Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 15:36 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಕೆಲವು ದಿನಗಳಾದ ಮೇಲೆ ಪೌಲನು ಬಾರ್ನಬನಿಗೆ; “ನಾವು ಕರ್ತನ ವಾಕ್ಯವನ್ನು ಸಾರಿದ ಎಲ್ಲಾ ಊರುಗಳಿಗೆ ಪುನಃ ಹೋಗಿ ಅಲ್ಲಿರುವ ಸಹೋದರರು ಹೇಗಿದ್ದಾರೆಂದು ನೋಡೋಣ ಬಾ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಕೆಲವು ಕಾಲದ ನಂತರ ಪೌಲನು, “ನಾವು ಪ್ರಭುವಿನ ವಾಕ್ಯವನ್ನು ಈಗಾಗಲೇ ಬೋಧಿಸಿದ ಪ್ರತಿಯೊಂದು ಪಟ್ಟಣಗಳಿಗೆ ಪುನಃ ಹೋಗೋಣ. ಅಲ್ಲಿ ನಮ್ಮ ಸಹೋದರರನ್ನು ಸಂದರ್ಶಿಸಿ ಅವರು ಹೇಗಿದ್ದಾರೆಂದು ನೋಡಿ ಬರೋಣ ಬಾ,” ಎಂದು ಬಾರ್ನಬನನ್ನು ಕರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಕೆಲವು ದಿವಸಗಳಾದ ಮೇಲೆ ಪೌಲನು ಬಾರ್ನಬನಿಗೆ - ನಾವು ಕರ್ತನ ವಾಕ್ಯವನ್ನು ಸಾರಿದ ಎಲ್ಲಾ ಊರುಗಳಿಗೆ ತಿರಿಗಿ ಹೋಗಿ ಅಲ್ಲಿರುವ ಸಹೋದರರು ಹೇಗಿದ್ದಾರೆಂದು ನೋಡೋಣ ಬಾ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಕೆಲವು ದಿನಗಳಾದ ಮೇಲೆ ಪೌಲನು ಬಾರ್ನಬನಿಗೆ, “ನಾವು ಅನೇಕ ಪಟ್ಟಣಗಳಲ್ಲಿ ಪ್ರಭುವಿನ ಸಂದೇಶವನ್ನು ತಿಳಿಸಿದೆವು. ಆ ಪಟ್ಟಣಗಳಲ್ಲಿರುವ ನಮ್ಮ ಸಹೋದರ ಸಹೋದರಿಯರನ್ನು ಸಂದರ್ಶಿಸಿ ಅವರು ಹೇಗಿದ್ದಾರೆಂದು ನೋಡಿಕೊಂಡು ಬರೋಣ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಕೆಲವು ದಿನಗಳ ನಂತರ ಪೌಲನು ಬಾರ್ನಬನಿಗೆ, “ನಾವು ಕರ್ತ ಯೇಸುವಿನ ವಾಕ್ಯವನ್ನು ಸಾರಿದ ಎಲ್ಲಾ ಪಟ್ಟಣಗಳಿಗೆ ಹೋಗಿ ಅಲ್ಲಿದ್ದ ವಿಶ್ವಾಸಿಗಳನ್ನು ಸಂದರ್ಶಿಸಿ ಅವರು ಹೇಗಿದ್ದಾರೆಂದು ನೋಡಿಕೊಂಡು ಬರೋಣ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ಉಲ್ಲಿ ದಿಸಾ ಹೊಲ್ಲ್ಯಾ ತನ್ನಾ ಪಾವ್ಲುನ್ ಬಾರ್ನಾಬಾಕ್, ಅಮಿ ದೆವಾಚಿ ಗೊಸ್ಟಿಯಾ ಸಾಂಗಲ್ಲ್ಯಾ ಲೈ ಶಾರಾತ್ನಿ ಭಾವಾಕ್ನಿ ಅನಿ ಭೆನಿಯಾಕ್ನಿ ಭೆಟುನ್ ತೆನಿ ಕಶೆ ಹಾತ್ ಮನುನ್ ಬಗುನ್ ಯೆಂವ್ವಾ ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 15:36
21 ತಿಳಿವುಗಳ ಹೋಲಿಕೆ  

ಅಪೊಸ್ತಲರು ಅದನ್ನು ತಿಳಿದು ಅಲ್ಲಿಂದ ಓಡಿಹೋಗಿ ಲುಕವೋನ್ಯದಲ್ಲಿದ್ದ ಲುಸ್ತ್ರ ಮತ್ತು ದೆರ್ಬೆ ಎಂಬ ಊರುಗಳಿಗೂ,


ಹೀಗೆ ಅವರು ಪವಿತ್ರಾತ್ಮನಿಂದ ಕಳುಹಿಸಲ್ಪಟ್ಟವರಾಗಿ ಸೆಲ್ಯೂಕ್ಯಕ್ಕೆ ಬಂದರು; ಅಲ್ಲಿಂದ ಸಮುದ್ರದಲ್ಲಿ ಪ್ರಯಾಣವಾಗಿ ಕುಪ್ರದ್ವೀಪಕ್ಕೆ ಹೋದರು.


ಪೌಲ ಬಾರ್ನಬರು ತಮ್ಮ ಕಾಲಿಗೆ ಹತ್ತಿದ್ದ ಧೂಳನ್ನು ಝಾಡಿಸಿಬಿಟ್ಟು ಇಕೋನ್ಯಕ್ಕೆ ಹೋದರು.


ಇಂಥ ಇನ್ನಿತರ ಬೇರೆ ಸಂಗತಿಗಳಲ್ಲದೆ, ಎಲ್ಲಾ ಸಭೆಗಳ ಕುರಿತಾದ ಚಿಂತೆಯು ದಿನದಿನ ನನ್ನನ್ನು ಕಾಡಿಸುತ್ತಿತ್ತು.


ನನ್ನ ಮುಖಾಂತರ ನಿಮಗೆ ಆತ್ಮೀಕ ವರವೇನಾದರೂ ದೊರಕಿ ನೀವು ದೃಢವಾಗುವುದಕ್ಕೋಸ್ಕರ ಅಂದರೆ ನಾನು ನಿಮ್ಮ ನಂಬಿಕೆಯಿಂದ ಮತ್ತು ನೀವು ನನ್ನ ನಂಬಿಕೆಯಿಂದ ಸಹಾಯ ಹೊಂದಿ ಈ ಪ್ರಕಾರ ನಿಮ್ಮೊಂದಿಗೆ ನಾನು ಧೈರ್ಯಗೊಳ್ಳುವುದಕ್ಕೋಸ್ಕರ ನಿಮ್ಮನ್ನು ನೋಡಬೇಕೆಂದು ಅಪೇಕ್ಷಿಸುತ್ತೇನೆ.


ಇಕೋನ್ಯದಲ್ಲಿ ಪೌಲ ಮತ್ತು ಬಾರ್ನಬರು ಅದೇ ಪ್ರಕಾರವಾಗಿ ಯೆಹೂದ್ಯರ ಸಭಾಮಂದಿರದೊಳಗೆ ಹೋಗಿ ಪ್ರೇರಣಾತ್ಮಕವಾದ ಬೋಧನೆ ನೀಡಿ ಮಾತನಾಡಿದ್ದರಿಂದ ಯೆಹೂದ್ಯರಲ್ಲಿಯೂ, ಗ್ರೀಕರಲ್ಲಿಯೂ ಬಹುಮಂದಿ ಕರ್ತನಾದ ಯೇಸುಕ್ರಿಸ್ತನನ್ನು ನಂಬುವವರಾದರು.


ಆಗ ಮೋಶೆ ತನ್ನ ಮಾವನಾದ ಇತ್ರೋನನ ಬಳಿಗೆ ಹಿಂದಿರುಗಿ ಬಂದು ಅವನಿಗೆ, “ನಾನು ಐಗುಪ್ತ ದೇಶದಲ್ಲಿರುವ ನನ್ನ ಸಹೋದರರ ಬಳಿಗೆ ಹಿಂತಿರುಗಿ ಹೋಗಿ ಅವರು ಜೀವದಿಂದ ಇದ್ದಾರೋ ಇಲ್ಲವೋ ಎಂದು ಹೋಗಿ ನೋಡುವೆನು” ಎಂದನು. ಇತ್ರೋನನು ಮೋಶೆಗೆ, “ನೀನು ಸಮಾಧಾನದಿಂದ ಹೋಗು” ಅಂದನು.


ನಾನು ನಿನ್ನ ಕಣ್ಣೀರನ್ನು ನೆನಪಿಗೆ ತಂದು ನಿನ್ನನ್ನು ನೋಡಿ ಸಂತೋಷಭರಿತನಾಗಬೇಕೆಂದು ಬಯಸುತ್ತೇನೆ.


ಆದರೆ ತಿಮೊಥೆಯನು ನಿಮ್ಮ ಬಳಿಯಿಂದ ಬಂದು ನಿಮ್ಮ ನಂಬಿಕೆ ಮತ್ತು ಪ್ರೀತಿಯ ಕುರಿತಾಗಿ ಶುಭವರ್ತಮಾನವನ್ನು ಹೇಳಿ, ನೀವು ನಮ್ಮನ್ನು ಯಾವಾಗಲೂ ಪ್ರೀತಿಪೂರ್ವಕವಾಗಿ ನೆನಪುಮಾಡಿಕೊಂಡು ನಾವು ನಿಮ್ಮನ್ನು ಹೇಗೋ ಹಾಗೆಯೇ ನೀವೂ ಸಹ ನಮ್ಮನ್ನು ನೋಡುವುದಕ್ಕಾಗಿ ಅಪೇಕ್ಷಿಸುತ್ತಿದ್ದೀರೆಂಬುದನ್ನು ತಿಳಿಸಿದ್ದಾನೆ.


ಮರುದಿನ ಪೌಲನು, ಬಾರ್ನಬನ ಜೊತೆಯಲ್ಲಿ ದೆರ್ಬೆಗೆ ಹೊರಟನು. ಆ ಊರಿನಲ್ಲಿ ಅವರು ಸುವಾರ್ತೆಯನ್ನು ಸಾರಿ ಅನೇಕರನ್ನು ಶಿಷ್ಯರನ್ನಾಗಿ ಮಾಡಿದ ಮೇಲೆ ಹಿಂತಿರುಗಿ ಲುಸ್ತ್ರಕ್ಕೂ, ಇಕೋನ್ಯಕ್ಕೂ, ಅಂತಿಯೋಕ್ಯಕ್ಕೂ ಬಂದರು.


“ಅವನಿಗೆ ನಲವತ್ತು ವರ್ಷ ವಯಸ್ಸು ತುಂಬುತ್ತಾ ಇರಲು, ಇಸ್ರಾಯೇಲ್ ವಂಶಸ್ಥರಾದ ತನ್ನ ಸಹೋದರರನ್ನು ಹೋಗಿ ನೋಡಬೇಕೆಂಬ ಆಸೆಯು ಅವನ ಹೃದಯದಲ್ಲಿ ಹುಟ್ಟಿತು.


ಪರದೇಶಿಯಾಗಿದ್ದೆನು, ನೀವು ನನಗೆ ಆಶ್ರಯ ಕೊಡಲಿಲ್ಲ; ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡುವುದಕ್ಕೆ ಕೊಡಲಿಲ್ಲ; ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಆರೈಕೆಮಾಡುವುದಕ್ಕೆ ಬರಲಿಲ್ಲವೆಂದು’ ಹೇಳುವನು.


ಬಟ್ಟೆಯಿಲ್ಲದವನಾಗಿದ್ದೆನು, ನನಗೆ ಉಡುವುದಕ್ಕೆ ಕೊಟ್ಟಿರಿ; ಅಸ್ವಸ್ಥನಾಗಿದ್ದಾಗ, ನನ್ನನ್ನು ಆರೈಕೆ ಮಾಡಿದಿರಿ; ಸೆರೆಮನೆಯಲ್ಲಿದ್ದೆನು, ನನ್ನನ್ನು ನೋಡುವುದಕ್ಕೆ ಬಂದಿರಿ’ ಎಂದು ಹೇಳುವನು.


ಇಸ್ರಾಯೇಲರ ದೇವರಾದ ಯೆಹೋವನು ತನ್ನ ಜನರೆಂಬ ಕುರಿಗಳನ್ನು ಮೇಯಿಸುವ ಕುರುಬರ ದ್ರೋಹವನ್ನು ಕಂಡು ಅವರನ್ನು ಕುರಿತು ಇಂತೆನ್ನುತ್ತಾನೆ, “ನೀವು ನನ್ನ ಮಂದೆಯನ್ನು ಚದರಿಸಿ ಅಟ್ಟಿಬಿಟ್ಟಿದ್ದೀರಿ, ವಿಚಾರಿಸಲೇ ಇಲ್ಲ. ಆಹಾ, ನಿಮ್ಮ ದುಷ್ಕೃತ್ಯಗಳ ನಿಮಿತ್ತ ನಾನು ನಿಮ್ಮನ್ನು ವಿಚಾರಿಸುವೆನು.


ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲಾದರೂ ಹೆದರದೆ ಏಕಮನಸ್ಸಿನಿಂದ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೋಸ್ಕರ ಐಕಮತ್ಯದಿಂದ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು.


ಅಧಿಪತಿಯು ಆ ಸಂಗತಿಯನ್ನು ನೋಡಿ ಕರ್ತನ ಬೋಧನೆಗೆ ಅತ್ಯಾಶ್ಚರ್ಯಪಟ್ಟು ನಂಬುವವನಾದನು.


ಅವನು ಆಕೆಯ ಕ್ಷೇಮವನ್ನು ಮತ್ತು ಆಕೆ ಮುಂದೆ ಏನು ಮಾಡಬೇಕು ಎಂದು ವಿಚಾರಿಸುವುದಕ್ಕಾಗಿ ಪ್ರತಿದಿನವೂ ಅಂತಃಪುರದ ಪ್ರಾಕಾರದ ಮುಂದೆ ತಿರುಗಾಡುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು