Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 19:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಇದರಿಂದ ನಮ್ಮ ಉದ್ಯೋಗಕ್ಕೆ ಕುಂದು ಬರುವುದಲ್ಲದೆ ಅರ್ತೆಮೀ ಮಹಾದೇವಿಯ ದೇವಸ್ಥಾನವು ಗಣನೆಗೆ ಬಾರದೆಹೋಗುವ ಹಾಗೆಯೂ, ಎಲ್ಲಾ ಆಸ್ಯಸೀಮೆಯೂ, ಲೋಕವೆಲ್ಲಾ ಪೂಜಿಸುವ ಈ ದೇವಿಯ ವೈಭವಕ್ಕೆ ಹಾನಿಬರುವ ಹಾಗೆ ಗಂಡಾಂತರವುಂಟಾಗುತ್ತದೆಂದು” ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಇದರಿಂದಾಗಿ ನಮ್ಮ ಕಸಬಿಗೇ ಕೆಟ್ಟ ಹೆಸರು ಬರುವ ಅಪಾಯವಿದೆ. ಅಷ್ಟೇ ಏಕೆ, ಅರ್ತೆಮೀ ಮಹಾದೇವಿಯ ಗುಡಿ ಹೇಳಹೆಸರಿಲ್ಲದಂತಾಗುವ ಸಂಭವವಿದೆ. ಇಡೀ ಏಷ್ಯದಲ್ಲೂ ಜಗತ್ತಿನ ಎಲ್ಲೆಲ್ಲೂ ಪೂಜಿಸಲಾಗುವ ಆ ದೇವತೆಯ ವೈಭವ ಅಳಿದುಹೋಗುವ ಅಪಾಯವಿದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಇದರಿಂದ ನಮ್ಮ ಉದ್ಯೋಗಕ್ಕೆ ಅಪಕೀರ್ತಿ ಬರುವ ಹಾಗಿರುವದಲ್ಲದೆ ಅರ್ತೆಮೀ ಮಹಾದೇವಿಯ ದೇವಸ್ಥಾನವು ಗಣನೆಗೆ ಬಾರದೆಹೋಗುವ ಹಾಗೆಯೂ ಎಲ್ಲಾ ಆಸ್ಯಸೀಮೆಯೂ ಲೋಕವೂ ಪೂಜಿಸುವ ಈ ದೇವಿಯ ವೈಭವಕ್ಕೆ ಹಾನಿಬರುವ ಹಾಗೆಯೂ ಗಂಡಾಂತರವುಂಟೆಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಇದರಿಂದಾಗಿ ಜನರು ನಮ್ಮ ಕೆಲಸದ ವಿರುದ್ಧ ರೊಚ್ಚಿಗೇಳಬಹುದು. ಅಷ್ಟೇ ಅಲ್ಲ, ಮಹಾದೇವತೆಯಾದ ಅರ್ತೆಮಿಯ ಗುಡಿಯನ್ನು ಜನರು ಕಡೆಗಣಿಸುವ ಸಾಧ್ಯತೆಯೂ ಇದೆ. ಆಗ, ಏಷ್ಯಾದಲ್ಲಿ ಮತ್ತು ಇಡೀ ಪ್ರಪಂಚದಲ್ಲಿ ಪೂಜಿಸಲ್ಪಡುತ್ತಿರುವ ಅರ್ತೆಮಿಯ ದೇವತೆಯ ವೈಭವ ಅಳಿದುಹೋಗುವುದು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಇದರಿಂದ ಈಗ ನಮ್ಮ ವೃತ್ತಿಗೆ ಅಪಾಯ ಬಂದಿರುವುದಲ್ಲದೆ ಅರ್ತೆಮೀ ಮಹಾದೇವಿಯ ಗುಡಿಯ ಬಗ್ಗೆಯೂ ಯೋಚಿಸಬೇಕು. ಏಕೆಂದರೆ ಏಷ್ಯಾದಲ್ಲಿಯೂ ಇಡೀ ಜಗತ್ತಿನಲ್ಲೆಲ್ಲಾ ಪೂಜಿಸುತ್ತಿರುವ ದೇವಿಯ ಮಹತ್ವವು ಸಹ ಕುಂದಿಹೋಗುವಂತಿದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಅಶೆ ರಾತಾನಾ ಅಮ್ಚ್ಯಾ ಹ್ಯಾ ವ್ಯಾಪಾರಾಚೆ ನಾವ್ ಬುರ್ಶೆ ಹೊವ್ನ್ ಜಾವ್ಕ್ ಲಾಗ್ಲಾ, ತವ್ಡೆಚ್ ನ್ಹಯ್ ಅಮ್ಚ್ಯಾ ಅರ್ತಮೆ ದೆವತೆಚಿ ಗುಡಿಬಿ ತರಾಸಾತ್ ಹಾಯ್, ತಿಚೆ ಮೊಟೆಪಾನಬಿ ನಾಸ್ ಹೊವ್ನ್ ಜಾತಾ, ಆಸ್ಯಾ ಶಾರಾತ್ಲಿ ಸಗ್ಳಿ ಲೊಕಾ ಪುಜ್ಯಾ ಕರ್‍ತಲೆ ಹಿಚೆ ನಾವ್ ನಾಸ್ ಹೊವ್ನ್ ಜಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 19:27
11 ತಿಳಿವುಗಳ ಹೋಲಿಕೆ  

ಯೆಹೋವನು ಅವರಿಗೆ ಭಯಂಕರನಾಗುವನು; ಲೋಕದ ದೇವರುಗಳನ್ನೆಲ್ಲಾ ನಾಶಮಾಡುವನು; ಸಮಸ್ತ ಜನರು, ಪ್ರತಿಯೊಂದು ಪ್ರಾಂತ್ಯದ ನಿವಾಸಿಗಳು ಸಕಲ ಜನಾಂಗಗಳವರು ತಮ್ಮ ತಮ್ಮ ಸ್ಥಳಗಳಲ್ಲೇ ಆತನನ್ನು ಆರಾಧಿಸುವರು.


ಇದಲ್ಲದೆ ಬುದ್ಧಿಗೆಟ್ಟು ಸತ್ಯವಿಹೀನರಾಗಿದ್ದು ದೇವಭಕ್ತಿಯನ್ನು ಲಾಭಸಾಧನವೆಂದೆಣಿಸುವ ಈ ಮನುಷ್ಯರಲ್ಲಿ ನಿತ್ಯವಾದ ಕಚ್ಚಾಟಗಳು ಉಂಟಾಗುತ್ತವೆ.


ಜಗದುತ್ಪತ್ತಿಗೆ ಮೊದಲೇ ಕೊಯ್ಯಲ್ಪಟ್ಟ ಕುರಿಮರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆದಿರುವುದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಅದಕ್ಕೆ ಆರಾಧನೆ ಮಾಡುವರು.


ಅದರ ತಲೆಗಳಲ್ಲಿ ಒಂದು ತಲೆ ಗಾಯಹೊಂದಿ ಸಾಯುವ ಹಾಗಿರುವುದನ್ನು ಕಂಡೆನು. ಆ ಮರಣಕರವಾದ ಗಾಯವು ವಾಸಿಯಾಯಿತು, ಭೂಲೋಕದವರೆಲ್ಲರು ಆ ಮೃಗವನ್ನು ನೋಡುತ್ತಾ ಆಶ್ಚರ್ಯಪಟ್ಟರು.


ಇಡೀ ಲೋಕವು ಕೆಡುಕನ ವಶದಲ್ಲಿ ಇದ್ದರು ಸಹ ನಾವು ದೇವರಿಗೆ ಸಂಬಂಧಪಟ್ಟವರಾಗಿದ್ದೇವೆಂಬುದು ನಮಗೆ ತಿಳಿದಿದೆ.


ಈ ಸಂಗತಿಗಳು ಆದ ಮೇಲೆ ಪೌಲನು ತಾನು ಮಕೆದೋನ್ಯದಲ್ಲಿಯೂ, ಅಖಾಯದಲ್ಲಿಯೂ ಸಂಚಾರಮಾಡಿ ಯೆರೂಸಲೇಮಿಗೆ ಹೋಗಬೇಕೆಂದು ಮನಸ್ಸಿನಲ್ಲಿ ಯೋಚಿಸಿ; “ಅಲ್ಲಿಗೆ ಹೋದ ಮೇಲೆ ರೋಮಾಪುರವನ್ನು ಸಹ ನೋಡಬೇಕೆಂದು” ಹೇಳಿದನು.


“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕ ರಾಜ್ಯದ ಬಾಗಿಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ. ನೀವಂತೂ ಒಳಕ್ಕೆ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಬೇಕೆಂದಿರುವವರನ್ನೂ ಪ್ರವೇಶಿಸಗೊಡಿಸುವುದೂ ಇಲ್ಲ.


ಅದರಲ್ಲಿ ಉಳಿದ ಭಾಗವನ್ನು ತನ್ನ ದೇವರನ್ನಾಗಿಯೂ, ಕೆತ್ತಿದ ವಿಗ್ರಹವನ್ನಾಗಿಯೂ ಮಾಡಿ ಅದಕ್ಕೆ ಅಡ್ಡಬಿದ್ದು ನಮಸ್ಕರಿಸಿ, “ನೀನೇ ನನ್ನ ದೇವರು, ನನ್ನನ್ನು ರಕ್ಷಿಸು” ಎಂದು ಪ್ರಾರ್ಥಿಸುವನು.


ಇದಲ್ಲದೆ ರಾಜ್ಯದ ಈ ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲ್ಪಡುವುದು; ಆಗ ಅಂತ್ಯವು ಬರುವುದು.


ಇದು ಎರಡು ವರ್ಷಗಳ ವರೆಗೂ ನಡೆದಿದ್ದರಿಂದ ಅಸ್ಯಸೀಮೆಯಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರೂ, ಗ್ರೀಕರೂ, ಕರ್ತನ ವಾಕ್ಯವನ್ನು ಕೇಳಿದರು.


ಅವನ ಹಿಂದೆ ಮೂರನೆಯ ದೇವದೂತನು ಬಂದು, “ಯಾವನಾದರೂ ಯಾವುದೇ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸಿ ತನ್ನ ಹಣೆಯ ಮೇಲಾಗಲಿ ಕೈಯ ಮೇಲಾಗಲಿ ಅದರ ಗುರುತು ಹಾಕಿಸಿಕೊಂಡಿದ್ದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು