Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 18:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವರು ಎದುರಿಸಿ, ದೂಷಿಸಲಾಗಿ ಅವನು ತನ್ನ ವಸ್ತ್ರಗಳನ್ನು ಝಾಡಿಸಿ ಅವರಿಗೆ; “ನಿಮ್ಮ ನಾಶನಕ್ಕೆ ನೀವೇ ಹೊಣೆ. ನಾನು ಶುದ್ಧನು. ನಾನು ಇಂದಿನಿಂದ ಅನ್ಯಜನರ ಬಳಿಗೆ ಹೋಗುತ್ತೇನೆ” ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆದರೆ ಆ ಯೆಹೂದ್ಯರು ಅವನನ್ನು ಪ್ರತಿಭಟಿಸಿ ದೂಷಿಸಿದರು. ಆಗ ಪೌಲನು ತನ್ನ ಹೊದಿಕೆಯನ್ನು ಒದರಿ, “ನಿಮ್ಮ ವಿನಾಶಕ್ಕೆ ನೀವೇ ಹೊಣೆ; ಅದಕ್ಕೆ ನಾನು ಬಾಧ್ಯನಲ್ಲ. ಇಂದಿನಿಂದ ನಾನು ಅನ್ಯಧರ್ಮೀಯರ ಕಡೆಗೆ ಹೋಗುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವರು ಎದುರಿಸಿ ದೂಷಿಸಲಾಗಿ ಅವನು ತನ್ನ ವಸ್ತ್ರಗಳನ್ನು ಝಾಡಿಸಿ ಅವರಿಗೆ - ನಿಮ್ಮ ನಾಶನಕ್ಕೆ ನೀವೇ ಹೊಣೆ. ನಾನು ಇಂದಿನಿಂದ ಶುದ್ಧಮನಸ್ಸುಳ್ಳವನಾಗಿ ಅನ್ಯಜನರ ಬಳಿಗೆ ಹೋಗುತ್ತೇನೆ ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದರೆ ಯೆಹೂದ್ಯರು ಪೌಲನ ಉಪದೇಶವನ್ನು ತಿರಸ್ಕರಿಸಿ ದೂಷಣೆ ಮಾಡಿದರು. ಆದ್ದರಿಂದ ಪೌಲನು ತನ್ನ ಬಟ್ಟೆಗಳ ಧೂಳನ್ನು ಝಾಡಿಸಿ ಯೆಹೂದ್ಯರಿಗೆ, “ನೀವು ರಕ್ಷಣೆ ಹೊಂದದಿದ್ದರೆ, ಅದು ನಿಮ್ಮ ಸ್ವಂತ ತಪ್ಪು. ನನ್ನಿಂದ ಸಾಧ್ಯವಾದದ್ದನ್ನೆಲ್ಲ ನಾನು ಮಾಡಿದ್ದೇನೆ. ಇನ್ನು ಮೇಲೆ ನಾನು ಯೆಹೂದ್ಯರಲ್ಲದ ಜನರ ಬಳಿಗೆ ಹೋಗುತ್ತೇನೆ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದರೆ ಯೆಹೂದ್ಯರು ಪೌಲನನ್ನು ವಿರೋಧಿಸಿ ದೂಷಿಸಿದಾಗ, ಅವನು ಅವರನ್ನು ಪ್ರತಿಭಟಿಸುವಂತೆ ತನ್ನ ಬಟ್ಟೆಗಳನ್ನು ಝಾಡಿಸಿ, “ನಿಮ್ಮ ರಕ್ತವು ನಿಮ್ಮ ತಲೆಯ ಮೇಲೆ ಇರಲಿ. ನಿಮ್ಮ ವಿನಾಶಕ್ಕೆ ನೀವೇ ಹೊಣೆ. ಅದಕ್ಕೆ ನಾನು ಜವಾಬ್ದಾರನಲ್ಲ, ಇಂದಿನಿಂದ ನಾನು ಶುದ್ಧಮನಸ್ಸುಳ್ಳವನಾಗಿ ಯೆಹೂದ್ಯರಲ್ಲದವರ ಬಳಿಗೆ ಹೋಗುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಹೊಲ್ಯಾರ್ ಜುದೆವಾಂಚ್ಯಾ ಲೊಕಾನಿ ಪಾವ್ಲುಚಿ ಶಿಕಾಪಾ ಸಗ್ಳಿ ತಿರಸ್ಕಾರ್ ಕರ್‍ಲ್ಯಾನಿ, ಅನಿ ಗಾಳಿಯಾ ದಿಲ್ಯಾನಿ, ತೆಚಾ ಸಾಟ್ನಿ ಪಾವ್ಲುನ್ ಅಪ್ನಾಚಿ ಫಾಳಿಯಾಂಚಿ ಧುಳ್ ಝಾಡ್ಸುನ್ ಜುದೆವಾಂಚ್ಯಾ ಲೊಕಾಕ್ನಿ “ತುಮ್ಚೊ ನಾಸ್ ಹೊವ್ಕ್ ಮಿಯಾ ಜವಾಬ್ದಾರಿ ನ್ಹಯ್ ತುಮಿಚ್ ಕಾರನ್ ಹೆಜಾ ಮಾನಾ ಮಿಯಾ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ಜಗ್ಗೊಳ್ ಜಾತಾ!” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 18:6
37 ತಿಳಿವುಗಳ ಹೋಲಿಕೆ  

ಕೊಂಬಿನ ಧ್ವನಿಯನ್ನು ಕೇಳಿದ ಯಾರೇ ಆಗಲಿ ಎಚ್ಚರಗೊಳ್ಳದೆ, ಖಡ್ಗಕ್ಕೆ ಸಿಕ್ಕಿ ನಾಶವಾದರೆ, ತನ್ನ ಮರಣಕ್ಕೆ ತಾನೇ ಹೊಣೆಯಾಗುವನು.


ದಾವೀದನು, “ಈ ರಕ್ತಾಪರಾಧವು ನಿನ್ನ ತಲೆಯ ಮೇಲೆಯೇ ಇರಲಿ. ಯೆಹೋವನ ಅಭಿಷಿಕ್ತನನ್ನು ಕೊಂದುಹಾಕಿದೆನೆಂದು ನಿನ್ನ ಬಾಯೇ ನಿನಗೆ ವಿರೋಧವಾಗಿ ಸಾಕ್ಷಿ ಹೇಳಿತು” ಅಂದನು.


ಅಸಹ್ಯಕಾರ್ಯವನ್ನು ಮಾಡಿ, ಸಾಲಕ್ಕೆ ಬಡ್ಡಿತೆಗೆದು, ಲಾಭಕ್ಕೆ ಹಣಕೊಟ್ಟು, ಬಲಾತ್ಕಾರಿಯೂ ಮತ್ತು ರಕ್ತಸುರಿಸುವವನೂ ಆಗಿದ್ದರೆ ಜೀವಿಸುವನೇ? ಖಂಡಿತ ಜೀವಿಸುವುದಿಲ್ಲ; ಈ ದುರಾಚಾರಗಳನ್ನೆಲ್ಲಾ ನಡೆಸಿದನಲ್ಲವೇ? ಅವನು ಸಾಯುವುದು ಖಂಡಿತ; ತನ್ನ ಮರಣ ದಂಡನೆಗೆ ತಾನೇ ಕಾರಣ.


ಇದಲ್ಲದೆ ನನ್ನ ನಡು ಪಟ್ಟಿಯನ್ನು ಝಾಡಿಸಿ ಅವರಿಗೆ, “ಈಗ ಕೊಟ್ಟ ಮಾತನ್ನು ಕೈಕೊಳ್ಳದ ಪ್ರತಿಯೊಬ್ಬನನ್ನು ದೇವರು ಅವನ ಮನೆಯಿಂದಲೂ, ಸ್ವತ್ತಿನಿಂದಲೂ ಈ ಪ್ರಕಾರವೇ ಝಾಡಿಸಿ ಬಿಡಲಿ; ಅವನು ಝಾಡಿಸಲ್ಪಟ್ಟ ನಡುಪಟ್ಟಿಯಂತೆಯೇ ಬರಿದಾಗಲಿ” ಅಂದೆನು. ಕೂಡಲೆ ಸಭೆಯವರೆಲ್ಲಾ, “ಹಾಗೆಯೇ ಆಗಲಿ” ಎಂದು ಹೇಳಿ ಯೆಹೋವನನ್ನು ಕೊಂಡಾಡಿ ಕೊಟ್ಟ ಮಾತನ್ನು ಕೈಗೊಂಡರು.


ಪೌಲ ಬಾರ್ನಬರು ತಮ್ಮ ಕಾಲಿಗೆ ಹತ್ತಿದ್ದ ಧೂಳನ್ನು ಝಾಡಿಸಿಬಿಟ್ಟು ಇಕೋನ್ಯಕ್ಕೆ ಹೋದರು.


ಅವರು ಮಾಡುವ ಅಪರಿಮಿತವಾದ ಪಟಿಂಗತನದಲ್ಲಿ ನೀವು ಸೇರದೆ ಇದ್ದದ್ದಕ್ಕೆ ಅವರು ಆಶ್ಚರ್ಯಪಟ್ಟು ನಿಮ್ಮನ್ನು ದೂಷಿಸುತ್ತಾರೆ.


ಮತ್ತು ಯಾವ ಊರಿನವರಾದರೂ ನಿಮ್ಮನ್ನು ಸ್ವೀಕರಿಸಿಕೊಳ್ಳದೆ ಹೋದರೆ ಆ ಊರನ್ನು ನೀವು ಬಿಟ್ಟುಹೊರಡುವಾಗ ನಿಮ್ಮ ಕಾಲಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ; ಅದು ಅವರ ವಿರುದ್ಧ ಸಾಕ್ಷಿಯಾಗಿರಲಿ” ಅಂದನು.


ಜನರೆಲ್ಲಾ, “ಆತನ ರಕ್ತವು ನಮ್ಮ ಮತ್ತು ನಮ್ಮ ಮಕ್ಕಳ ಮೇಲೆ ಬರಲಿ” ಅಂದರು.


ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಧನ್ಯರು. ಮಹಿಮೆಯ ಆತ್ಮನಾಗಿರುವ ದೇವರಾತ್ಮನು ನಿಮ್ಮಲ್ಲಿ ನೆಲೆಗೊಂಡಿದ್ದಾನಲ್ಲಾ.


ಎದುರಿಸುವವರನ್ನು ಸೌಮ್ಯತೆಯಿಂದ ತಿದ್ದುವವನೂ ಆಗಿರಬೇಕು. ಬಹುಶಃ ದೇವರು ಆ ಎದುರಿಸುವವರ ಮನಸ್ಸನ್ನು ತನ್ನ ಕಡೆಗೆ ತಿರುಗಿಸಿ ಸತ್ಯದ ಜ್ಞಾನವನ್ನು ಅವರಿಗೆ ಕೊಟ್ಟಾನು.


ದೇವರು ಯೆಹೂದ್ಯರಿಗೆ ಮಾತ್ರ ದೇವರಾಗಿದ್ದಾನೋ? ಹೌದು ದೇವರು ಒಬ್ಬನೇ ಹೀಗಿರಲಾಗಿ ಆತನು ಅನ್ಯಜನರಿಗೂ ಸಹ ದೇವರಾಗಿದ್ದಾನೆ.


“ಆದಕಾರಣ ದೇವರಿಂದಾದ ಈ ರಕ್ಷಣೆಯು ಅನ್ಯಜನರಿಗೆ ಹೇಳಿಕಳುಹಿಸಲ್ಪಟ್ಟಿದೆ ಎಂದು ನಿಮಗೆ ಚೆನ್ನಾಗಿ ತಿಳಿದಿರಲಿ; ಅವರಾದರೂ ಕೇಳುವರು” ಎಂದು ಹೇಳಿದನು.


ಆಮೇಲೆ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸೀಮೆಯಲ್ಲಿಯೂ ಇರುವವರಿಗೆ ಮತ್ತು ಅನ್ಯಜನರಿಗೆ ಸಹ; ನೀವು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ಮಾನಸಾಂತರಕ್ಕೆ ಯೋಗ್ಯವಾದ ಕೃತ್ಯಗಳನ್ನು ಮಾಡಬೇಕೆಂತಲೂ ಸಾರಿದೆನು.


ಎಲ್ಲಾ ಸಭಾಮಂದಿರಗಳಲ್ಲಿಯೂ, ನಾನು ಅನೇಕ ಸಾರಿ ಅವರನ್ನು ದಂಡಿಸಿ ಅವರಿಂದ ದೇವದೂಷಣೆಯ ಮಾತುಗಳನ್ನಾಡಿಸುವುದಕ್ಕೆ ಪ್ರಯತ್ನಿಸಿದೆನು. ಇದಲ್ಲದೆ ಅವರ ಮೇಲೆ ಬಹು ಕೋಪಾವೇಶವುಳ್ಳವನಾಗಿ ಬೇರೆ ಪಟ್ಟಣಗಳವರೆಗೂ ಹೋಗಿ, ಅವರನ್ನು ಹಿಂಸೆಪಡಿಸಿದೆನು.


ಆ ಆಳುಗಳು ಮುಖ್ಯರಸ್ತೆಗಳಿಗೆ ಹೋಗಿ ಕೆಟ್ಟವರು ಒಳ್ಳೆಯವರೆನ್ನದೇ ಕಂಡವರನ್ನೆಲ್ಲಾ ಒಟ್ಟುಗೂಡಿಸಿ ಕರೆದುಕೊಂಡು ಬಂದರು. ಹೀಗೆ ಮದುವೆಯ ಮಂಟಪವು ಅತಿಥಿಗಳಿಂದ ತುಂಬಿಹೋಯಿತು.


ಯಾರಾದರೂ ನಿಮ್ಮನ್ನು ಸೇರಿಸಿಕೊಳ್ಳದೆಯೂ ನಿಮ್ಮ ವಾಕ್ಯಗಳನ್ನೂ ಕೇಳದೆಯೂ ಹೋದರೆ ನೀವು ಆ ಮನೆಯನ್ನಾಗಲಿ ಆ ಊರನ್ನಾಗಲಿ ಬಿಟ್ಟು ಹೊರಡುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ.


ಆತನ ಕುರಿತು ಇನ್ನೂ ಅನೇಕ ದೂಷಣೆಯ ಮಾತುಗಳನ್ನಾಡಿದರು.


ಆದುದರಿಂದ ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲಾಗುವುದು.


ಇದಲ್ಲದೆ ನಿಮಗೆ ಹೇಳುವುದೇನಂದರೆ ಪೂರ್ವ ಪಶ್ಚಿಮ ದಿಕ್ಕುಗಳಿಂದ ಬಹಳ ಜನ ಬಂದು ಪರಲೋಕ ರಾಜ್ಯದಲ್ಲಿ ಅಬ್ರಹಾಮ, ಇಸಾಕ, ಯಾಕೋಬ ಎಂಬುವವರ ಸಂಗಡ ಊಟಕ್ಕೆ ಕುಳಿತುಕೊಳ್ಳುವರು;


“‘ತಂದೆಯನ್ನಾಗಲಿ ಅಥವಾ ತಾಯಿಯನ್ನಾಗಲಿ ದೂಷಿಸುವವನಿಗೆ ಮರಣಶಿಕ್ಷೆಯಾಗಬೇಕು. ತಂದೆತಾಯಿಗಳನ್ನು ದೂಷಿಸುವುದರಿಂದ ಅವನಿಗೆ ಸಂಭವಿಸಿದ ಮರಣಶಿಕ್ಷೆಗೆ ಅವನೇ ಕಾರಣನು.


ಅವಸರದಿಂದ ಯಾರ ತಲೆಯ ಮೇಲೆಯಾದರೂ ಹಸ್ತವನ್ನಿಟ್ಟು ಸಭೆಯ ನಾಯಕತ್ವಕ್ಕೆ ನೇಮಿಸಬೇಡ. ಮತ್ತೊಬ್ಬರು ಮಾಡಿದ ಪಾಪದಲ್ಲಿ ನೀನು ಪಾಲುಗಾರನಾಗದೆ, ನೀನು ಶುದ್ಧನಾಗಿರುವ ಹಾಗೆ ನೋಡಿಕೋ.


ಈ ಇಬ್ಬರನ್ನೂ ಕೊಂದ ಪಾಪವು ಯೋವಾಬನ ತಲೆಯ ಮೇಲೆಯೂ ಅವನ ಸಂತಾನದವರ ತಲೆಯ ಮೇಲೆಯೂ ಇರಲಿ. ಆದರೆ ದಾವೀದನಿಗೂ ಅವನ ಸಿಂಹಾಸನ, ಕುಟುಂಬ, ಸಂತಾನದವರಿಗೂ ಯೆಹೋವನಿಂದ ನಿತ್ಯ ಸಮಾಧಾನ ದೊರಕಲಿ” ಎಂದನು.


ಆದರೆ ಕಾವಲುಗಾರನು ಬೀಳುವ ಖಡ್ಗವನ್ನು ನೋಡಿಯೂ, ಕೊಂಬನ್ನೂದದೆ, ಸ್ವಜನರನ್ನು ಎಚ್ಚರಿಸದೆ ಇದ್ದರೆ, ಖಡ್ಗವು ಬಿದ್ದು ಆ ಜನರೊಳಗೆ ಯಾರನ್ನೇ ಆಗಲಿ ನಾಶಮಾಡಿದರೆ, ತನ್ನ ಅಧರ್ಮದಲ್ಲೇ ನಾಶಗೊಂಡ ಆ ಮನುಷ್ಯನ ಮರಣಕ್ಕೆ ಕಾವಲುಗಾರನನ್ನೇ ಹೊಣೆಮಾಡುವೆನು.’


ಅವರು ಆತನಿಗೆ, “ಆ ಕೆಡುಕರನ್ನು ಕ್ರೂರವಾಗಿ ಸಂಹರಿಸಿ ತಕ್ಕಕಾಲಕ್ಕೆ ಹಣ್ಣುಗಳನ್ನು ತನಗೆ ಸಲ್ಲಿಸುವಂಥ ಬೇರೆ ತೋಟಗಾರರಿಗೆ ತನ್ನ ತೋಟವನ್ನು ಗುತ್ತಿಗೆಗೆ ಕೊಡುವನು” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು