Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 19:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಮತ್ತು ದುರಾತ್ಮ ಹಿಡಿದಿದ್ದ ಆ ಮನುಷ್ಯನು ಅವರ ಮೇಲೆ ಹಾರಿ ಬಿದ್ದು, ಅವರನ್ನೂ ಸೋಲಿಸಿ ಸದೆಬಡಿದಿದ್ದರಿಂದ ಅವರು ಗಾಯಗೊಂಡು ಬೆತ್ತಲೆಯಾಗಿ ಆ ಮನೆಯೊಳಗಿಂದ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅಲ್ಲದೆ ದೆವ್ವ ಹಿಡಿದಿದ್ದ ಮನುಷ್ಯನು ಅವರ ಮೇಲೆ ಹಾರಿಬಿದ್ದು, ಅಪ್ಪಳಿಸಿ, ಅವರೆಲ್ಲರನ್ನೂ ಅಧೀನಪಡಿಸಿದನು. ಅವರು ಗಾಯಗೊಂಡು, ನಗ್ನರಾಗಿ, ಆ ಮನೆಯಿಂದ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಮತ್ತು ದೆವ್ವಹಿಡಿದಿದ್ದ ಆ ಮನುಷ್ಯನು ಅವರ ಮೇಲೆ ಹಾರಿ ಬಿದ್ದು ಅವರಿಬ್ಬರನ್ನೂ ಸೋಲಿಸಿ ಬಲಾತ್ಕರಿಸಿದ್ದರಿಂದ ಅವರು ಬೆತ್ತಲೆಯಾಗಿಯೂ ಗಾಯವುಳ್ಳವರಾಗಿಯೂ ಆ ಮನೆಯೊಳಗಿಂದ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಬಳಿಕ ದೆವ್ವಪೀಡಿತನಾಗಿದ್ದ ಆ ಮನುಷ್ಯನು ಈ ಯೆಹೂದ್ಯರ ಮೇಲೆ ಹಾರಿಬಿದ್ದನು. ಅವನು ಅವರಿಗಿಂತ ಹೆಚ್ಚು ಬಲವುಳ್ಳವನಾಗಿದ್ದನು. ಅವನು ಅವರಿಗೆ ಹೊಡೆದು ಅವರ ಬಟ್ಟೆಗಳನ್ನು ಹರಿದು ಹಾಕಿದನು. ಅವರು ಆ ಮನೆಯಿಂದ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ದುರಾತ್ಮ ಪೀಡಿತ ಮನುಷ್ಯನು ಅವರ ಮೇಲೆ ಹಾರಿಬಿದ್ದು, ಅವರೆಲ್ಲರಿಗಿಂತಲೂ ಹೆಚ್ಚು ಬಲಗೊಂಡು ಅವರನ್ನು ಬಡಿದು ಗಾಯಗೊಳಿಸಲು, ಅವರು ನಗ್ನರಾಗಿಯೇ ಮನೆಬಿಟ್ಟು ಹೊರಗೆ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಖರೆ ಮ್ಹಾರು ಧರಲ್ಯಾ ಮಾನ್ಸಾನ್ ತೆಂಕಾ ಧರುನ್ ತೆಂಚೆ ಕಪ್ಡೆ ಪಿಂಜುನ್ ತುಕ್ಡೆ ಕರ್‍ಲ್ಯಾನ್ ಅನಿ ಘರಾತ್ನಾ ಪಳುನ್ ಗೆಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 19:16
8 ತಿಳಿವುಗಳ ಹೋಲಿಕೆ  

ಏಕೆಂದರೆ, ಈ ಮನುಷ್ಯನನ್ನು ಬಿಟ್ಟುಹೋಗಬೇಕೆಂದು ಆತನು ಆ ದೆವ್ವಕ್ಕೆ ಅಪ್ಪಣೆ ಕೊಟ್ಟಿದ್ದನು. ಅದು ಬಹು ಕಾಲದಿಂದ ಅವನನ್ನು ಹಿಡಿದಿತ್ತು; ಇದಲ್ಲದೆ ಅವನನ್ನು ಕಾವಲಲ್ಲಿಟ್ಟು ಸರಪಣಿಗಳಿಂದಲೂ ಬೇಡಿಗಳಿಂದಲೂ ಬಂಧಿಸಿದ್ದರೂ ಅವನು ಅವುಗಳನ್ನು ಮುರಿದುಹಾಕುತ್ತಿದ್ದನು; ಮತ್ತು ಆ ದೆವ್ವವು ಅವನನ್ನು ನಿರ್ಜನ ಪ್ರದೇಶಗಳಿಗೆ ಓಡಿಸುತ್ತಿತ್ತು.


ಆ ದೆವ್ವಹಿಡಿದಿದ್ದವನು ಅಂದರೆ ದೆವ್ವಗಳ ದಂಡಿನಿಂದ ಬಂಧಿಸಲ್ಪಟ್ಟವನು, ಬಟ್ಟೆಗಳನ್ನು ಹಾಕಿಕೊಂಡು ಸುಬುದ್ಧಿಯಿಂದ ಕುಳಿತಿರುವುದನ್ನು ನೋಡಿ ಹೆದರಿದರು.


ಜನರು ನಡೆದ ಸಂಗತಿಯನ್ನು ನೋಡುವುದಕ್ಕೆ ಹೊರಟು ಯೇಸುವಿದ್ದಲ್ಲಿಗೆ ಬಂದಾಗ ದೆವ್ವಗಳು ಬಿಟ್ಟುಹೋಗಿದ್ದ ಆ ಮನುಷ್ಯನು ಬಟ್ಟೆಯನ್ನು ಧರಿಸಿಕೊಂಡು ಸ್ವಸ್ಥಬುದ್ಧಿಯಿಂದ ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತಿರುವುದನ್ನು ಕಂಡು ಹೆದರಿದರು.


ಅವನು ಹಾರಿ ನಿಂತು ನಡೆದಾಡಿದನು; ನಡೆಯುತ್ತಾ, ಕುಣಿಯುತ್ತಾ ದೇವರನ್ನು ಕೊಂಡಾಡುತ್ತಾ ಅವರ ಜೊತೆಯಲ್ಲಿ ದೇವಾಲಯದೊಳಗೆ ಹೋದನು.


ಆದರೆ ದುರಾತ್ಮವು ಅವರಿಗೆ; “ಯೇಸುವಿನ ಗುರುತು ನನಗುಂಟು, ಪೌಲನನ್ನೂ ಬಲ್ಲೆನು, ಆದರೆ ನೀವು ಯಾರು?” ಎಂದು ಹೇಳಿತು;


ಈ ಸಂಗತಿಯು ಎಫೆಸದಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರಿಗೂ, ಗ್ರೀಕರಿಗೂ ತಿಳಿದುಬಂದಾಗ ಅವರೆಲ್ಲರೂ ಭಯಭೀತರಾದರು. ಮತ್ತು ಕರ್ತನಾದ ಯೇಸುವಿನ ಹೆಸರು ಪ್ರಖ್ಯಾತಿಗೆ ಬಂದಿತು.


ಇಂಥವರು ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನಮಾಡುತ್ತಾರೆ. ಆದರೆ ತಾವೇ ಕೆಟ್ಟತನಕ್ಕೆ ದಾಸರಾಗಿದ್ದಾರೆ. ಒಬ್ಬನು ಯಾವುದಕ್ಕೆ ಸೋಲುವನೋ ಅವನು ಅದರ ದಾಸನಾಗಿದ್ದಾನಷ್ಟೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು