Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 15:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 “ಸಹೋದರರೇ, ಅನ್ಯಜನರು ನನ್ನ ಬಾಯಿಂದ ಸುವಾರ್ತೆಯ ವಾಕ್ಯವನ್ನು ಕೇಳಿ ನಂಬಬೇಕೆಂದು ದೇವರು ಬಹಳ ದಿನಗಳ ಹಿಂದೆ ನಿಮ್ಮೊಳಗಿಂದ ನನ್ನನ್ನು ಆರಿಸಿಕೊಂಡದ್ದು ನಿಮಗೇ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸುದೀರ್ಘ ಚರ್ಚೆಯಾದ ನಂತರ ಪೇತ್ರನು ಎದ್ದುನಿಂತು ಹೀಗೆಂದನು: “ಸಹೋದರರೇ, ಅನ್ಯಧರ್ಮೀಯರು ಶುಭಸಂದೇಶವನ್ನು ನನ್ನ ಬಾಯಿಯಿಂದ ಕೇಳಿ ವಿಶ್ವಾಸಿಸಲೆಂದು ದೇವರು ನಿಮ್ಮ ಮಧ್ಯೆಯಿಂದ ನನ್ನನ್ನು ಬಹುದಿನಗಳ ಹಿಂದೆಯೇ ಆರಿಸಿಕೊಂಡರು. ಇದು ನಿಮಗೆ ತಿಳಿದ ವಿಷಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಪೇತ್ರನು ಎದ್ದು ಅವರಿಗೆ - ಸಹೋದರರೇ, ಅನ್ಯಜನರು ನನ್ನ ಬಾಯಿಂದ ಸುವಾರ್ತೆಯ ವಾಕ್ಯವನ್ನು ಕೇಳಿ ನಂಬಬೇಕೆಂದು ದೇವರು ಬಹಳ ದಿವಸಗಳ ಕೆಳಗೆ ನಿಮ್ಮೊಳಗಿಂದ ನನ್ನನ್ನು ಆರಿಸಿಕೊಂಡದ್ದು ನಿಮಗೇ ತಿಳಿದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ದೀರ್ಘಚರ್ಚೆಯಾಯಿತು. ಬಳಿಕ ಪೇತ್ರ ಎದ್ದುನಿಂತು ಅವರಿಗೆ, “ನನ್ನ ಸಹೋದರರೇ, ನಿಮಗೇ ತಿಳಿದಿರುವಂತೆ, ಯೆಹೂದ್ಯರಲ್ಲದ ಜನರಿಗೆ ಸುವಾರ್ತೆಯನ್ನು ಬೋಧಿಸುವುದಕ್ಕಾಗಿ ನಿಮ್ಮ ಮಧ್ಯದೊಳಗಿಂದ ದೇವರು ನನ್ನನ್ನು ಬಹುದಿನಗಳ ಹಿಂದೆ ಆರಿಸಿಕೊಂಡನು. ಅವರು ನನ್ನಿಂದ ಸುವಾರ್ತೆಯನ್ನು ಕೇಳಿ ನಂಬಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಬಹಳ ಚರ್ಚೆಯಾಗುತ್ತಿರುವಾಗ ಪೇತ್ರನು ಎದ್ದು ನಿಂತು ಅವರಿಗೆ, “ಸಹೋದರರೇ, ಯೆಹೂದ್ಯರಲ್ಲದವರು ನನ್ನ ಬಾಯಿಂದ ಸುವಾರ್ತೆಯ ವಾಕ್ಯವನ್ನು ಕೇಳಿ ನಂಬಬೇಕೆಂಬ ಉದ್ದೇಶದಿಂದ ನಿಮ್ಮೊಳಗಿಂದ ನನ್ನನ್ನು ದೇವರು ಬಹು ದಿನಗಳ ಹಿಂದೆ ಆಯ್ದುಕೊಂಡರೆಂಬುದು ನಿಮಗೆ ತಿಳಿದೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಲೈ ಯೆಳ್ ಚರ್ಚಾ ಕರುನ್ ಹೊಲ್ಲ್ಯಾ ಮಾನಾ, ಪೆದ್ರುನ್ ಉಟುನ್ ಇಬೆ ರಾವ್ನ್ ತೆಂಕಾ , ಮಾಜ್ಯಾ ಭಾವಾನು ಅನಿ ಭೆನಿಯಾನು, ಜುದೆವಾಂಚೆ ನ್ಹಯ್ ಹೊಲ್ಲ್ಯಾ ಲೊಕಾಕ್ನಿ ದೆವಾಚಿ ಬರಿ ಖಬರ್ ಸಾಂಗುಕ್ ಮನುನ್ ತುಮ್ಚ್ಯಾತ್ನಾ ಮಾಕಾ ದೆವಾನ್ ಲೈ ದಿಸಾಂಚ್ಯಾ ಅದ್ದಿಚ್ ಎಚುನ್ ಘೆಟ್ಲ್ಯಾನ್, ಅನಿ ತೆನಿ ಮಾಜಿ ಶಿಕಾಪಾ ಆಯ್ಕುನ್ ದೆವಾಚೆರ್ ವಿಶ್ವಾಸ್ ಥವ್ಲ್ಯಾನಿ ಮನ್ತಲೆ ತುಮ್ಕಾಚ್ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 15:7
25 ತಿಳಿವುಗಳ ಹೋಲಿಕೆ  

ಅವರೊಂದಿಗೆ ಪೌಲ ಮತ್ತು ಬಾರ್ನಬರಿಗೆ ಚರ್ಚೆಯೂ ಮಹಾ ವಿವಾದವೂ ಉಂಟಾದಾಗ ಇದರ ವಿಷಯವಾಗಿ ಪೌಲ, ಬಾರ್ನಬರು ಮತ್ತು ತಮ್ಮಲ್ಲಿ ಬೇರೆ ಕೆಲವರು ಯೆರೂಸಲೇಮಿನಲ್ಲಿದ್ದ ಅಪೊಸ್ತಲರ ಮತ್ತು ಸಭೆಯ ಹಿರಿಯರ ಬಳಿಗೆ ಹೋಗಬೇಕೆಂದು ಸಹೋದರರು ತೀರ್ಮಾನಿಸಿದರು.


ಆದರೆ ಪ್ರಾಣವನ್ನು ಉಳಿಸಿಕೊಳ್ಳುವುದೇ ಶ್ರೇಷ್ಠವೆಂದು ನಾನು ಎಣಿಸುವುದಿಲ್ಲ; ದೇವರ ಕೃಪೆಯ ವಿಷಯವಾದ ಸುವಾರ್ತೆಯನ್ನು ಆಸಕ್ತಿಯಿಂದ ಸಾಕ್ಷ್ಯಪೂರಕವಾಗಿ ಸಾರುವ ನಿಯೋಗವನ್ನು ಕರ್ತನಾದ ಯೇಸುವಿನಿಂದ ನಾನು ಹೊಂದಿದ್ದೇನೆ ಈ ನಿಯೋಗವನ್ನು ಪೂರ್ಣಗೊಳಿಸುವುದೊಂದೇ ನನ್ನ ಅಪೇಕ್ಷೆಯಾಗಿದೆ.


ನೀನೆದ್ದು ಕೆಳಗಿಳಿದು ಏನೂ ಸಂಶಯಪಡದೆ ಅವರ ಜೊತೆಯಲ್ಲಿ ಹೋಗು; ನಾನೇ ಅವರನ್ನು ಕಳುಹಿಸಿದ್ದೇನೆ” ಎಂದು ಹೇಳಿದನು.


ಗೊಣಗುಟ್ಟದೆಯೂ, ವಿವಾದಗಳಿಲ್ಲದೆಯೂ ಎಲ್ಲವನ್ನು ಮಾಡಿರಿ.


ಈ ವಿಷಯದಲ್ಲಿ ತೀವ್ರವಾದ ವಾಗ್ವಾದವುಂಟಾಗಿ ಅವರು ಒಬ್ಬರನ್ನೊಬ್ಬರು ಅಗಲಿದರು. ಬಾರ್ನಬನು ಮಾರ್ಕನನ್ನು ಕರೆದುಕೊಂಡು ಸಮುದ್ರ ಮಾರ್ಗವಾಗಿ ಕುಪ್ರದ್ವೀಪಕ್ಕೆ ಹೋದನು.


ಇವರು ಕರ್ತನನ್ನು ಆರಾಧಿಸುತ್ತಾ, ಉಪವಾಸಮಾಡುತ್ತಾ ಇದ್ದಾಗ ಪವಿತ್ರಾತ್ಮನು; “ನಾನು ಬಾರ್ನಬ ಮತ್ತು ಸೌಲರನ್ನು ಕರೆದ ಸೇವೆಗಾಗಿ ಅವರನ್ನು ಬೇರ್ಪಡಿಸಿರಿ” ಎಂದು ಹೇಳಿದನು.


ಕರ್ತನು ಅವನಿಗೆ, “ನೀನು ಹೋಗು; ಆ ಮನುಷ್ಯನು ಅನ್ಯಜನರಿಗೂ, ಅರಸುಗಳಿಗೂ, ಇಸ್ರಾಯೇಲ್ಯರಿಗೂ ನನ್ನ ಹೆಸರನ್ನು ತಿಳಿಸುವುದಕ್ಕಾಗಿ ನಾನು ಆರಿಸಿಕೊಂಡ ಸಾಧನವಾಗಿದ್ದಾನೆ.


ನೀನು ಪವಿತ್ರಾತ್ಮನ ಮೂಲಕವಾಗಿ ನಿನ್ನ ಸೇವಕನಾಗಿದ್ದ ನಮ್ಮ ಪಿತೃವಾದ ದಾವೀದನ ಬಾಯಿಂದ, “‘ಅನ್ಯಜನಗಳು ಏಕೆ ಆಕ್ರೋಶಗೊಂಡರು? ಜನಾಂಗಗಳವರು ಏಕೆ ವ್ಯರ್ಥಕಾರ್ಯಗಳನ್ನು ಯೋಚಿಸುವರು?


ಆದರೆ, ಕ್ರಿಸ್ತನು ಕಷ್ಟಗಳನ್ನನುಭವಿಸಬೇಕೆಂದು, ದೇವರು ಎಲ್ಲಾ ಪ್ರವಾದಿಗಳ ಮೂಲಕ ಮುಂಚಿತವಾಗಿ ಹೇಳಿಸಿದ ಮಾತುಗಳನ್ನು ಹೀಗೆ ನೆರವೇರಿಸಿದನು.


“ಕರ್ತನೇ, ಎಲ್ಲರ ಹೃದಯವನ್ನು ಬಲ್ಲಾತನೇ, ಯೂದನು ಅಪೊಸ್ತಲತನವೆಂಬ ಈ ಸೇವಾಸ್ಥಾನದಿಂದ ಭ್ರಷ್ಟನಾಗಿ ತಾನು ಹೋಗ ತಕ್ಕ ಸ್ಥಳಕ್ಕೆ ಹೋಗಿರುವುದರಿಂದ ಆ ಸ್ಥಾನವನ್ನು ಹೊಂದುವುದಕ್ಕೆ ಈ ಇಬ್ಬರಲ್ಲಿ ನೀನು ಆರಿಸಿ ಕೊಂಡವನನ್ನು ತೋರಿಸಿಕೊಡು” ಎಂದು ಪ್ರಾರ್ಥಿಸಿದರು.


“ಸಹೋದರರೇ, ಯೇಸುವನ್ನು ಬಂಧಿಸಿದವರಿಗೆ ದಾರೀತೋರಿಸಿದ ಯೂದನ ವಿಷಯವಾಗಿ ಪವಿತ್ರಾತ್ಮನು ದಾವೀದನ ಬಾಯಿಂದ ಮೊದಲೇ ಹೇಳಿಸಿದ ಶಾಸ್ತ್ರವಚನವು ನೆರವೇರುವುದು ಅವಶ್ಯವಾಗಿತ್ತು.


ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನು ನಿಮ್ಮನ್ನು ಆರಿಸಿಕೊಂಡಿದ್ದೇನೆ, ನೀವು ಹೊರಟು ಹೋಗಿ ಫಲಕೊಡಬೇಕೆಂತಲೂ, ಹಾಗೂ ನೀವು ಕೊಡುವ ಫಲವು ಸದಾಕಾಲ ನಿಲ್ಲುವಂಥದ್ದಾಗಬೇಕಂತಲೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನೇನು ಬೇಡಿಕೊಳ್ಳುವಿರೋ, ಅದನ್ನು ಆತನು ನಿಮಗೆ ಕೊಡುವನು.


ಯೋಹಾನನು “ಪರಲೋಕದಿಂದ ಅನುಗ್ರಹಿಸದ ಹೊರತು ಮನುಷ್ಯನು ಏನ್ನನ್ನೂ ಹೊಂದಲಾರನು.


ಆಗ ಯೆಹೋವನು ಕೈಚಾಚಿ ನನ್ನ ಬಾಯನ್ನು ಮುಟ್ಟಿ, “ಇಗೋ, ನಿನ್ನ ಬಾಯಲ್ಲಿ ನನ್ನ ಮಾತುಗಳನ್ನು ಇಟ್ಟಿದ್ದೇನೆ;


ಹಾಗಾದರೆ ಈಗಲೇ ನೀನು ಹೊರಡು, ನಾನು ನಿನ್ನಗೆ ಮಾತನಾಡಲು ಬೇಕಾದ ಸಾಮರ್ಥ್ಯವನ್ನು ಕೊಡುತ್ತಾ, ನೀನು ಮಾತನಾಡಬೇಕಾದದ್ದನ್ನು ನಿನಗೆ ಬೋಧಿಸುವೆನು” ಎಂದು ಹೇಳಿದನು.


ಪೇತ್ರನು ಆ ದರ್ಶನದ ಕುರಿತಾಗಿ ಯೋಚನೆ ಮಾಡುತ್ತಿರಲು ದೇವರಾತ್ಮನು ಅವನಿಗೆ; “ಅಗೋ, ಮೂವರು ಮನುಷ್ಯರು ನಿನ್ನನ್ನು ವಿಚಾರಿಸುತ್ತಾರೆ;


“ಸಹೋದರರೇ, ನಾನು ಹೇಳುವುದನ್ನು ಕೇಳಿರಿ. ದೇವರು ಮೊದಲು ಅನ್ಯಜನರನ್ನು ಕೃಪಾಕಟಾಕ್ಷದಿಂದ ನೋಡಿ ತನ್ನ ಹೆಸರಿಗಾಗಿ ಅವರೊಳಗಿನಿಂದ ಒಬ್ಬ ಪ್ರಜೆಯನ್ನು ಆರಿಸಿಕೊಂಡ ವಿಧವನ್ನು ಸಿಮೆಯೋನನು ವಿವರಿಸಿದನಷ್ಟೆ.


ಕೈಸರೈಯದಿಂದ ಕೆಲವು ಶಿಷ್ಯರು ನಮ್ಮ ಜೊತೆಯಲ್ಲಿ ಬಂದು ನಾವು ಇಳುಕೊಳ್ಳಬೇಕಾಗಿದ್ದವನ ಮನೆಯ ತನಕ ನಮ್ಮನ್ನು ಕರೆದುಕೊಂಡು ಹೋದರು. ಆ ಮನೆಯವನು ಪ್ರಥಮ ಶಿಷ್ಯರಲ್ಲಿ ಒಬ್ಬನಾದ ಕುಪ್ರದೇಶದ ಮ್ನಾಸೋನನೆಂಬವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು