Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 16:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಮತ್ತು ಅವರನ್ನು ಹೊರಗೆ ಕರೆದುಕೊಂಡು ಬಂದು; “ಸ್ವಾಮಿಗಳೇ, ನಾನು ರಕ್ಷಣೆಹೊಂದುವುದಕ್ಕೆ ಏನು ಮಾಡಬೇಕೆಂದು?” ಕೇಳಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಅನಂತರ ಅವರನ್ನು ಹೊರಗೆ ಕರೆತಂದು, “ಸ್ವಾಮಿಗಳೇ, ಜೀವೋದ್ಧಾರ ಪಡೆಯಲು ನಾನು ಮಾಡಬೇಕಾದುದು ಏನು?” ಎಂದು ವಿಚಾರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಮತ್ತು ಅವರನ್ನು ಹೊರಗೆ ಕರಕೊಂಡು ಬಂದು - ಸ್ವಾವಿುಗಳೇ, ನಾನು ರಕ್ಷಣೆಹೊಂದುವದಕ್ಕೆ ಏನು ಮಾಡಬೇಕೆಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಬಳಿಕ ಅವನು ಅವರನ್ನು ಹೊರಗೆ ಕರೆದುಕೊಂಡು ಬಂದು, “ಸ್ವಾಮಿಗಳೇ, ನಾನು ರಕ್ಷಣೆ ಹೊಂದಬೇಕಾದರೆ ಏನು ಮಾಡಬೇಕು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆಮೇಲೆ ಅವರನ್ನು ಹೊರಗೆ ಕರೆದುಕೊಂಡು ಬಂದು, “ಮಹನೀಯರೇ, ನಾನು ರಕ್ಷಣೆ ಹೊಂದಲು ಏನು ಮಾಡಬೇಕು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಮಾನಾ ತೆಂಕಾ ದೊಗ್ಯಾಕ್ನಿ ಭಾಯ್ರ್ ಬಲ್ವುನ್ ಘೆವ್ನ್ ತೆನಿ, “ಸಾಯ್ಬಾನು, ಮಿಯಾ ದೆವಾಚಿ ರಾಕ್ವನ್ ಘೆವ್ಚೆ ಹೊಲ್ಯಾರ್ ಕಾಯ್ ಕರುಚೆ?” ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 16:30
16 ತಿಳಿವುಗಳ ಹೋಲಿಕೆ  

ಅವರು ಇದನ್ನು ಕೇಳಿದಾಗ ಅವರ ಹೃದಯಗಳಲ್ಲಿ ಅಲಗು ನೆಟ್ಟಂತಾಯಿತು. ಅಲ್ಲದೆ ಅವರು ಪೇತ್ರನನ್ನೂ ಉಳಿದ ಅಪೊಸ್ತಲರನ್ನೂ, “ಸಹೋದರರೇ, ನಾವೇನು ಮಾಡಬೇಕು” ಎಂದು ಕೇಳಲು;


“ಆಗ ನಾನು; ‘ಕರ್ತನೇ, ನಾನೇನು ಮಾಡಬೇಕು’? ಎಂದು ಕೇಳಲು ಕರ್ತನು ನನಗೆ; ‘ನೀನೆದ್ದು ದಮಸ್ಕದೊಳಕ್ಕೆ ಹೋಗು, ಮಾಡುವುದಕ್ಕೆ ನಿನಗೆ ನೇಮಿಸಿರುವುದನ್ನೆಲ್ಲಾ ಅಲ್ಲಿ ತಿಳಿಸಲ್ಪಡುವುದು’ ಎಂದು ಹೇಳಿದನು.


“ಜನರೇ, ನೀವು ಹೀಗೇಕೆ ಮಾಡುತ್ತೀರೀ? ನಾವೂ ಮನುಷ್ಯರೇ, ನಿಮ್ಮಂಥ ಸ್ವಭಾವವುಳ್ಳವರು. ನೀವು ಈ ವ್ಯರ್ಥವಾದ ಕೆಲಸಗಳನ್ನು ಬಿಟ್ಟುಬಿಟ್ಟು ಭೂಮ್ಯಾಕಾಶಗಳನ್ನೂ, ಸಮುದ್ರವನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಮಾಡಿದ ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಸುವಾರ್ತೆಯನ್ನು ನಿಮಗೆ ಸಾರಿಹೇಳುವವರಾಗಿದ್ದೇವೆ.


ಆಗ ಆ ಗುಂಪಿನವರು, “ಹಾಗಾದರೆ ನಾವೇನು ಮಾಡಬೇಕು?” ಎಂದು ಆತನನ್ನು ಕೇಳಿದ್ದಕ್ಕೆ,


ನೀವು ಮಾನಸಾಂತರ ಹೊಂದಿರುವಿರಿ ಎಂಬುದಕ್ಕೆ ಯೋಗ್ಯವಾದ ಫಲವನ್ನು ತೋರಿಸಿರಿ.


ಆಗ ನೀವು ಕೂಗಿದರೆ ಯೆಹೋವನು ಉತ್ತರಕೊಡುವನು, ಮೊರೆಯಿಟ್ಟು ಕರೆದರೆ, “ಇಗೋ, ಇದ್ದೇನೆ” ಅನ್ನುವನು. ನೀವು ನಿಮ್ಮ ಮಧ್ಯದೊಳಗಿಂದ ನೊಗವನ್ನು, ಇನ್ನೊಬ್ಬರನ್ನು ದೂಷಣೆಗೆ ಗುರಿಮಾಡಿ ತೋರುವ ಬೆರಳನ್ನು, ಕೆಡುಕಿನ ನುಡಿಯನ್ನು ಬಿಟ್ಟು,


ಏಕೆಂದರೆ ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವುದಿಲ್ಲ. ಕರುಣೆಯು ನ್ಯಾಯತೀರ್ಪಿನ ಮೇಲೆ ಜಯ ಹೊಂದುತ್ತದೆ.


ಅವನು ಇಂಥಾ ಅಪ್ಪಣೆಯನ್ನು ಹೊಂದಿ ಅವರನ್ನು ಸೆರೆಮನೆಯ ಒಳಕೋಣೆಯಲ್ಲಿ ಹಾಕಿ ಅವರ ಕಾಲುಗಳಿಗೆ ಕೋಳವನ್ನು ಹಾಕಿ ಬಿಗಿಸಿದನು.


ಪೌಲನೂ, ನಾವೂ ಹೋಗುತ್ತಿರುವಾಗ ಅವಳು ನಮ್ಮ ಹಿಂದೆ ಬಂದು; “ಈ ಮನುಷ್ಯರು ಪರಾತ್ಪರನಾದ ದೇವರ ಸೇವಕರು; ನಿಮಗೆ ರಕ್ಷಣೆಯ ಮಾರ್ಗವನ್ನು ಸಾರುತ್ತಾರೆ” ಎಂದು ಕೂಗಿ ಹೇಳುತ್ತಿದ್ದಳು.


ನೀನೆದ್ದು ಊರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ಅಲ್ಲಿ ನಿನಗೆ ತಿಳಿಸಲ್ಪಡುವುದು” ಎಂದು ಹೇಳಿದನು.


ಮನುಷ್ಯನು ದೇವರ ಎಣಿಕೆಯಲ್ಲಿ ನೀತಿವಂತನಾಗಿರುವುದು ಹೇಗೆ? ಮಾನವನಾಗಿ ಹುಟ್ಟಿದವನು ಪರಿಶುದ್ಧನಾಗಿರುವುದು ಸಾಧ್ಯವೋ?


ಕರುಣೆಯುಳ್ಳವರು ಧನ್ಯರು; ಅವರು ಕರುಣೆ ಹೊಂದುವರು.


ನೋಡಿರಿ, ಕೇಡಿನ ಬಂಧನಗಳನ್ನು ಬಿಚ್ಚುವುದು, ನೊಗಹೊರಿಸುವ ಹುರಿಯನ್ನು ಕಳಚುವುದು, ಜಜ್ಜಿ ಹೋದವರನ್ನು ಬಿಡುಗಡೆ ಮಾಡುವುದು, ನೊಗಗಳನ್ನೆಲ್ಲಾ ಮುರಿಯುವುದು,


ನಾನು ಕಾಣದಿರುವುದನ್ನು ನೀನೇ ಸೂಚಿಸು; ನಾನು ಒಂದು ವೇಳೆ ಅನ್ಯಾಯವನ್ನು ಮಾಡಿದ್ದರೂ ಇನ್ನು ಮೇಲೆ ಮಾಡುವುದಿಲ್ಲ’ ಎಂದು ಹೇಳುವುದಕ್ಕಾದೀತೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು