Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 16:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆಕಸ್ಮಾತ್ತಾಗಿ ಮಹಾಭೂಕಂಪವುಂಟಾಯಿತು; ಸೆರೆಮನೆಯ ಅಸ್ತಿವಾರಗಳು ಕದಲಿದವು. ಅದೇ ಕ್ಷಣದಲ್ಲಿ ಕದಗಳೆಲ್ಲಾ ತೆರೆದವು, ಎಲ್ಲರ ಬೇಡಿಗಳು ಕಳಚಿಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಇದ್ದಕ್ಕಿದ್ದಂತೆ ಭೀಕರ ಭೂಕಂಪ ಉಂಟಾಯಿತು. ಸೆರೆಮನೆಯ ಅಸ್ತಿವಾರವೇ ಕದಲಿತು. ಆ ಕ್ಷಣವೇ ಕದಗಳೆಲ್ಲಾ ತೆರೆದುವು. ಕೈದಿಗಳೆಲ್ಲರ ಬಂಧನಗಳು ಕಳಚಿಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅಕಸ್ಮಾತ್ತಾಗಿ ಮಹಾಭೂಕಂಪವುಂಟಾಯಿತು; ಸೆರೆಮನೆಯ ಅಸ್ತಿವಾರಗಳು ಕದಲಿದವು. ಅದೇ ಕ್ಷಣದಲ್ಲಿ ಕದಗಳೆಲ್ಲಾ ತೆರೆದವು, ಎಲ್ಲರ ಬೇಡಿಗಳು ಕಳಚಿಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಇದ್ದಕ್ಕಿದ್ದಂತೆ ದೊಡ್ಡ ಭೂಕಂಪವಾಯಿತು. ಭೀಕರವಾಗಿದ್ದ ಅದು ಸೆರೆಮನೆಯ ಅಡಿಪಾಯವನ್ನೇ ನಡುಗಿಸಿತು. ಆಗ ಸೆರೆಮನೆಯ ಬಾಗಿಲುಗಳೆಲ್ಲಾ ತೆರೆದುಕೊಂಡವು. ಎಲ್ಲಾ ಕೈದಿಗಳ ಸರಪಣಿಗಳು ಕಳಚಿಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆಗ ತಕ್ಷಣವೇ ಭೀಕರವಾದ ಭೂಕಂಪವಾಗಿ ಸೆರೆಮನೆಯ ಅಸ್ತಿವಾರವು ಕದಲಿತು. ಕೂಡಲೇ ಸೆರೆಮನೆಯ ಎಲ್ಲಾ ಬಾಗಿಲುಗಳು ತೆರೆದವು. ಎಲ್ಲರನ್ನು ಬಂಧಿಸಿದ್ದ ಸರಪಣಿಗಳು ಸಡಿಲಗೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಬಗುನ್ಗೆತ್ ರ್‍ಹಾತಾನಾಚ್ ಮೊಟೊ ಭುಕಂಪ್ ಹೊಲೊ, ತೊ ಭುಕಂಪ್ ಲೈ ಮೊಟೊ ಹೊಲ್ಲ್ಯಾ ಸಾಟ್ನಿ ಬಂಧಿಖಾನ್ಯಾಚಿ ಪಾಯಾ ಸಗ್ಳಿ ಹಾಲ್ಲಿ, ಅನಿ ದಾರಾ ಸಗ್ಳಿ ಉಗ್ಡುನ್ ಸಗ್ಳಿ ಚೊರಾಂಚಿ ಬಾಂಧಲಿ ಸರ್ಪಳಿಯಾ ಸುಟುನ್ ಪಡ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 16:26
15 ತಿಳಿವುಗಳ ಹೋಲಿಕೆ  

ಹೀಗೆ ಪ್ರಾರ್ಥನೆ ಮಾಡಿದ ಕೂಡಲೇ ಅವರು ನೆರೆದಿದ್ದ ಸ್ಥಳವು ನಡುಗಿತು. ಅವರೆಲ್ಲರು ಪವಿತ್ರಾತ್ಮ ಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಹೇಳತೊಡಗಿದರು.


ಆದರೆ ಕರ್ತನ ದೂತನು ರಾತ್ರಿಯಲ್ಲಿ ಸೆರೆಮನೆಯ ದ್ವಾರಗಳನ್ನು ತೆರೆದು ಅವರನ್ನು ಹೊರಕ್ಕೆ ಕರೆದುಕೊಂಡು ಬಂದು,


ಅವರು ಮೊದಲನೆಯ ಮತ್ತು ಎರಡನೆಯ ಕಾವಲುಗಳನ್ನು ದಾಟಿ, ಪಟ್ಟಣಕ್ಕೆ ಹೋಗುವ ಕಬ್ಬಿಣದ ಬಾಗಿಲಿಗೆ ಬಂದಾಗ ಅದು ತನ್ನಷ್ಟಕ್ಕೆ ತಾನೇ ಅವರಿಗೆ ತೆರೆಯಿತು; ಅವರು ಹೊರಗೆ ಬಂದು ಒಂದು ಬೀದಿಯನ್ನು ದಾಟಿದರು; ಕೂಡಲೇ ಆ ದೂತನು ಅವನನ್ನು ಬಿಟ್ಟು ಹೋದನು.


ಫಕ್ಕನೆ ಕರ್ತನ ದೂತನು ಪೇತ್ರನೆದುರಿಗೆ ನಿಂತನು; ಅವನಿದ್ದ ಕೋಣೆಯಲ್ಲಿ ಬೆಳಕು ಹೊಳೆಯಿತು. ಅವನು ಪೇತ್ರನ ಪಕ್ಕೆಯನ್ನು ತಟ್ಟಿ ಎಬ್ಬಿಸಿ; “ತಟ್ಟನೆ ಏಳು” ಅಂದನು. ಆಗಲೇ ಅವನ ಕೈಗಳಿಗೆ ಹಾಕಿದ್ದ ಸರಪಣಿಗಳು ಕಳಚಿಬಿದ್ದವು.


ಹಿಂಸೆಗೆ ಗುರಿಯಾದವರ ನ್ಯಾಯವನ್ನು ಸ್ಥಾಪಿಸುವವನೂ, ಹಸಿದವರಿಗೆ ಆಹಾರ ಕೊಡುವವನೂ ಆತನೇ. ಯೆಹೋವನು ಸೆರೆಯಲ್ಲಿರುವವರನ್ನು ಬಿಡಿಸುತ್ತಾನೆ.


ಇಗೋ, ಮಹಾ ಭೂಕಂಪವುಂಟಾಯಿತು, ಕರ್ತನ ದೂತನು ಆಕಾಶದಿಂದ ಇಳಿದು ಬಂದು ಆ ಕಲ್ಲನ್ನು ಬಾಗಿಲಿನಿಂದ ಉರುಳಿಸಿ ಅದರ ಮೇಲೆ ಕುಳಿತುಕೊಂಡಿದ್ದನು.


ನೀನು ಕುರುಡರಿಗೆ ಕಣ್ಣುಕೊಟ್ಟು, ಬಂದಿಗಳನ್ನು ಸೆರೆಯಿಂದಲೂ, ಕತ್ತಲಲ್ಲಿ ಬಿದ್ದವರನ್ನು ಕಾರಾಗೃಹದಿಂದಲೂ ಹೊರಗೆ ತರುವಿ.


ಸೆರೆಯವರ ಗೋಳಾಟವನ್ನು ಪರಿಗಣಿಸಿ, ಮರಣಪಾತ್ರರನ್ನು ಬಿಡಿಸಿ,


ಅದೇ ಗಳಿಗೆಯಲ್ಲಿ ಮಹಾ ಭೂಕಂಪವುಂಟಾಗಿ ಆ ಪಟ್ಟಣದ ಹತ್ತರಲ್ಲೊಂದಂಶವು ಬಿದ್ದುಹೋಯಿತು. ಆ ಭೂಕಂಪದಿಂದ ಏಳು ಸಾವಿರ ಮಂದಿ ಸತ್ತು ಹೋದರು. ಉಳಿದವರು ಭಯಗ್ರಸ್ತರಾಗಿ ಪರಲೋಕದ ದೇವರನ್ನು ಘನಪಡಿಸಿದರು.


ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವುದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವುದಕ್ಕೂ, ಸೆರೆಯವರಿಗೆ ಬಿಡುಗಡೆಯಾಗುವುದನ್ನು, ಬಂದಿಗಳಿಗೆ ಕದ ತೆರೆಯುವುದನ್ನು ಪ್ರಸಿದ್ಧಿಪಡಿಸುವುದಕ್ಕೂ,


ಸೆರೆಹೋದವರ ನರಳುವಿಕೆಯು ನಿನ್ನ ಲಕ್ಷ್ಯಕ್ಕೆ ಬರಲಿ; ಸಾಯಲಿರುವವರನ್ನು ನಿನ್ನ ಭುಜಮಹತ್ತಿನಿಂದ ಉಳಿಸು.


ಆತನು ಆರನೆಯ ಮುದ್ರೆಯನ್ನು ಒಡೆಯುವುದನ್ನು ಕಂಡೆನು. ಆಗ ಮಹಾಭೂಕಂಪ ಉಂಟಾಯಿತು. ಸೂರ್ಯನು ಕರೀಕಂಬಳಿಯಂತೆ ಕಪ್ಪಾದನು ಮತ್ತು ಪೂರ್ಣಚಂದ್ರನು ರಕ್ತದಂತಾದನು.


ಒಬ್ಬೊಂಟಿಗರನ್ನು ಸಂಸಾರಿಕರಾಗುವಂತೆ ಮಾಡುತ್ತಾನೆ; ಸೆರೆಯಲ್ಲಿರುವವರನ್ನು ಬಿಡಿಸಿ ಸುಖಾವಸ್ಥೆಗೆ ತರುತ್ತಾನೆ. ದ್ರೋಹಿಗಳಾದರೋ ಮರುಭೂಮಿಯಲ್ಲಿ ಉಳಿಯಬೇಕಾಗುವುದು.


ಅವನು ಹೋಗಿ ಶವವು ದಾರಿಯಲ್ಲಿ ಬಿದ್ದಿರುವುದನ್ನೂ ಕತ್ತೆಯೂ ಸಿಂಹವೂ ಅದರ ಬಳಿಯಲ್ಲಿ ನಿಂತಿರುವುದನ್ನು ಕಂಡನು. ಸಿಂಹವು ಶವವನ್ನು ತಿನ್ನಲಿಲ್ಲ, ಕತ್ತೆಯನ್ನು ಕೊಲ್ಲಲೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು