Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 1:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಈ ಮಾತುಗಳನ್ನು ಅವನು ಹೇಳಿದ ಬಳಿಕ ಅವರು ನೋಡುತ್ತಿದ್ದ ಹಾಗೆಯೇ ಆತನು ಪರಲೋಕಕ್ಕೆ ಎತ್ತಲ್ಪಟ್ಟನು, ಮೋಡವೊಂದು ಆತನನ್ನು ಕವಿದುಕೊಂಡಿದ್ದರಿಂದ, ಯೇಸುವು ಅವರ ಕಣ್ಣಿಗೆ ಮರೆಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಇದನ್ನು ಹೇಳಿದ ಮೇಲೆ ಪ್ರೇಷಿತರು ನೋಡುತ್ತಿದ್ದಂತೆಯೇ, ಯೇಸು ಸ್ವರ್ಗಾರೋಹಣವಾದರು. ಮೇಘವೊಂದು ಕವಿದು ಅವರನ್ನು ಕಣ್ಮರೆಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಈ ಮಾತುಗಳನ್ನು ಹೇಳಿದ ಬಳಿಕ ಅವರು ನೋಡುತ್ತಾ ಇದ್ದ ಹಾಗೆ ಆತನು ಏರಿಸಲ್ಪಟ್ಟನು; ಮೋಡವು ಆತನನ್ನು ಕವಿದುಕೊಂಡದ್ದರಿಂದ ಅವರ ಕಣ್ಣಿಗೆ ಮರೆಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೇಸು ಈ ಸಂಗತಿಗಳನ್ನು ಅಪೊಸ್ತಲರಿಗೆ ಹೇಳಿದ ಮೇಲೆ ಅಪೊಸ್ತಲರು ನೋಡುತ್ತಿರುವಾಗಲೇ ಆಕಾಶಕ್ಕೆ ಎತ್ತಲ್ಪಟ್ಟನು. ಮೋಡವು ಆತನನ್ನು ಕವಿದುಕೊಂಡದ್ದರಿಂದ ಅವರು ಆತನನ್ನು ಕಾಣಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಇದನ್ನು ಹೇಳಿದ ತರುವಾಯ, ಯೇಸು ಅವರ ಕಣ್ಣೆದುರಿನಲ್ಲಿಯೇ ಸ್ವರ್ಗಕ್ಕೆ ಏರಿಹೋದರು. ಮೋಡವು ಯೇಸುವನ್ನು ಅವರ ಕಣ್ಣಿಗೆ ಮರೆಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಜೆಜುನ್ ಹೆ ಸಗ್ಳೆ ಸಾಂಗುನ್ ಹೊಲ್ಲ್ಯಾ ತನ್ನಾ ತೆನಿ ಬಗುನ್ಗೆತ್ ರ್‍ಹಾತಾನಾಚ್ ತೆಕಾ ವೈರ್ ಉಕ್ಲುನ್ ನ್ಹೆವ್ನ್ ಹೊಲೆ ಅನಿ ತೆಂಚ್ಯಾ ಡೊಳ್ಯಾಂಚ್ಯಾ ಇದ್ರಾಕ್ನಾ ತೆಕಾ ಮೊಡಾನ್ ನಿಪ್ವುಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 1:9
17 ತಿಳಿವುಗಳ ಹೋಲಿಕೆ  

ನಾನು ಕಂಡ ರಾತ್ರಿಯ ಕನಸಿನಲ್ಲಿ ಇಗೋ, ಮನುಷ್ಯ ಕುಮಾರನಂತಿರುವವನು ಆಕಾಶದ ಮೇಘಗಳೊಂದಿಗೆ ಬಂದು ಆ ಮಹಾವೃದ್ಧನನ್ನು ಸಮೀಪಿಸಿದನು. ಅವನನ್ನು ಆತನ ಬಳಿಗೆ ತಂದರು.


ಕರ್ತನಾದ ಯೇಸು ಅವರೊಂದಿಗೆ ಮಾತನಾಡಿದ ಮೇಲೆ ಪರಲೋಕಕ್ಕೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಆಸನಾರೂಢನಾದನು.


ಆತನು ಸ್ವರ್ಗಾರೋಹಣವಾದ ದಿನದವರೆಗೆ ಆತನು ಮಾಡಿದ ಎಲ್ಲಾ ಕಾರ್ಯಗಳನ್ನೂ, ಉಪದೇಶಿಸಿದ ಎಲ್ಲಾ ಬೋಧನೆಗಳನ್ನೂ ಬರೆದಿದ್ದೇನೆ.


ಯೆಹೋವನು ಮೋಶೆಗೆ, “ಇಗೋ, ನಾನು ನಿನ್ನ ಸಂಗಡ ಮಾತನಾಡುವಾಗ, ಜನರು ಕೇಳಿ ಯಾವಾಗಲೂ ನಿನ್ನನ್ನು ನಂಬುವಂತೆ ನಾನು ಮೇಘದೊಳಗಿನಿಂದ ನಿನ್ನ ಬಳಿಗೆ ಬರುತ್ತೇನೆ” ಎಂದು ಹೇಳಿದನು. ಮೋಶೆ ಜನರ ಮಾತುಗಳನ್ನು ಯೆಹೋವನಿಗೆ ತಿಳಿಸಿದನು.


ಅನಂತರ ಅವರಿಗೆ, “ಇಲ್ಲಿ ಮೇಲಕ್ಕೆ ಏರಿ ಬನ್ನಿರಿ!” ಎಂದು ಆಕಾಶದಿಂದ ಮಹಾ ವಾಣಿಯು ತಿಳಿಸಿತು. ಅದನ್ನು ಕೇಳಿ ಅವರು ಮೇಘದಲ್ಲಿ ಪರಲೋಕಕ್ಕೆ ಏರಿಹೋದರು. ಅವರ ಶತ್ರುಗಳು ಅವರನ್ನು ನೋಡುತ್ತಾ ಇದ್ದರು.


ಹಾಗಾದರೆ ಮನುಷ್ಯಕುಮಾರನು ತಾನು ಮೊದಲು ಇದ್ದಲ್ಲಿಗೆ ಏರಿ ಹೋಗುವುದನ್ನು ನೀವು ನೋಡುವುದಾದರೆ ಏನನ್ನುವಿರಿ?


ಆಗ ಮನುಷ್ಯಕುಮಾರನು ಬಲದಿಂದಲೂ ಬಹು ಮಹಿಮೆಯಿಂದಲೂ ಮೇಘದಲ್ಲಿ ಬರುವುದನ್ನು ಕಾಣುವರು.


ಐಗುಪ್ತದ ವಿಷಯವಾದ ದೈವೋಕ್ತಿ. ಇಗೋ, ಯೆಹೋವನು ವೇಗವಾದ ಮೇಘವಾಹನವಾಗಿ ಐಗುಪ್ತಕ್ಕೆ ಬರುವನು. ಆತನು ಅವರಿಗೆ ಎದುರಾದಾಗ ಐಗುಪ್ತದ ವಿಗ್ರಹಗಳು ನಡುಗುವವು. ಐಗುಪ್ತರ ಹೃದಯವು ತಮ್ಮೊಳಗೆ ಕರಗಿ ನೀರಾಗುವುದು.


ನೀನು ಜಯಿಸಿದ ಬಹು ಜನರನ್ನು ಸೆರೆಹಿಡಿದುಕೊಂಡು ಹೋಗಿ, ನಿನಗೆ ದ್ರೋಹಿಗಳಾದ ಮನುಷ್ಯರಿಂದಲೇ ಕಪ್ಪಗಳನ್ನು ಸಂಗ್ರಹಿಸಿ, ದೇವನಾದ ಯಾಹುವು ಅಲ್ಲೇ ವಾಸಿಸುವಂತೆ, ಉನ್ನತಸ್ಥಾನಕ್ಕೆ ಏರಿದ್ದೀ.


ಇವರು ಕನ್ಯೆಯರಂತೆ ಕಳಂಕರಹಿತರು, ಸ್ತ್ರೀ ಸಹವಾಸದಿಂದ ಮಲಿನರಾಗದವರು. ಯಜ್ಞದ ಕುರಿಮರಿಯಾದಾತನು ಎಲ್ಲಿ ಹೋದರೂ ಇವರು ಆತನನ್ನು ಹಿಂಬಾಲಿಸುವರು. ಇವರು ಮನುಷ್ಯರೊಳಗಿಂದ ಸ್ವಕೀಯ ಜನರಾಗಿ ಕೊಂಡುಕೊಳ್ಳಲ್ಪಟ್ಟು ದೇವರಿಗೂ ಯಜ್ಞದ ಕುರಿಯಾದಾತನಿಗೂ ಪ್ರಥಮಫಲದಂತಾದರು.


ನೋಡಿರಿ, ಆತನು ಮೇಘಗಳೊಂದಿಗೆ ಬರುತ್ತಾನೆ, ಎಲ್ಲರ ಕಣ್ಣುಗಳು ಆತನನ್ನು ನೋಡುವವು, ಆತನನ್ನು ಇರಿದವರು ಸಹ ಅದನ್ನು ಕಾಣುವರು, ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ದುಃಖಿಸುವರು. ಹೌದು, ಹಾಗೆಯೇ ಆಗುವುದು. ಆಮೆನ್.


ಆಗ ಯೆಹೋವನು ಮೇಘದಲ್ಲಿ ಇಳಿದು ಬಂದು ಅಲ್ಲಿ ಅವನ ಹತ್ತಿರ ನಿಂತು ಯೆಹೋವನೆಂಬ ತನ್ನ ನಾಮವನ್ನು ಪ್ರಕಟಿಸಿದನು.


“ಗಲಿಲಾಯದವರೇ, ನೀವು ಏಕೆ ಹೀಗೆ ಆಕಾಶದ ಕಡೆಗೆ ನೋಡುತ್ತಾ ನಿಂತಿದ್ದೀರಿ? ನಿಮ್ಮ ಬಳಿಯಿಂದ ಆಕಾಶದೊಳಗೆ ಸೇರಿಸಲ್ಪಟ್ಟಿರುವ ಈ ಯೇಸುವು ಯಾವ ರೀತಿಯಲ್ಲಿ ಆಕಾಶದೊಳಗೆ ಹೋಗಿರುವುದನ್ನು ನೀವು ಕಂಡಿರೋ ಹಾಗೆಯೇ ಆತನು ಹಿಂತಿರುಗಿ ಬರುವನು” ಎಂದು ಹೇಳಿದರು.


ಆ ಮೇಲೆ ಜೀವದಿಂದುಳಿದಿರುವ ನಾವು ಅಂತರಿಕ್ಷದಲ್ಲಿ ಕರ್ತನನ್ನು ಎದುರುಗೊಳ್ಳುವುದಕ್ಕಾಗಿ ಅವರೊಂದಿಗೆ ಮೇಘಗಳಲ್ಲಿ ಫಕ್ಕನೆ ಒಯ್ಯಲ್ಪಡುವೆವು. ಹೀಗಾಗಿ ನಾವು ಸದಾಕಾಲವೂ ಕರ್ತನ ಜೊತೆಯಲ್ಲಿರುವೆವು.


ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ, ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, ದೇವದೂತರಿಗೆ ಕಾಣಿಸಿಕೊಂಡನು, ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, ಲೋಕದಲ್ಲಿ ನಂಬಲ್ಪಟ್ಟನು, ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು