Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 13:48 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ಅಲ್ಲಿದ್ದ ಅನ್ಯಜನರು ಆ ಮಾತನ್ನು ಕೇಳಿ ಸಂತೋಷಪಟ್ಟು, ದೇವರ ವಾಕ್ಯವನ್ನು ಹೊಗಳಿದರು. ಮತ್ತು ನಿತ್ಯಜೀವಕ್ಕೆ ನೇಮಿಸಲ್ಪಟ್ಟವರೆಲ್ಲರೂ ನಂಬಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

48 ಇದನ್ನು ಕೇಳಿದ ಅನ್ಯಧರ್ಮೀಯರು ಸಂತೋಷಪಟ್ಟು ದೇವರ ಸಂದೇಶಕ್ಕಾಗಿ ಸ್ತುತಿಸಿದರು. ಅಮರಜೀವಕ್ಕೆ ಆಯ್ಕೆಯಾದವರೆಲ್ಲರೂ ವಿಶ್ವಾಸಿಗಳಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

48 ಅಲ್ಲಿದ್ದ ಅನ್ಯಜನರು ಆ ಮಾತನ್ನು ಕೇಳಿ ಸಂತೋಷಪಟ್ಟು ದೇವರ ವಾಕ್ಯವನ್ನು ಹೊಗಳಿದರು; ಮತ್ತು ನಿತ್ಯಜೀವಕ್ಕೆ ನೇವಿುಸಲ್ಪಟ್ಟವರೆಲ್ಲರು ನಂಬಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

48 ಪೌಲನ ಈ ಮಾತುಗಳನ್ನು ಕೇಳಿದ ಯೆಹೂದ್ಯರಲ್ಲದ ಜನರು ಬಹು ಸಂತೋಷಪಟ್ಟು ಪ್ರಭುವಿನ ಸಂದೇಶಕ್ಕಾಗಿ ಸ್ತುತಿಸಿದರು. ನಿತ್ಯಜೀವವನ್ನು ಹೊಂದಿಕೊಳ್ಳಲು ಆಯ್ಕೆಯಾಗಿದ್ದವರೆಲ್ಲರೂ ನಂಬಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 ಯೆಹೂದ್ಯರಲ್ಲದವರು ಇದನ್ನು ಕೇಳಿದಾಗ, ಬಹಳ ಹರ್ಷಗೊಂಡು ಕರ್ತದೇವರ ವಾಕ್ಯವನ್ನು ಘನಪಡಿಸಿದರು. ನಿತ್ಯಜೀವಕ್ಕೆ ನೇಮಕರಾದ ಎಲ್ಲರೂ ವಿಶ್ವಾಸವನ್ನಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

48 ಹೆ ಆಯ್ಕುನ್ ಜುದೆವ್ ನ್ಹಯ್ ಹೊತ್ತ್ಯಾ ಲೊಕಾನಿ ಲೈ ಕುಶಿ ಹೊವ್ನ್ ಧನಿಯಾಚ್ಯಾ ಬರ್‍ಯಾ ಖಬ್ರೆಸಾಟ್ನಿ ಸ್ತುತಿ ಕರ್‍ಲ್ಯಾನಿ, ನಾಸ್ ಹೊಯ್ ನಸಲ್ಲ್ಯಾ ಜಿವಾಕ್ ಎಚುನ್ ಕಾಡುನ್ ಹೊಲ್ಲ್ಯಾ ಸಗ್ಳ್ಯಾನಿ ವಿಶ್ವಾಸ್ ಕರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 13:48
31 ತಿಳಿವುಗಳ ಹೋಲಿಕೆ  

ನಾವು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ದೋಷವಿಲ್ಲದವರೂ ಆಗಿರಬೇಕೆಂದು, ಜಗತ್ತು ಸೃಷ್ಟಿಯಾಗುವುದಕ್ಕಿಂತ ಮೊದಲೇ ದೇವರು ಕ್ರಿಸ್ತನಲ್ಲಿ ನಮ್ಮನ್ನು ಆರಿಸಿಕೊಂಡನು.


ಇದರಿಂದ ತಿಳಿಯತಕ್ಕದ್ದೇನು? ಇಸ್ರಾಯೇಲ್ಯರು ಹುಡುಕಿದ್ದನ್ನು ಅವರು ಹೊಂದಲಿಲ್ಲ. ಅವರೊಳಗೆ ಆರಿಸಲ್ಪಟ್ಟವರಿಗೆ ಅದು ದೊರೆಯಿತು. ಉಳಿದವರು ಮೊಂಡರಾದರು.


ಇದಲ್ಲದೆ ಈ ಮಂದೆಗೆ ಸೇರದಿರುವ ಇನ್ನೂ ಬೇರೆ ಕುರಿಗಳು ನನಗಿವೆ, ಅವುಗಳನ್ನೂ ಸಹ ನಾನು ಕರೆ ತರಬೇಕು. ಅವು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇ ಕುರಿಹಿಂಡು ಆಗುವುದು ಮತ್ತು ಒಬ್ಬನೇ ಕುರುಬನು ಇರುವನು.


ಆ ಜನತೆಗಾಗಿ ಮಾತ್ರವಲ್ಲದೆ ಚದರಿರುವ ದೇವರ ಮಕ್ಕಳನ್ನು ಸಹ ಒಟ್ಟುಗೂಡಿಸುವುದಕ್ಕಾಗಿಯೂ ಸಾಯುವುದಕ್ಕಿದ್ದನು, ಎಂಬುದಾಗಿ ಪ್ರವಾದಿಸಿದನು


ಮತ್ತು ನಂಬುವವರಾದ ನಮ್ಮಲ್ಲಿ ಕಾರ್ಯ ಸಾಧಿಸುವ ಆತನ ಪರಾಕ್ರಮ ಶಕ್ತಿಯ ಅಪಾರವಾದ ಮಹತ್ವವು ಎಂಥದೆಂಬುದನ್ನೂ ನೀವು ತಿಳಿಯುವಂತೆ ದೇವರು ನಿಮಗೆ ಅನುಗ್ರಹಿಸಲಿ.


ಅವನ ಬೋಧನೆಯನ್ನು ಅಂಗೀಕರಿಸಿದ ಅನೇಕರು ದೀಕ್ಷಾಸ್ನಾನಮಾಡಿಸಿ ಕೊಂಡರು. ಆ ದಿನ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಕೊಂಡರು.


“ಆಗ ನಾನು; ‘ಕರ್ತನೇ, ನಾನೇನು ಮಾಡಬೇಕು’? ಎಂದು ಕೇಳಲು ಕರ್ತನು ನನಗೆ; ‘ನೀನೆದ್ದು ದಮಸ್ಕದೊಳಕ್ಕೆ ಹೋಗು, ಮಾಡುವುದಕ್ಕೆ ನಿನಗೆ ನೇಮಿಸಿರುವುದನ್ನೆಲ್ಲಾ ಅಲ್ಲಿ ತಿಳಿಸಲ್ಪಡುವುದು’ ಎಂದು ಹೇಳಿದನು.


ನಾನು ಸಹ ಮತ್ತೊಬ್ಬರ ಅಧಿಕಾರದ ಕೆಳಗಿರುವವನು; ನನ್ನ ಕೈ ಕೆಳಗೆ ಸಿಪಾಯಿಗಳಿದ್ದಾರೆ. ನಾನು ಅವರಲ್ಲಿ ಒಬ್ಬನಿಗೆ ‘ಹೋಗು’ ಎಂದು ಹೇಳಿದರೆ ಅವನು ಹೋಗುತ್ತಾನೆ. ಮತ್ತೊಬ್ಬನಿಗೆ ‘ಬಾ’ ಎಂದು ಹೇಳಿದರೆ ಅವನು ಬರುತ್ತಾನೆ; ನನ್ನ ಆಳಿಗೆ ‘ಇಂಥಿಂಥದನ್ನು ಮಾಡು’ ಎಂದು ಹೇಳಿದರೆ ಮಾಡುತ್ತಾನೆ” ಎಂಬುದಾಗಿ ಹೇಳಿಸಿದನು.


ಪ್ರತಿ ಮನುಷ್ಯನು ತನ್ನ ಮೇಲಿರುವ ಅಧಿಕಾರಿಗಳಿಗೆ ಅಧೀನನಾಗಿರಲಿ. ಯಾಕೆಂದರೆ ದೇವರಿಂದ ಹೊರತು ಒಬ್ಬರಿಗೂ ಅಧಿಕಾರವು ದೊರೆತಿರುವುದಿಲ್ಲ. ಇರುವ ಅಧಿಕಾರಿಗಳಾದರೋ ದೇವರಿಂದ ನೇಮಿಸಲ್ಪಟ್ಟವರು.


ಅವರು ಅವನಿಗೆ ಒಂದು ದಿನವನ್ನು ಗೊತ್ತುಮಾಡಲು, ಬಹುಮಂದಿ ಅವನ ಬಿಡಾರದಲ್ಲಿ ಅವನ ಬಳಿಗೆ ಬಂದರು. ಅವನು ಬೆಳಗ್ಗಿನಿಂದ ಸಾಯಂಕಾಲದ ವರೆಗೂ ದೇವರ ರಾಜ್ಯವನ್ನು ಕುರಿತು ಪ್ರಾಮಾಣಿಕವಾಗಿ ಸಾಕ್ಷಿಹೇಳುತ್ತಾ, ಮೋಶೆಯ ಧರ್ಮಶಾಸ್ತ್ರವನ್ನೂ, ಪ್ರವಾದಿಗಳ ಗ್ರಂಥಗಳನ್ನೂ, ಆಧಾರಮಾಡಿಕೊಂಡು ಯೇಸುವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಇದ್ದನು.


ಅವರೆಲ್ಲರೂ ದೇವರನ್ನು ಕೊಂಡಾಡುವವರಾಗಿಯೂ, ಜನರೆಲ್ಲರ ದಯವನ್ನು ಹೊಂದುವವರಾಗಿಯೂ ಇದ್ದರು. ಕರ್ತನು ರಕ್ಷಣೆಯ ಮಾರ್ಗದಲ್ಲಿರುವವರನ್ನು ಪ್ರತಿದಿನ ಅವರೊಂದಿಗೆ ಸಭೆಗೆ ಸೇರಿಸುತ್ತಿದ್ದನು.


ನಾವು ಮೊದಲೇ ಅಲ್ಲಿಗೆ ಹೋಗಿ ಅಸ್ಸೊಸಿನಲ್ಲಿ ಪೌಲನನ್ನು ತಮ್ಮೊಂದಿಗೆ ಹತ್ತಿಸಿಕೊಳ್ಳಬೇಕೆಂದು ಸಮುದ್ರ ಪ್ರಯಾಣಮಾಡಿದೆವು. ಪೌಲನು ಹಾಗೆಯೇ ನಮಗೆ ಅಪ್ಪಣೆ ಮಾಡಿ ತಾನು ಕಾಲುನಡಿಗೆಯಾಗಿ ಹೋಗಬೇಕೆಂದು ಮನಸ್ಸು ಮಾಡಿದ್ದನು.


ಆದರೆ ಹನ್ನೊಂದು ಮಂದಿ ಶಿಷ್ಯರು ಗಲಿಲಾಯಕ್ಕೆ ಹೋಗಿ, ಯೇಸು ತಮಗೆ ಗೊತ್ತುಮಾಡಿದ್ದ ಬೆಟ್ಟಕ್ಕೆ ಹೋಗಿ ಸೇರಿದರು.


ನಿನ್ನ ಪರಿಶುದ್ಧ ಆಲಯದ ಕಡೆಗೆ ಅಡ್ಡಬೀಳುತ್ತೇನೆ; ನಿನ್ನ ಕೃಪೆ, ಸತ್ಯತೆ ಇವುಗಳಿಗೋಸ್ಕರ ನಿನ್ನ ನಾಮವನ್ನು ಕೊಂಡಾಡುತ್ತೇನೆ. ನಿನ್ನ ನಾಮದ ಮತ್ತು ಆಜ್ಞೆಯ ಘನಪಡಿಸಿ ತೋರಿಸಿದ್ದೀ.


ಕಡೆಯದಾಗಿ, ಸಹೋದರರೇ, ನಮಗೋಸ್ಕರ ಪ್ರಾರ್ಥನೆಮಾಡಿರಿ. ಕರ್ತನ ವಾಕ್ಯವು ನಿಮ್ಮಲ್ಲಿ ಹಬ್ಬಿಹರಡಿದ ಪ್ರಕಾರವೇ ಅದು ಬೇಗನೆ ಪಸರಿಸಿ ಮಹಿಮೆ ಹೊಂದಲಿ,


ಸ್ತೆಫನನ ಮನೆಯವರು ಅಖಾಯದಲ್ಲಿನ ಪ್ರಥಮಫಲವೆಂದು ಹಾಗೂ ಅವರು ದೇವಜನರ ಸೇವೆಗೋಸ್ಕರ ತಮ್ಮನ್ನು ಅರ್ಪಿಸಿದ್ದಾರೆಂದು ನೀವು ಬಲ್ಲವರಾಗಿದ್ದೀರಿ.


ಅವರು ಓದಿ ಅದರಿಂದ ಧೈರ್ಯ ತಂದುಕೊಂಡು ಸಂತೋಷಪಟ್ಟರು.


ಅವರೊಂದಿಗೆ ಪೌಲ ಮತ್ತು ಬಾರ್ನಬರಿಗೆ ಚರ್ಚೆಯೂ ಮಹಾ ವಿವಾದವೂ ಉಂಟಾದಾಗ ಇದರ ವಿಷಯವಾಗಿ ಪೌಲ, ಬಾರ್ನಬರು ಮತ್ತು ತಮ್ಮಲ್ಲಿ ಬೇರೆ ಕೆಲವರು ಯೆರೂಸಲೇಮಿನಲ್ಲಿದ್ದ ಅಪೊಸ್ತಲರ ಮತ್ತು ಸಭೆಯ ಹಿರಿಯರ ಬಳಿಗೆ ಹೋಗಬೇಕೆಂದು ಸಹೋದರರು ತೀರ್ಮಾನಿಸಿದರು.


ಪೌಲನೂ, ಬಾರ್ನಬನೂ ಸಭಾಮಂದಿರವನ್ನು ಬಿಟ್ಟು ಹೋಗುತ್ತಿರುವಾಗ ಜನರು ಈ ಮಾತುಗಳನ್ನು ಬರುವ ಸಬ್ಬತ್ ದಿನದಲ್ಲಿಯೂ ತಮಗೆ ಹೇಳಬೇಕೆಂದು ಕೇಳಿಕೊಂಡರು.


ಆ ಪಟ್ಟಣದಲ್ಲಿ ಬಹು ಸಂತೋಷವುಂಟಾಯಿತು.


ಮತ್ತು ಅನೀತಿವಂತರಾದ ಇವರು ನಿತ್ಯದಂಡನೆಗೆ ಹೋಗುವರು ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು” ಎಂದು ಹೇಳಿದನು.


ಅಧಿಪತಿಯು ಆ ಸಂಗತಿಯನ್ನು ನೋಡಿ ಕರ್ತನ ಬೋಧನೆಗೆ ಅತ್ಯಾಶ್ಚರ್ಯಪಟ್ಟು ನಂಬುವವನಾದನು.


ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು ಒಳ್ಳೆಯದಕ್ಕಾಗಿಯೇ ಆಗುವುದೆಂದು ನಮಗೆ ತಿಳಿದಿದೆ.


ದೇವರು ತನ್ನ ದಯಾಪೂರ್ವಕವಾದ ಚಿತ್ತಕ್ಕನುಸಾರವಾಗಿ ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನ್ನ ಮಕ್ಕಳನ್ನಾಗಿ ಅಂಗೀಕರಿಸಲು ಪ್ರೀತಿಯಿಂದ ಮೊದಲೇ ಸಂಕಲ್ಪಮಾಡಿದ್ದನು.


ಇದಲ್ಲದೆ ತನ್ನ ಚಿತ್ತದ ಉದ್ದೇಶಕ್ಕನುಸಾರವಾಗಿ ಎಲ್ಲಾ ಕಾರ್ಯಗಳನ್ನು ನಡೆಸುವಾತನು ತನ್ನ ಸಂಕಲ್ಪದ ಪ್ರಕಾರ ಮೊದಲೇ ನೇಮಿಸಲ್ಪಟ್ಟವರಾದ ನಮ್ಮನ್ನು ಕ್ರಿಸ್ತನಲ್ಲಿ ತನ್ನ ಸ್ವಕೀಯ ಜನರನ್ನಾಗಿ ಅರಿಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು