Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 17:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನಾನು ನಿಮ್ಮ ಪಟ್ಟಣದಲ್ಲಿ ತಿರುಗಾಡುತ್ತಾ ನೀವು ಪೂಜಿಸುವ ದೇವತಾ ಪ್ರತಿಮೆಗಳನ್ನು ಚೆನ್ನಾಗಿ ನೋಡುತ್ತಾ ಇದ್ದಾಗ ಒಂದು ಬಲಿಪೀಠವು ನನ್ನ ಕಣ್ಣಿಗೆ ಬಿತ್ತು; ಅದರ ಮೇಲೆ ‘ತಿಳಿಯದ ದೇವರಿಗೆ’ ಎಂದು ಬರೆದಿತ್ತು; ಆದಕಾರಣ ನೀವು ಯಾವುದನ್ನು ತಿಳಿಯದೆ ಪೂಜಿಸುತ್ತಿದ್ದೀರೋ ಅದನ್ನೇ ನಿಮಗೆ ತಿಳಿಯಪಡಿಸುತ್ತೇನೆ, ಕೇಳಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನಿಮ್ಮ ಪಟ್ಟಣದಲ್ಲಿ ನಾನು ತಿರುಗಾಡುತ್ತಾ, ನೀವು ಪೂಜಿಸುವ ವಿಗ್ರಹಗಳನ್ನು ಗಮನಿಸುತ್ತಾ ಇದ್ದಾಗ ಒಂದು ಬಲಿಪೀಠವು ಕಣ್ಣಿಗೆ ಬಿದ್ದಿತು. ಅದರ ಮೇಲೆ ‘ಅಜ್ಞಾತ ದೇವರಿಗೆ’ ಎಂಬ ಲಿಖಿತವಿತ್ತು. ನೀವು ಅರಿಯದೆ ಆರಾಧಿಸುವ ಆ ದೇವರನ್ನೇ ಅರುಹಿಸಲು ನಾನು ಬಂದಿರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನಾನು ನಿಮ್ಮ ಪಟ್ಟಣದಲ್ಲಿ ತಿರುಗಾಡುತ್ತಾ ನೀವು ಪೂಜಿಸುವ ದೇವತಾಪ್ರತಿಮೆಗಳನ್ನು ಚೆನ್ನಾಗಿ ನೋಡುತ್ತಾ ಇದ್ದಾಗ ಒಂದು ಬಲಿಪೀಠವು ನನ್ನ ಕಣ್ಣಿಗೆ ಬಿತ್ತು; ಅದರ ಮೇಲೆ ತಿಳಿಯದ ದೇವರಿಗೆ ಎಂದು ಬರೆದಿತ್ತು. ಆದಕಾರಣ ನೀವು ಯಾವದನ್ನು ತಿಳಿಯದೆ ಪೂಜಿಸುತ್ತೀರೋ ಅದನ್ನೇ ನಿಮಗೆ ತಿಳಿಯಪಡಿಸುತ್ತೇನೆ, ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನಾನು ನಿಮ್ಮ ಪಟ್ಟಣದಲ್ಲಿ ನಡೆದು ಹೋಗುವಾಗ ನೀವು ಪೂಜಿಸುವ ದೇವತಾ ಪ್ರತಿಮೆಗಳನ್ನು ಕಂಡೆನು. ಒಂದು ಯಜ್ಞವೇದಿಕೆಯ ಮೇಲೆ, ‘ತಿಳಿಯದ ದೇವರಿಗೆ’ ಎಂದು ಬರೆದಿತ್ತು. ನಿಮಗೆ ಗೊತ್ತಿಲ್ಲದ ದೇವರನ್ನು ನೀವು ಆರಾಧಿಸುತ್ತಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನಾನು ಸುತ್ತಮುತ್ತಲೂ ತಿರುಗಾಡುತ್ತಾ, ನಿಮ್ಮ ಆರಾಧನಾ ವಿಗ್ರಹಗಳನ್ನು ಲಕ್ಷ್ಯವಿಟ್ಟು ಗಮನಿಸಿದಾಗ, ‘ತಿಳಿಯದ ದೇವರಿಗೆ’ ಎಂಬ ಬರಹವಿದ್ದ ಬಲಿಪೀಠವನ್ನು ನೋಡಿದೆನು. ಆದ್ದರಿಂದ ನೀವು ಯಾವುದನ್ನು ತಿಳಿಯದೆ ಪೂಜಿಸುತ್ತಿರುವಿರೋ ಅದನ್ನೇ ನಾನು ನಿಮಗೆ ಪ್ರಕಟಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಮಿಯಾ ತುಮ್ಚ್ಯಾ ಶಾರಾತ್ ಚಲುನ್ ಜಾಯ್ತ್ ರಾತಾನಾ ತುಮಿ ಫುಜ್ಯಾ ಕರ್‍ತಲಿ ದೆವಾಂಚಿ ಮುರ್ತಿಯಾ ಬಗಟ್ಲೊ ಎಕ್ ಬಲಿ ಭೆಟ್ವುತಲ್ಯಾ ಜಗ್ಯಾಕ್ “ಗೊತ್ತ್ ನತ್ತ್ಯಾ ದೆವಾಕ್” ಮನುನ್ ಲಿವಲ್ಲೆ ಹೊತ್ತೆ ತುಮ್ಕಾ ಗೊತ್ತ್ ನತ್ತ್ಯಾ ದೆವಾಕ್ ತುಮಿ ಆರಾಧನ್‍ ಕರುಲ್ಲ್ಯಾಸಿ, ತ್ಯಾ ದೆವಾಚ್ಯಾ ವಿಶಯಾತ್ ಮಿಯಾ ತುಮ್ಕಾ ಸಾಂಗ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 17:23
19 ತಿಳಿವುಗಳ ಹೋಲಿಕೆ  

ಸಮಾರ್ಯದವರಾದ ನೀವು ಅರಿಯದೇ ಇರುವಂಥದನ್ನು ಆರಾಧಿಸುತ್ತೀರಿ, ಆದರೆ ನಾವು ಅರಿತಿರುವುದನ್ನೇ ಆರಾಧಿಸುವವರಾಗಿದ್ದೇವೆ. ಏಕೆಂದರೆ, ಬರಬೇಕಾದ ರಕ್ಷಣೆಯು ಯೆಹೂದ್ಯರೊಳಗಿಂದ ಬರುತ್ತದಷ್ಟೆ.


ಒಬ್ಬನೇ ಸತ್ಯ ದೇವರಾಗಿರುವ ನಿನ್ನನ್ನೂ ಮತ್ತು ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವುದೇ ನಿತ್ಯಜೀವವು.


ನೀತಿಸ್ವರೂಪನಾದ ತಂದೆಯೇ, ಲೋಕವು ನಿನ್ನನ್ನು ತಿಳಿಯಲಿಲ್ಲ, ಆದರೆ ನಾನು ನಿನ್ನನ್ನು ತಿಳಿದಿದ್ದೇನೆ ಮತ್ತು ಇವರು ನೀನೇ ನನ್ನನ್ನು ಕಳುಹಿಸಿದ್ದೀ ಎಂದು ತಿಳಿದಿದ್ದಾರೆ.


ಲೋಕವು ತನ್ನ ಜ್ಞಾನದಿಂದ ದೇವರನ್ನು ತಿಳಿದುಕೊಳ್ಳದೆ ಹೋದದ್ದರಿಂದ; ಮೂರ್ಖತನವೆನಿಸಿಕೊಂಡಿರುವ ನಮ್ಮ ಬೋಧನೆಯ ಮೂಲಕ ನಂಬುವವರನ್ನು ರಕ್ಷಿಸುವುದು ದೇವರಿಗೆ ಹಿತವೆಂದು ತೋರಿತು.


ಇದಲ್ಲದೆ ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ಮಾಡಬಾರದ ಕೃತ್ಯಗಳನ್ನು ನಡಿಸುವವರಾಗುವಂತೆ ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟನು.


ಆ ಆಜ್ಞಾನದ ಕಾಲಗಳನ್ನು ದೇವರು ಗಣನೆಗೆ ತೆಗೆದುಕೊಳ್ಳಲಿಲ್ಲ; ಈಗಲಾದರೋ ಆತನು ನಾಲ್ಕು ದಿಕ್ಕಿನಲ್ಲಿರುವ ಮನುಷ್ಯರೆಲ್ಲರೂ ಪಶ್ಚಾತ್ತಾಪಪಟ್ಟು ತನ್ನ ಕಡೆಗೆ ತಿರುಗಿಕೊಳ್ಳಬೇಕೆಂದು ಅಪ್ಪಣೆಕೊಡುತ್ತಿದ್ದಾನೆ.


ದೇವರ ಮಗನು ಈ ಲೋಕಕ್ಕೆ ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬುದು ನಮಗೆ ಗೊತ್ತಿದೆ, ಮತ್ತು ನಾವು ದೇವರ ಮಗನಾದ ಯೇಸುಕ್ರಿಸ್ತನಲ್ಲಿ ಇರುವವರಾಗಿ ಸತ್ಯದೇವರಾಗಿರುವಾತನಲ್ಲಿದ್ದೇವೆ. ಈ ಕ್ರಿಸ್ತನೇ ಸತ್ಯದೇವರೂ, ನಿತ್ಯಜೀವವೂ ಆಗಿದ್ದಾನೆ.


ಸರ್ವಯುಗಗಳ ಅರಸನೂ, ಅಮರನೂ, ಅದೃಶ್ಯನೂ ಆಗಿರುವ ಏಕ ದೇವರಿಗೆ ಘನವೂ ಮಹಿಮೆಯೂ ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್.


ಯಾವುದು ದೇವರೆನಿಸಿಕೊಳ್ಳುತ್ತದೋ ಯಾವುದು ಆರಾಧಿಸಲ್ಪಡುತ್ತದೋ ಅದನ್ನೆಲ್ಲಾ ನಾಶನಕ್ಕೆ ಅಧೀನನಾದ ಆ ಪುರುಷನು ಎದುರಿಸಿ ಅದಕ್ಕಿಂತ ಮೇಲಾಗಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ತಾನು ದೇವರೆಂದು ಘೋಷಿಸಿಕೊಂಡು ದೇವರ ಗರ್ಭಗುಡಿಯಲ್ಲೇ ಕುಳಿತುಕೊಳ್ಳುತ್ತಾನೆ.


ಅಂದು ನೀವು ಕ್ರಿಸ್ತನಿಂದ ದೂರವಿದವರೂ, ಇಸ್ರಾಯೇಲ್ಯರ ಹಕ್ಕಿನಲ್ಲಿ ಪಾಲಿಲ್ಲದವರೂ, ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಲ್ಲಿ ಪರಕೀಯರೂ, ಯಾವ ನಿರೀಕ್ಷೆಯಿಲ್ಲದವರೂ ಮತ್ತು ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂಬುದನ್ನು ಜ್ಞಾಪಕಮಾಡಿಕೊಳ್ಳಿರಿ.


ಆಕಾಶದಲ್ಲಿಯಾಗಲಿ ಭೂಮಿಯ ಮೇಲಾಗಲಿ ದೇವರುಗಳೆನಿಸಿಕೊಳ್ಳುವಂಥವುಗಳು ಅನೇಕವಿದ್ದರೂ, “ದೇವರುಗಳೆಂದೂ ಕರ್ತರೆಂದೂ ಪೂಜಿಸುವಂಥವುಗಳು” ಬಹಳವಿದ್ದರೂ,


ಯೇಸು “ನನ್ನನ್ನು ನಾನೇ ಮಹಿಮೆಪಡಿಸಿಕೊಂಡರೆ ನನ್ನ ಮಹಿಮೆಯು ಏನೂ ಅಲ್ಲ. ನನ್ನನ್ನು ಮಹಿಮೆಪಡಿಸುವವನು ನನ್ನ ತಂದೆಯೇ, ನೀವು ಆತನನ್ನು ನಿಮ್ಮ ದೇವರು ಅನ್ನುತ್ತೀರಿ,


ಮನುಷ್ಯರು ಕಲ್ಪಿಸಿದ ಕಟ್ಟಳೆಗಳನ್ನೇ ಅವರು ಉಪದೇಶವಾಗಿ ಬೋಧಿಸುತ್ತಿರುವುದರಿಂದ ನನ್ನನ್ನು ವ್ಯರ್ಥವಾಗಿ ಆರಾಧಿಸುವರು” ಎಂಬುದೇ.


ಬೇರೆ ಯಾವ ಜನಾಂಗದವರಿಗೂ ಆತನು ಹೀಗೆ ಮಾಡಲಿಲ್ಲ, ಆತನ ನ್ಯಾಯವಿಧಿಗಳನ್ನು ಅವರು ಅರಿಯರು. ಯೆಹೋವನಿಗೆ ಸ್ತೋತ್ರ!


ನೀವು ಹೀಗೆ ಮಾಡಿದರೂ ನಾನು ಮೌನವಾಗಿದ್ದೆನು. ಆದುದರಿಂದ, ‘ದೇವರೂ ನಮ್ಮಂಥವನೇ’ ಎಂದು ತಿಳಿದುಕೊಂಡಿರಿ. ಈಗಲಾದರೋ ನಾನು ಎಲ್ಲವನ್ನು, ನಿಮ್ಮ ಮುಂದೆ ವಿವರಿಸಿ ನಿಮ್ಮನ್ನು ಅಪರಾಧಿಗಳೆಂದು ಸ್ಥಾಪಿಸುವೆನು.


ನನ್ನ ಸೇವಕನಾದ ಯಾಕೋಬನಿಗಾಗಿ, ನಾನು ಆದುಕೊಂಡ ಇಸ್ರಾಯೇಲಿಗಾಗಿ ಹೆಸರು ಹಿಡಿದು ನಿನ್ನನ್ನು ಕರೆದಿದ್ದೇನೆ. ನೀನು ನನ್ನನ್ನು ಅರಿಯದವನಾಗಿದ್ದರೂ ನಿನಗೆ ಬಿರುದನ್ನು ದಯಪಾಲಿಸಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು