Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 8:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಚೋಬದ ಅರಸನಾದ ರೆಹೋಬನ ಮಗ ಹದದೆಜೆರನಿಂದಲೂ ಪಡೆದುಕೊಂಡ ಬೆಳ್ಳಿ, ಬಂಗಾರವನ್ನೂ ಯೆಹೋವನಿಗೋಸ್ಕರ ಪ್ರತಿಷ್ಠಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಪಡೆದುಕೊಂಡ ಬೆಳ್ಳಿ ಬಂಗಾರವನ್ನೂ ಸರ್ವೇಶ್ವರನಿಗೆ ಪ್ರತಿಷ್ಠಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಪಡಕೊಂಡ ಬೆಳ್ಳಿಬಂಗಾರವನ್ನೂ ಯೆಹೋವನಿಗೋಸ್ಕರ ಪ್ರತಿಷ್ಠಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆತನು ಸೋಲಿಸಿದ ದೇಶಗಳು ಯಾವುವೆಂದರೆ: ಅರಾಮ್, ಮೋವಾಬ್, ಅಮ್ಮೋನಿಯ, ಫಿಲಿಷ್ಟಿಯ ಮತ್ತು ಅಮಾಲೇಕ್ಯ. ಚೋಬದ ರಾಜನಾದ ರೆಹೋಬನ ಮಗ ಹದದೆಜೆರನನ್ನು ಸಹ ದಾವೀದನು ಸೋಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅಂದರೆ, ಅರಾಮ್ಯರು, ಮೋವಾಬ್ಯರು, ಅಮ್ಮೋನ್ಯರು, ಫಿಲಿಷ್ಟಿಯರು, ಅಮಾಲೇಕ್ಯರು ಮತ್ತು ಚೋಬದ ಅರಸನಾಗಿರುವ ರೆಹೋಬನ ಮಗನಾದ ಹದದೆಜೆರನ ಬಳಿಯಿಂದ ಪಡೆದ ಕೊಳ್ಳೆಯನ್ನೂ ಯೆಹೋವ ದೇವರಿಗೆ ಪ್ರತಿಷ್ಠೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 8:12
10 ತಿಳಿವುಗಳ ಹೋಲಿಕೆ  

ಇವರು ಓಡಿಹೋಗುವುದನ್ನು ಅಮ್ಮೋನಿಯರು ಕಂಡು ಅವರೂ ಅಬೀಷೈಯ ಎದುರಿನಿಂದ ಓಡಿಹೋಗಿ, ಪಟ್ಟಣವನ್ನು ಪ್ರವೇಶಿಸಿದರು. ಯೋವಾಬನು ಅಮ್ಮೋನಿಯರೊಡನೆ ಯುದ್ಧ ಮಾಡುವುದನ್ನು ಬಿಟ್ಟು ಯೆರೂಸಲೇಮಿಗೆ ಹೋದನು.


ಅರಸನಾದ ದಾವೀದನು ಇವುಗಳನ್ನೂ ಎದೋಮ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಮತ್ತು ಅಮಾಲೇಕ್ಯರು ಎಂಬೀ ಸುತ್ತಲಿನ ಜನಾಂಗಗಳಿಂದ ವಶಪಡಿಸಿಕೊಂಡ ಬೆಳ್ಳಿ ಬಂಗಾರವನ್ನು ಯೆಹೋವನಿಗೋಸ್ಕರ ಪ್ರತಿಷ್ಠಿಸಿದನು.


ಇದಲ್ಲದೆ ಅವನು ಮೋವಾಬ್ಯರನ್ನು ಸೋಲಿಸಿ, ಅವರನ್ನು ನೆಲಕ್ಕೆ ಉರುಳಿಸಿ, ಹಗ್ಗದಿಂದ ಅಳತೆಮಾಡಿಸಿ, ಪ್ರತಿ ಮೂರನೆಯ ಎರಡು ಭಾಗದ ಜನರನ್ನು ಕೊಲ್ಲಿಸಿ, ಮೂರನೆ ಭಾಗದ ಜನರನ್ನು ಉಳಿಸಿದನು. ಉಳಿದ ಮೋವಾಬ್ಯರು ದಾವೀದನ ದಾಸರಾಗಿ ಅವನಿಗೆ ಕಪ್ಪಕೊಡಬೇಕಾಯಿತು.


ಯೋವಾಬನು ಅವನಿಗೆ, “ಅರಾಮ್ಯರು ನನ್ನನ್ನು ಸೋಲಿಸುವಂತೆ ಕಂಡರೆ ನೀನು ನನ್ನ ಸಹಾಯಕ್ಕೆ ಬಾ. ಅಮ್ಮೋನಿಯರು ನಿನ್ನನ್ನು ಸೋಲಿಸುವಂತೆ ಕಂಡರೆ ನಾನು ನಿನ್ನ ಸಹಾಯಕ್ಕೆ ಬರುವೆನು.


ಇದಲ್ಲದೆ ದಾವೀದನು ಶತ್ರುಗಳ ದನಕುರಿಗಳನ್ನೂ ತೆಗೆದುಕೊಂಡನು. ಅವನ ಜನರು, “ಇವು ದಾವೀದನ ಕೊಳ್ಳೆ” ಎಂದು ಹೇಳಿ ಅವುಗಳನ್ನು ತಮ್ಮ ದನಗಳ ಮುಂದಾಗಿ ಹೊಡೆದುಕೊಂಡು ಬಂದರು.


ಆ ಕಾಲದಲ್ಲಿ ಅವನೂ, ಅವನ ಜನರೂ ತೇಲಾಮಿನಿಂದ ಶೂರಿನವರೆಗೂ, ಐಗುಪ್ತ ದೇಶದವರೆಗೂ ವಿಸ್ತರಿಸಿಕೊಂಡಿರುವ ಪ್ರಾಂತ್ಯಗಳಲ್ಲಿ ವಾಸಿಸುತ್ತಿರುವ ಗೆಷೂರ್ಯರು, ಗಿಜ್ರೀಯರು, ಅಮಾಲೇಕ್ಯರು ಇವರ ಮೇಲೆ ಆಕ್ರಮಣ ಮಾಡಿ ಸುಲಿದುಕೊಳ್ಳುತ್ತಿದ್ದರು.


ಅವರ ಅರಸನಾದ ಅಗಾಗನನ್ನು ಜೀವಂತವಾಗಿ ಹಿಡಿದು, ಎಲ್ಲಾ ಜನರನ್ನು ಕತ್ತಿಯಿಂದ ಸಂಹರಿಸಿದನು.


ದಾವೀದನು ಮರುದಿನ ಹೊತ್ತಾರೆಯಿಂದ ಸೂರ್ಯಸ್ತಮಾನದವರೆಗೂ ಅವರನ್ನು ಸಂಹರಿಸಿದನು. ಒಂಟೆಗಳನ್ನು ಹತ್ತಿ ಓಡಿಹೋದ ನಾನೂರು ಮಂದಿ ಪ್ರಾಯಸ್ಥರ ಹೊರತು ಬೇರೆ ಯಾರೂ ತಪ್ಪಿಸಿಕೊಳ್ಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು