Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 18:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 “ಇವನು ದೇವರನ್ನು ಧರ್ಮಶಾಸ್ತ್ರಕ್ಕೆ ವಿರುದ್ಧವಾಗಿ ಆರಾಧಿಸುವುದಕ್ಕೆ ಜನರನ್ನು ಒಡಂಬಡಿಸುತ್ತಾನೆಂದು” ದೂರುಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 “ಧರ್ಮಶಾಸ್ತ್ರಕ್ಕೆ ವ್ಯತಿರಿಕ್ತವಾದ ರೀತಿಯಲ್ಲಿ ದೇವರನ್ನು ಆರಾಧಿಸುವಂತೆ ಈ ಮನುಷ್ಯ ಜನರನ್ನು ಪ್ರೇರೇಪಿಸುತ್ತಾ ಇದ್ದಾನೆ,” ಎಂದು ಅಲ್ಲಿ ದೂರಿತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇವನು ದೇವರನ್ನು ಧರ್ಮಶಾಸ್ತ್ರಕ್ಕೆ ವಿರುದ್ಧವಾಗಿ ಪೂಜಿಸುವದಕ್ಕೆ ಜನರನ್ನು ಒಡಂಬಡಿಸುತ್ತಾನೆಂದು ದೂರು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ರಾಜ್ಯಪಾಲನಿಗೆ, “ನಮ್ಮ ಧರ್ಮಶಾಸ್ತ್ರಕ್ಕೆ ವಿರುದ್ಧವಾದ ರೀತಿಯಲ್ಲಿ ದೇವರನ್ನು ಆರಾಧಿಸಬೇಕೆಂದು ಇವನು ಜನರಿಗೆ ಉಪದೇಶಿಸುತ್ತಿದ್ದಾನೆ!” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ಮೋಶೆಯ ನಿಯಮಕ್ಕೆ ವಿರುದ್ಧವಾದ ರೀತಿಯಲ್ಲಿ ದೇವರನ್ನು ಆರಾಧಿಸಬೇಕೆಂದು ಈ ಮನುಷ್ಯನು ಜನರನ್ನು ಪ್ರೇರೇಪಿಸುತ್ತಿದ್ದಾನೆ,” ಎಂದು ದೂರು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಹೊ ಮಾನುಸ್ ಅಮ್ಚ್ಯಾ ಲೊಕಾಕ್ನಿ ಮೊಜ್ಜೆಚ್ಯಾ ಖಾಯ್ದೆಚ್ಯಾ ಪುಸ್ತಕಾಚ್ಯಾ ವಿರುಧ್ ಹೊಲ್ಲ್ಯಾ ರಿತಿನ್ ದೆವಾಕ್ ಆರಾಧನ್‍ ಕರುಚೆ ಮನುನ್ ಹ್ಯೊ ಲೊಕಾಕ್ನಿ ತೆಂಚಿ ಮನಾ ಪರ್ತುಕ್ ಕಟ್ಪಟ್ ಕರುಲಾಲಾ! ಮನುನ್ ಸಾಂಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 18:13
7 ತಿಳಿವುಗಳ ಹೋಲಿಕೆ  

ಪೌಲನು; “ಯೆಹೂದ್ಯರ ಧರ್ಮಶಾಸ್ತ್ರದ ವಿಷಯದಲ್ಲಾಗಲಿ, ದೇವಾಲಯದ ವಿಷಯದಲ್ಲಾಗಲಿ, ಚಕ್ರವರ್ತಿಯ ವಿಷಯದಲ್ಲಾಗಲಿ ನಾನು ಯಾವ ತಪ್ಪನ್ನೂ ಮಾಡಲಿಲ್ಲವೆಂದು” ಪ್ರತ್ಯುತ್ತರ ಹೇಳಿದನು.


“ಇಸ್ರಾಯೇಲ್‍ ಜನರೇ, ನಮಗೆ ಸಹಾಯಮಾಡಿರಿ, ನಮ್ಮ ಜನರಿಗೂ, ಧರ್ಮಶಾಸ್ತ್ರಕ್ಕೂ, ಈ ಆಲಯಕ್ಕೂ ವಿರುದ್ಧವಾಗಿ ಎಲ್ಲೆಲ್ಲಿಯೂ, ಎಲ್ಲರಿಗೂ ಬೋಧನೆ ಹೇಳುವ ಆ ಮನುಷ್ಯನು ಇವನೇ. ಇದಲ್ಲದೆ ಇವನು ಗ್ರೀಕರನ್ನು ದೇವಾಲಯದೊಳಗೆ ಕರೆದುಕೊಂಡು ಬಂದು ಈ ಪರಿಶುದ್ಧಸ್ಥಳವನ್ನು ಹೊಲೆಮಾಡಿದ್ದಾನೆ” ಎಂದು ಕೂಗಿದರು.


ಆ ಸಾಕ್ಷಿಗಳು, “ಈ ಮನುಷ್ಯನು ಈ ಪರಿಶುದ್ಧವಾದ ಸ್ಥಳಕ್ಕೆ ವಿರೋಧವಾಗಿಯೂ, ಧರ್ಮಶಾಸ್ತ್ರಕ್ಕೆ ವಿರೋಧವಾಗಿಯೂ ಮಾತನಾಡುವುದನ್ನು ನಿಲ್ಲಿಸುತ್ತಿಲ್ಲ ಎಂದು ಹೇಳಿದರು.


ಆದರೆ ನೀವು ಮಾಡುವ ವಿವಾದವು ಬೋಧನೆಯನ್ನೂ, ಹೆಸರುಗಳನ್ನೂ, ನಿಮ್ಮ ಧರ್ಮಶಾಸ್ತ್ರವನ್ನೂ ಕುರಿತದ್ದಾಗಿರುವುದರಿಂದ ಅವುಗಳನ್ನು ನೀವೇ ನೋಡಿಕೊಳ್ಳಿರಿ. ಇಂಥ ವಿಷಯಗಳನ್ನು ವಿಚಾರಣೆಮಾಡುವುದಕ್ಕೆ ನನಗಂತೂ ಮನಸ್ಸಿಲ್ಲ” ಎಂದು ಹೇಳಿ,


ಅವನು ಪ್ರತಿ ಸಬ್ಬತ್ ದಿನವೂ ಸಭಾಮಂದಿರದಲ್ಲಿ ಚರ್ಚಿಸಿ ಯೆಹೂದ್ಯರನ್ನೂ ಗ್ರೀಕರನ್ನೂ ಒಡಂಬಡಿಸುತ್ತಿದ್ದನು.


ಯೆಹೂದ್ಯರು ಅವನಿಗೆ, “ನಮಗೆ ಒಂದು ನೇಮ ಉಂಟು. ಆ ನೇಮದ ಪ್ರಕಾರ ಆತನು ಸಾಯಲೇಬೇಕು. ಏಕೆಂದರೆ ಆತನು ತನ್ನನ್ನು ದೇವರ ಮಗನಾಗಿ ಮಾಡಿಕೊಂಡಿದ್ದಾನೆ” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು