Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 17:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಏಕೆಂದರೆ ಆತನಲ್ಲಿಯೇ ನಾವು ಜೀವಿಸುತ್ತೇವೆ, ಚಲಿಸುತ್ತೇವೆ ಮತ್ತು ಇರುತ್ತೇವೆ. ನಿಮ್ಮ ಕವಿಗಳಲ್ಲಿ ಕೆಲವರು, ‘ನಾವು ಆತನ ಸಂತಾನದವರೇ’ ಎಂದು ಹೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಏಕೆಂದರೆ, ‘ನಾವು ಜೀವಿಸುವುದೂ ಚಲಿಸುವುದೂ ಇರುವುದೂ ಅವರಲ್ಲೇ’; ನಿಮ್ಮ ಕವಿಗಳಲ್ಲೇ ಕೆಲವರು ಹೇಳಿರುವಂತೆ, ‘ನಾವು ನಿಜವಾಗಿ ದೇವರ ಮಕ್ಕಳು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆತನಲ್ಲಿಯೇ ನಾವು ಜೀವಿಸುತ್ತೇವೆ, ಚಲಿಸುತ್ತೇವೆ, ಇರುತ್ತೇವೆ. ನಿಮ್ಮ ಕವಿಗಳಲ್ಲಿಯೂ ಕೆಲವರು - ನಾವು ಆತನ ಸಂತಾನದವರೇ ಎಂಬದಾಗಿ ಹೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ನಾವು ಆತನೊಂದಿಗೆ ವಾಸಿಸುತ್ತೇವೆ, ನಡೆಯುತ್ತೇವೆ, ಇರುತ್ತೇವೆ. ನಿಮ್ಮವರೇ ಆದ ಕೆಲವು ಲೇಖಕರು, ‘ನಾವು ಆತನ ಸಂತಾನದವರೇ’ ಎಂದು ಹೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಏಕೆಂದರೆ, ‘ನಾವು ಜೀವಿಸುವುದೂ ಚಲಿಸುವುದೂ ಇರುವುದೂ ದೇವರಲ್ಲಿಯೇ.’ ನಿಮ್ಮ ಕವಿಗಳಲ್ಲಿ ಕೆಲವರು ಹೇಳಿರುವಂತೆ, ‘ನಾವು ನಿಜಕ್ಕೂ ದೇವರ ಮಕ್ಕಳೇ ಆಗಿದ್ದೇವೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಅಮಿ ತೆಚ್ಯಾ ವಾಂಗ್ಡಾ ವಸ್ತಿ ಕರ್ತಾಂವ್ , ಚಲ್ತಾಂವ್ ಅನಿ ಚಿಗರ್ತಾಂವ್, ತುಮ್ಚ್ಯಾತ್ಲ್ಯಾ ಉಲ್ಲ್ಯಾ ಗಿತಾ ಲಿವ್ತಲ್ಯಾ ಮಾನ್ಸಾನಿ ಅಮಿ ತೆಚಿ ಪೊರಾ ಮನುನ್ ಸಾಂಗ್ಲಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 17:28
16 ತಿಳಿವುಗಳ ಹೋಲಿಕೆ  

ಪ್ರತಿ ಪ್ರಾಣಿಯ ಪ್ರಾಣವು, ಸಮಸ್ತ ಮನುಷ್ಯರ ಆತ್ಮಗಳೂ ಯೆಹೋವನ ಕೈಯಲ್ಲಿರುವವು.


ಆತನು ಎಲ್ಲಕ್ಕೂ ಮೊದಲು ಇದ್ದಾತನು, ಆತನಲ್ಲಿ ಸಮಸ್ತವು ಒಂದಾಗಿ ನೆಲೆಗೊಂಡಿದ್ದೆ.


ಈತನು ದೇವರ ಮಹಿಮೆಯ ಪ್ರಕಾಶವೂ, ಆತನ ವ್ಯಕ್ತಿತ್ವದ ಪ್ರತಿರೂಪವೂ, ತನ್ನ ಶಕ್ತಿಯುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ಶುದ್ಧಿಮಾಡಿ, ಉನ್ನತದಲ್ಲಿರುವ ಮಹೋನ್ನತನಾದ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.


ನಿನ್ನ ಬಳಿಯಲ್ಲಿ ಜೀವದ ಬುಗ್ಗೆ ಉಂಟಲ್ಲಾ; ನಿನ್ನ ತೇಜಸ್ಸು ನಮಗೆ ಬೆಳಕು ಕೊಡುತ್ತದೆ.


ದೇವರು ಜೀವಿತರಿಗೆ ದೇವರಾಗಿದ್ದಾನೆ ಹೊರತು ಜೀವವಿಲ್ಲದವರಿಗೆ ಅಲ್ಲ. ಆತನಿಗೆ ಎಲ್ಲರೂ ಜೀವಿಸುವವರೇ” ಎಂದು ಹೇಳಿದನು.


ತಂದೆಯು ತಾನು ಹೇಗೆ ಸ್ವತಃ ಜೀವವುಳ್ಳವನಾಗಿದ್ದಾನೋ, ಹಾಗೆಯೇ ಮಗನೂ ಸ್ವತಃ ಜೀವವುಳ್ಳವನಾಗಿರುವಂತೆ ಮಾಡಿದ್ದಾನೆ.


ಯೇಸು ಆಕೆಗೆ, “ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ. ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು,


ಆತನು ನಮ್ಮನ್ನು ಜೀವದಿಂದುಳಿಸಿ, ನಮ್ಮ ಕಾಲುಗಳನ್ನು ಜಾರದಂತೆ ಕಾಪಾಡಿದನು.


ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದ ಲೌಕಿಕ ತಂದೆಗಳನ್ನು ನಾವು ಸನ್ಮಾನಿಸಿತ್ತೇವಲ್ಲ. ನಮ್ಮ ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಹೆಚ್ಚಾಗಿ ಅಧೀನರಾಗಿ ಜೀವಿಸಬೇಕಲ್ಲವೇ?


ಯಾವನಾದರೂ ನನ್ನ ಒಡೆಯನಾದ ನಿನ್ನನ್ನು ಹಿಂಸಿಸಿ ಜೀವತೆಗೆಯಬೇಕೆಂದಿದ್ದರೂ, ಆ ನಿನ್ನ ಜೀವವು ನಿನ್ನ ದೇವರಾದ ಯೆಹೋವನ ರಕ್ಷಣೆಯಲ್ಲಿರುವ ಜೀವ ನಿಕ್ಷೇಪದಲ್ಲಿ ಭದ್ರವಾಗಿರಲಿ. ಆದರೆ ಆತನು ನಿನ್ನ ಶತ್ರುಗಳ ಜೀವವನ್ನು ಕವಣೆಯ ಕಲ್ಲನ್ನೋ ಎಂಬಂತೆ ಎಸೆದು ಬಿಡಲಿ.


ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಮುಂದೆ ತಂದರಲ್ಲಾ; ನೀನು ನಿನ್ನ ರಾಜ್ಯದ ಮುಖಂಡರ, ಪತ್ನಿ ಹಾಗೂ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ, ಕಣ್ಣು, ಕಿವಿ ಇಲ್ಲದ ಬೆಳ್ಳಿ, ಬಂಗಾರ, ತಾಮ್ರ, ಕಬ್ಬಿಣ, ಮರ, ಕಲ್ಲುಗಳ ದೇವರುಗಳನ್ನು ಸ್ತುತಿಸಿದ್ದೀ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ, ನಿನ್ನ ಸ್ಥಿತಿಗತಿಗಳು ಯಾರ ಅಧೀನವೋ ಆ ದೇವರನ್ನು ಘನಪಡಿಸಲೇ ಇಲ್ಲ.


ಕಯಿನಾನನು ಎನೋಷನ ಮಗನು; ಎನೋಷನು ಸೇಥನ ಮಗನು; ಸೇಥನು ಆದಾಮನ ಮಗನು ಆದಾಮನು ದೇವರ ಮಗನು.


“ಕ್ರೇತ್ ದ್ವೀಪದವರು ಯಾವಾಗಲೂ ಸುಳ್ಳುಗಾರರೂ, ದುಷ್ಟಮೃಗಗಳೂ, ಸೋಮಾರಿಗಳಾದ ಹೊಟ್ಟೆಬಾಕರೂ” ಆಗಿದ್ದಾರೆಂದು ಅವರ ಸ್ವಂತ ಪ್ರವಾದಿಗಳಲ್ಲಿಯೇ ಒಬ್ಬ ಪ್ರವಾದಿಯು ಹೇಳಿದ್ದಾನೆ.


ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಆತನ ಮಾತಿಗೆ ವಿಧೇಯರಾಗಿರಿ, ಆತನನ್ನು ಹೊಂದಿಕೊಂಡೇ ಇರಿ. ಯೆಹೋವನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣ ಮಾಡಿಕೊಟ್ಟ ದೇಶದಲ್ಲಿ ನೀವು ಬದುಕಿಕೊಳ್ಳುವುದಕ್ಕೂ ಬಹುಕಾಲ ಇರುವುದಕ್ಕೂ ಆತನೇ ಆಧಾರ” ಎಂದು ಹೇಳಿದನು.


ಆಗ ಅರಸನಾದ ಚಿದ್ಕೀಯನು ಯೆರೆಮೀಯನಿಗೆ, “ಈ ಪ್ರಾಣವನ್ನು ನಮಗೆ ದಯಪಾಲಿಸಿದ ಯೆಹೋವನ ಜೀವದಾಣೆ, ನಾನು ನಿನ್ನನ್ನು ಸಾಯಿಸುವುದಿಲ್ಲ, ನಿನ್ನ ಪ್ರಾಣವನ್ನು ಹುಡುಕುವ ಇವರ ಕೈಗೂ ನಿನ್ನನ್ನು ಸಿಕ್ಕಿಸುವುದಿಲ್ಲ” ಎಂದು ರಹಸ್ಯವಾಗಿ ಪ್ರಮಾಣ ಮಾಡಿದನು.


ಯಾಕೆಂದರೆ ಪವಿತ್ರಗೊಳಿಸುವವನಿಗೂ ಪವಿತ್ರರಾದವರಿಗೂ ಒಬ್ಬಾತನೇ ಮೂಲ ಆತನು ದೇವರೇ. ಈ ಕಾರಣದಿಂದ ಅವರನ್ನು ಪವಿತ್ರಗೊಳಿಸುವಾತನು ಅವರನ್ನು ಸಹೋದರರೆಂದು ಕರೆಯುವುದಕ್ಕೆ ನಾಚಿಕೆಪಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು