Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 18:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅವನು ಕರ್ತನ ಮಾರ್ಗದ ವಿಷಯದಲ್ಲಿ ಉಪದೇಶ ಹೊಂದಿದವನಾಗಿದ್ದನು ಮತ್ತು ಆಸಕ್ತ ಮನಸ್ಸುಳ್ಳವನಾಗಿದ್ದು ಯೋಹಾನನು ಮಾಡಿಸಿದ ದೀಕ್ಷಾಸ್ನಾನವನ್ನು ಮಾತ್ರ ಬಲ್ಲವನಾದರೂ ಯೇಸುವಿನ ಸಂಗತಿಗಳನ್ನು ಸೂಕ್ಷ್ಮವಾಗಿ ಹೇಳಿ ಉಪದೇಶಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಪ್ರಭುವಿನ ಮಾರ್ಗದ ಬಗ್ಗೆ ಅವನಿಗೆ ಉಪದೇಶಮಾಡಲಾಗಿತ್ತು. ಸ್ನಾನಿಕ ಯೊವಾನ್ನನ ಸ್ನಾನದೀಕ್ಷೆ ಒಂದನ್ನೇ ಅವನು ಬಲ್ಲವನಾಗಿದ್ದನು. ಆದರೂ ಯೇಸುಸ್ವಾಮಿಯ ಬಗ್ಗೆ ಉತ್ಸಾಹಭರಿತನಾಗಿ ಉಪದೇಶಮಾಡಿ ಚ್ಯುತಿಯಿಲ್ಲದೆ ಬೋಧಿಸುತ್ತಾ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅವನು ಕರ್ತನ ಮಾರ್ಗದ ವಿಷಯದಲ್ಲಿ ಉಪದೇಶ ಹೊಂದಿದವನಾಗಿದ್ದನು; ಮತ್ತು ಆಸಕ್ತ ಮನಸ್ಸುಳ್ಳವನಾಗಿದ್ದು ಯೋಹಾನನು ಮಾಡಿಸಿದ ದೀಕ್ಷಾಸ್ನಾನವನ್ನು ಮಾತ್ರ ಬಲ್ಲವನಾದಾಗ್ಯೂ ಯೇಸುವಿನ ಸಂಗತಿಗಳನ್ನು ಸೂಕ್ಷ್ಮವಾಗಿ ಹೇಳಿ ಉಪದೇಶಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಅಪೊಲ್ಲೋಸನು ಯಾವಾಗಲೂ ಬಹು ಉತ್ಸುಕತೆಯಿಂದ ಯೇಸುವಿನ ಬಗ್ಗೆ ಜನರಿಗೆ ಉಪದೇಶಿಸುತ್ತಿದ್ದನು. ಯೇಸುವಿನ ಬಗ್ಗೆ ಅಪೊಲ್ಲೋಸನು ಹೇಳಿದ ಸಂಗತಿಗಳು ಸರಿಯಾಗಿದ್ದವು. ಆದರೆ ಸ್ನಾನಿಕ ಯೋಹಾನನ ದೀಕ್ಷಾಸ್ನಾನವೊಂದೇ ಇವನಿಗೆ ಗೊತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಇವನು ಕರ್ತ ಯೇಸುವಿನ ಮಾರ್ಗದ ಬಗ್ಗೆ ಉಪದೇಶ ಹೊಂದಿದ್ದನು. ಯೋಹಾನನ ದೀಕ್ಷಾಸ್ನಾನವನ್ನು ಮಾತ್ರವೇ ತಿಳಿದವನಾಗಿದ್ದನು. ಇವನು ಆತ್ಮದಲ್ಲಿ ಉತ್ಸಾಹಭರಿತನಾಗಿ ಯೇಸುವಿನ ವಿಷಯದಲ್ಲಿ ಧೈರ್ಯವಾಗಿ ಬೋಧಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಧನಿಯಾಚ್ಯಾ ವಿಶಯಾತ್ ತೆನಿ ಬರೆ ಶಿಕುನ್ ಘೆಟಲ್ಯಾನ್, ಅನಿ ತೊ ಲೈ ಉಮ್ಮೆದಿಚ್ಯಾ ಮನಾನ್ ಜೆಜುಚ್ಯಾ ವಿಶಯಾತ್ ಸಮಾಕರುನ್ ಶಿಕಾಪಾ ಶಿಕ್ವಿತ್ ಹೊತ್ತೊ, ತೆಕಾ ಜುವಾಂವಾಚ್ಯಾ ಬಾಲ್ತಿಮಾಚ್ಯಾ ವಿಶಯಾತ್ ತವ್ಡೆಚ್ ಗೊತ್ತ್ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 18:25
27 ತಿಳಿವುಗಳ ಹೋಲಿಕೆ  

ಅವನು; “ನೀವು ಏನನ್ನು ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡಿರಿ” ಎಂದು ಕೇಳಿದ್ದಕ್ಕೆ ಅವರು; “ಯೋಹಾನನ ಬೋಧನೆಯನ್ನು ನಂಬಿ ದೀಕ್ಷಾಸ್ನಾನಮಾಡಿಸಿಕೊಂಡೆವು” ಅಂದರು.


ಜಾಗ್ರತೆ ಬೇಕಾದಲ್ಲಿ ಆಲಸ್ಯವಾಗಿರದೆ ಆಸಕ್ತಚಿತ್ತರಾಗಿದ್ದು ಕರ್ತನ ಸೇವೆ ಮಾಡುವವರಾಗಿರಿ.


ಜ್ಞಾನಿಗಳು ಈ ಸಂಗತಿಗಳನ್ನು ಗ್ರಹಿಸುವರು; ವಿವೇಕಿಗಳು ಅವುಗಳನ್ನು ತಿಳಿದುಕೊಳ್ಳುವರು. ಯೆಹೋವನ ಮಾರ್ಗಗಳು ಸತ್ಯವಾದವುಗಳು; ಅವುಗಳಲ್ಲಿ ಸನ್ಮಾರ್ಗಿಗಳು ನಡೆಯುವರು, ದುರ್ಮಾರ್ಗಿಗಳು ಅವುಗಳನ್ನು ಬಿಟ್ಟು ಎಡವಿ ಬೀಳುವರು.


ಆ ಕಾಲದಲ್ಲಿ ಈ ಮಾರ್ಗದ ವಿಷಯವಾಗಿ ಬಹಳ ಗಲಭೆ ಹುಟ್ಟಿತು.


ಕೆಲವರು ತಮ್ಮ ಮನಸ್ಸುಗಳನ್ನು ಕಠಿಣಮಾಡಿಕೊಂಡು ಒಡಂಬಡದೆ ಗುಂಪುಕೂಡಿದ ಜನರ ಮುಂದೆ ಈ ಮಾರ್ಗವು ಕೆಟ್ಟದ್ದೆಂದು ಹೇಳಲು ಅವನು ಅವರನ್ನು ಬಿಟ್ಟುಹೋಗಿ ಶಿಷ್ಯರನ್ನು ಬೇರೆಮಾಡಿ ತುರನ್ನ ಎಂಬುವನ ತರ್ಕಶಾಲೆಯಲ್ಲಿ ಪ್ರತಿದಿನವೂ ವಾದಿಸಿದನು.


ಈ ಮಾರ್ಗವನ್ನು ಹಿಡಿದವರು ಯಾರಾದರೂ ಸಿಕ್ಕಿದರೆ ಅವರು ಗಂಡಸರಾದರೂ ಸರಿಯೇ, ಹೆಂಗಸರಾದರೂ ಸರಿಯೇ ನಾನು ಅವರಿಗೆ ಬೇಡಿಹಾಕಿಸಿ ಯೆರೂಸಲೇಮಿಗೆ ತರುವಂತೆ, ದಮಸ್ಕದಲ್ಲಿರುವ ಸಭಾಮಂದಿರದವರಿಗೆ ನೀನು, ಪತ್ರವನ್ನು ಕೊಡಬೇಕು ಎಂದು ಅವನನ್ನು ಬೇಡಿಕೊಂಡನು.


ಇವರು ಬಂದು, “ಬೋಧಕನೇ ನೀನು ಸತ್ಯವಂತನು, ಯಾವ ಮನುಷ್ಯನನ್ನು ಲಕ್ಷಿಸದವನೂ, ಮುಖದಾಕ್ಷಿಣ್ಯ ತೋರಿಸದವನೂ, ಸತ್ಯಕ್ಕನುಸಾರವಾಗಿ ದೈವಮಾರ್ಗವನ್ನು ಬೋಧಿಸುವವನೂ ಎಂದು ನಾವು ಬಲ್ಲೆವು. ಕೈಸರನಿಗೆ ಸುಂಕ ಕೊಡುವುದು ಧರ್ಮಸಮ್ಮತವೋ? ಅಲ್ಲವೋ? ನಾವದನ್ನು ಕೊಡಬೇಕೋ ಬೇಡವೋ?” ಎಂದು ಆತನನ್ನು ಕೇಳಿದರು.


ಹೀಗಿರಲು ನೀವು ಸ್ವಸ್ಥವಾಗಬೇಕಾದರೆ ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ,, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಸಾಮರ್ಥ್ಯವುಳ್ಳದಾಗಿರುತ್ತದೆ.


ಯುದ್ಧಕ್ಕೆ ಹೋಗುವ ಸೈನಿಕನು ಲೋಕವ್ಯವಹಾರದಲ್ಲಿ ಸಿಕ್ಕಿಕೊಳ್ಳದೆ, ತನ್ನನ್ನು ಸೈನ್ಯದಲ್ಲಿ ಸೇರಿಸಿಕೊಂಡವನನ್ನು ಮೆಚ್ಚಿಸುವುದಕ್ಕಾಗಿ ಪ್ರಯಾಸ ಪಡುತ್ತಿರುವನಲ್ಲವೇ.


ಪೌಲನೂ, ನಾವೂ ಹೋಗುತ್ತಿರುವಾಗ ಅವಳು ನಮ್ಮ ಹಿಂದೆ ಬಂದು; “ಈ ಮನುಷ್ಯರು ಪರಾತ್ಪರನಾದ ದೇವರ ಸೇವಕರು; ನಿಮಗೆ ರಕ್ಷಣೆಯ ಮಾರ್ಗವನ್ನು ಸಾರುತ್ತಾರೆ” ಎಂದು ಕೂಗಿ ಹೇಳುತ್ತಿದ್ದಳು.


ಅವನನ್ನು ದೃಷ್ಟಿಸಿನೋಡಿ; “ಸೈತಾನನ ಮಗನೇ, ಮೋಸದಿಂದಲೂ, ಎಲ್ಲಾ ಕೆಟ್ಟತನದಿಂದಲೂ ತುಂಬಿರುವವನೇ, ಎಲ್ಲಾ ನೀತಿಗೂ ವಿರೋಧಿಯೇ, ನೀನು ಕರ್ತನ ನೇರವಾದ ಮಾರ್ಗಗಳನ್ನು ಡೊಂಕು ಮಾಡುವುದನ್ನು ಬಿಡುವುದಿಲ್ಲವೋ?


ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡ ಜನರೆಲ್ಲರೂ, ಸುಂಕದವರೂ ಸಹ ಆತನ ಉಪದೇಶವನ್ನು ಕೇಳಿದಾಗ, ದೇವರು ನೀತಿವಂತನೆಂದು ಒಪ್ಪಿಕೊಂಡರು.


“‘ಕರ್ತನ ದಾರಿಯನ್ನು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ’ ಎಂದು ಅಡವಿಯಲ್ಲಿ ಕೂಗುವವನ ಶಬ್ದವದೆ” ಎಂಬುದೇ.


ಯೆಹೋವನು, “ದಾರಿಗಳು ಕೂಡುವ ಸ್ಥಳದಲ್ಲಿ ನಿಂತುಕೊಂಡು ನೋಡಿ ಪುರಾತನ ಮಾರ್ಗಗಳು ಯಾವುವು. ಆ ಸನ್ಮಾರ್ಗವು ಎಲ್ಲಿ? ಎಂದು ವಿಚಾರಿಸಿ ಅದರಲ್ಲೇ ನಡೆಯಿರಿ; ಇದರಿಂದ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು ಎಂದು ಅಪ್ಪಣೆಕೊಟ್ಟಾಗ ಅವರು ‘ಅದರಲ್ಲಿ ನಾವು ನಡೆಯುವುದೇ ಇಲ್ಲ’ ಎಂದರು.


ಇಗೋ ಒಂದು ವಾಣಿ! “ಅರಣ್ಯದಲ್ಲಿ ಯೆಹೋವನ ದಾರಿಯನ್ನು ಸರಿಪಡಿಸಿರಿ, ಅಡವಿಯಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ಸರಿಪಡಿಸಿರಿ”


ಯೆಹೋವನ ಧರ್ಮಶಾಸ್ತ್ರವನ್ನು ಅನುಸರಿಸಿ, ಸದಾಚಾರಿಗಳಾಗಿ ನಡೆಯುವವರು ಧನ್ಯರು.


ನಾನಾದರೋ ನಿಮಗೋಸ್ಕರವಾಗಿ ಯೆಹೋವನನ್ನು ಪ್ರಾರ್ಥಿಸುತ್ತಾ, ಆತನ ಉತ್ತಮ ನೀತಿಮಾರ್ಗವನ್ನು ನಿಮಗೆ ತೋರಿಸಿಕೊಡುವುದನ್ನು ಬಿಡುವುದೇ ಇಲ್ಲ; ಬಿಟ್ಟರೆ ಆತನ ದೃಷ್ಟಿಯಲ್ಲಿ ಪಾಪಿಯಾಗಿರುವೆನು.


ಇವರೂ ತಮ್ಮ ಹಿರಿಯರಂತೆ ಜಾಗರೂಕತೆಯಿಂದ ಯೆಹೋವನಾದ ನನ್ನ ಮಾರ್ಗದಲ್ಲಿ ನಡೆಯುವರೋ ಇಲ್ಲವೋ ಎಂದು ಈ ಜನಾಂಗಗಳ ಮೂಲಕವಾಗಿ ಪರೀಕ್ಷಿಸುವೆನು” ಅಂದನು.


ಅವನು ತನ್ನ ಮಕ್ಕಳಿಗೂ ಮನೆಯವರಿಗೂ ನ್ಯಾಯ ನೀತಿಗಳನ್ನು ತಿಳಿಸಿ ಯೆಹೋವನ ಮಾರ್ಗವನ್ನು ಅನುಸರಿಸಬೇಕೆಂದು ಬೋಧಿಸುವಂತೆ ಅವನನ್ನು ನಾನು ಆರಿಸಿಕೊಂಡೆನಲ್ಲಾ; ಅವನು ಹೀಗೆ ಮಾಡುವುದರಿಂದ ಯೆಹೋವನಾದ ನನ್ನ ವಾಗ್ದಾನವು ನೆರವೇರುವುದು” ಅಂದುಕೊಂಡನು.


ಇದರಿಂದ ಭೂಲೋಕದಲ್ಲಿ ನಿನ್ನ ಪರಿಪಾಲನ ಮಾರ್ಗವೂ, ಎಲ್ಲಾ ಜನಾಂಗಗಳಲ್ಲಿ ನಿನ್ನ ರಕ್ಷಣೆಯೂ ಪ್ರಸಿದ್ಧವಾಗುವವು.


ನಿನಗೆ ಉಪದೇಶಿಸಿರುವ ವಿಷಯಗಳು ಸತ್ಯವಾದವುಗಳೆಂದು ಇದರಿಂದ ನೀನು ಸ್ಪಷ್ಟವಾಗಿ ತಿಳಿದುಕೊಳ್ಳಬಹುದು.


ಅವನು ಸಭಾಮಂದಿರದಲ್ಲಿ ಧೈರ್ಯದಿಂದ ಮಾತನಾಡುವುದಕ್ಕೆ ಪ್ರಾರಂಭಿಸಿದನು. ಅವನ ಮಾತುಗಳನ್ನು ಪ್ರಿಸ್ಕಿಲ್ಲಳೂ ಮತ್ತು ಅಕ್ವಿಲನೂ ಕೇಳಿ ಅವನನ್ನು ತಮ್ಮ ಮನೆಗೆ ಕರೆದುಕೊಂಡು ಹೋಗಿ ದೇವರ ಮಾರ್ಗವನ್ನು ಅವನಿಗೆ ಇನ್ನೂ ಸೂಕ್ಷ್ಮವಾಗಿ ವಿವರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು