Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 10:39 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಆತನು ಯೆಹೂದ್ಯರ ಸೀಮೆಯಲ್ಲಿಯೂ, ಯೆರೂಸಲೇಮಿನಲ್ಲಿಯೂ ಮಾಡಿದ ಎಲ್ಲಾ ಕಾರ್ಯಗಳಿಗೆ ನಾವು ಸಾಕ್ಷಿಗಳಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಅವರು ಯೆಹೂದ್ಯರ ಹಳ್ಳಿಪಳ್ಳಿಗಳಲ್ಲೂ ಜೆರುಸಲೇಮಿನಲ್ಲೂ ಎಸಗಿದ ಸಕಲ ಕಾರ್ಯಗಳಿಗೆ ನಾವು ಸಾಕ್ಷಿಗಳು. ಯೆಹೂದ್ಯರು ಆ ಯೇಸುವನ್ನು ಶಿಲುಬೆಮರಕ್ಕೆ ನೇತುಹಾಕಿ ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಆತನು ಯೆಹೂದ್ಯರ ಸೀಮೆಯಲ್ಲಿಯೂ ಯೆರೂಸಲೇವಿುನಲ್ಲಿಯೂ ಮಾಡಿದ ಎಲ್ಲಾ ಕಾರ್ಯಗಳಿಗೆ ನಾವು ಸಾಕ್ಷಿಗಳಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 “ಜುದೇಯದಲ್ಲಿ ಮತ್ತು ಜೆರುಸಲೇಮಿನಲ್ಲಿ ಯೇಸು ಮಾಡಿದ ಎಲ್ಲಾ ಕಾರ್ಯಗಳನ್ನು ನಾವು ನೋಡಿದೆವು. ಆ ಕಾರ್ಯಗಳಿಗೆ ನಾವು ಸಾಕ್ಷಿಗಳಾಗಿದ್ದೇವೆ. ಆದರೆ ಯೇಸು ಕೊಲ್ಲಲ್ಪಟ್ಟನು. ಅವರು ಆತನನ್ನು ಮರದ ಶಿಲುಬೆಗೆ ಏರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 “ಯೆಹೂದ್ಯರ ನಾಡಿನಲ್ಲಿ ಮತ್ತು ಯೆರೂಸಲೇಮ ಪಟ್ಟಣದಲ್ಲಿಯೂ ಯೇಸು ಮಾಡಿದ ಪ್ರತಿಯೊಂದಕ್ಕೂ ನಾವು ಸಾಕ್ಷಿಗಳು. ಮರದ ಕಂಬಕ್ಕೆ ತೂಗುಹಾಕಿ ಯೇಸುವನ್ನು ನಾಯಕರು ಕೊಂದುಹಾಕಿದರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ಇಸ್ರಾಯೆಲಾಂಚ್ಯಾ ದೆಶ್ಯಾತ್ ಅನಿ ಜೆರುಜಲೆಮಾತ್ ಜೆಜುನ್ ಕರಲ್ಲಿ ಸಗ್ಳಿ ಕಾಮಾ ಅಮಿ ಬಗಟ್ಲಾಂವ್, ತ್ಯಾ ಸಗ್ಳ್ಯಾ ಕಾಮಾಕ್ನಿ ಅಮಿ ಸಾಕ್ಷಿ ಹೊವ್ನ್ ಹಾತ್, ಖರೆ ಜೆಜುಕ್ ಜಿವ್ ಕಾಡುನ್ ಹೊಲೆ ತೆನಿ ತೆಕಾ ಕುರ್ಸಾರ್ ಮಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 10:39
16 ತಿಳಿವುಗಳ ಹೋಲಿಕೆ  

ಇವುಗಳ ವಿಷಯದಲ್ಲಿ ನೀವೇ ಸಾಕ್ಷಿ ಹೇಳುವವರಾಗಿದ್ದೀರಿ.


ಆತನು ಎಲ್ಲರಿಗೂ ಪ್ರತ್ಯಕ್ಷನಾಗದೆ, ದೇವರು ಮುಂಚಿತವಾಗಿ ಆರಿಸಿಕೊಂಡಿದ್ದ ಸಾಕ್ಷಿಗಳಾದ ನಮಗೆ ಪ್ರತ್ಯಕ್ಷನಾದನು. ಆತನು ಸತ್ತವರೊಳಗಿಂದ ಜೀವಿತನಾಗಿ ಎದ್ದು ಬಂದ ಮೇಲೆ ನಾವು ಆತನ ಸಂಗಡ ಊಟ ಮಾಡಿದೆವು.


ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬರಲು ನೀವು ಶಕ್ತಿಯನ್ನು ಹೊಂದಿದವರಾಗಿ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸ್ಥಳದಲ್ಲಿಯು, ಸಮಾರ್ಯ ಸೀಮೆಗಳಲ್ಲಿಯೂ, ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ” ಅಂದನು.


ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನು ಏರಿ ಮರಣ ಹೊಂದಿದನು. ಆತನ ಬಾಸುಂಡೆಗಳಿಂದ ನಮಗೆ ಗುಣವಾಯಿತು.


ಈ ಯೇಸುವನ್ನೇ ದೇವರು ಎಬ್ಬಿಸಿದನು; ಇದಕ್ಕೆ ನಾವೆಲ್ಲರು ಸಾಕ್ಷಿಗಳಾಗಿದ್ದೇವೆ.


ಯೇಸು ಕ್ರಿಸ್ತನು ನಮನ್ನು ಶಾಪದಿಂದ ಬಿಡಿಸುವುದಕ್ಕಾಗಿ ತಾನೇ ಶಾಪಗ್ರಸ್ತನಾದನು. ಏಕೆಂದರೆ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ “ಮರಕ್ಕೆ ತೂಗುಹಾಕಲ್ಪಟ್ಟು ಪ್ರತಿಯೊಬ್ಬನು ಶಾಪಗ್ರಸ್ತನು” ಎಂದು ತಿಳಿದಿದ್ದೇವೆ.


ಮತ್ತು ಆತನು ಗಲಿಲಾಯದಿಂದ ಯೆರೂಸಲೇಮಿಗೆ ತನ್ನ ಜೊತೆಯಲ್ಲಿ ಬಂದವರಿಗೆ ಅನೇಕ ದಿನಗಳವರೆಗೂ ಕಾಣಿಸಿಕೊಂಡನು; ಈಗ ಅವರು ಜನರಿಗೆ ಆತನ ಸಾಕ್ಷಿಗಳಾಗಿದ್ದಾರೆ.


ಪ್ರವಾದಿಗಳಲ್ಲಿ ನಿಮ್ಮ ಪೂರ್ವಿಕರು ಹಿಂಸೆಪಡಿಸದವರು ಯಾರಿದ್ದಾರೆ? ಅವರು ಆ ನೀತಿಸ್ವರೂಪನಾದ ಕರ್ತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು, ನೀವು ಈಗ ಆತನನ್ನು ಹಿಡಿದುಕೊಟ್ಟು ಕೊಲ್ಲಿಸಿದ್ದೀರಿ.


ನೀವು ಶಿಲುಬೆಗೆ ಹಾಕಿಸಿದಂತಹ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂತಹ ನಜರೇತಿನ ಯೇಸು ಕ್ರಿಸ್ತನ ಹೆಸರಿನಿಂದಲೇ ಈ ಮನುಷ್ಯನು ಸೌಖ್ಯಹೊಂದಿದದವನಾಗಿ ನಿಮ್ಮೆದುರಿನಲ್ಲಿ ನಿಂತಿದ್ದಾನೆ ಎಂಬುದನ್ನು ನೀವು ಮತ್ತು ಇಸ್ರಾಯೇಲ್ ಜನರೆಲ್ಲರಿಗೂ ಈ ಸಂಗತಿ ತಿಳಿದಿರಲಿ.


ನೀವು ಮೊದಲಿನಿಂದ ನನ್ನ ಸಂಗಡ ಇದ್ದುದರಿಂದ ನೀವೂ ಸಹ ನನಗೆ ಸಾಕ್ಷಿಗಳಾಗಿದ್ದೀರಿ.


ಪ್ರಾರಂಭದಿಂದಲೂ ಕಣ್ಣಾರೆ ಕಂಡು ಸುವಾರ್ತಾವಾಕ್ಯವನ್ನು ಸಾರುತ್ತಿದ್ದವರು ನಮಗೆ ತಿಳಿಸಿದ ಪ್ರಕಾರ ಆ ಘಟನೆಗಳನ್ನು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು