Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 18:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಪೌಲನು ಅಂತಿಯೋಕ್ಯದಲ್ಲಿ ಕೆಲವು ಕಾಲ ಇದ್ದು ಪುನಃ ಅಲ್ಲಿಂದ ಹೊರಟು ಕ್ರಮವಾಗಿ ಗಲಾತ್ಯ ಸೀಮೆಯಲ್ಲಿಯೂ, ಫ್ರುಗ್ಯದಲ್ಲಿಯೂ ಸಂಚಾರಮಾಡುತ್ತಾ ಶಿಷ್ಯರೆಲ್ಲರನ್ನು ದೃಢಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅಲ್ಲಿ ಕೆಲಕಾಲವಿದ್ದು ಪುನಃ ಹೊರಟು ಗಲಾತ್ಯ ಮತ್ತು ಫ್ರಿಜಿಯ ಪ್ರದೇಶಗಳಲ್ಲಿ ಸಂಚರಿಸುತ್ತಾ ಭಕ್ತರೆಲ್ಲರನ್ನು ದೃಢಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಪೌಲನು ಅಂತಿಯೋಕ್ಯದಲ್ಲಿ ಕೆಲವು ಕಾಲ ಇದ್ದು ತಿರಿಗಿ ಹೊರಟು ಕ್ರಮವಾಗಿ ಗಲಾತ್ಯ ಸೀಮೆಯಲ್ಲಿಯೂ ಫ್ರೂಗ್ಯದಲ್ಲಿಯೂ ಸಂಚಾರಮಾಡುತ್ತಾ ಶಿಷ್ಯರೆಲ್ಲರನ್ನು ದೃಢಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಅಲ್ಲಿ ಅವನು ಸ್ವಲ್ಪಕಾಲವಿದ್ದನು. ಬಳಿಕ ಅಲ್ಲಿಂದ ಹೊರಟು ಗಲಾತ್ಯ ಮತ್ತು ಫ್ರಿಜಿಯ ನಾಡುಗಳಲ್ಲಿ ಸಂಚರಿಸುತ್ತಾ ಯೇಸುವಿನ ಶಿಷ್ಯರೆಲ್ಲರನ್ನು ಬಲಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅಲ್ಲಿ ಸ್ವಲ್ಪ ಸಮಯ ಕಳೆದನಂತರ ಅವನು ಅಲ್ಲಿಂದ ಹೊರಟು ಕ್ರಮವಾಗಿ ಗಲಾತ್ಯ ಮತ್ತು ಫ್ರುಗ್ಯ ಪ್ರದೇಶದಲ್ಲೆಲ್ಲಾ ಸಂಚರಿಸುತ್ತಾ ಶಿಷ್ಯರಲ್ಲಿ ವಿಶ್ವಾಸವನ್ನು ಬಲಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಮನಾ ತೊ ಉಲ್ಲೊ ಯೆಳ್ ಥೈ ರಾವ್ನ್ ಜಾತಾನಾ ಗಲಾತ್ಯಾ ಅನಿ ಪಿರ್ಗಿಯಾತ್ನಾ ಫಿರುನ್ಗೆತ್ ಸಗ್ಳ್ಯಾ ವಿಶ್ವಾಸಿ ಲೊಕಾಕ್ನಿ ಘಟ್ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 18:23
22 ತಿಳಿವುಗಳ ಹೋಲಿಕೆ  

ಅಲ್ಲಿ ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿ ಕ್ರಿಸ್ತ ನಂಬಿಕೆಯಲ್ಲಿ ಸ್ಥಿರವಾಗಿ ನಿಲ್ಲಿರಿ ಎಂದು ಪ್ರೋತ್ಸಾಹಿಸಿದರು. ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕಾಗಿದೆ ಎಂದು ಬೋಧಿಸಿದರು.


ಆಸ್ಯಸೀಮೆಯಲ್ಲಿ ವಾಕ್ಯವನ್ನು ಹೇಳಬಾರದೆಂದು ಪವಿತ್ರಾತ್ಮನು ತಡೆದ್ದುದರಿಂದ ಅವರು ಫ್ರುಗ್ಯ, ಗಲಾತ್ಯ ಸೀಮೆಯನ್ನು ಹಾದುಹೋಗಿ,


ಹೊರಟು ಸಿರಿಯ ಮತ್ತು ಕಿಲಿಕ್ಯ ಸೀಮೆಗಳಲ್ಲಿ ಸಂಚರಿಸುತ್ತಾ ಸಭೆಗಳನ್ನು ದೃಢಪಡಿಸಿದನು.


ಯೂದನೂ, ಸೀಲನೂ ತಾವೇ ಪ್ರವಾದಿಗಳಾಗಿದ್ದುದರಿಂದ ಸಹೋದರರನ್ನು ಅನೇಕ ಮಾತುಗಳಿಂದ ಉತ್ತೇಜಿಸಿ ದೃಢಪಡಿಸಿದರು.


ಸಹೋದರರೇ, ಮೈಗಳ್ಳರಿಗೆ ಬುದ್ಧಿಹೇಳಿರಿ, ಮನಗುಂದಿದವರನ್ನು ಧೈರ್ಯಪಡಿಸಿರಿ, ಬಲಹೀನರಿಗೆ ಆಧಾರವಾಗಿರಿ, ಎಲ್ಲರೊಂದಿಗೆ ದೀರ್ಘಶಾಂತಿಯಿಂದಿರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.


ನನ್ನ ದೇಹಸ್ಥಿತಿಯಿಂದ ನಿಮಗೆ ಸಮಸ್ಯೆಗಳು ಬಂದಾಗ್ಯೂ ಕೂಡ, ನೀವು ನನ್ನನ್ನು ಹೀನೈಸಲಿಲ್ಲ, ತಿರಸ್ಕರಿಸಲಿಲ್ಲ. ನನ್ನನ್ನು ದೇವದೂತನಂತೆ, ಕ್ರಿಸ್ತ ಯೇಸುವಿನಂತೆ ಸೇರಿಸಿಕೊಂಡಿದ್ದೀರಿ.


ಈಗ ದೇವಜನರಿಗೋಸ್ಕರ ಹಣ ಸಂಗ್ರಹಣೆ ವಿಚಾರದ ಕುರಿತು, ನಾನು ಗಲಾತ್ಯ ಪ್ರಾಂತ್ಯದ ಸಭೆಗಳಿಗೆ ಹೇಳಿಕೊಟ್ಟಿರುವ ಕ್ರಮದಂತೆ ನೀವೂ ಮಾಡಿರಿ.


ಆದಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿಕೊಳ್ಳಿರಿ.


ನಿಮ್ಮ ಮೇಲೆ ಬಂದಿರುವ ಸಂಕಟಗಳಲ್ಲಿ ಒಬ್ಬರೂ ಚಂಚಲರಾಗದಂತೆ ನಿಮ್ಮನ್ನು ದೃಢಪಡಿಸುವುದಕ್ಕೂ ನಿಮ್ಮ ನಂಬಿಕೆಯ ವಿಷಯವಾಗಿ ಉತ್ತೇಜನಪಡಿಸುವುದಕ್ಕೂ ನಮ್ಮ ಸಹೋದರನೂ, ಕ್ರಿಸ್ತನ ಸುವಾರ್ತೆಯ ಕಾರ್ಯದಲ್ಲಿ ದೇವರ ಸೇವಕನೂ ಆಗಿರುವ ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿದೆವು.


ನನ್ನ ಜೊತೆಯಲ್ಲಿರುವ ಎಲ್ಲಾ ಸಹೋದರರೂ ಗಲಾತ್ಯದಲ್ಲಿರುವ ಸಭೆಗಳಿಗೆ ಬರೆಯುವುದೇನೆಂದರೆ,


ಆಗ ಅವರು ಸೆರೆಮನೆಯೊಳಗಿಂದ ಹೊರಟು ಲುದ್ಯಳ ಮನೆಗೆ ಬಂದು ಸಹೋದರರನ್ನು ನೋಡಿ ಅವರನ್ನು ಧೈರ್ಯಗೊಳಿಸಿ ಅಲ್ಲಿಂದ ಹೊರಟುಹೋದರು.


ಆಗ ಪರಲೋಕದಿಂದ ಬಂದ ಒಬ್ಬ ದೇವದೂತನು ಆತನಿಗೆ ಕಾಣಿಸಿಕೊಂಡು, ಆತನನ್ನು ಬಲಪಡಿಸಿದನು.


ಆದರೆ ನಿನ್ನ ನಂಬಿಕೆ ಕುಂದಿಹೋಗಬಾರದೆಂದು ನಾನು ನಿನ್ನ ವಿಷಯದಲ್ಲಿ ದೇವರಿಗೆ ವಿಜ್ಞಾಪನೆ ಮಾಡಿಕೊಂಡೆನು. ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ದೃಢಪಡಿಸು” ಎಂದು ಹೇಳಿದನು.


ಮೇದ್ಯನಾದ ದಾರ್ಯಾವೆಷನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ನಾನೇ ಮೀಕಾಯೇಲನಿಗೆ ಬೆಂಬಲಕೊಟ್ಟು ಆಶ್ರಯನಾಗಿ ನಿಂತೆನು.


ಅವರ ನೆರೆಯವರೆಲ್ಲರೂ ಕಾಣಿಕೆಗಳನ್ನು ಕೊಟ್ಟಿದ್ದಲ್ಲದೆ ಅವರಿಗೆ ಬೆಳ್ಳಿಯ ಸಾಮಾನು, ಬಂಗಾರ, ಸರಕು, ಪಶು, ಶ್ರೇಷ್ಠವಸ್ತು ಇವುಗಳನ್ನೂ ಕೊಟ್ಟು ಸಹಾಯಮಾಡಿದರು.


ಯೆಹೋಶುವನೇ ಈ ಜನರ ನಾಯಕನಾಗಿ ಹೋಗಿ ನೀನು ನೋಡುವ ದೇಶವನ್ನು ಅವರಿಗೆ ಸ್ವಾಧೀನಪಡಿಸುವನು. ಅವನಿಗೆ ಈ ಅಧಿಕಾರವನ್ನು ಕೊಡಬೇಕು; ಅವನು ದೃಢವಾಗುವಂತೆ ಅವನನ್ನು ಧೈರ್ಯಪಡಿಸಬೇಕು” ಎಂದು ಉತ್ತರಕೊಟ್ಟನು.


ನಾನು ಅಮೂಲಾಗ್ರವಾಗಿ ವಿಚಾರಿಸಿದ ಅವೆಲ್ಲವನ್ನು ನಿನಗೋಸ್ಕರ ಕ್ರಮಬದ್ಧವಾಗಿ ಬರೆಯುವುದು ಒಳ್ಳೆಯದೆಂದು ನನಗೂ ತೋಚಿತು.


ಫ್ರುಗ್ಯ, ಪಂಫುಲ್ಯ, ಐಗುಪ್ತ ಮತ್ತು ಕುರೇನೆಯ ಮಗ್ಗುಲಲ್ಲಿರುವ ಲಿಬ್ಯ, ಈ ಸೀಮೆಗಳಲ್ಲಿ ವಾಸವಾಗಿರುವವರೂ, ರೋಮಾಪುರದಿಂದ ಬಂದಿರುವ ಯೆಹೂದ್ಯರೂ, ಯೆಹೂದ್ಯ ಮತಾವಲಂಬಿಗಳೂ, ಕ್ರೇತ್ಯರೂ, ಅರಬ್ಬೀದೇಶದವರೂ


ಅಪೊಲ್ಲೋಸನು ಕೊರಿಂಥದಲ್ಲಿದ್ದಾಗ ಪೌಲನು ಮಲೆನಾಡಿನಲ್ಲಿ ಸಂಚಾರಮಾಡಿ ಎಫೆಸಕ್ಕೆ ಬಂದು ಕೆಲವು ಮಂದಿ ಶಿಷ್ಯರನ್ನು ಕಂಡು;


ನಾವು ಮೊದಲು ಹೇಳಿದಂತೆಯೇ ಈಗಲೂ ನಾನು ತಿರುಗಿ ಹೇಳುತ್ತೇನೆ. ನೀವು ಸ್ವೀಕರಿಸಿದ ಸುವಾರ್ತೆಗೆ ವಿರುದ್ಧವಾದದ್ದನ್ನು ಯಾವನಾದರೂ ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು