Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 16:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವಳ ಯಜಮಾನರು ತಮ್ಮ ಆದಾಯದ ನಿರೀಕ್ಷೆ ತಪ್ಪಿತಲ್ಲಾ ಎಂದು ತಿಳಿದು ಪೌಲನನ್ನೂ ಮತ್ತು ಸೀಲನನ್ನೂ ಹಿಡಿದು ಮಾರುಕಟ್ಟೆಯ ಸ್ಥಳಕ್ಕೆ ಅಧಿಕಾರಿಗಳ ಬಳಿಗೆ ಎಳೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಹಣ ಗಳಿಸುತ್ತಿದ್ದ ಅವಳ ಯಜಮಾನನಿಗೆ ನಿರಾಶೆಯಾಯಿತು. ಅವರು ಪೌಲ ಮತ್ತು ಸೀಲರನ್ನು ಬಂಧಿಸಿ ಸಾರ್ವಜನಿಕ ನ್ಯಾಯಸ್ಥಾನದಲ್ಲಿದ್ದ ಅಧಿಕಾರಿಗಳ ಬಳಿಗೆ ಎಳೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವಳ ಯಜಮಾನರು ತಮ್ಮ ಆದಾಯದ ನಿರೀಕ್ಷೆ ತಪ್ಪಿತಲ್ಲಾ ಎಂದು ತಿಳಿದು ಪೌಲನನ್ನೂ ಸೀಲನನ್ನೂ ಹಿಡಿದು ಚಾವಡಿಗೆ ಅಧಿಕಾರಿಗಳ ಬಳಿಗೆ ಎಳಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಇದನ್ನು ಕಂಡ ಅವಳ ಯಜಮಾನರು ಈಗ ಆಕೆಯಿಂದ ಹಣಗಳಿಸಲು ಸಾಧ್ಯವಿಲ್ಲವೆಂದು ಅರಿತುಕೊಂಡರು. ಆದ್ದರಿಂದ ಅವರು ಪೌಲ ಸೀಲರನ್ನು ಹಿಡಿದು ಪಟ್ಟಣದ ನ್ಯಾಯಸ್ಥಾನಕ್ಕೆ ಎಳೆದುಕೊಂಡು ಹೋದರು. ನಗರಾಧಿಕಾರಿಗಳು ಅಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅವಳ ಯಜಮಾನರು ತಾವು ಹಣ ಸಂಪಾದಿಸುವ ನಿರೀಕ್ಷೆಯೇ ಹೋಯಿತೆಂದು ತಿಳಿದು, ಪೌಲ ಸೀಲರನ್ನು ಹಿಡಿದು ಸಂತೆಸ್ಥಳದಲ್ಲಿದ್ದ ಅಧಿಕಾರಿಗಳ ಮುಂದೆ ವಿಚಾರಣೆಗಾಗಿ ಎಳೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಹೆ ಬಗಟಲ್ಲ್ಯಾ ತಿಜಾ ಯಜಮಾನಾಕ್ ಅತ್ತಾ ತಿಜ್ಯಾಕ್ನಾ ಪೈಸೆ ಖಮ್ವುಕ್ ಹೊಯ್ನಾ ಮನ್ತಲೆ ಕಳುನ್ ಯೆಲೆ, ತಸೆ ಹೊವ್ನ್ ತೆನಿ ಪಾವ್ಲುಕ್ ಅನಿ ಸಿಲಾಸಾಕ್ ಧರುನ್ ಶಾರಾತ್ಲ್ಯಾ ಝಡ್ತಿ ಕರ್‍ತಲ್ಯಾ ಜಾಗ್ಯಾಕ್ ಗಾಂವ್ಚೆ ಅಧಿಕಾರಿ ಹೊತ್ತ್ಯಾಕ್ಡೆ ವಡುನ್ ನ್ಹೆಲ್ಯಾನಿ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 16:19
24 ತಿಳಿವುಗಳ ಹೋಲಿಕೆ  

ಆಗ ಪಟ್ಟಣದಲ್ಲೆಲ್ಲಾ ಕೋಲಾಹಲವೆದ್ದಿತು, ಜನರು ಎಲ್ಲಾ ಕಡೆಯಿಂದಲೂ ಓಡಿಬಂದು ಸೇರಿಕೊಂಡರು. ಪೌಲನನ್ನು ಹಿಡಿದು, ದೇವಾಲಯದ ಹೊರಗಡೆಗೆ ಎಳೆದುಕೊಂಡು ಬಂದ ಕೂಡಲೇ ಬಾಗಿಲುಗಳನ್ನು ಮುಚ್ಚಿದರು.


ಅವರು ಸಿಕ್ಕದೆ ಹೋದದ್ದರಿಂದ ಆ ಜನರು ಯಾಸೋನನನ್ನೂ ಮತ್ತು ಕೆಲವು ಮಂದಿ ಸಹೋದರರನ್ನೂ ಊರಿನ ಅಧಿಕಾರಿಗಳ ಬಳಿಗೆ ಎಳೆದುಕೊಂಡು ಹೋಗಿ; “ಲೋಕವನ್ನು ಅಲ್ಲಕಲ್ಲೋಲ ಮಾಡಿದ ಆ ಮನುಷ್ಯರು ಇಲ್ಲಿಗೂ ಬಂದಿದ್ದಾರೆ.


ದೊಂಬಿ, ಕಲಹ, ಸೆರೆಮನೆ, ಶಿಕ್ಷೆ ಇವುಗಳನ್ನು ಅನುಭವಿಸಿದ್ದೇವೆ. ಮೈಮುರಿದು ಕೆಲಸ ಮಾಡಿದ್ದೇವೆ. ನಿದ್ದೆಗೆಟ್ಟು ಬಳಲಿದ್ದೇವೆ; ಹಸಿವಿನಲ್ಲಿ ಸೊರಗಿದ್ದೇವೆ; ಈ ಎಲ್ಲಾ ವಿಷಯಗಳಲ್ಲಿ ಬಹು ಸಮಾಧಾನವನ್ನು ತೋರಿಸಿದ್ದೇವೆ.


ಬಳಿಕ ಪ್ರಾರ್ಥನೆ ನಡೆಯುವ ಆ ಸ್ಥಳಕ್ಕೆ ನಾವು ಹೋಗುತ್ತಿರುವಾಗ ಗಾರುಡಗಾತಿಯಾದ ಒಬ್ಬ ದಾಸಿಯು ನಮ್ಮೆದುರಿಗೆ ಬಂದಳು. ಅವಳು ಕಣಿ ಹೇಳುವುದರಿಂದ ಅವಳ ಯಜಮಾನರಿಗೆ ಬಹು ಆದಾಯವಾಗುತ್ತಿತ್ತು.


ಆದರೆ ಸೌಲನು ಮನೆಮನೆಗಳಿಗೆ ನುಗ್ಗಿ ಗಂಡಸರನ್ನೂ ಹೆಂಗಸರನ್ನೂ ಎಳೆದುಕೊಂಡು ಬಂದು ಸೆರೆಮನೆಗೆ ಹಾಕಿಸಿ ಸಭೆಯನ್ನು ನಾಶಮಾಡುತ್ತಿದ್ದನು.


ನಮ್ಮ ಪ್ರಿಯ ಬಾರ್ನಬ ಪೌಲರ ಜೊತೆಯಲ್ಲಿ ನಿಮ್ಮ ಬಳಿಗೆ ಕಳುಹಿಸಿ ಕೊಡುವುದು ಯುಕ್ತವೆಂದು ನಾವೆಲ್ಲರೂ ಒಮ್ಮನಸ್ಸಿನಿಂದ ತೀರ್ಮಾನಿಸಿದೆವು.


ತರುವಾಯ ಅಂತಿಯೋಕ್ಯದಿಂದಲೂ, ಇಕೋನ್ಯದಿಂದಲೂ ಯೆಹೂದ್ಯರು ಬಂದು, ಜನರನ್ನು ಪ್ರೇರೇಪಿಸಿ ಪೌಲನನ್ನು ಕೊಲ್ಲುವುದಕ್ಕೆ ಕಲ್ಲೆಸೆದರು, ಅವನು ಸತ್ತನೆಂದು ಭಾವಿಸಿ ಊರಹೊರಕ್ಕೆ ಅವನನ್ನು ಎಳೆದುಹಾಕಿದರು.


ಅನ್ಯಜನರೂ, ಯೆಹೂದ್ಯರೂ ಕೂಡಿ ತಮ್ಮ ಅಧಿಪತಿಗಳ ಸಮ್ಮತಿಯಿಂದ ಅಪೊಸ್ತಲರನ್ನು ಪೀಡಿಸುವುದಕ್ಕೂ, ಕಲ್ಲೆಸೆದು ಕೊಲ್ಲುವುದಕ್ಕೂ ಪ್ರಯತ್ನಿಸಿದಾಗ,


ಅವನು ನನ್ನ ಹೆಸರಿನ ನಿಮಿತ್ತ ಎಷ್ಟು ಹಿಂಸೆ ಅನುಭವಿಸಬೇಕೆಂಬುದನ್ನು ನಾನೇ ಅವನಿಗೆ ತೋರಿಸುವೆನು” ಎಂದು ಹೇಳಿದನು.


“ಆದರೆ ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಜನರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳೆದುಕೊಂಡು ಹೋಗುವರು. ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು, ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸುಗಳ ಮುಂದೆ ಅವರಿಗೆ ಸಾಕ್ಷಿಗಳಾಗಿ ನಿಲ್ಲಿಸುವರು,


“ಆಗ ನಿಮ್ಮನ್ನು ಕಷ್ಟಸಂಕಟಗಳಿಗೆ ಗುರಿಮಾಡಿ ಕೊಲ್ಲುವರು; ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲಾ ಜನಾಂಗಗಳವರು ದ್ವೇಷಿಸುವರು.


ನೀವಾದರೋ ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನದ ಮುಂದೆ ಎಳೆದುಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ?


ಆಗ ಅಪೊಸ್ತಲರೂ, ಸಭೆಯ ಹಿರಿಯರೂ ಸರ್ವಸಭೆಯ ಅನುಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಮತ್ತು ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವುದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯರಾಗಿದ್ದ ಬಾರ್ಸಬ್ಬನೆನಿಸಿಕೊಳ್ಳುವ ಯೂದನನ್ನೂ, ಸೀಲನನ್ನೂ ಆರಿಸಿಕೊಂಡು,


ಹಣದಾಸೆಯು ಸಕಲವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು, ಅದರಿಂದ ಕ್ರಿಸ್ತ ನಂಬಿಕೆಯನ್ನು ಬಿಟ್ಟು, ಅಲೆದಾಡಿ ಅನೇಕ ವೇದನೆಗಳಿಂದ ತಮ್ಮನ್ನು ತಿವಿಸಿಕೊಳ್ಳುತ್ತಾರೆ.


ಅವರು ರಾಜನ ಬಳಿಗೆ ಬಂದು ರಾಜಾಜ್ಞೆಯ ಪ್ರಸ್ತಾಪವನ್ನೆತ್ತಿ, “ರಾಜನೇ, ಯಾರಾದರೂ ಮೂವತ್ತು ದಿನಗಳ ತನಕ ನಿನ್ನ ಹೊರತು ಬೇರೆ ಯಾವ ದೇವರಿಗಾಗಲಿ, ಮನುಷ್ಯನಿಗಾಗಲಿ ಪ್ರಾರ್ಥನೆವಿಜ್ಞಾಪನೆ ಮಾಡಿದರೆ ಅವನು ಸಿಂಹಗಳ ಗವಿಯಲ್ಲಿ ಹಾಕಲ್ಪಡಬೇಕು ಎಂಬ ನಿಬಂಧನೆಗೆ ರುಜು ಹಾಕಿದ್ದೀಯಲ್ಲಾ” ಎಂದು ಕೇಳಲು, ರಾಜನು, “ಹೌದು, ಮೇದ್ಯರ ಮತ್ತು ಪಾರಸಿಯರ ರದ್ದಾಗದ ಧರ್ಮವಿಧಿಗಳಂತೆ ಇದು ಸ್ಥಿರವಾದ ನಿಬಂಧನೆ” ಎಂದು ಉತ್ತರಕೊಟ್ಟನು.


ಪೌಲನು ಸೀಲನನ್ನು ಆರಿಸಿಕೊಂಡು ಸಹೋದರರಿಂದ ಕರ್ತನ ಕೃಪಾಶ್ರಯಕ್ಕೆ ಒಪ್ಪಿಸಲ್ಪಟ್ಟವನಾಗಿ ಅಲ್ಲಿಂದ


ಅವರನ್ನು ಅಧಿಕಾರಿಗಳ ಮುಂದೆ ತಂದು; “ಈ ಮನುಷ್ಯರು ನಮ್ಮ ಪಟ್ಟಣವನ್ನು ಬಹಳವಾಗಿ ಕದಡುತ್ತಿದ್ದಾರೆ;


ಮಧ್ಯರಾತ್ರಿಯಲ್ಲಿ ಪೌಲನೂ ಮತ್ತು ಸೀಲನೂ ಪ್ರಾರ್ಥನೆಮಾಡುತ್ತಾ ದೇವರಿಗೆ ಸ್ತುತಿಗೀತೆಗಳನ್ನು ಹಾಡುತ್ತಿದ್ದರು; ಸೆರೆಯಲ್ಲಿದ್ದವರು ಲಕ್ಷ್ಯವಿಟ್ಟು ಕೇಳುತ್ತಿದ್ದರು.


ಆಗ ಅವನು; ದೀಪ ತರಬೇಕೆಂದು ಕೂಗಿ ಒಳಕ್ಕೆ ಹಾರಿ ಭಯದಿಂದ ನಡುಗುತ್ತಾ ಪೌಲ ಮತ್ತು ಸೀಲರ ಮುಂದೆ ಆಡ್ಡಬಿದ್ದನು.


ಹೀಗೆ ನೀವು ನನ್ನಲ್ಲಿ ಕಂಡಂಥ ಮತ್ತು ಈಗ ನನ್ನ ಕುರಿತಾಗಿ ಕೇಳುವಂಥ ಅದೇ ಹೋರಾಟವು ನಿಮಗೂ ಉಂಟು.


ನಮಗೆ ಫಿಲಿಪ್ಪಿ ಪಟ್ಟಣದಲ್ಲಿ ಹಿಂಸೆಯೂ ಅವಮಾನವೂ ಮೊದಲು ಸಂಭವಿಸಿತ್ತಾದರೂ, ನಾವು ನಮ್ಮ ದೇವರ ಮೂಲಕ ಧೈರ್ಯಗೊಂಡು ಬಹು ವಿರೋಧವನ್ನು ಎದುರಿಸುವವರಾಗಿ ನಿಮಗೆ ದೇವರ ಸುವಾರ್ತೆಯನ್ನು ತಿಳಿಸಿದ್ದೇವೆಂಬುದನ್ನು ನೀವೇ ಬಲ್ಲಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು