ಅಪೊಸ್ತಲರ ಕೃತ್ಯಗಳು 15:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಅವು ಯಾವುವೆಂದರೆ, ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ, ರಕ್ತವನ್ನೂ, ಕುತ್ತಿಗೆ ಹಿಸುಕಿ ಕೊಂದದ್ದನ್ನೂ, ಅನೈತಿಕತೆಯನ್ನೂ ವಿಸರ್ಜಿಸುವುದು ಅಗತ್ಯವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28-29 ವಿಗ್ರಹಗಳಿಗೆ ನೈವೇದ್ಯವಾದುದು ಅಪವಿತ್ರವಾದುದು. ಅದನ್ನು ಸೇವಿಸಬಾರದು; ರಕ್ತವನ್ನಾಗಲಿ ಕುತ್ತಿಗೆ ಹಿಸುಕಿ ಕೊಂದ ಪ್ರಾಣಿಗಳನ್ನಾಗಲಿ ತಿನ್ನಬಾರದು; ಅನೈತಿಕತೆಯಿಂದ ದೂರವಿರಬೇಕು. ಈ ಅಗತ್ಯ ನಿಯಮಗಳ ಹೊರತು ಬೇರೆ ಯಾವ ಹೊರೆಯನ್ನೂ ನಿಮ್ಮ ಮೇಲೆ ಹೇರುವುದು ವಿಹಿತವಲ್ಲವೆಂಬುದು ಪವಿತ್ರಾತ್ಮ ಅವರ ಹಾಗೂ ನಮ್ಮ ತೀರ್ಮಾನ. ಈ ನಿಯಮಗಳನ್ನು ಅನುಸರಿಸಿದರೆ, ನಿಮಗೆ ಒಳಿತಾಗುವುದು, ನಿಮಗೆ ಶುಭವಾಗಲಿ!” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28-29 ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ ರಕ್ತವನ್ನೂ ಕುತ್ತಿಗೆಹಿಸುಕಿ ಕೊಂದದ್ದನ್ನೂ ಹಾದರವನ್ನೂ ವಿಸರ್ಜಿಸುವದು ಅವಶ್ಯವಾಗಿದೆ. ಇದಕ್ಕೆ ಹೆಚ್ಚಿನ ಭಾರವನ್ನು ನಿಮ್ಮ ಮೇಲೆ ಹಾಕಬಾರದೆಂದು ಪವಿತ್ರಾತ್ಮನಿಗೂ ನಮಗೂ ವಿಹಿತವಾಗಿ ತೋರಿತು. ನೀವು ಎಚ್ಚರವಾಗಿದ್ದು ಇವುಗಳ ಗೊಡವೆಗೆ ಹೋಗದಿದ್ದರೆ ನಿಮಗೆ ಒಳ್ಳೇದಾಗುವದು. ಶುಭವಾಗಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ನಿಮಗೆ ಇನ್ನೂ ಹೆಚ್ಚಿನ ಭಾರಗಳು ಇರಕೂಡದೆಂಬುದು ಪವಿತ್ರಾತ್ಮನ ನಿರ್ಧಾರ. ಅದಕ್ಕೆ ನಾವು ಒಪ್ಪಿಕೊಂಡಿದ್ದೇವೆ. ನೀವು ಈ ನಿಯಮಗಳನ್ನು ಮಾತ್ರ ಅನುಸರಿಸಬೇಕಾಗಿದೆ: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಈ ಅಗತ್ಯವಾದವುಗಳನ್ನು ಬಿಟ್ಟು ಬೇರೆಯವುಗಳನ್ನು ನಿಮ್ಮ ಮೇಲೆ ಹೊರೆಯಾಗಿ ಹಾಕಬಾರದೆಂಬುದು, ಪವಿತ್ರಾತ್ಮರಿಗೂ ನಮಗೂ ಒಳ್ಳೆಯದೆಂದು ತೋಚಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್28 ತುಮ್ಕಾ ಅನಿಬಿ ಲೈ ವಜ್ಜೆ ರ್ಹಾವ್ಚೆ ನ್ಹಯ್ ಮನ್ತಲೊ ಪವಿತ್ರ್ ಆತ್ಮ್ಯಾಚೊ ನಿರ್ದಾರ್, ತೆಕಾ ಅಮಿ ಒಪ್ಸುನ್ ಘೆಟ್ಲಾತ್ ತುಮಿ ಹಿ ಕಾಮಾ ಯೆವ್ಡಿಚ್ ಮಾನುಚೆ. ಅಧ್ಯಾಯವನ್ನು ನೋಡಿ |
ಆದರೆ ಈ ಸಂಗತಿಗಳನ್ನು ಮುಂತಿಳಿಸುವುದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದಾರೆಂಬುದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಲ್ಪಡುತ್ತಿವೆ ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂದು ಬಯಸುತ್ತಿದ್ದಾರೆ.