Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 15:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇದಲ್ಲದೆ ಆತನು ನಮಗೂ, ಅವರಿಗೂ ಏನೂ ಭೇದಮಾಡದೆ ಅವರ ಹೃದಯಗಳನ್ನೂ ನಂಬಿಕೆಯ ಮೂಲಕವಾಗಿ ಶುದ್ಧೀಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅವರಿಗೂ ನಮಗೂ ಯಾವ ಭೇದಭಾವವನ್ನು ತೋರಿಸದೆ ವಿಶ್ವಾಸದ ನಿಮಿತ್ತ ದೇವರು ಅವರ ಪಾಪಗಳನ್ನು ಕ್ಷಮಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಇದಲ್ಲದೆ ಆತನು ನಮಗೂ ಅವರಿಗೂ ಏನೂ ಭೇದಮಾಡದೆ ಅವರ ಹೃದಯಗಳನ್ನೂ ನಂಬಿಕೆಯ ಮೂಲಕವಾಗಿ ಶುದ್ಧೀಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ದೇವರ ದೃಷ್ಟಿಯಲ್ಲಿ ಅವರಿಗೂ ನಮಗೂ ಯಾವ ವ್ಯತ್ಯಾಸವಿಲ್ಲ. ಅವರು ನಂಬಿಕೊಂಡಾಗ, ದೇವರು ಅವರ ಹೃದಯಗಳನ್ನು ಶುದ್ಧೀಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ದೇವರು ಅವರಿಗೂ ನಮಗೂ ಮಧ್ಯದಲ್ಲಿ ಯಾವುದೇ ವ್ಯತ್ಯಾಸವನ್ನು ಮಾಡದೆ, ವಿಶ್ವಾಸದ ಮೂಲಕ ಅವರ ಹೃದಯಗಳನ್ನು ಶುದ್ಧೀಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ದೆವಾಚ್ಯಾ ನದ್ರೆತ್ ಅಮ್ಕಾ ಅನಿ ತೆಂಕಾ ಕಸ್ಲೊ ಫರಕ್ ಬಿ ನಾ, ತೆನಿ ವಿಶ್ವಾಸ್ ಕರಲ್ಲ್ಯಾ ಸಾಟ್ನಿ ದೆವಾನ್ ತೆಂಚಿ ಪಾಪಾ‌ ಮಾಪಿ ಕರ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 15:9
24 ತಿಳಿವುಗಳ ಹೋಲಿಕೆ  

ಅದು ಯಾವುದೆಂದರೆ, ಅನ್ಯಜನರು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ದೇವಜನರೊಂದಿಗೆ ಸಹಬಾಧ್ಯರೂ ಒಂದೇ ದೇಹದ ಅಂಗಗಳೂ, ವಾಗ್ದಾನದಲ್ಲಿ ಪಾಲುಗಾರರೂ ಆಗಿದ್ದಾರೆಂಬುದೇ.


ಅಲ್ಲಿ ಬಹು ಜನರು ಸೇರಿ ಬಂದಿರುವುದನ್ನು ಕಂಡು ಅವರಿಗೆ; “ಯೆಹೂದ್ಯರು, ಅನ್ಯ ಜನರೊಂದಿಗೆ ಸಂಪರ್ಕ ಇಟ್ಟುಕೊಳ್ಳುವುದು, ಅವರೊಂದಿಗೆ ವ್ಯವಹರಿಸುವುದು ಯೆಹೂದ್ಯರ ಸಂಪ್ರದಾಯಕ್ಕೆ ನಿಷಿದ್ಧವಾಗಿದೆ ಎಂಬುದು ನಿಮಗೆ ತಿಳಿದಿದೆ. ನನಗಂತೂ ಯಾವ ಮನುಷ್ಯನನ್ನೂ ಹೊಲೆಯಾದವನು, ಇಲ್ಲವೆ ಅಶುದ್ಧನು ಎಂದು ಅನ್ನಬಾರದೆಂದು ದೇವರು ತೋರಿಸಿಕೊಟ್ಟಿದ್ದಾನೆ.


ಈ ಜ್ಞಾನದಲ್ಲಿ ಗ್ರೀಕನು ಮತ್ತು ಯೆಹೂದ್ಯನು ಎಂಬ ಭೇದವಿಲ್ಲ, ಸುನ್ನತಿಮಾಡಿಸಿಕೊಂಡವರು ಮತ್ತು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ನಾಗರಿಕ, ಅನಾಗರಿಕನು ಎಂಬ ಭೇದವಿಲ್ಲ, ದಾಸನು, ಸ್ವತಂತ್ರನು ಎಂಬ ಭೇದವಿಲ್ಲ, ಆದರ ಬದಲಾಗಿ ಕ್ರಿಸ್ತನೇ ಸಮಸ್ತವೂ ಹಾಗೂ ಸಮಸ್ತರಲ್ಲಿಯೂ ಇರುವಾತನಾಗಿದ್ದಾನೆ.


ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಆಗದಿದ್ದರೂ ಪ್ರಯೋಜನವಿಲ್ಲ, ಆದರೆ ಅವರಲ್ಲಿ ಪ್ರೀತಿಯಿಂದ ಹೊರಹೊಮ್ಮುವ ನಂಬಿಕೆಯೇ ಪ್ರಯೋಜನವಾಗಿದೆ.


ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ ಯೆಹೂದ್ಯನು ಅಥವಾ ಗ್ರೀಕನು ಎಂದಾಗಲೀ, ಆಳು ಅಥವಾ ಒಡೆಯ ಎಂದಾಗಲೀ, ಗಂಡು ಹಾಗೂ ಹೆಣ್ಣು ಎಂದಾಗಲೀ ಭೇದವಿಲ್ಲ.


ಕೊರಿಂಥದಲ್ಲಿನ ದೇವರ ಸಭೆಗೆ ಅಂದರೆ ಕ್ರಿಸ್ತ ಯೇಸುವಿನಲ್ಲಿ ಪ್ರತಿಷ್ಠಿತರಾದವರಿಗೂ, ಪರಿಶುದ್ಧರಾಗಿರಲು ಕರೆಯಲ್ಪಟ್ಟವರಿಗೂ, ನಮ್ಮ ಮತ್ತು ಅವರ ಕರ್ತನಾಗಿರುವ ಯೇಸು ಕ್ರಿಸ್ತನ ನಾಮಸ್ಮರಣೆಯನ್ನು ಮಾಡುವವರೆಲ್ಲಿದ್ದರೂ ಅವರೆಲ್ಲರಿಗೂ ಬರೆಯುವುದು ಏನೆಂದರೆ,


ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವುದರ ಮೂಲಕವೇ ವಿಶ್ವಾಸಿಗಳೆಲ್ಲರಿಗೆ ದೇವರ ನೀತಿಯು ಉಂಟಾಗುತ್ತದೆ. ಇದರಲ್ಲಿ ಯಾವ ತಾರತಮ್ಯವನ್ನು ಮಾಡುವುದಿಲ್ಲ.


ದೇವರಾತ್ಮನು, ನನಗೆ ನೀನು ಏನೂ ಭೇದಮಾಡದೆ ಅವರ ಜೊತೆಯಲ್ಲಿ ಹೋಗು ಎಂದು ಹೇಳಿದನು. ಈ ಆರು ಮಂದಿ ಸಹೋದರರು ಸಹ ನನ್ನ ಸಂಗಡ ಬಂದರು.


ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಿಮಾಡಿಕೊಂಡದ್ದರಿಂದ ನಿಷ್ಕಪಟವಾದ ಸಹೋದರ ಪ್ರೀತಿಯುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನೊಬ್ಬರು ಶುದ್ಧಹೃದಯದಿಂದಲೂ, ಯಥಾರ್ಥವಾಗಿಯೂ ಪ್ರೀತಿಸಿರಿ.


ಆಗ ಪೇತ್ರನು ಉಪದೇಶಮಾಡಲಾರಂಭಿಸಿ ಹೇಳಿದ್ದೇನಂದರೆ; “ನಿಜವಾಗಿಯೂ, ದೇವರು ಪಕ್ಷಪಾತಿಯಲ್ಲ,


ದೇವರು ಕರೆದ ಕಾಲದಲ್ಲಿ ಯಾವನಾದರೂ ಸುನ್ನತಿಯುಳ್ಳವನಾಗಿದ್ದನೋ ಅವನು ಸುನ್ನತಿಯಿಲ್ಲದವನಂತಾಗಬಾರದು. ದೇವರು ಕರೆದಾಗ ಯಾವನಾದರೂ ಸುನ್ನತಿಯಿಲ್ಲದವನಾಗಿದ್ದಾನೋ ಅವನು ಸುನ್ನತಿಮಾಡಿಸಿಕೊಳ್ಳಬಾರದು.


ಆತನು ಕರುಣಿಸಿದ ನಮ್ಮನ್ನು ಯೆಹೂದ್ಯರೊಳಗಿಂದ ಮಾತ್ರ ಕರೆಯದೆ ಹೋಶೇಯನ ಗ್ರಂಥದ ವಚನದಲ್ಲಿ ತಾನು ಸೂಚಿಸಿರುವಂತೆ ಅನ್ಯಜನರೊಳಗಿಂದ ಸಹ ಕರೆದನು.


ಹಾಗಾದರೆ ಏನು ಹೇಳಬೇಕು? ನಾವು ಅನ್ಯರಿಗಿಂತ ಶ್ರೇಷ್ಠರೋ? ಎಷ್ಟು ಮಾತ್ರಕ್ಕೂ ಇಲ್ಲ. ಯೆಹೂದ್ಯರೇ ಆಗಲಿ ಗ್ರೀಕರೇ ಆಗಲಿ ಎಲ್ಲರೂ ಪಾಪಕ್ಕೆ ಒಳಗಾಗಿ ಅಪರಾಧಿಗಳಾಗಿದ್ದಾರೆಂದು ಮೊದಲೇ ತೋರಿಸಿಕೊಟ್ಟಿದ್ದೇವಲ್ಲಾ.


ಅಲ್ಲಿ ಸಭೆಯನ್ನು ಕೂಡಿಸಿ, ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳೆಲ್ಲವನ್ನೂ, ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲು ತೆರೆದದ್ದನ್ನೂ ವಿವರವಾಗಿ ಅವರಿಗೆ ತಿಳಿಸಿದರು.


ಇಕೋನ್ಯದಲ್ಲಿ ಪೌಲ ಮತ್ತು ಬಾರ್ನಬರು ಅದೇ ಪ್ರಕಾರವಾಗಿ ಯೆಹೂದ್ಯರ ಸಭಾಮಂದಿರದೊಳಗೆ ಹೋಗಿ ಪ್ರೇರಣಾತ್ಮಕವಾದ ಬೋಧನೆ ನೀಡಿ ಮಾತನಾಡಿದ್ದರಿಂದ ಯೆಹೂದ್ಯರಲ್ಲಿಯೂ, ಗ್ರೀಕರಲ್ಲಿಯೂ ಬಹುಮಂದಿ ಕರ್ತನಾದ ಯೇಸುಕ್ರಿಸ್ತನನ್ನು ನಂಬುವವರಾದರು.


ಅದಕ್ಕೆ; “ದೇವರು ಶುದ್ಧಮಾಡಿದ್ದನ್ನು ನೀನು ಹೊಲೆ ಎನ್ನಬಾರದೆಂದು” ಪುನಃ ಎರಡನೆಯ ಸಾರಿ ಅವನಿಗೆ ವಾಣಿ ಕೇಳಿಸಿತು.


ದೇವರೇ, ನನ್ನಲ್ಲಿ ಶುದ್ಧಹೃದಯವನ್ನು ನಿರ್ಮಿಸು; ನನಗೆ ಸ್ಥಿರಚಿತ್ತವನ್ನು ಅನುಗ್ರಹಿಸಿ ನನ್ನನ್ನು ನೂತನಪಡಿಸು.


ನಿಮಗೂ, ನಿಮ್ಮ ಮಧ್ಯದಲ್ಲಿ ಪ್ರವಾಸ ಮಾಡುತ್ತಾ, ಮಕ್ಕಳನ್ನು ಪಡೆದಿರುವ ವಿದೇಶಿಗಳಿಗೂ ದೇಶವನ್ನು ಬಾಧ್ಯವಾಗಿ ಹಂಚಬೇಕು. ಅವರು ಇಸ್ರಾಯೇಲರ ಮಧ್ಯದಲ್ಲಿ ನಿಮಗೆ ಸ್ವದೇಶಿಗಳಂತೆಯೇ ಇರಬೇಕು. ಇಸ್ರಾಯೇಲಿನ ಕುಲಗಳೊಳಗೆ ನಿಮ್ಮೊಂದಿಗೆ ಅವರಿಗೆ ಸ್ವಾಸ್ತ್ಯವಾಗಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು