Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 1:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21-22 ಆದುದರಿಂದ ಕರ್ತನಾದ ಯೇಸು ನಮ್ಮಲ್ಲಿ ಬರುತ್ತಾ ಹೋಗುತ್ತಾ ಇದ್ದಕಾಲವೆಲ್ಲಾ, ಅಂದರೆ ಯೋಹಾನನು ದೀಕ್ಷಾಸ್ನಾನ ಮಾಡಿಸಿದ್ದು ಮೊದಲುಗೊಂಡು ಯೇಸು ನಮ್ಮ ಬಳಿಯಿಂದ ಪರಲೋಕವನ್ನೇರಿ ಹೋದ ದಿನದ ವರೆಗೂ ನಮ್ಮ ಜೊತೆಯಲ್ಲಿದ್ದವರೊಳಗೆ ಒಬ್ಬನು ನಮ್ಮೊಂದಿಗೆ ಆತನ ಪುನರುತ್ಥಾನದ ವಿಷಯದಲ್ಲಿ ಸಾಕ್ಷಿಹೇಳುವವನಾಗಬೇಕು ಅಂದನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 “ಆದುದರಿಂದ ಪ್ರಭುಯೇಸುವಿನ ಪುನರುತ್ಥಾನಕ್ಕೆ ನಮ್ಮೊಡನೆ ಸಾಕ್ಷಿಯಾಗಿರಲು ಒಬ್ಬನನ್ನು ನಾವು ಆರಿಸಬೇಕಾಗಿದೆ. ಅಂಥವನು ಯೇಸುವಿನ ಸೇವಾಸಂಚಾರದಲ್ಲೆಲ್ಲಾ ನಮ್ಮೊಡನೆ ಇದ್ದವನಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21-22 ಆದದರಿಂದ ಕರ್ತನಾದ ಯೇಸು ನಮ್ಮಲ್ಲಿ ಬರುತ್ತಾ ಹೋಗುತ್ತಾ ಇದ್ದ ಕಾಲವೆಲ್ಲಾ, ಅಂದರೆ ಯೋಹಾನನು ದೀಕ್ಷಾಸ್ನಾನಮಾಡಿಸಿದ್ದು ಮೊದಲುಗೊಂಡು ಯೇಸು ನಮ್ಮ ಬಳಿಯಿಂದ ಮೇಲಣ ಲೋಕವನ್ನೇರಿದ ದಿನದವರೆಗೂ ನಮ್ಮ ಜೊತೆಯಲ್ಲಿದ್ದವರೊಳಗೆ ಒಬ್ಬನು ನಮ್ಮೊಂದಿಗೆ ಆತನ ಪುನರುತ್ಥಾನದ ವಿಷಯದಲ್ಲಿ ಸಾಕ್ಷಿ ಹೇಳುವವನಾಗಬೇಕು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21-22 “ಆದ್ದರಿಂದ ಬೇರೊಬ್ಬನು ನಮ್ಮೊಂದಿಗೆ ಸೇರಿ, ಯೇಸುವಿನ ಪುನರುತ್ಥಾನಕ್ಕೆ ಸಾಕ್ಷಿಯಾಗಿರಬೇಕು. ಪ್ರಭುವಾದ ಯೇಸು ನಮ್ಮಲ್ಲಿ ಹೋಗುತ್ತಾ ಬರುತ್ತಾ ಇದ್ದ ಕಾಲವೆಲ್ಲಾ ಅವನು ನಮ್ಮ ಗುಂಪಿನಲ್ಲಿದ್ದವರಲ್ಲಿ ಒಬ್ಬನಾಗಿರಬೇಕು. ಯೋಹಾನನು ದೀಕ್ಷಾಸ್ನಾನ ಕೊಡಲು ಆರಂಭ ಮಾಡಿದ ದಿನದ ಮೊದಲುಗೊಂಡು ಯೇಸುವು ನಮ್ಮ ಬಳಿಯಿಂದ ಪರಲೋಕಕ್ಕೆ ಎತ್ತಲ್ಪಟ್ಟ ದಿನದವರೆಗೂ ಅವನು ನಮ್ಮೊಂದಿಗಿದ್ದವನಾಗಿರಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆದ್ದರಿಂದ, ಕರ್ತ ಆಗಿರುವ ಯೇಸು ನಮ್ಮೊಂದಿಗೆ ಇದ್ದ ಕಾಲವೆಲ್ಲಾ ನಮ್ಮ ಜೊತೆಯಲ್ಲಿರುವ ಒಬ್ಬನನ್ನು ನಾವು ಆರಿಸಬೇಕಾಗಿದೆ. ಅಂಥವನು ಯೇಸುವಿನ ಎಲ್ಲಾ ಸೇವಾ ಸಂಚಾರದಲ್ಲಿಯೂ ನಮ್ಮೊಂದಿಗೆ ಇದ್ದವನಾಗಿರಬೇಕು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಅಶೆ ರ್‍ಹಾತಾನಾ, ಧನಿ ಜೆಜು ಅಮ್ಚ್ಯಾ ಮದ್ದಿ ವಸ್ತಿ ಕರಿ ತ್ಯಾ ಎಳಾರ್ ಅಮ್ಚ್ಯಾ ವಾಂಗ್ಡಾ ಹೊತ್ತ್ಯಾ ಎಕ್ ಮಾನ್ಸಾಕ್ ಎಚುನ್ ಕಾಡ್ತಲೆ ಗರ್ಜೆಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 1:21
9 ತಿಳಿವುಗಳ ಹೋಲಿಕೆ  

ನೀವು ಮೊದಲಿನಿಂದ ನನ್ನ ಸಂಗಡ ಇದ್ದುದರಿಂದ ನೀವೂ ಸಹ ನನಗೆ ಸಾಕ್ಷಿಗಳಾಗಿದ್ದೀರಿ.


ಹಿಂದಿನ ದಿನಗಳಲ್ಲಿ ಅಂದರೆ, ಸೌಲನ ಆಡಳಿತದಲ್ಲಿ, ಇಸ್ರಾಯೇಲರ ದಳಾಧಿಪತಿಯಾಗಿ ಹೋಗುತ್ತಾ ಬರುತ್ತಾ ಇದ್ದವನು ನೀನೇ. ನಿನ್ನನ್ನು ಕುರಿತು ಯೆಹೋವನು, ‘ನೀನು ನನ್ನ ಪ್ರಜೆಗಳಾದ ಇಸ್ರಾಯೇಲರ ನಾಯಕನೂ ಪಾಲಕನೂ ಆಗಿರುವಿಯೆಂದು ಹೇಳಿದ್ದಾನೆ’” ಅಂದರು.


ಅವನು ಅವರಿಗೆ, “ನಾನು ಈಗ ನೂರಿಪ್ಪತ್ತು ವರ್ಷದವನಾಗಿದ್ದೇನೆ; ವಿಶೇಷವಾದ ಕಾರ್ಯಗಳನ್ನು ನಿರ್ವಹಿಸುವುದು ಇನ್ನು ನನ್ನಿಂದಾಗದು. ಯೆಹೋವನು ನನಗೆ, ‘ನೀನು ಈ ಯೊರ್ದನ್ ನದಿಯನ್ನು ದಾಟಬಾರದು’ ಎಂದು ಆಜ್ಞಾಪಿಸಿದ್ದಾನೆ.


ಯೆಹೋವನು ಅವರ ಮುಂದಾಗಿ ಹೋಗಲಿ ಅಥವಾ ಅವರನ್ನು ಮುನ್ನಡೆಸಲು, ಮುಂದಾಗಿ ಬರಲಿ ಅವರನ್ನು ಹಿಂದಕ್ಕೆ ಕರೆದುಕೊಂಡು ಬರಲು, ಒಬ್ಬ ನಾಯಕನನ್ನು ನೇಮಿಸು ನಿನ್ನವರಾದ ಈ ಜನ ಸಮೂಹವು ಕುರುಬನಿಲ್ಲದ ಕುರಿಗಳಂತೆ ಆಗಬಾರದು” ಎಂದು ಬೇಡಿದನು.


ನನ್ನ ದೇವರಾದ ಯೆಹೋವನೇ, ನನ್ನ ತಂದೆಗೆ ಬದಲಾಗಿ ನಿನ್ನಿಂದ ಅರಸನಾಗಿ ನೇಮಿಸಲ್ಪಟ್ಟ ನಿನ್ನ ಸೇವಕನಾದ ನಾನು ಇನ್ನೂ ಚಿಕ್ಕವನು. ವ್ಯವಹಾರ ಜ್ಞಾನವಿಲ್ಲದವನು.


ಪ್ರಾರಂಭದಿಂದಲೂ ಕಣ್ಣಾರೆ ಕಂಡು ಸುವಾರ್ತಾವಾಕ್ಯವನ್ನು ಸಾರುತ್ತಿದ್ದವರು ನಮಗೆ ತಿಳಿಸಿದ ಪ್ರಕಾರ ಆ ಘಟನೆಗಳನ್ನು,


ಒಳಕ್ಕೆ ಹೋಗಿ ನೋಡಿದಾಗ ಯೇಸು ಕರ್ತನ ದೇಹವು ಅಲ್ಲಿ ಕಾಣಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು