Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 8:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇದಲ್ಲದೆ ದಾವೀದನು ಹೋಗಿ ಉಪ್ಪಿನ ತಗ್ಗಿನಲ್ಲಿ ಅರಾಮ್ಯರ ಹದಿನೆಂಟು ಸಾವಿರ ಮಂದಿ ಸೈನಿಕರನ್ನು ಸೋಲಿಸಿದಂದಿನಿಂದ ಬಹು ಪ್ರಖ್ಯಾತಿ ಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಇದಲ್ಲದೆ ದಾವೀದನು ಹೋಗಿ ಉಪ್ಪಿನ ತಗ್ಗಿನಲ್ಲಿ ಎದೋಮ್ಯರ ಹದಿನೆಂಟು ಸಾವಿರಮಂದಿ ಸೈನಿಕರನ್ನು ಸೋಲಿಸಿಬಂದು ಅಂದಿನಿಂದ ಬಹಳ ಪ್ರಖ್ಯಾತಿ ಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇದಲ್ಲದೆ ದಾವೀದನು ಹೋಗಿ ಉಪ್ಪಿನ ತಗ್ಗಿನಲ್ಲಿ ಎದೋಮ್ಯರ ಹದಿನೆಂಟು ಸಾವಿರ ಮಂದಿ ಸೈನಿಕರನ್ನು ಹೊಡೆದು ಬಂದು ಅಂದಿನಿಂದ ಬಹುಖ್ಯಾತಿವಂತನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ದಾವೀದನು ಉಪ್ಪಿನ ಕಣಿವೆಯಲ್ಲಿ ಹದಿನೆಂಟು ಸಾವಿರ ಎದೋಮ್ಯರನ್ನು ಸೋಲಿಸಿದನು. ಅವನು ಮನೆಗೆ ಹಿಂದಿರುಗುವಷ್ಟರಲ್ಲಿ ಪ್ರಸಿದ್ಧನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ದಾವೀದನು ಉಪ್ಪಿನ ತಗ್ಗಿನಲ್ಲಿ ಹದಿನೆಂಟು ಸಾವಿರ ಅರಾಮ್ಯರನ್ನು ಹೊಡೆದು ಹಿಂದಿರುಗಿದಾಗ ಪ್ರಖ್ಯಾತಿ ಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 8:13
7 ತಿಳಿವುಗಳ ಹೋಲಿಕೆ  

ಇದಲ್ಲದೆ ಉಪ್ಪಿನ ತಗ್ಗಿನಲ್ಲಿ ಎದೋಮ್ಯರ ಹತ್ತು ಸಾವಿರ ಮಂದಿ ಸೈನಿಕರನ್ನು ಸದೆಬಡಿದು, ಅವರಿಂದ ಸೆಲ ದುರ್ಗವನ್ನು ಕಿತ್ತುಕೊಂಡು ಅದಕ್ಕೆ ಯೊಕ್ತೆಯೇಲ್ ಎಂಬ ಹೆಸರಿಟ್ಟನು. ಅದಕ್ಕೆ ಇಂದಿನವರೆಗೂ ಇದೇ ಹೆಸರಿರುತ್ತದೆ.


ನೀನು ಹೋದಲ್ಲೆಲ್ಲಾ ನಾನು ನಿನ್ನ ಸಂಗಡ ಇದ್ದೆನು. ನಿನ್ನ ಶತ್ರುಗಳನ್ನೆಲ್ಲಾ ನಿನ್ನೆದುರಿನಲ್ಲಿಯೇ ಸಂಹರಿಸಿಬಿಟ್ಟೆನು. ಲೋಕದ ಮಹಾ ಪುರುಷರ ಹೆಸರಿನಂತೆ ನಿನ್ನ ಹೆಸರನ್ನೂ ಉನ್ನತಿಗೆ ತರುವೆನು.


ಇದಲ್ಲದೆ ಚೆರೂಯಳ ಮಗನಾದ ಅಬ್ಷೈಯು ಉಪ್ಪಿನ ತಗ್ಗಿನಲ್ಲಿ ಎದೋಮ್ಯರ ಹದಿನೆಂಟು ಸಾವಿರ ಸೈನಿಕರನ್ನು ಸೋಲಿಸಿದನು.


ದೇವರೇ, ನೀನು ನಮ್ಮನ್ನು ಕೋಪದಿಂದ ತಳ್ಳಿ ಕೆಡವಿಬಿಟ್ಟಿದ್ದೀ; ನಮ್ಮ ರಕ್ಷಣಾ ಸಾಧನವನ್ನು ಮುರಿದುಬಿಟ್ಟಿದ್ದೀ; ನಮ್ಮನ್ನು ಪುನಃ ಸ್ಥಿರವಾಗಿ ನಿಲ್ಲಿಸು.


ಅಮಚ್ಯನಾದರೋ ಧೈರ್ಯದಿಂದ ತನ್ನ ಸೈನ್ಯವನ್ನು ಕರೆದುಕೊಂಡು, ಉಪ್ಪಿನ ತಗ್ಗಿಗೆ ಹೋಗಿ ಸೇಯೀರ್ಯರಲ್ಲಿ ಹತ್ತು ಸಾವಿರ ಮಂದಿಯನ್ನು ಕೊಂದುಹಾಕಿದನು.


ಅವರು, “ಬನ್ನಿರಿ, ಒಂದು ಪಟ್ಟಣವನ್ನು ಕಟ್ಟೋಣ, ಆಕಾಶವನ್ನು ಮುಟ್ಟುವ ಒಂದು ಗೋಪುರವನ್ನೂ ಕಟ್ಟಿ ದೊಡ್ಡ ಹೆಸರನ್ನು ಸಂಪಾದಿಸಿಕೊಳ್ಳೋಣ; ಹೀಗೆ ಮಾಡಿದರೆ ಭೂಮಿಯ ಮೇಲೆಲ್ಲಾ ಚದರಿಹೋಗುವುದಕ್ಕೆ ಆಸ್ಪದವಾಗುವುದಿಲ್ಲ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.


ದಾವೀದನಿಗೂ ಎದೋಮಿನವರಿಗೂ ಯುದ್ಧ ನಡೆಯುತ್ತಿರುವಾಗ ಸೇನಾಪತಿಯಾದ ಯೋವಾಬನು ಇಸ್ರಾಯೇಲ್ ಸರ್ವಸೈನ್ಯದೊಡನೆ ಅಲ್ಲಿಗೆ ಹೋಗಿ, ಹತರಾದ ಇಸ್ರಾಯೇಲರನ್ನು ಸಮಾಧಿಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು