Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 18:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವನು ಪ್ರತಿ ಸಬ್ಬತ್ ದಿನವೂ ಸಭಾಮಂದಿರದಲ್ಲಿ ಚರ್ಚಿಸಿ ಯೆಹೂದ್ಯರನ್ನೂ ಗ್ರೀಕರನ್ನೂ ಒಡಂಬಡಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಪ್ರತಿ ಸಬ್ಬತ್‍ದಿನ ಅವನು ಪ್ರಾರ್ಥನಾಮಂದಿರದಲ್ಲಿ ಚರ್ಚಿಸುತ್ತಾ ಯೆಹೂದ್ಯರನ್ನು ಮತ್ತು ಗ್ರೀಕರನ್ನು ವಿಶ್ವಾಸಿಗಳನ್ನಾಗಿಸಲು ಪ್ರಯತ್ನಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವನು ಪ್ರತಿ ಸಬ್ಬತ್ ದಿನವೂ ಸಭಾಮಂದಿರದಲ್ಲಿ ಚರ್ಚಿಸಿ ಯೆಹೂದ್ಯರನ್ನೂ ಗ್ರೀಕರನ್ನೂ ಒಡಂಬಡಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಪ್ರತಿ ಸಬ್ಬತ್‌ದಿನದಂದು ಪೌಲನು ಸಭಾಮಂದಿರದಲ್ಲಿ ಯೆಹೂದ್ಯರೊಂದಿಗೂ ಗ್ರೀಕರೊಂದಿಗೂ ಚರ್ಚಿಸುತ್ತಾ ಯೇಸುವಿನಲ್ಲಿ ನಂಬಿಕೆ ಇಡುವಂತೆ ಅವರನ್ನು ಪ್ರೋತ್ಸಾಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಪ್ರತಿ ಸಬ್ಬತ್ ದಿನ ಸಭಾಮಂದಿರಕ್ಕೆ ಹೋಗಿ ಯೆಹೂದ್ಯರನ್ನೂ ಗ್ರೀಕರನ್ನೂ ವಿಶ್ವಾಸಿಗಳನ್ನಾಗಿಸಲು ಪ್ರೇರೇಪಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಹರ್ ಸಬ್ಬತ್‍ ದಿಸಾದಿಸಿ ಪಾವ್ಲುನ್ ದೆವಾಚ್ಯಾ ಲೊಕಾಂಚ್ಯಾ ಸಿನಾಗೊತ್ ಜುದೆವಾಂಚ್ಯಾ ವಾಂಗ್ಡಾ ಅನಿ ಗ್ರಿಕಾಂಚ್ಯಾ ವಾಂಗ್ಡಾ ಚರ್ಚಾ ಕರುನ್ ಎಕ್ ಕರುಚೆ ಮನುನ್ ಬಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 18:4
18 ತಿಳಿವುಗಳ ಹೋಲಿಕೆ  

ಆದ್ದರಿಂದ, ಕರ್ತನಲ್ಲಿ ಭಯವುಳ್ಳವರಾಗಿರಬೇಕೆಂದು ನಾವು, ಮನುಷ್ಯರನ್ನು ಒಡಂಬಡಿಸುತ್ತೇವೆ. ನಾವು ಎಂಥವರೆಂದು ದೇವರಿಗೆ ಪ್ರಕಟವಾಗಿದ್ದೇವೆ. ಅದು ನಿಮ್ಮ ಮನಸ್ಸಾಕ್ಷಿಗೆ ಕೂಡಾ ಗೊತ್ತಾಗಿದೆ ಎಂದು ನಂಬಿಕೊಂಡಿದ್ದೇನೆ.


ಅವರು ಅವನಿಗೆ ಒಂದು ದಿನವನ್ನು ಗೊತ್ತುಮಾಡಲು, ಬಹುಮಂದಿ ಅವನ ಬಿಡಾರದಲ್ಲಿ ಅವನ ಬಳಿಗೆ ಬಂದರು. ಅವನು ಬೆಳಗ್ಗಿನಿಂದ ಸಾಯಂಕಾಲದ ವರೆಗೂ ದೇವರ ರಾಜ್ಯವನ್ನು ಕುರಿತು ಪ್ರಾಮಾಣಿಕವಾಗಿ ಸಾಕ್ಷಿಹೇಳುತ್ತಾ, ಮೋಶೆಯ ಧರ್ಮಶಾಸ್ತ್ರವನ್ನೂ, ಪ್ರವಾದಿಗಳ ಗ್ರಂಥಗಳನ್ನೂ, ಆಧಾರಮಾಡಿಕೊಂಡು ಯೇಸುವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಇದ್ದನು.


ಆದುದರಿಂದ ಅವನು ಸಭಾಮಂದಿರದಲ್ಲಿ ಯೆಹೂದ್ಯರ ಮತ್ತು ಯೆಹೂದ್ಯ ಮತಾವಲಂಬಿಗಳೊಂದಿಗೆ ಮತ್ತು ಪ್ರತಿದಿನ ಪೇಟೆಯಲ್ಲಿ ಕಂಡುಬಂದವರ ಸಂಗಡಲೂ ಚರ್ಚಿಸಿದನು.


ಅದಕ್ಕೆ ಅಗ್ರಿಪ್ಪನು; “ಅಲ್ಪಪ್ರಯತ್ನದಿಂದ, ನನ್ನನ್ನು ಕ್ರೈಸ್ತನಾಗುವುದಕ್ಕೆ ಒಡಂಬಡಿಸುತ್ತೀಯಾ?” ಎಂದು ಹೇಳಲು


ಆದರೆ ಕೈಯಿಂದ ಮಾಡಿದ ಮೂರ್ತಿಗಳು ದೇವರುಗಳಲ್ಲವೆಂದು ಆ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಹೆಚ್ಚುಕಡಿಮೆ ಆಸ್ಯಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿಬಿಟ್ಟಿದ್ದಾನೆ ಎಂಬುದನ್ನು ನೀವು ನೋಡುತ್ತಿದ್ದೀರಿ, ಕೇಳುತ್ತಿದ್ದೀರಿ.


ಆ ಪಟ್ಟಣದಲ್ಲಿ ಪೌಲನು ಸಭಾಮಂದಿರದೊಳಗೆ ಹೋಗಿ, ಮೂರು ತಿಂಗಳು ಅಲ್ಲೇ ದೇವರ ರಾಜ್ಯದ ವಿಷಯಗಳನ್ನು ಕುರಿತು, ವಾದಿಸುತ್ತಾ ಜನರನ್ನು ಒಡಂಬಡಿಸುತ್ತಾ ಧೈರ್ಯದಿಂದ ಮಾತನಾಡಿದನು.


“ಇವನು ದೇವರನ್ನು ಧರ್ಮಶಾಸ್ತ್ರಕ್ಕೆ ವಿರುದ್ಧವಾಗಿ ಆರಾಧಿಸುವುದಕ್ಕೆ ಜನರನ್ನು ಒಡಂಬಡಿಸುತ್ತಾನೆಂದು” ದೂರುಹೇಳಿದರು.


ಆ ಸಭೆಯವರು ದೇವರ ವಾಕ್ಯವನ್ನು ಸಿದ್ಧ ಮನಸ್ಸಿನಿಂದ ಅಂಗೀಕರಿಸಿ ಇವರು ಹೇಳುವ ಮಾತು ಹೌದೋ ಅಲ್ಲವೋ ಎಂದು ಕಂಡುಕೊಳ್ಳಲು ಪ್ರತಿದಿನವೂ ಶಾಸ್ತ್ರಗ್ರಂಥಗಳನ್ನು ಶೋಧಿಸುತ್ತಿದ್ದದರಿಂದ ಅವರು ಥೆಸಲೋನಿಕದವರಿಗಿಂತ ಸದ್ಗುಣವುಳವರಾಗಿದ್ದರು.


ಆ ಮೇಲೆ ಅವರು ಪೆರ್ಗೆಯಿಂದ ಸಂಚಾರಮಾಡಿ ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್ ದಿನದಲ್ಲಿ ಅವರು ಸಭಾಮಂದಿರದೊಳಗೆ ಹೋಗಿ ಕುಳಿತುಕೊಂಡರು.


ಅಬ್ರಹಾಮನು ಅವನಿಗೆ, ‘ಅವರು ಮೋಶೆಯ ಮಾತನ್ನೂ ಪ್ರವಾದಿಗಳ ಮಾತನ್ನೂ ಕೇಳದಿದ್ದರೆ ಸತ್ತುಹೋಗಿದ್ದವನೊಬ್ಬನು ಜೀವಿತನಾಗಿ ಎದ್ದರೂ ಅವರು ಒಪ್ಪುವುದಿಲ್ಲ’ ಎಂದು ಹೇಳಿದನು.”


ಹೀಗಿರಲಾಗಿ ಆತನು ತಾನು ಬೆಳೆದುಬಂದ ಊರಾದ ನಜರೇತಿಗೆ ಬಂದು, ತನ್ನ ವಾಡಿಕೆಯ ಪ್ರಕಾರ ಸಬ್ಬತ್ ದಿನದಲ್ಲಿ ಸಭಾಮಂದಿರದೊಳಗೆ ಹೋಗಿ ಪವಿತ್ರಗ್ರಂಥವನ್ನು ಓದುವುದಕ್ಕಾಗಿ ಎದ್ದು ನಿಂತನು.


ಹಿಜ್ಕೀಯನು, ‘ನಮ್ಮ ದೇವರಾದ ಯೆಹೋವನು ಅಶ್ಶೂರದ ಅರಸನ ಕೈಯಿಂದ ನಮ್ಮನ್ನು ರಕ್ಷಿಸುವನು’ ಎಂಬ ನಂಬಿಕೆ ನಿಮ್ಮಲ್ಲಿ ಹುಟ್ಟಿಸುವುದಕ್ಕೆ ಪ್ರಯತ್ನಿಸುತ್ತಿರುವುದು ನಿಮ್ಮನ್ನು ಹಸಿವೆ ನೀರಡಿಕೆಗಳಿಂದ ಸಾಯಿಸುವುದಕ್ಕಾಗಿಯೇ ಅಲ್ಲದೆ ಮತ್ತ್ಯಾವುದಕ್ಕೂ ಅಲ್ಲ.


ಯೆಫೆತನ ಮೇರೆಯನ್ನು ದೇವರು ವಿಸ್ತರಿಸಲಿ, ಅವನು ಶೇಮನ ಗುಡಾರಗಳಲ್ಲಿ ವಾಸವಾಗಿರಲಿ, ಕಾನಾನನು ಅವರಿಗೆ ದಾಸನಾಗಿರಲಿ” ಎಂದನು.


ಅದಕ್ಕೆ ಯೆಹೂದ್ಯರು “ಇವನು ನಮಗೆ ಸಿಕ್ಕದ ಹಾಗೆ ಎಲ್ಲಿ ಹೋಗಬೇಕೆಂದಿದ್ದಾನೆ? ಗ್ರೀಕರ ನಡುವೆ ಚದುರಿಕೊಂಡಿರುವ ನಮ್ಮವರ ಬಳಿಗೆ ಹೋಗಿ ಆ ಗ್ರೀಕರಿಗೆ ಬೋಧನೆ ಮಾಡಬೇಕೆಂದಿರುವನೋ?


ಅವನು ಕೂಡಲೇ, ಸಭಾಮಂದಿರಗಳಲ್ಲಿ ಯೇಸುವಿನ ವಿಷಯವಾಗಿ ಆತನೇ ದೇವಕುಮಾರನೆಂದು ಸಾರುವುದಕ್ಕೆ ಪ್ರಾರಂಭಮಾಡಿದನು.


ಇಕೋನ್ಯದಲ್ಲಿ ಪೌಲ ಮತ್ತು ಬಾರ್ನಬರು ಅದೇ ಪ್ರಕಾರವಾಗಿ ಯೆಹೂದ್ಯರ ಸಭಾಮಂದಿರದೊಳಗೆ ಹೋಗಿ ಪ್ರೇರಣಾತ್ಮಕವಾದ ಬೋಧನೆ ನೀಡಿ ಮಾತನಾಡಿದ್ದರಿಂದ ಯೆಹೂದ್ಯರಲ್ಲಿಯೂ, ಗ್ರೀಕರಲ್ಲಿಯೂ ಬಹುಮಂದಿ ಕರ್ತನಾದ ಯೇಸುಕ್ರಿಸ್ತನನ್ನು ನಂಬುವವರಾದರು.


ಎಫೆಸಕ್ಕೆ ಬಂದಾಗ ಅವರನ್ನು ಅಲ್ಲೇ ಬಿಟ್ಟು, ತಾನು ಸಭಾಮಂದಿರದೊಳಕ್ಕೆ ಹೋಗಿ ಯೆಹೂದ್ಯರ ಸಂಗಡ ವಾದಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು