Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 10:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅವರು; “ಕೊರ್ನೆಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನೂ, ದೇವರಿಗೆ ಭಯಪಡುವವನೂ, ಯೆಹೂದ್ಯ ಜನರೆಲ್ಲರಿಂದ ಒಳ್ಳೆಯ ಹೆಸರು ಹೊಂದಿದವನೂ ಆಗಿದ್ದಾನೆ; ನಿನ್ನನ್ನು ತನ್ನ ಮನೆಗೆ ಆಹ್ವಾನಿಸಿ ನಿನ್ನಿಂದ ಸುವಾರ್ತೆಯನ್ನು ಕೇಳಬೇಕೆಂದು ಪರಿಶುದ್ಧ ದೇವದೂತನ ಮುಖಾಂತರವಾಗಿ ಅಪ್ಪಣೆ ಹೊಂದಿದ್ದಾನೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 “ಶತಾಧಿಪತಿ ಕೊರ್ನೇಲಿಯ ನಮ್ಮನ್ನು ಕಳುಹಿಸಿದರು. ಅವರೊಬ್ಬ ಸತ್ಪುರುಷರು, ದೈವಭಕ್ತರು, ಯೆಹೂದ್ಯ ಜನತೆಯಿಂದ ಗೌರವಾನ್ವಿತರು. ನಿಮ್ಮನ್ನು ತಮ್ಮ ಮನೆಗೆ ಆಹ್ವಾನಿಸಿ, ನೀವು ಹೇಳುವುದನ್ನು ಕೇಳಬೇಕೆಂದು ದೇವದೂತನಿಂದ ಆದೇಶಪಡೆದಿದ್ದಾರೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅವರು - ಕೊರ್ನೇಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನೂ ದೇವರಿಗೆ ಭಯಪಡುವವನೂ ಯೆಹೂದ್ಯ ಜನರೆಲ್ಲರಿಂದ ಒಳ್ಳೇ ಹೆಸರು ಹೊಂದಿದವನೂ ಆಗಿದ್ದಾನೆ; ನಿನ್ನನ್ನು ತನ್ನ ಮನೆಗೆ ಕರೇಕಳುಹಿಸಿಕೊಂಡು ನಿನ್ನಿಂದ ಬೋಧನೆಯನ್ನು ಕೇಳಬೇಕೆಂದು ದೇವದೂತನ ಮುಖಾಂತರವಾಗಿ ಅಪ್ಪಣೆ ಹೊಂದಿದನು ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆ ಜನರು, “ಕೊರ್ನೇಲಿಯ ಎಂಬ ಒಬ್ಬ ಸೇನಾಧಿಕಾರಿ ಇದ್ದಾನೆ. ಅವನು ಧಾರ್ಮಿಕ ವ್ಯಕ್ತಿ. ಅವನು ದೇವರನ್ನು ಆರಾಧಿಸುತ್ತಾನೆ. ಯೆಹೂದ್ಯ ಜನರೆಲ್ಲರೂ ಅವನನ್ನು ಗೌರವಿಸುತ್ತಾರೆ. ನಿನ್ನನ್ನು ತನ್ನ ಮನೆಗೆ ಆಹ್ವಾನಿಸಿ ನೀನು ಹೇಳುವ ಸಂಗತಿಗಳನ್ನು ಕೇಳಬೇಕೆಂದು ದೇವದೂತನೊಬ್ಬನು ಕೊರ್ನೇಲಿಯನಿಗೆ ತಿಳಿಸಿದ್ದಾನೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅವರು, “ಕೊರ್ನೇಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನು, ದೇವರಿಗೆ ಭಯಪಡುವವನು, ಯೆಹೂದ್ಯ ಜನರೆಲ್ಲರೂ ಅವನನ್ನು ಗೌರವಿಸುತ್ತಾರೆ. ನೀನು ಹೇಳುವಂಥದ್ದನ್ನು ಕೇಳಲಿಕ್ಕಾಗಿ ನಿನ್ನನ್ನು ಅಲ್ಲಿಗೆ ಕರೆಯಿಸಬೇಕೆಂದು ಒಬ್ಬ ಪರಿಶುದ್ಧ ದೇವದೂತನಿಂದ ಆದೇಶಪಡೆದಿದ್ದಾನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ತ್ಯಾ ಲೊಕಾನಿ, ಕೊರ್ನೆಲ್ ಮನ್ತಲೊ ಎಕ್ ಶತಾದಿಪತಿ ಹೊತ್ತೊ, ತೊ ಧಾರ್ಮಿಕ್ ಮಾನುಸ್ ,ಅನಿ ದೆವಾಕ್ ಆರಾದನ್ ಕರ್‍ತಲೊ ಅನಿ ಜುದೆವಾಂಚಿ ಲೊಕಾ ಸಗ್ಳ್ಯಿ ತೆಕಾ ಮಾನ್‍ ದಿತ್ಯಾತ್, ತುಕಾ ಅಪ್ಲ್ಯಾ ಘರಾಕ್ ಬಲ್ವುನ್ ತಿಯಾ ಸಾಂಗ್ತಲಿ ಸಂಗ್ತಿಯಾ ಆಯ್ಕುಚೆ ಮನುನ್ ದೆವಾಚ್ಯಾ ದುತಾನ್ ಕೊರ್ನೆಲಾಕ್ ಕಳ್ವುಲ್ಯಾನ್, ಮನುನ್ ಸಾಂಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 10:22
36 ತಿಳಿವುಗಳ ಹೋಲಿಕೆ  

ಅವನು ನಿನಗೆ ಸಂದೇಶವನ್ನು ಹೇಳುವನು, ಆ ಸಂದೇಶದಿಂದ ನಿನಗೂ ನಿನ್ನ ಮನೆಯವರೆಲ್ಲರಿಗೂ ರಕ್ಷಣೆಯಾಗುವದು” ಎಂದು ಹೇಳಿದನೆಂಬುದಾಗಿ ತಿಳಿಸಿದನು.


ಅವನು ದೈವಭಕ್ತನೂ, ತನ್ನ ಮನೆಯವರೆಲ್ಲರ ಸಹಿತವಾಗಿ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳುವವನು ಆಗಿದ್ದು, ಜನರಿಗೆ ಬಹಳವಾಗಿ ದಾನಧರ್ಮಮಾಡುತ್ತಾ, ದೇವರಿಗೆ ನಿತ್ಯವೂ ಪ್ರಾರ್ಥನೆಮಾಡುತ್ತಾ ಇದ್ದನು.


ದೇಮೇತ್ರಿಯನು ಎಲ್ಲರಿಂದಲೂ, ಒಳ್ಳೆಯವನೆಂದು ಗುರುತಿಸಲ್ಪಟ್ಟಿದ್ದಾನೆ. ಅಲ್ಲದೆ ಸಾಕ್ಷಿಹೊಂದಿದವನಾಗಿದ್ದಾನೆ. ಅಷ್ಟೇ ಅಲ್ಲದೆ ನಾವು ಅವನ ಪರವಾಗಿ ಸಾಕ್ಷಿಕೊಡುತ್ತದೆ; ನಮ್ಮ ಸಾಕ್ಷಿ ಸತ್ಯವಾದದ್ದೆಂದು ನೀನು ಬಲ್ಲವನಾಗಿದ್ದೀಯ.


ಪರಿಶುದ್ಧ ಪ್ರವಾದಿಗಳು ಪೂರ್ವದಲ್ಲಿ ಹೇಳಿದ ಮಾತುಗಳನ್ನೂ ಕರ್ತನಾದ ರಕ್ಷಕನು ನಿಮ್ಮ ಅಪೊಸ್ತಲರ ಮೂಲಕ ಕೊಟ್ಟ ಅಪ್ಪಣೆಯನ್ನೂ ನೀವು ಜ್ಞಾಪಕಮಾಡಿಕೊಳ್ಳಬೇಕೆಂದು ಈ ಎರಡು ಪತ್ರಿಕೆಗಳ ಮೂಲಕ ನಿಮಗೆ ತಿಳಿಸಿಕೊಡುತ್ತಾ ನಿಮ್ಮ ನಿರ್ಮಲವಾದ ಮನಸ್ಸನ್ನು ಎಚ್ಚರಗೊಳಿಸುತ್ತಿದ್ದೇನೆ.


ಪರಲೋಕದಲ್ಲಿ ಹೆಸರು ಬರೆಸಿಕೊಂಡಿರುವ ಚೊಚ್ಚಲ ಮಕ್ಕಳ ಸಭೆಗೂ, ಎಲ್ಲರಿಗೆ ನ್ಯಾಯಾಧಿಪತಿಯಾಗಿರುವ ದೇವರ ಬಳಿಗೂ, ಪರಿಪೂರ್ಣರಾಗಿರುವ ನೀತಿವಂತರ ಆತ್ಮಗಳ ಬಳಿಗೂ,


ನಮ್ಮ ಹಿರಿಯರು ತಮ್ಮ ನಂಬಿಕೆಯಿಂದಲೇ ದೈವಸಮ್ಮತಿಯನ್ನು ಪಡೆದರು.


ಆದರೆ ನನ್ನವನಾಗಿರುವ ನೀತಿವಂತನು ನಂಬಿಕೆಯಿಂದಲೇ ಬದುಕುವನು, ಅವನು ಅದರಿಂದ ಹಿಂಜರಿದರೆ ಅವನಲ್ಲಿ ನನಗೆ ಮೆಚ್ಚಿಕೆಯಿರುವುದಿಲ್ಲ.”


ಇದಲ್ಲದೆ ಅವನು ಹೊರಗಣವರಿಂದ ಒಳ್ಳೆಯವನೆನ್ನಿಸಿಕೊಂಡಿರಬೇಕು, ಇಲ್ಲದಿದ್ದರೆ ನಿಂದೆಗೆ ಗುರಿಯಾಗುವನು ಮತ್ತು ಸೈತಾನನ ತಂತ್ರಗಳೊಳಗೆ ಸಿಕ್ಕಿಬಿದ್ದಾನು.


ಇವೆಲ್ಲವುಗಳು ದೇವರಿಂದಲೇ ಉಂಟಾದದ್ದು. ದೇವರು ಕ್ರಿಸ್ತನ ಮೂಲಕ ನಮ್ಮನ್ನು ತನಗೆ ಸಂಧಾನಪಡಿಸಿಕೊಂಡು, ಸಂಧಾನಮಾಡುವ ಸೇವೆಯನ್ನು ನಮಗೆ ಅನುಗ್ರಹಿಸಿದ್ದಾನೆ;


ಹೇಗೆಂದರೆ ದೇವರಿಂದ ದೊರಕುವ ನೀತಿಯು ಸುವಾರ್ತೆಯಲ್ಲಿ ತೋರಿಬರುತ್ತದೆ. “ನೀತಿವಂತನು ನಂಬಿಕೆಯಿಂದಲೇ ಬದುಕುವನೆಂಬ” ಶಾಸ್ತ್ರೋಕ್ತಿಯ ಪ್ರಕಾರ ಆ ನೀತಿಯು ನಂಬಿಕೆಯ ಫಲವಾಗಿದ್ದು ನಂಬಿಕೆಯನ್ನು ವೃದ್ಧಿಪಡಿಸುವಂಥದಾಗಿದೆ.


ಇದಲ್ಲದೆ ನೀತಿವಂತರಿಗೂ ಮತ್ತು ಅನೀತಿವಂತರಿಗೂ ಪುನರುತ್ಥಾನವಾಗುವುದೆಂದು ಇವರು ದೇವರಲ್ಲಿ ನಿರೀಕ್ಷೆಯಿಟ್ಟಿರುವ ಪ್ರಕಾರವೇ ನಾನೂ ನಿರೀಕ್ಷೆಯುಳ್ಳವನಾಗಿದ್ದೇನೆ.


“ಅಲ್ಲಿ ಧರ್ಮಶಾಸ್ತ್ರಕ್ಕೆ ಸರಿಯಾಗಿ ನಡೆಯುವ ದೈವಭಕ್ತನೂ, ಆ ಸ್ಥಳದ ಯೆಹೂದ್ಯರೆಲ್ಲರಿಂದ


ನಾನು ತಡಮಾಡದೆ ನಿಮ್ಮ ಹತ್ತಿರ ಜನರನ್ನು ಕಳುಹಿಸಿದೆನು. ನೀವು ಬಂದದ್ದು ಒಳ್ಳೆಯದಾಯಿತು. ಹೀಗಿರುವುದರಿಂದ ಕರ್ತನು ನಿನಗೆ ಅಪ್ಪಣೆಕೊಟ್ಟಿರುವ ಎಲ್ಲಾ ಮಾತುಗಳನ್ನು ಕೇಳುವುದಕ್ಕೆ ನಾವೆಲ್ಲರು ಈಗ ದೇವರ ಸನ್ನಿಧಾನದಲ್ಲಿ ಸೇರಿಬಂದಿದ್ದೇವೆ” ಅಂದನು.


ಅವನು ಚಮ್ಮಾರನಾದ ಸೀಮೋನನ ಬಳಿಯಲ್ಲಿ ಇಳುಕೊಂಡಿದ್ದಾನೆ; ಈ ಸೀಮೋನನ ಮನೆಯು ಸಮುದ್ರತೀರದ ಬಳಿಯಲ್ಲಿ ಇದೆ” ಎಂದು ಹೇಳಿದನು.


ಆದುದರಿಂದ ಸಹೋದರರೇ, ಪವಿತ್ರಾತ್ಮಭರಿತರೂ, ಜ್ಞಾನಸಂಪನ್ನರೂ ಮತ್ತು ಒಳ್ಳೆಯ ಸಾಕ್ಷಿಯನ್ನುಳಿಸಿಕೊಂಡಿರುವ ಏಳು ಮಂದಿಯನ್ನು ನಿಮ್ಮೊಳಗಿಂದ ನೋಡಿ ಆರಿಸಿಕೊಳ್ಳಿರಿ. ಅವರನ್ನು ಈ ಕೆಲಸಕ್ಕಾಗಿ ನೇಮಿಸುವೆವು.


“ಆದರೆ ಇವರಿಗೋಸ್ಕರ ಮಾತ್ರವಲ್ಲದೆ ಇವರ ವಾಕ್ಯದಿಂದ ನನ್ನನ್ನು ನಂಬುವವರಿಗೋಸ್ಕರವಾಗಿಯೂ ನಿನ್ನನ್ನು ಬೇಡಿಕೊಳ್ಳುತ್ತೇನೆ.


ಹೇಗೆಂದರೆ, ನೀನು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಆ ಮಾತುಗಳನ್ನು ಸ್ವೀಕರಿಸಿದ್ದಾರೆ ಮತ್ತು ನಾನು ನಿನ್ನ ಬಳಿಯಿಂದ ಬಂದವನೆಂದು ಇವರು ನಿಜವಾಗಿ ತಿಳಿದು, ನೀನೇ ನನ್ನನ್ನು ಕಳುಹಿಸಿದ್ದೀ ಎಂದು ನಂಬಿದ್ದಾರೆ.


ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ; ನಾನು ಕಳುಹಿಸಿದಾತನನ್ನು ಸ್ವೀಕರಿಸುವವನು ನನ್ನನ್ನು ಸ್ವೀಕರಿಸುತ್ತಾನೆ; ನನ್ನನ್ನು ಸ್ವೀಕರಿಸುವವನು ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸುತ್ತಾನೆ.”


ಸೀಮೋನ್ ಪೇತ್ರನು ಆತನಿಗೆ “ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳಿವೆಯಲ್ಲಾ.


ಜೀವ ಕೊಡುವುದು ಆತ್ಮವೇ. ದೇಹವು ಯಾವುದಕ್ಕೂ ಪ್ರಯೋಜನವಾಗುವುದಿಲ್ಲ. ನಾನು ನಿಮಗೆ ಹೇಳಿರುವ ಮಾತುಗಳೇ ಆತ್ಮವಾಗಿಯೂ, ಜೀವವಾಗಿಯೂ ಇವೆ.


ನಿಮಗೆ ನಿಜನಿಜವಾಗಿ ಹೇಳುತ್ತೇನೆ ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯ ಜೀವವನ್ನು ಹೊಂದಿದ್ದಾನೆ, ಅವನು ಖಂಡನೆಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದಾನೆ.


ಅರಿಮಥಾಯ ಎಂಬ ಯೆಹೂದ್ಯರದೊಂದು ಪಟ್ಟಣದಲ್ಲಿ ಒಬ್ಬ ಮನುಷ್ಯನಿದ್ದನು. ಅವನ ಹೆಸರು ಯೋಸೇಫನ. ಆತನು ಹಿರೀಸಭೆಯವನು, ಉತ್ತಮನು, ಸತ್ಪುರುಷನು ಹಾಗೂ ದೇವರ ರಾಜ್ಯವನ್ನು ಎದುರು ನೋಡುತ್ತಿದ್ದವನೂ ಆಗಿದ್ದನಲ್ಲದೆ ಮಂತ್ರಿಯೂ ಆಗಿದ್ದನು. ಅವನು ಹಿರೀಸಭೆಯವರ ಆಲೋಚನೆಗೂ ಕೃತ್ಯಗಳಿಗೂ ಅನುಮತಿಸಿರಲಿಲ್ಲ.


ಆ ಕಾಲದಲ್ಲಿ ಯೆರೂಸಲೇಮಿನಲ್ಲಿ ಸಿಮೆಯೋನನೆಂಬ ಒಬ್ಬ ಮನುಷ್ಯನಿದ್ದನು. ಈ ಮನುಷ್ಯನು ನೀತಿವಂತನೂ ದೇವಭಕ್ತನೂ ಆಗಿದ್ದನು. ಇಸ್ರಾಯೇಲರನ್ನು ಸಂತೈಸುವವನು ಯಾವಾಗ ಬರುವನೋ ಎಂದು ನಿರೀಕ್ಷಿಸುತ್ತಾ ಇದ್ದನು ಮತ್ತು ಆತನು ಪವಿತ್ರಾತ್ಮಭರಿತನಾಗಿದ್ದನು.


ವ್ಯಭಿಚಾರಿಣಿಯಂತಿರುವ ಈ ಪಾಪಿಷ್ಠ ಪೀಳಿಗೆಯವರಲ್ಲಿ ಯಾರು ನನ್ನನ್ನೂ, ನನ್ನ ಮಾತುಗಳನ್ನೂ ಕುರಿತು ನಾಚಿಕೆಪಡುವರೋ, ಅಂಥವರನ್ನು ಕುರಿತು ಮನುಷ್ಯಕುಮಾರನು, ತಾನು ತನ್ನ ತಂದೆಯ ಪ್ರಭಾವದೊಡನೆ ಪರಿಶುದ್ಧ ದೇವದೂತರ ಸಮೇತವಾಗಿ ಬರುವಾಗ, ನಾಚಿಕೆಪಡುವನು” ಎಂದನು.


ಏಕೆಂದರೆ ಹೆರೋದನು ಯೋಹಾನನನ್ನು ನೀತಿವಂತನೆಂದೂ ಪರಿಶುದ್ಧನೆಂದೂ ತಿಳಿದು ಭಯಪಟ್ಟು ಅವನಿಗೆ ಯಾವ ಅಪಾಯವೂ ಬಾರದಂತೆ ಕಾಪಾಡಿದ್ದನು. ಇದಲ್ಲದೆ ಯೋಹಾನನು ಹೇಳುತ್ತಿದ್ದ ಸಂದೇಶವನ್ನು ಅವನು ಕೇಳಿದಾಗ ಮನಸ್ಸಿನಲ್ಲಿ ಅಸಮಾಧಾನ ಉಂಟಾದರೂ ಅವನ ಮಾತನ್ನು ಸಂತೋಷದಿಂದ ಕೇಳುತ್ತಿದ್ದನು.


ಆದರೆ ಆಕೆಯ ಗಂಡನಾದ ಯೋಸೇಫನು ನೀತಿವಂತನಾಗಿದ್ದ ಕಾರಣ ಮರಿಯಳನ್ನು ಬಯಲಿಗೆ ತಂದು ಅವಮಾನಕ್ಕೆ ಗುರಿಮಾಡದೆ ನಿಶ್ಚಿತಾರ್ಥವನ್ನು ರಹಸ್ಯವಾಗಿ ಮುರಿದುಬಿಡಬೇಕೆಂದು ಆಲೋಚಿಸಿದ್ದನು.


ಇಗೋ, ದುಷ್ಟನ ಅಂತರಾತ್ಮವು ತನ್ನ ಕ್ರಿಯೆಗಳಿಂದ ಉಬ್ಬಿಹೋಗಿದೆ, ಆದರೆ, ನೀತಿವಂತನು ತನ್ನ ನಂಬಿಕೆಯಿಂದಲೇ ಬದುಕುವನು.


ಜ್ಞಾನಿಗಳು ಈ ಸಂಗತಿಗಳನ್ನು ಗ್ರಹಿಸುವರು; ವಿವೇಕಿಗಳು ಅವುಗಳನ್ನು ತಿಳಿದುಕೊಳ್ಳುವರು. ಯೆಹೋವನ ಮಾರ್ಗಗಳು ಸತ್ಯವಾದವುಗಳು; ಅವುಗಳಲ್ಲಿ ಸನ್ಮಾರ್ಗಿಗಳು ನಡೆಯುವರು, ದುರ್ಮಾರ್ಗಿಗಳು ಅವುಗಳನ್ನು ಬಿಟ್ಟು ಎಡವಿ ಬೀಳುವರು.


ದೇವರು ಕನಸಿನಲ್ಲಿ ಅವರಿಗೆ, ನೀವು ಹೆರೋದನ ಬಳಿಗೆ ಹಿಂದಿರುಗಿ ಹೋಗಬಾರದೆಂದು ಆಜ್ಞೆ ನೀಡಿದ್ದರಿಂದ ಅವರು ಮತ್ತೊಂದು ದಾರಿಯಿಂದ ತಮ್ಮ ದೇಶಕ್ಕೆ ಹೊರಟುಹೋದರು.


ಯಾವನು ನನಗೂ ನನ್ನ ಮಾತುಗಳಿಗೂ ನಾಚಿಕೊಳ್ಳುತ್ತಾನೋ, ಅವನಿಗೆ ಮನುಷ್ಯಕುಮಾರನು ತನಗೂ ತನ್ನ ತಂದೆಗೂ ಪರಿಶುದ್ಧ ದೂತರಿಗೂ ಇರುವ ಮಹಾಪ್ರಭಾವದೊಡನೆ ಬರುವಾಗ ಅವನ ಕುರಿತು ನಾಚಿಕೊಳ್ಳುವನು.


ಪೇತ್ರನು ಕೆಳಗಿಳಿದು ಆ ಮನುಷ್ಯರ ಬಳಿಗೆ ಬಂದು; “ಇಗೋ, ನೀವು ವಿಚಾರಿಸುವವನು ನಾನೇ; ನೀವು ಬಂದ ಕಾರಣವೇನು?” ಎಂದು ಕೇಳಲು,


ಅದಕ್ಕೆ ಕೊರ್ನೇಲ್ಯನು; “ನಾನು ನಾಲ್ಕು ದಿನಗಳ ಹಿಂದೆ ಇದೇ ಹೊತ್ತಿನಲ್ಲಿ ಮೂರನೇ ಗಳಿಗೆಯ ದೇವರ ಪ್ರಾರ್ಥನೆಯನ್ನು ನನ್ನ ಮನೆಯಲ್ಲಿ ಮಾಡುತ್ತಿದ್ದಾಗ ಹೊಳೆಯುವ ವಸ್ತ್ರವನ್ನು ಧರಿಸಿಕೊಂಡಿದ್ದ ಒಬ್ಬ ಮನುಷ್ಯನು ನನ್ನೆದುರಿಗೆ ನಿಂತುಕೊಂಡು;


ಅವನೂ ಸಹ ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರಸದೇ ಹಾಕಿದ ದೇವರ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು.


ಮತ್ತು “ಇದು ಸಮುದ್ರದ ಆಚೆ ಇರುವ ಮಾತಲ್ಲ. ನಮಗೋಸ್ಕರ ಸಮುದ್ರವನ್ನು ದಾಟಿ ಅದನ್ನು ತೆಗೆದುಕೊಂಡುಬಂದು ನಮಗೆ ತಿಳಿಸುವಷ್ಟು ಶಕ್ತರು ಯಾರಿದ್ದಾರೆ? ಇದ್ದರೆ ನಾವು ಕೈಕೊಂಡೇವು” ಅಂದುಕೊಳ್ಳುವುದಕ್ಕೆ ಆಸ್ಪದವೇನೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು