ತಾಮ್ರ ಬೆಳ್ಳಿ ಬಂಗಾರದ ಪಾತ್ರೆಗಳನ್ನು ತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆಗ ತೋವಿಯು ತನ್ನ ಮಗನಾದ ಯೋರಾಮನನ್ನು ರಾಜನಾದ ದಾವೀದನ ಬಳಿಗೆ ಕಳುಹಿಸಿದನು. ದಾವೀದನು ಹದದೆಜೆರನ ವಿರುದ್ಧ ಹೋರಾಡಿ ಅವನನ್ನು ಸೋಲಿಸಿದ್ದಕ್ಕಾಗಿ ಯೋರಾಮನು ದಾವೀದನನ್ನು ಅಭಿನಂದಿಸಿದನು ಮತ್ತು ಆಶೀರ್ವದಿಸಿದನು. (ಈ ಮೊದಲು ಹದದೆಜೆರನು ತೋವಿಗೆ ವಿರುದ್ಧವಾಗಿ ಯುದ್ಧವನ್ನು ಮಾಡಿದನು.) ಯೋರಾಮನು ಚಿನ್ನ, ಬೆಳ್ಳಿ ಮತ್ತು ಹಿತ್ತಾಳೆಯಿಂದ ಮಾಡಿದ ವಸ್ತುಗಳನ್ನು ತಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವನು ಅರಸನಾದ ದಾವೀದನ ಕ್ಷೇಮಸಮಾಚಾರವನ್ನು ವಿಚಾರಿಸಲೂ, ಹದದೆಜೆರನ ವಿರುದ್ಧ ಯುದ್ಧಮಾಡಿ ಅವನನ್ನು ಸೋಲಿಸಿದ್ದಕ್ಕಾಗಿ ಅವನನ್ನು ಅಭಿನಂದಿಸಿ, ಹರಸುವಂತೆ, ತೋವು ತನ್ನ ಪುತ್ರನಾದ ಯೋರಾಮನನ್ನು ಬೆಳ್ಳಿ, ಬಂಗಾರ, ಕಂಚಿನ ಪಾತ್ರೆಗಳ ಸಹಿತವಾಗಿ ದಾವೀದನ ಬಳಿಗೆ ಕಳುಹಿಸಿದನು; ಏಕೆಂದರೆ ಹದದೆಜೆರನಿಗೆ ತೋವಿಯ ಸಂಗಡ ಯುದ್ಧಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 8:10
9 ತಿಳಿವುಗಳ ಹೋಲಿಕೆ  

ಹಾದುಹೋಗುವವರು, “ಯೆಹೋವನು ನಿಮ್ಮನ್ನು ಆಶೀರ್ವದಿಸಲಿ ಎಂದು, ಯೆಹೋವನ ನಾಮದಲ್ಲಿ ನಿಮ್ಮನ್ನು ಆಶೀರ್ವದಿಸುತ್ತೇವೆ” ಎಂದೂ ಹೇಳುವುದಿಲ್ಲ.


ತೋವಿಗೂ ಹದರೆಜನಿಗೂ ವಿರೋಧವಿತ್ತು. ದಾವೀದನು ಹದದೆಜರನ ವಿರುದ್ಧ ಹೋರಾಡಿ ಅವನನ್ನು ಸೋಲಿಸಿದ್ದರಿಂದ, ತೋವು ದಾವೀದನನ್ನು ವಂದಿಸುವುದಕ್ಕೂ, ಹಾರೈಸುವುದಕ್ಕೂ ತನ್ನ ಮಗನಾದ ಹದೋರಾಮನನ್ನು ಕಳುಹಿಸಿದನು. ಇವನು ಬರುವಾಗ ದಾವೀದನಿಗೋಸ್ಕರ ವಿಧವಿಧವಾದ ತಾಮ್ರ, ಬೆಳ್ಳಿ, ಬಂಗಾರಗಳ ಪಾತ್ರೆಗಳನ್ನು ತಂದನು.


ಅದು ಮುಗಿಯುವಷ್ಟರಲ್ಲೇ ಸಮುವೇಲನು ಬಂದನು. ಸೌಲನು ಅವನನ್ನು ವಂದಿಸುವುದಕ್ಕೋಸ್ಕರ ಎದುರಿಗೆ ಹೋಗಲು


ಅದೇ ಕಾಲದಲ್ಲಿ ಬಲದಾನನ ಮಗನೂ ಬಾಬೆಲಿನ ಅರಸನೂ ಆದ ಮೆರೋದಕ ಬಲದಾನನೆಂಬುವನು ಹಿಜ್ಕೀಯನು ಅಸ್ವಸ್ಥನಾಗಿದ್ದು ಗುಣಹೊಂದಿದನು ಎಂದು ಕೇಳಿ ಅವನಿಗೆ ಪತ್ರವನ್ನೂ, ಬಹುಮಾನವನ್ನೂ ಕಳುಹಿಸಿದನು.


ಅರಸನಾದ ದಾವೀದನ ಸೇವಕರು ನಮ್ಮ ಒಡೆಯನೂ, ಅರಸನೂ ಆದ ದಾವೀದನ ಮುಂದೆ ಬಂದು, ‘ನಿನ್ನ ದೇವರು ನಿನ್ನ ಹೆಸರಿಗಿಂತಲೂ ಸೊಲೊಮೋನನ ಹೆಸರನ್ನು ಪ್ರಸಿದ್ಧಿಗೆ ತರಲಿ. ರಾಜ್ಯವನ್ನು ನಿನ್ನ ಕಾಲದಲ್ಲಿ ಇದ್ದದ್ದಕ್ಕಿಂತ ಅವನ ಕಾಲದಲ್ಲಿ ಹೆಚ್ಚು ಬಲಪಡಿಸಲಿ’ ಎಂದು ಅವನನ್ನು ಹರಿಸಿದ್ದಾರೆ.


ಅವನು ಅವರ ಯೋಗ ಕ್ಷೇಮವನ್ನು ವಿಚಾರಿಸಿ ಅವರಿಗೆ ಹೇಳಿದ್ದೇನೆಂದರೆ, “ನೀವು ಹೇಳಿದ, ಮುದುಕನಾಗಿರುವ ನಿಮ್ಮ ತಂದೆ ಕ್ಷೇಮವೋ? ಅವನು ಇನ್ನೂ ಬದುಕಿದ್ದಾನೋ?” ಎಂದು ಕೇಳಿದನು.


ದಾವೀದನು ಹದದೆಜೆರನ ಸೈನ್ಯವನ್ನು ಸೋಲಿಸಿದನೆಂಬ ವರ್ತಮಾನವು ಹಮಾತಿನ ಅರಸನಾದ ತೋವಿಗೆ ಮುಟ್ಟಿತು.


ಅರಸನಾದ ದಾವೀದನು ಇವುಗಳನ್ನು ತನ್ನಿಂದ ಅಪಜಯಹೊಂದಿದ ಅರಾಮ್ಯರೂ, ಮೋವಾಬ್ಯರೂ, ಅಮ್ಮೋನಿಯರೂ, ಫಿಲಿಷ್ಟಿಯರೂ, ಅಮಾಲೇಕ್ಯರೂ ಎಂಬ ಈ ಸುತ್ತಣ ಜನಾಂಗಗಳಿಂದಲೂ,


ಅನೇಕರು ಯೆಹೋವನಿಗೋಸ್ಕರ ಕಾಣಿಕೆಗಳನ್ನೂ, ಯೆಹೂದ್ಯರ ಅರಸನಾದ ಹಿಜ್ಕೀಯನಿಗೋಸ್ಕರ ಶ್ರೇಷ್ಠ ವಸ್ತುಗಳನ್ನೂ ಯೆರೂಸಲೇಮಿಗೆ ತೆಗೆದುಕೊಂಡು ಬಂದರು. ಅಂದಿನಿಂದ ಎಲ್ಲಾ ಜನಾಂಗಗಳವರು ಹಿಜ್ಕೀಯನನ್ನು ಬಹಳ ದೊಡ್ಡವನೆಂದು ಪರಿಗಣಿಸುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು