Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 18:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅವನು ಸಭಾಮಂದಿರದಲ್ಲಿ ಧೈರ್ಯದಿಂದ ಮಾತನಾಡುವುದಕ್ಕೆ ಪ್ರಾರಂಭಿಸಿದನು. ಅವನ ಮಾತುಗಳನ್ನು ಪ್ರಿಸ್ಕಿಲ್ಲಳೂ ಮತ್ತು ಅಕ್ವಿಲನೂ ಕೇಳಿ ಅವನನ್ನು ತಮ್ಮ ಮನೆಗೆ ಕರೆದುಕೊಂಡು ಹೋಗಿ ದೇವರ ಮಾರ್ಗವನ್ನು ಅವನಿಗೆ ಇನ್ನೂ ಸೂಕ್ಷ್ಮವಾಗಿ ವಿವರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಇವನು ಪ್ರಾರ್ಥನಾಮಂದಿರದಲ್ಲಿ ಧೈರ್ಯದಿಂದ ಮಾತನಾಡುತ್ತಿದ್ದಾಗ, ಪ್ರಿಸ್ಸಿಲ ಮತ್ತು ಅಕ್ವಿಲರು ಅವನ ಬೋಧನೆಯನ್ನು ಕೇಳಿದರು. ಅವನನ್ನು ಮನೆಗೆ ಕರೆದುಕೊಂಡು ಹೋಗಿ ಪ್ರಭುವಿನ ಮಾರ್ಗವನ್ನು ಇನ್ನೂ ಸೂಕ್ಷ್ಮವಾಗಿ ವಿವರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅವನು ಸಭಾಮಂದಿರದಲ್ಲಿ ಧೈರ್ಯದಿಂದ ಮಾತಾಡುವದಕ್ಕೆ ಪ್ರಾರಂಭಿಸಿದನು. ಅವನ ಮಾತುಗಳನ್ನು ಪ್ರಿಸ್ಕಿಲ್ಲಳೂ ಅಕ್ವಿಲನೂ ಕೇಳಿ ಅವನನ್ನು ತಮ್ಮ ಮನೆಗೆ ಕರೆದುಕೊಂಡು ಹೋಗಿ ದೇವರ ಮಾರ್ಗವನ್ನು ಅವನಿಗೆ ಇನ್ನೂ ಸೂಕ್ಷ್ಮವಾಗಿ ವಿವರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಅಪೊಲ್ಲೋಸನು ಸಭಾಮಂದಿರದಲ್ಲಿ ಬಹು ಧೈರ್ಯವಾಗಿ ಮಾಡಿದ ಉಪದೇಶವನ್ನು ಕೇಳಿದ ಪ್ರಿಸ್ಕಿಲ್ಲ ಮತ್ತು ಅಕ್ವಿಲ ಅವನನ್ನು ತಮ್ಮ ಮನೆಗೆ ಕರೆದುಕೊಂಡು ಹೋಗಿ, ದೇವರ ಮಾರ್ಗವನ್ನು ಆಳವಾಗಿ ಗ್ರಹಿಸಿಕೊಳ್ಳಲು ನೆರವು ನೀಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಇವನು ಸಭಾಮಂದಿರದಲ್ಲಿ ಧೈರ್ಯದಿಂದ ಬೋಧಿಸಲು ಪ್ರಾರಂಭಿಸಿದನು. ಆಗ ಪ್ರಿಸ್ಕಿಲ್ಲ ಮತ್ತು ಅಕ್ವಿಲರು ಅವನು ಮಾತನಾಡುವುದನ್ನು ಕೇಳಿ, ಅವನನ್ನು ತಮ್ಮ ಮನೆಗೆ ಆಮಂತ್ರಿಸಿದರು. ಅವರು ದೇವರ ಮಾರ್ಗವನ್ನು ಇನ್ನೂ ಹೆಚ್ಚಾದ ರೀತಿಯಲ್ಲಿ ಅಪೊಲ್ಲೋಸನಿಗೆ ವಿವರಿಸಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ತೆನಿ ಸಿನಾಗೊತ್ ತೊ ಧರ್ಯ್ಯಾನ್ ಬೊಲುಕ್ ಚಾಲು ಕರ್‍ಲ್ಯಾನ್, ಅಕ್ವಿಲ್ಲಾನ್ ಅನಿ ಪ್ರಿಸ್ಕಿಲ್ಲಾನ್ ಆಯ್ಕುನ್ ತೆಕಾ ಅಪ್ಲ್ಯಾ ಘರಾಕ್ ಬಲ್ವುನ್ ನ್ಹೆವ್ನ್ ತೆಕಾ ದೆವಾಚ್ಯಾ ವಿಶಯಾತ್ ಸಮಾ ಶಿಕಾಪ್ ಕರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 18:26
23 ತಿಳಿವುಗಳ ಹೋಲಿಕೆ  

ಆದುದರಿಂದ ಕ್ರಿಸ್ತನ ವಿಷಯವಾದ ಪ್ರಾಥಮಿಕ ಉಪದೇಶವನ್ನು ಬಿಟ್ಟು, ನಿರ್ಜೀವ ಕ್ರಿಯೆಗಳಿಂದ ಮಾನಸಾಂತರವೂ, ದೇವರಲ್ಲಿ ನಂಬಿಕೆಯೂ, ದೀಕ್ಷಾಸ್ನಾನಗಳ ಬೋಧನೆಯೂ, ಹಸ್ತಾರ್ಪಣೆಯೂ, ಸತ್ತವರಿಗೆ ಪುನರುತ್ಥಾನವೂ ಮತ್ತು ನಿತ್ಯವಾದ ನ್ಯಾಯತೀರ್ಪೂ ಉಂಟೆಂಬುದರ ಕುರಿತು ಪದೇಪದೇ ಅಸ್ತಿವಾರವನ್ನೆ ಹಾಕುತಿರದೆ ನಾವು ಪರಿಪಕ್ವತೆಯೆಡೆಗೆ ಸಾಗೋಣ.


ಕಣ್ಣು ಕೈಗೆ, “ನೀನು ನನಗೆ ಅವಶ್ಯವಿಲ್ಲವೆಂದೂ,” ತಲೆಯು “ಪಾದಗಳಿಗೆ ನೀವು ನನಗೆ ಅವಶ್ಯವಿಲ್ಲವೆಂದೂ” ಹೇಳುವುದಕ್ಕಾಗುವುದಿಲ್ಲ.


ಅವನು ಕರ್ತನ ಮಾರ್ಗದ ವಿಷಯದಲ್ಲಿ ಉಪದೇಶ ಹೊಂದಿದವನಾಗಿದ್ದನು ಮತ್ತು ಆಸಕ್ತ ಮನಸ್ಸುಳ್ಳವನಾಗಿದ್ದು ಯೋಹಾನನು ಮಾಡಿಸಿದ ದೀಕ್ಷಾಸ್ನಾನವನ್ನು ಮಾತ್ರ ಬಲ್ಲವನಾದರೂ ಯೇಸುವಿನ ಸಂಗತಿಗಳನ್ನು ಸೂಕ್ಷ್ಮವಾಗಿ ಹೇಳಿ ಉಪದೇಶಿಸಿದನು.


ಹೀಗಿರಲಾಗಿ ಅವರು ಬಹುಕಾಲ ಅಲ್ಲಿದ್ದು ಕರ್ತನು ಅವರ ಕೈಯಿಂದ ಸೂಚಕಕಾರ್ಯಗಳೂ, ಅದ್ಭುತಕಾರ್ಯಗಳೂ ನಡೆಯುವಂತೆ ದಯಪಾಲಿಸಿ ತನ್ನ ಕೃಪಾವಾಕ್ಯಕ್ಕೆ ಸಾಕ್ಷಿಕೊಟ್ಟಿದ್ದರಿಂದ ಆತನ ಮೇಲೆ ಭರವಸವಿಟ್ಟು ಧೈರ್ಯದಿಂದ ಮಾತನಾಡುತ್ತಿದ್ದರು.


ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ಕುರಿತಾದ ಕೃಪೆಯಲ್ಲಿಯೂ ಜ್ಞಾನದಲ್ಲಿಯೂ ನೀವು ಅಭಿವೃದ್ಧಿ ಹೊಂದಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆಯುಂಟಾಗಲಿ. ಆಮೆನ್.


ಯಾವನೂ ತನ್ನನ್ನು ತಾನೇ ಮೋಸಗೊಳಿಸಿಕೊಳ್ಳದಿರಲಿ ನಿಮ್ಮಲ್ಲಿ ಯಾವನಾದರೂ ಲೋಕಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿಕೊಳ್ಳುವುದಾದರೆ ಅವನು ಜ್ಞಾನಿಯಾಗುವುದಕ್ಕಾಗಿ “ಮೂರ್ಖನಾಗಲಿ”


ಅವರು ಅವನಿಗೆ ಒಂದು ದಿನವನ್ನು ಗೊತ್ತುಮಾಡಲು, ಬಹುಮಂದಿ ಅವನ ಬಿಡಾರದಲ್ಲಿ ಅವನ ಬಳಿಗೆ ಬಂದರು. ಅವನು ಬೆಳಗ್ಗಿನಿಂದ ಸಾಯಂಕಾಲದ ವರೆಗೂ ದೇವರ ರಾಜ್ಯವನ್ನು ಕುರಿತು ಪ್ರಾಮಾಣಿಕವಾಗಿ ಸಾಕ್ಷಿಹೇಳುತ್ತಾ, ಮೋಶೆಯ ಧರ್ಮಶಾಸ್ತ್ರವನ್ನೂ, ಪ್ರವಾದಿಗಳ ಗ್ರಂಥಗಳನ್ನೂ, ಆಧಾರಮಾಡಿಕೊಂಡು ಯೇಸುವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಇದ್ದನು.


ಅದಕ್ಕೆ ಅವನು, “ಯಾರಾದರೂ ನನಗೆ ಅರ್ಥ ತಿಳಿಸಿಕೊಡದ ಹೊರತು ಅದು ನನಗೆ ಹೇಗೆ ತಿಳಿದೀತು?” ಎಂದು ಹೇಳಿ, ನೀನು ರಥವನ್ನು ಹತ್ತಿ ನನ್ನ ಬಳಿಯಲ್ಲಿ ಕುಳಿತುಕೋ ಎಂಬುದಾಗಿ ಫಿಲಿಪ್ಪನನ್ನು ಕೇಳಿಕೊಂಡನು.


ಯಾರಿಗಾದರೂ ಆತನ ಚಿತ್ತದಂತೆ ನಡೆಯುವುದಕ್ಕೆ ಮನಸ್ಸಿದೆಯೋ ಅವರಿಗೆ ಈ ಬೋಧನೆಯು ದೇವರಿಂದ ಬಂದ್ದದ್ದೋ ಅಥವಾ ನಾನೇ ಮಾತನಾಡುತ್ತೇನೋ ಎಂಬುದು ಗೊತ್ತಾಗುವುದು.


ಮೋಶೆಯ ಮತ್ತು ಎಲ್ಲಾ ಪ್ರವಾದಿಗಳ ಗ್ರಂಥಗಳು ಮೊದಲುಗೊಂಡು ಸಮಸ್ತ ಗ್ರಂಥಗಳಲ್ಲಿ ತನ್ನ ವಿಷಯವಾಗಿರುವ ಸೂಚನೆಗಳನ್ನು ಅವರಿಗೆ ವಿವರಿಸಿದನು.


ಅದಕ್ಕವನು, ‘ಇದ್ದವರಿಗೆಲ್ಲಾ ಕೊಡಲ್ಪಡುವುದು, ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವುದು’ ಎಂದು ನಾನು ನಿಮಗೆ ಹೇಳುತ್ತೇನೆ


ನಿಮಗೆ ಸತ್ಯವಾಗಿ ಹೇಳುತ್ತೇನೆ ಯಾರು ಶಿಶುಭಾವದಿಂದ ದೇವರ ರಾಜ್ಯವನ್ನು ಅಂಗೀಕರಿಸುವುದಿಲ್ಲವೋ ಅವನು ಅದರಲ್ಲಿ ಸೇರುವುದೇ ಇಲ್ಲ” ಎಂದು ಹೇಳಿದನು.


ಸ್ವರವೆತ್ತಿ ಕೂಗು, ಸಂಕೋಚಪಡಬೇಡ, ಕೊಂಬಿನಂತೆ ಧ್ವನಿಗೈದು ನನ್ನ ಜನರಿಗೆ ಅವರ ದ್ರೋಹಗಳನ್ನು ತಿಳಿಯಪಡಿಸು. ಯಾಕೋಬ ವಂಶದವರಿಗೆ ಅವರ ಪಾಪಗಳನ್ನು ತಿಳಿಸು.


ಕೇಳುವ ಕಿವಿಗೆ ಮುಟ್ಟುವ ಬುದ್ಧಿವಾದವು ಹೊನ್ನಿನ ಮುರುವಿಗೂ, ಅಪರಂಜಿಯ ಆಭರಣಕ್ಕೂ ಸಮಾನ.


ಜ್ಞಾನಿಗೆ ಉಪದೇಶಿಸಿದರೆ ಹೆಚ್ಚು ಜ್ಞಾನವನ್ನು ಹೊಂದುವನು, ನೀತಿವಂತನಿಗೆ ಬೋಧಿಸಿದರೆ ಹೆಚ್ಚು ತಿಳಿವಳಿಕೆಯನ್ನು ಪಡೆಯುವನು.


ಜ್ಞಾನಿಯು ಇವುಗಳನ್ನು ಕೇಳಿ ಹೆಚ್ಚಾದ ಪಾಡಿಂತ್ಯವನ್ನು ಹೊಂದುವನು, ವಿವೇಕಿಯು ಮತ್ತಷ್ಟು ಉಚಿತಾಲೋಚನೆಯನ್ನು ಹೊಂದುವನು.


ಒಬ್ಬನು ತಾನು ಏನಾದರೂ ತಿಳಿದುಕೊಂಡಿದ್ದೇನೆಂದು ಭಾವಿಸುವುದಾದರೆ ಅವನು ತಿಳಿಯಬೇಕಾದ ರೀತಿಯಿಂದ ಇನ್ನೂ ತಿಳಿದುಕೊಂಡಿರುವುದಿಲ್ಲ.


ಪೌಲನು ಇನ್ನು ಅನೇಕ ದಿನಗಳ ಕಾಲ ಅಲ್ಲಿದ್ದ ಅನಂತರ ಸಹೋದರರಿಂದ ಅಪ್ಪಣೆತೆಗೆದುಕೊಂಡು ತನಗೆ ದೀಕ್ಷೆ ಇದ್ದುದರಿಂದ ಕೆಂಖ್ರೆಯ ಪಟ್ಟಣದಲ್ಲಿ ಕ್ಷೌರಮಾಡಿಸಿಕೊಂಡು ಹಡಗನ್ನು ಹತ್ತಿ ಸಿರಿಯಕ್ಕೆ ಹೊರಟನು. ಪ್ರಿಸ್ಕಿಲ್ಲಳೂ ಮತ್ತು ಅಕ್ವಿಲನೂ ಅವನ ಸಂಗಡ ಹೊರಟರು.


ಆ ಪಟ್ಟಣದಲ್ಲಿ ಪೌಲನು ಸಭಾಮಂದಿರದೊಳಗೆ ಹೋಗಿ, ಮೂರು ತಿಂಗಳು ಅಲ್ಲೇ ದೇವರ ರಾಜ್ಯದ ವಿಷಯಗಳನ್ನು ಕುರಿತು, ವಾದಿಸುತ್ತಾ ಜನರನ್ನು ಒಡಂಬಡಿಸುತ್ತಾ ಧೈರ್ಯದಿಂದ ಮಾತನಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು