Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 16:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಸ್ಯಸೀಮೆಯಲ್ಲಿ ವಾಕ್ಯವನ್ನು ಹೇಳಬಾರದೆಂದು ಪವಿತ್ರಾತ್ಮನು ತಡೆದ್ದುದರಿಂದ ಅವರು ಫ್ರುಗ್ಯ, ಗಲಾತ್ಯ ಸೀಮೆಯನ್ನು ಹಾದುಹೋಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಏಷ್ಯದಲ್ಲಿ ಅವರು ಶುಭಸಂದೇಶವನ್ನು ಸಾರಕೂಡದೆಂದು ಪವಿತ್ರಾತ್ಮ ನಿಷೇಧಿಸಿದ್ದರಿಂದ ಅವರು ಫ್ರಿಜಿಯ ಮತ್ತು ಗಲಾತ್ಯಪ್ರದೇಶಗಳ ಮಾರ್ಗವಾಗಿ ಪ್ರಯಾಣಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಸ್ಯಸೀಮೆಯಲ್ಲಿ ವಾಕ್ಯವನ್ನು ಹೇಳಬಾರದೆಂದು ಪವಿತ್ರಾತ್ಮನು ತಡೆದದ್ದರಿಂದ ಅವರು ಫ್ರುಗ್ಯ ಗಲಾತ್ಯ ಸೀಮೆಯನ್ನು ಹಾದುಹೋಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಪೌಲನು ಮತ್ತು ಅವನ ಸಂಗಡಿಗರು ಫ್ರಿಜಿಯ ಮತ್ತು ಗಲಾತ್ಯ ಪ್ರಾಂತ್ಯಗಳ ಮೂಲಕ ಹಾದುಹೋದರು. ಏಷ್ಯಾ ಸೀಮೆಯಲ್ಲಿ ಸುವಾರ್ತೆಯನ್ನು ತಿಳಿಸದಂತೆ ಪವಿತ್ರಾತ್ಮನು ಅವರನ್ನು ತಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಏಷ್ಯಾ ಪ್ರಾಂತದಲ್ಲಿ ಸುವಾರ್ತೆ ಸಾರಬಾರದೆಂದು ಪವಿತ್ರಾತ್ಮ ತಡೆದದ್ದರಿಂದ ಪೌಲ ಮತ್ತು ಅವನ ಜೊತೆಯವರು ಫ್ರುಗ್ಯ ಹಾಗೂ ಗಲಾತ್ಯ ಪ್ರದೇಶಗಳ ಮಾರ್ಗವಾಗಿ ಪ್ರಯಾಣಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಪಾವ್ಲು ಅನಿ ತೆಚೆ ವಾಂಗ್ಡಿ ಪ್ರೆಮಾನಿ ಹೊತ್ತೆ,, ಪಿರ್ಗಿಯಾ ಅನಿ ಗಲ್ಯಾತ್ ಮನ್ತಲ್ಯಾ ಪ್ರಾಂತ್ಯಾತ್ನಾ ಗೆಲೆ, ಅಸಿಯಾ ಸಿಮೆತ್ ದೆವಾಚಿ ಬರಿ ಖಬರ್ ಕಳ್ವುಚೆ ಮನುನ್ ಪವಿತ್ರ್ ಆತ್ಮ್ಯಾನ್‍ ತೆಂಕಾ ಅಡ್ವುಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 16:6
31 ತಿಳಿವುಗಳ ಹೋಲಿಕೆ  

ಪೌಲನು ಅಂತಿಯೋಕ್ಯದಲ್ಲಿ ಕೆಲವು ಕಾಲ ಇದ್ದು ಪುನಃ ಅಲ್ಲಿಂದ ಹೊರಟು ಕ್ರಮವಾಗಿ ಗಲಾತ್ಯ ಸೀಮೆಯಲ್ಲಿಯೂ, ಫ್ರುಗ್ಯದಲ್ಲಿಯೂ ಸಂಚಾರಮಾಡುತ್ತಾ ಶಿಷ್ಯರೆಲ್ಲರನ್ನು ದೃಢಪಡಿಸಿದನು.


ನನ್ನ ಜೊತೆಯಲ್ಲಿರುವ ಎಲ್ಲಾ ಸಹೋದರರೂ ಗಲಾತ್ಯದಲ್ಲಿರುವ ಸಭೆಗಳಿಗೆ ಬರೆಯುವುದೇನೆಂದರೆ,


ಮೂಸ್ಯಕ್ಕೆ ಹತ್ತಿರವಾಗಿ ಬಂದಾಗ, ಬಿಥೂನ್ಯಕ್ಕೆ ಹೋಗುವ ಪ್ರಯತ್ನಮಾಡಿದರು. ಅಲ್ಲಿಯೂ ಯೇಸುವಿನ ಆತ್ಮನು ಅವರನ್ನು ಹೋಗಗೊಡಿಸಲಿಲ್ಲ.


ದೇವರಾತ್ಮನು, ನನಗೆ ನೀನು ಏನೂ ಭೇದಮಾಡದೆ ಅವರ ಜೊತೆಯಲ್ಲಿ ಹೋಗು ಎಂದು ಹೇಳಿದನು. ಈ ಆರು ಮಂದಿ ಸಹೋದರರು ಸಹ ನನ್ನ ಸಂಗಡ ಬಂದರು.


ಯೇಸು ಕ್ರಿಸ್ತನ ಅಪೊಸ್ತಲನಾದ ಪೇತ್ರನು ಪೊಂತ, ಗಲಾತ್ಯ, ಕಪ್ಪದೋಕ್ಯ, ಆಸ್ಯ, ಬಿಥೂನ್ಯ ಎಂಬ ಸೀಮೆಗಳಲ್ಲಿ ಚದುರಿಹೋಗಿರುವಂಥ ಪರದೇಶಸ್ಥರಾದ ದೇವಜನರಿಗೆ ಅಂದರೆ,


ಯಾಕೆಂದರೆ ದೇಮನು ಇಹಲೋಕವನ್ನು ಪ್ರೀತಿಸಿ, ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು.


ಎಲೈ ಬುದ್ಧಿಹೀನರಾದ ಗಲಾತ್ಯದವರೇ! ನಿಮ್ಮನ್ನು ಮರುಳುಗೊಳಿಸಿದವರು ಯಾರು? ಯೇಸು ಕ್ರಿಸ್ತನು ಶಿಲುಬೆಗೆ ಹಾಕಿಸಿಕೊಂಡವನಾಗಿ ನಿಮ್ಮ ಕಣ್ಣೆದುರಿನಲ್ಲಿಯೇ ವರ್ಣಿಸಲ್ಪಟ್ಟನಲ್ಲವೇ?


ಇದು ಎರಡು ವರ್ಷಗಳ ವರೆಗೂ ನಡೆದಿದ್ದರಿಂದ ಅಸ್ಯಸೀಮೆಯಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರೂ, ಗ್ರೀಕರೂ, ಕರ್ತನ ವಾಕ್ಯವನ್ನು ಕೇಳಿದರು.


ಅದು, “ನೀನು ನೋಡುವುದನ್ನು ಒಂದು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯ, ಎಂಬೀ ಏಳು ಸಭೆಗಳಿಗೆ ಕಳುಹಿಸಬೇಕು” ಎಂದು ನುಡಿಯಿತು.


ಆಸ್ಯಸೀಮೆಯಲ್ಲಿರುವ ಏಳು ಸಭೆಗಳಿಗೆ ಯೋಹಾನನು ಬರೆಯುವುದೇನಂದರೆ; ಇರುವಾತನೂ, ಇದ್ದಾತನೂ, ಬರುವಾತನೂ ಆಗಿರುವಾತನಿಂದ ಮತ್ತು ಆತನ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ


ನಂಬಿಕೆಯಿಂದಲೇ ಅಬ್ರಹಾಮನು ಕರೆಯಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ಸ್ಥಳಕ್ಕೆ ಹೊರಟು ಹೋದನು. ತಾನು ಹೋಗುವುದು ಎಲ್ಲಿಗೆ ಎಂದು ತಿಳಿಯದೆ ಹೊರಟನು.


ಆಸ್ಯಸೀಮೆಯಲ್ಲಿರುವವರೆಲ್ಲರೂ ನನ್ನನ್ನು ಕೈಬಿಟ್ಟರೆಂಬುದನ್ನು ನೀನು ಬಲ್ಲೆ. ಅವರಲ್ಲಿ ಪುಗೇಲನೂ ಹೆರ್ಮೊಗೇನನೂ ಸೇರಿದ್ದಾರೆ.


ಸಹೋದರರೇ, ಆಸ್ಯ ಸೀಮೆಯಲ್ಲಿ ನಾವು ಅನುಭವಿಸಿದ ಕಷ್ಟ-ಸಂಕಟಗಳು ನಿಮಗೆ ತಿಳಿದಿರಲಿ ಎಂದು ನಾನು ಬಯಸುತ್ತೇನೆ. ಅಲ್ಲಿ ನಮ್ಮ ಶಕ್ತಿಗೆ ಮೀರಿದಂಥ ತೊಂದರೆಗಳನ್ನು ಅನುಭವಿಸಿ ನಾವು ಕುಗ್ಗಿಹೋಗಿ ಬದುಕುವ ನಿರೀಕ್ಷೆಯೇ ಇಲ್ಲವಾದವು.


ಈಗ ದೇವಜನರಿಗೋಸ್ಕರ ಹಣ ಸಂಗ್ರಹಣೆ ವಿಚಾರದ ಕುರಿತು, ನಾನು ಗಲಾತ್ಯ ಪ್ರಾಂತ್ಯದ ಸಭೆಗಳಿಗೆ ಹೇಳಿಕೊಟ್ಟಿರುವ ಕ್ರಮದಂತೆ ನೀವೂ ಮಾಡಿರಿ.


ಆದರೆ ಈ ಎಲ್ಲವುಗಳಲ್ಲಿ ಕಾರ್ಯ ಮಾಡುವ ಆ ಒಬ್ಬ ಆತ್ಮನೇ ವರಗಳನ್ನೆಲ್ಲಾ ತನ್ನ ಚಿತ್ತಾನುಸಾರವಾಗಿ ಒಬ್ಬೊಬ್ಬನಿಗೆ ಹಂಚಿಕೊಡುವವನಾಗಿದ್ದಾನೆ.


ಕರ್ತನು ತನ್ನ ಸ್ವಂತ ರಕ್ತದಿಂದ ಸಂಪಾದಿಸಿಕೊಂಡ ದೇವರ ಸಭೆಯನ್ನು ಪರಿಪಾಲಿಸುವುದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಗುಂಪಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವುದರಿಂದ ನಿಮ್ಮ ವಿಷಯದಲ್ಲಿಯೂ, ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.


ಪೌಲನು ತನಗೆ ಸಾಧ್ಯವಾದರೆ ಪಂಚಾಶತ್ತಮ ದಿನದ ಹಬ್ಬಕ್ಕೆ ಯೆರೂಸಲೇಮಿನಲ್ಲಿರಬೇಕೆಂದು ಅವಸರಪಡುತ್ತಾ ಇದ್ದುದರಿಂದ ಆಸ್ಯಸೀಮೆಯಲ್ಲಿ ಕಾಲವನ್ನು ಕಳೆಯುವುದಕ್ಕೆ ಮನಸ್ಸಿಲ್ಲದೆ ಎಫೆಸ ಪಟ್ಟಣವನ್ನು ದಾಟಿಹೋಗಬೇಕೆಂದು ತೀರ್ಮಾನಿಸಿಕೊಂಡಿದ್ದನು.


ಪುರ್ರನ ಮಗನಾದ ಬೆರೋಯ ಪಟ್ಟಣದ ಸೋಪತ್ರನೂ, ಥೆಸಲೋನಿಕದವರಲ್ಲಿ ಅರಿಸ್ತಾರ್ಕನೂ, ಸೆಕುಂದನೂ ದೆರ್ಬೆಪಟ್ಟಣದ ಗಾಯನೂ, ತಿಮೊಥೆಯನೂ, ಆಸ್ಯಸೀಮೆಯವರಲ್ಲಿ ತುಖಿಕನೂ, ತ್ರೊಫಿಮನೂ, ಆಸ್ಯಸೀಮೆಯ ವರೆಗೂ ಅವನ ಜೊತೆಯಲ್ಲಿ ಹೋದರು.


ಪೇತ್ರನು ಆ ದರ್ಶನದ ಕುರಿತಾಗಿ ಯೋಚನೆ ಮಾಡುತ್ತಿರಲು ದೇವರಾತ್ಮನು ಅವನಿಗೆ; “ಅಗೋ, ಮೂವರು ಮನುಷ್ಯರು ನಿನ್ನನ್ನು ವಿಚಾರಿಸುತ್ತಾರೆ;


ನೀವು ಬಲಕ್ಕಾಗಲಿ, ಎಡಕ್ಕಾಗಲಿ ತಿರುಗಿಕೊಳ್ಳುವಾಗ, “ಇದೇ ಮಾರ್ಗ, ಇದರಲ್ಲೇ ನಡೆಯಿರಿ” ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವುದು.


ಪ್ರಾರಂಭದಿಂದಲೂ ಕಣ್ಣಾರೆ ಕಂಡು ಸುವಾರ್ತಾವಾಕ್ಯವನ್ನು ಸಾರುತ್ತಿದ್ದವರು ನಮಗೆ ತಿಳಿಸಿದ ಪ್ರಕಾರ ಆ ಘಟನೆಗಳನ್ನು,


ಆದರೆ ಲಿಬೆರ್ತೀನರೆಂಬವರ ಸಮಾಜಕ್ಕೆ ಸೇರಿದ ಕುರೇನ್ಯದವರು ಮತ್ತು ಅಲೆಕ್ಸಾಂದ್ರಿಯದವರು, ಕಿಲಿಕ್ಯ ಮತ್ತು ಆಸ್ಯ ಸೀಮೆಗಳಿಂದ ಬಂದವರಲ್ಲಿ ಕೆಲವರು ಎದ್ದು ಸ್ತೆಫನನ ಸಂಗಡ ತರ್ಕಮಾಡುತ್ತಾ ಇದ್ದರು.


ದೇವರಾತ್ಮನು ಫಿಲಿಪ್ಪನಿಗೆ, “ನೀನು ಆ ರಥದ ಹತ್ತಿರ ಹೋಗಿ ಅದರೊಂದಿಗೆ ಸೇರಿ ನಡೆ” ಎಂದು ಹೇಳಿದನು.


ಆ ಏಳು ದಿನಗಳು ಮುಗಿಯುತ್ತಿದ್ದಂತೆ ಅಸ್ಯಸೀಮೆಯಿಂದ ಬಂದಿದ್ದ ಯೆಹೂದ್ಯರು ಪೌಲನನ್ನು ದೇವಾಲಯದಲ್ಲಿ ಕಂಡು ಗುಂಪುಕೂಡಿದ ಜನರೆಲ್ಲರನ್ನು ಚದುರಿಸಿ ಅವನನ್ನು ಹಿಡಿದು;


ಅವರ ಮನೆಯಲ್ಲಿ ಸೇರಿಬರುವ ಸಭೆಗೆ ಸಹ ನನ್ನ ವಂದನೆಯನ್ನು ತಿಳಿಸಿರಿ. ಆಸ್ಯ ಸೀಮೆಯಲ್ಲಿ ಕ್ರಿಸ್ತನಿಗೆ ಪ್ರಥಮಫಲವಾಗಿರುವ ನನ್ನ ಪ್ರಿಯನಾದ ಎಫೈನೆತನಿಗೆ ವಂದನೆ.


ಆಸ್ಯಸೀಮೆಯ ಸಭೆಗಳವರು ನಿಮ್ಮನ್ನು ವಂದಿಸುತ್ತಾರೆ. ಅಕ್ವಿಲನೂ ಮತ್ತು ಪ್ರಿಸ್ಕಿಲ್ಲಳೂ ತಮ್ಮ ಮನೆಯಲ್ಲಿ ಕೂಡಿ ಬರುವ ಸಭೆಯವರೊಂದಿಗೆ ಕರ್ತನ ಹೆಸರಿನಲ್ಲಿ ಬಹಳವಾಗಿ ನಿಮ್ಮನ್ನು ವಂದಿಸುತ್ತಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು