Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 1:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆತನು ಅವರಿಗೆ, “ತಂದೆಯು ತನ್ನ ಅಧಿಕಾರದಲ್ಲಿಟ್ಟುಕೊಂಡಿರುವ ಕಾಲಗಳನ್ನೂ, ಸಮಯಗಳನ್ನೂ ತಿಳಿದುಕೊಳ್ಳುವುದು ನಿಮ್ಮ ಕಾರ್ಯವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಯೇಸು ಪ್ರತ್ಯುತ್ತರವಾಗಿ, “ಸಮಯ ಸಂದರ್ಭಗಳು ನನ್ನ ಪಿತನ ಸ್ವಾಧೀನದಲ್ಲಿವೆ. ಅವುಗಳನ್ನು ತಿಳಿಯುವುದು ನಿಮ್ಮ ಕೆಲಸವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆತನು ಅವರಿಗೆ - ತಂದೆಯು ಸ್ವಂತ ಅಧಿಕಾರದಲ್ಲಿಟ್ಟುಕೊಂಡಿರುವ ಕಾಲಗಳನ್ನೂ ಸಮಯಗಳನ್ನೂ ತಿಳುಕೊಳ್ಳುವದು ನಿಮ್ಮ ಕೆಲಸವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೇಸು ಅವರಿಗೆ, “ದಿನಗಳನ್ನು ಮತ್ತು ಕಾಲಗಳನ್ನು ನಿರ್ಧರಿಸುವ ಅಧಿಕಾರವಿರುವುದು ತಂದೆಯೊಬ್ಬನಿಗಷ್ಟೇ. ನೀವು ಅವುಗಳನ್ನು ತಿಳಿದುಕೊಳ್ಳಲಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅದಕ್ಕೆ ಯೇಸು: “ತಂದೆ ತಮ್ಮ ಸ್ವಂತ ಅಧಿಕಾರದಿಂದ ನೇಮಿಸಿದ ಸಮಯವನ್ನಾಗಲಿ, ಕಾಲವನ್ನಾಗಲಿ, ತಿಳಿಯುವುದು ನಿಮ್ಮ ಕೆಲಸವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಖರೆ ತೆನಿ ತೆಂಕಾ ಜಬಾಬ್ ದಿವ್ನ್ ಮಟ್ಲ್ಯಾನ್ ಬಾಬಾನ್ ಅಪ್ಲ್ಯಾ ಸ್ವತಾಚ್ಯಾ ಅದಿಕಾರಾನ್ ನಿರ್ಧಾರ್ ಕರಲ್ಲೊ ಎಳ್ ಅನಿ ದಿಸ್ ಸಮ್ಜುನ್ ಘೆತಲೆ ಕಾಮ್ ತುಮ್ಚೆ ನ್ಹಯ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 1:7
13 ತಿಳಿವುಗಳ ಹೋಲಿಕೆ  

“ಇದಲ್ಲದೆ ಆ ದಿನವನ್ನು ಕುರಿತು ಆ ಗಳಿಗೆಯನ್ನು ಕುರಿತು, ನನ್ನ ತಂದೆಗೆ ಮಾತ್ರ ತಿಳಿದಿದೆಯೇ ಹೊರತು ಮತ್ತಾರಿಗೂ ತಿಳಿಯದು; ಪರಲೋಕದಲ್ಲಿರುವ ದೂತರಿಗೂ ಕೂಡ ತಿಳಿಯದು, ಮಗನಿಗೂ ತಿಳಿಯದು,


“ಇದಲ್ಲದೆ ಆ ದಿನದ ಮತ್ತು ಆ ಗಳಿಗೆಯ ವಿಷಯವಾಗಿ ನನ್ನ ತಂದೆಗೆ ಹೊರತು ಮತ್ತಾರಿಗೂ ತಿಳಿಯದು, ಪರಲೋಕದಲ್ಲಿರುವ ದೂತರಿಗಾಗಲಿ, ಮಗನಿಗಾಗಲಿ ತಿಳಿಯದು.


ಆದರೆ ನನ್ನ ಬಲಗಡೆಯಲ್ಲಾದರೂ ಎಡಗಡೆಯಲ್ಲಾದರೂ ಕುಳಿತುಕೊಳ್ಳುವಂತೆ ಅನುಗ್ರಹಮಾಡುವುದು ನನ್ನದಲ್ಲ; ಅದು ಯಾರಿಗೆಂದು ಸಿದ್ಧಪಡಿಸಿದೆಯೋ ಅವರಿಗೇ ಸಿಕ್ಕುವುದು” ಎಂದು ಹೇಳಿದನು.


“ರಹಸ್ಯವಾದವುಗಳು ನಮ್ಮ ದೇವರಾದ ಯೆಹೋವನವು; ಆದರೆ ಆತನಿಂದ ಪ್ರಕಟವಾದವುಗಳು ಸದಾ ನಮ್ಮ ಮತ್ತು ನಮ್ಮ ಸಂತತಿಯವರ ಪಾಲಾಗಿರುವುದರಿಂದ ನಾವು ಈ ಧರ್ಮಶಾಸ್ತ್ರನಿಯಮಗಳನ್ನು ಅನುಸರಿಸಿ ನಡೆಯಬೇಕಾದ ಹಂಗಿನಲ್ಲಿದ್ದೇವೆ.”


ಕಾಲ ಸಮಯಗಳನ್ನು ಮಾರ್ಪಡಿಸುತ್ತಾನೆ, ರಾಜರನ್ನು ಕಡೆಗಣಿಸುತ್ತಾನೆ, ನೆಲೆಸುವಂತೆ ಮಾಡುತ್ತಾನೆ; ಜ್ಞಾನಿಗಳ ಜ್ಞಾನವು, ವಿವೇಕಿಗಳ ವಿವೇಕವು ಆತನ ವರವೇ.


ಕಾಲವು ಪರಿಪೂರ್ಣವಾದಾಗ, ಆತನು ಭೂಪರಲೋಕಗಳಲ್ಲಿರುವ ಸಮಸ್ತವನ್ನು ಕ್ರಿಸ್ತನಲ್ಲಿ ಒಂದುಗೂಡಿಸುವುದೇ ಆ ಸಂಕಲ್ಪವಾಗಿತ್ತು.


ಅವರು ಕತ್ತಿಯ ಬಾಯಿಗೆ ಗುರಿಯಾಗುವರು. ಅವರು ಸೆರೆಯಾಗಿ ಅನ್ಯದೇಶಗಳಿಗೆಲ್ಲಾ ಹಿಡಿದುಕೊಂಡು ಹೋಗುವರು. ಅನ್ಯದೇಶದವರ ಸಮಯಗಳು ಪೂರೈಸುವ ತನಕ ಯೆರೂಸಲೇಮ್ ಪಟ್ಟಣವು ಅನ್ಯದೇಶದವರಿಂದ ತುಳಿದಾಡಲ್ಪಡುತ್ತಿರುವುದು.


ಆದರೆ ಕಡೆ ದಿನಗಳಲ್ಲಿ ಕಠಿಣಕಾಲಗಳು ಬರುವವೆಂಬುದನ್ನು ತಿಳಿದುಕೋ.


ಭಾಗ್ಯವಂತನಾದ ಏಕಾಧಿಪತಿಯು ತಾನು ನಿಗದಿಪಡಿಸಿರುವ ಸೂಕ್ತ ಸಮಯದಲ್ಲೇ ಆತನನ್ನು ಪ್ರತ್ಯಕ್ಷಪಡಿಸುವನು. ಆ ಏಕಾಧಿಪತಿಯು, ರಾಜಾಧಿರಾಜನೂ, ಕರ್ತಾಧಿಕರ್ತನೂ,


ದೇವರು ಒಬ್ಬ ಮನುಷ್ಯನಿಂದ ಎಲ್ಲಾ ಜನಾಂಗಗಳನ್ನು ಸೃಷ್ಟಿಸಿ, ಅವರವರು ಇರತಕ್ಕ ಕಾಲಗಳನ್ನೂ ಹಾಗು ಅವರವರ ನಿವಾಸಗಳ ಮೇರೆಗಳನ್ನೂ ನಿಷ್ಕರ್ಷಿಸಿ ಭೂಮಂಡಲದಲ್ಲೆಲ್ಲಾ ಅವರನ್ನು ಇರಿಸಿ,


ಆಗ ಆತನು ಅವರಿಗೆ, “ನನ್ನ ಪಾನಪಾತ್ರೆಯಲ್ಲಿ ನಿಶ್ಚಯವಾಗಿ ನೀವು ಕುಡಿಯುವಿರಿ. ಆದರೆ ನನ್ನ ಎಡಬಲಗಡೆಗಳಲ್ಲಿ ಕುಳಿತುಕೊಳ್ಳುವಂತೆ ಅನುಗ್ರಹ ಮಾಡುವುದು ನನ್ನದಲ್ಲ, ಆದರೆ ನನ್ನ ತಂದೆಯಿಂದ ಅದು ಯಾರಿಗೆಂದು ಸಿದ್ಧಪಡಿಸಲಾಗಿದೆಯೋ ಅವರಿಗೇ ಸಿಕ್ಕುವುದು” ಎಂದು ಹೇಳಿದನು.


“ಸರ್ವಶಕ್ತನಾದ ದೇವರು ಏಕೆ ದುಷ್ಟರಿಗೆ ದಂಡನೆಯ ಕಾಲಗಳನ್ನು ನೇಮಿಸಿ ಇಟ್ಟುಕೊಂಡಿಲ್ಲ? ಆತನನ್ನು ಅರಿತವರಿಗೆ ಆತನ ನ್ಯಾಯತೀರ್ಪಿನ ದಿನಗಳು ಏಕೆ ಗೋಚರವಾಗುವುದಿಲ್ಲ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು