Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 13:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಕಾನಾನ್ ದೇಶದಲ್ಲಿದ್ದ ಅನ್ಯಜನಗಳ ಏಳು ರಾಜ್ಯಗಳನ್ನು ನಿರ್ಮೂಲಮಾಡಿ, ಆ ಜನರ ದೇಶವನ್ನು ಅವರಿಗೆ ಸ್ವತ್ತಾಗಿ ಹಂಚಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಕಾನಾನ್ ನಾಡಿನ ಏಳು ಜನಾಂಗಗಳನ್ನು ನಾಶಮಾಡಿ ನಮ್ಮ ಜನರಿಗೆ ಆ ನಾಡನ್ನು ಸ್ವಾಸ್ತ್ಯವಾಗಿ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಕಾನಾನ್ ದೇಶದಲ್ಲಿದ್ದ ಅನ್ಯಜನಗಳ ಏಳು ರಾಜ್ಯಗಳನ್ನು ನಿರ್ಮೂಲ ಮಾಡಿ ಆ ಜನರ ದೇಶವನ್ನು ಅವರಿಗೆ ಬಾಧ್ಯವಾಗಿ ಹಂಚಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಕಾನಾನ್ ನಾಡಿನ ಏಳು ಜನಾಂಗಗಳನ್ನು ನಾಶಮಾಡಿ ತನ್ನ ಜನರಿಗೆ ಆ ನಾಡನ್ನು ಸ್ವಾಸ್ತ್ಯವಾಗಿ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಕಾನಾನ್ ದೇಶದಲ್ಲಿದ್ದ ಏಳು ರಾಜ್ಯಗಳನ್ನು ಜಯಿಸಿ, ಅವರ ದೇಶವನ್ನು ತಮ್ಮ ಜನರಿಗೆ ಬಾಧ್ಯವಾಗಿ ದಯಪಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಕಾನಾನ್ ಮನ್ತಲ್ಯಾ ಪ್ರಾಂತ್ಯಾತ್ಲ್ಯಾ ಸಾತ್ ಘರಾನಾಂಚ್ಯಾ ಲೊಕಾಕ್ನಿ ನಾಸ್‍ ಕರುನ್ ಅಪ್ಲ್ಯಾ ಲೊಕಾಕ್ನಿ ತ್ಯಾ ಗಾಂವಾಚೊ ಅದಿಕಾರ್ ಸ್ವತಾಚೆ ಕರುನ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 13:19
16 ತಿಳಿವುಗಳ ಹೋಲಿಕೆ  

ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸೇರಿಸಿ ಅಧಿಕ ಸಂಖ್ಯೆಯಲ್ಲಿಯೂ ಮತ್ತು ಅಧಿಕ ಬಲದಲ್ಲಿಯೂ ನಿಮಗೆ ಮೀರುವ ಹಿತ್ತಿಯರು, ಗಿರ್ಗಾಷಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ಎಂಬ ಏಳು ಜನಾಂಗಗಳನ್ನು ನಿಮ್ಮ ಮುಂದೆಯೇ ಹೊರಡಿಸುವನು.


ಜನಾಂಗಗಳನ್ನು ಅವರ ಮುಂದಿನಿಂದ ಓಡಿಸಿಬಿಟ್ಟು, ಅವರ ದೇಶವನ್ನು ಇಸ್ರಾಯೇಲ್ ಗೋತ್ರಗಳಿಗೆ ಸ್ವತ್ತಾಗಿರುವಂತೆ ಹಂಚಿಕೊಟ್ಟು, ಆ ಜನಾಂಗಗಳ ಬಿಡಾರಗಳಲ್ಲಿ ಅವರನ್ನು ನೆಲೆಗೊಳಿಸಿದನು.


ನಮ್ಮ ಹಿರಿಯರು ಅದನ್ನು ತಮ್ಮ ಪೂರ್ವಿಕರಿಂದ ಹೊಂದಿದ್ದರು. ಅವರು ಯೆಹೋಶುವನನ್ನು ಅನುಸರಿಸಿ ಬಂದು ದೇವರು ತಳ್ಳಿಬಿಟ್ಟ ಅನ್ಯಜನಗಳ ದೇಶವನ್ನು ಸ್ವಾಧೀನಮಾಡಿಕೊಂಡಾಗ ಆ ಗುಡಾರವನ್ನು ಕೂಡ ತಂದರು. ಅದು ದಾವೀದನ ಕಾಲದವರೆಗೂ ಅಲ್ಲೇ ಇತ್ತು.


ಯಾಜಕನಾದ ಎಲಿಯಾಜರನೂ, ನೂನನ ಮಗ ಯೆಹೋಶುವನೂ, ಇಸ್ರಾಯೇಲ್ಯರ ಕುಲಮುಖ್ಯಸ್ಥರೂ ಸೇರಿ ಇಸ್ರಾಯೇಲ್ಯರಿಗೆ ಶೀಲೋವಿನಲ್ಲಿದ್ದ ದೇವದರ್ಶನ ಗುಡಾರದ ಬಾಗಿಲಲ್ಲಿ ಯೆಹೋವನ ಸನ್ನಿಧಿಯಲ್ಲೇ ಚೀಟು ಹಾಕಿ ಹಂಚಿಕೊಟ್ಟ ಪ್ರಾಂತ್ಯಗಳು ಇವೇ. ಹೀಗೆ ದೇಶ ವಿಭಜನೆಯ ಕಾರ್ಯವು ಪೂರ್ಣಗೊಂಡಿತು.


ಮಹಾಯಾಜಕನಾದ ಎಲಿಯಾಜರನೂ, ನೂನನ ಮಗನಾದ ಯೆಹೋಶುವನೂ ಹಾಗೂ ಇಸ್ರಾಯೇಲ್ಯರ ಕುಲಾಧಿಪತಿಗಳೂ


ಅವರಲ್ಲಿ ಅಮೋರಿಯರ ಅರಸನಾದ ಸೀಹೋನನೂ, ಬಾಷಾನಿನ ಅರಸನಾದ ಓಗನೂ ಇದ್ದರು. ಆತನು ಕಾನಾನ್ ದೇಶದ ಎಲ್ಲಾ ರಾಜ್ಯಗಳನ್ನು ನಿರ್ಮೂಲ ಮಾಡಿದನು.


ಅವರು ಆ ದೇಶದಲ್ಲಿ ಹೋಗಿ ಸೇರಿಕೊಂಡು ಅದನ್ನು ಸ್ವಾಧೀನಮಾಡಿಕೊಂಡರು. ನೀನು ಅವರ ಮುಂದೆ ದೇಶನಿವಾಸಿಗಳಾಗಿದ್ದ ಕಾನಾನ್ಯರನ್ನು ಕುಗ್ಗಿಸಿ ಮನಸ್ಸಿಗೆ ಬಂದಂತೆ ನಡಿಸುವ ಹಾಗೆ ಆ ದೇಶದ ರಾಜರನ್ನೂ ಪ್ರಜೆಗಳನ್ನೂ ಅವರ ಕೈಗೆ ಒಪ್ಪಿಸಿದೆ.


ನೀವು ಯೊರ್ದನನ್ನು ದಾಟಿ ಯೆರಿಕೋವಿಗೆ ಬಂದಿರಿ. ಆಗ ಯೆರಿಕೋವಿನವರು ಅಮೋರಿಯರು, ಪೆರಿಜ್ಜೀಯರು, ಕಾನಾನ್ಯರು, ಹಿತ್ತಿಯರು, ಗಿರ್ಗಾಷಿಯರು, ಹಿವ್ವಿಯರು, ಯೆಬೂಸಿಯರು ಇವರೆಲ್ಲಾ ನಿಮಗೆ ವಿರೋಧವಾಗಿ ಯುದ್ಧಕ್ಕೆ ಬರಲು ನಾನು ಅವರೆಲ್ಲರನ್ನು ನಿಮ್ಮ ಕೈಗೆ ಒಪ್ಪಿಸಿದೆನು.


ನಾನು ಯೊರ್ದನಿನಿಂದ ಪಶ್ಚಿಮದ ಸಮುದ್ರದವರೆಗೂ ಇರುವ ಜನಾಂಗಗಳಲ್ಲಿ ಸತ್ತವರ ಮತ್ತು ಉಳಿದಿರುವವರ ದೇಶವನ್ನು ನಿಮಗೆ ಸ್ವತ್ತಾಗಿ ಕೊಟ್ಟಿದ್ದೇನೆ.


ಯೆಹೋಶುವನು ಶೀಲೋವಿನಲ್ಲಿಯೇ ಯೆಹೋವನ ಮುಂದೆ ಅವರಿಗೋಸ್ಕರ ಚೀಟು ಹಾಕಿ ದೇಶವನ್ನು ಅವರ ಕುಲಗಳಿಗೆ ಹಂಚಿಕೊಟ್ಟನು.


ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತ ಸ್ವತ್ತಾಗಿ ಕೊಟ್ಟು ಎಂದೆಂದಿಗೂ ಅವರಿಗೆ ದೇವರಾಗಿರುವೆನು” ಎಂದನು.


ಅಬ್ರಾಮನು ತನ್ನ ಹೆಂಡತಿಯಾದ ಸಾರಯಳನ್ನೂ, ತನ್ನ ತಮ್ಮನ ಮಗನಾದ ಲೋಟನನ್ನೂ, ತಾನೂ ಲೋಟನೂ ಹಾರಾನಿನಲ್ಲಿ ಸಂಪಾದಿಸಿದ್ದ ಎಲ್ಲಾ ಸೊತ್ತನ್ನೂ, ದಾಸ ದಾಸಿಯರನ್ನೂ ತೆಗೆದುಕೊಂಡು ಕಾನಾನ್ ದೇಶಕ್ಕೆ ಬಂದನು.


ಇಸ್ರಾಯೇಲರು ಮುನ್ನೂರು ವರ್ಷಗಳಿಂದ ಹೆಷ್ಬೋನ್, ಅರೋಯೇರ್ ಎಂಬ ಪಟ್ಟಣಗಳಲ್ಲಿಯೂ, ಅವುಗಳ ಗ್ರಾಮಗಳಲ್ಲಿಯೂ, ಅರ್ನೋನ್ ತೀರದ ಎಲ್ಲಾ ಪಟ್ಟಣಗಳಲ್ಲಿಯೂ ವಾಸಿಸುತ್ತಿದ್ದಾರಲ್ಲಾ. ಇಷ್ಟು ದಿನಗಳವರೆಗೆ ನೀನು ಅದನ್ನು ಬಿಡಿಸಿಕೊಳ್ಳದೆ ಇದ್ದದ್ದೇಕೆ?


ಇಸ್ರಾಯೇಲರು ಐಗುಪ್ತದೇಶವನ್ನು ಬಿಟ್ಟುಬಂದ ನಾನೂರ ಎಂಭತ್ತನೆಯ ವರ್ಷದಲ್ಲಿ ಅಂದರೆ, ಇಸ್ರಾಯೇಲರ ಅರಸನಾದ ಸೊಲೊಮೋನನ ಆಳ್ವಿಕೆಯ ನಾಲ್ಕನೆಯ ವರ್ಷದ, ಎರಡನೆಯ ತಿಂಗಳಿನ, ವೈಶಾಖ ಮಾಸದಲ್ಲಿ ಅರಸನಾದ ಸೊಲೊಮೋನನು ಯೆಹೋವನ ಆಲಯವನ್ನು ಕಟ್ಟುವುದಕ್ಕೆ ಪ್ರಾರಂಭಿಸಿದನು.


ಆತನೇ ಇವುಗಳಿಗೆ ಪಾಲು ಮಾಡಿಕೊಟ್ಟಿದ್ದಾನೆ. ಆತನ ಕೈಯೇ ಗೆರೆ ಹಾಕಿ ದೇಶವನ್ನು ಹಂಚಿಕೊಟ್ಟಿದೆ. ಅದು ಇವುಗಳಿಗೆ ನಿತ್ಯ ಸ್ವಾಸ್ತ್ಯವಾಗುವುದು, ಅವು ತಲಾತಲಾಂತರಕ್ಕೂ ಅದರಲ್ಲಿ ವಾಸವಾಗಿರುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು