Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 19:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಆದರೆ ಅವನು ಯೆಹೂದ್ಯನೆಂದು ತಿಳಿದಾಗ ಎಲ್ಲರೂ ಒಂದೇ ಶಬ್ದದಿಂದ; “ಎಫೆಸದವರ ಅರ್ತೆಮೀದೇವಿ ಮಹಾದೇವಿ” ಎಂದು ಎರಡು ಘಂಟೆ ಹೊತ್ತು ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಆದರೆ ಅವನು ಯೆಹೂದ್ಯನೆಂದು ಗುರುತಿಸಿದ ಕೂಡಲೇ, ಅವರೆಲ್ಲರೂ ಎರಡು ಗಂಟೆಗಳ ಕಾಲ, “ಎಫೆಸದ ಅರ್ತೆಮೀ ದೇವಿಯೇ ಮಹಾದೇವಿ,” ಎಂದು ಒಂದೇ ಸಮನೆ ಬೊಬ್ಬೆಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಆದರೆ ಅವನು ಯೆಹೂದ್ಯನೆಂದು ತಿಳಿದಾಗ ಎಲ್ಲರೂ ಒಂದೇ ಶಬ್ದದಿಂದ - ಎಫೆಸದವರ ಅರ್ತೆಮೀದೇವಿ ಮಹಾದೇವಿ ಎಂದು ಎರಡು ಗಂಟೆ ಹೊತ್ತು ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಆದರೆ ಅಲೆಕ್ಸಾಂಡರನು ಯೆಹೂದ್ಯನೆಂದು ತಿಳಿದಾಗ ಜನರೆಲ್ಲರು, “ಎಫೆಸದ ಅರ್ತೆಮಿಯು ಮಹಾದೇವಿ! ಎಫೆಸದ ಅರ್ತೆಮಿಯು ಮಹಾದೇವಿ! ಅರ್ತೆಮಿಯು ಮಹಾದೇವಿ…!” ಎಂದು ಒಂದೇಸಮನೆ ಎರಡು ತಾಸುಗಳವರೆಗೆ ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಆದರೆ ಅವನು ಯೆಹೂದ್ಯನೆಂದು ಜನರು ತಿಳಿದಾಗ, “ಎಫೆಸದ ಅರ್ತೆಮೀ ದೇವಿ ಮಹಾದೇವಿ!” ಎಂದು ಒಕ್ಕೊರಲಿನಿಂದ ಎರಡು ತಾಸುಗಳವರೆಗೆ ಆರ್ಭಟಿಸುತ್ತಲೇ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ಹೊಲ್ಯಾರ್ ಅಲೆಕ್ಸಾಂಡರ್ ಮನ್ತಲ್ಲೊ ಮಾನುಸ್ ಜುದೆವಾಂಚೊ ಮನುನ್ ಕಳಲ್ಲ್ಯಾ ತನ್ನಾ ಲೊಕಾನಿ, ಎಫೆಸ್ ಶಾರಾಚ್ಯಾ ಅರ್ತೆಮಿ ಮನ್ತಲಿ ಮಹಾದೆವಿ! ಮನುನ್ ಎಕುಚ್ ಸಮಾ ದೊನ್ ತಾಸ್ ಪತರ್ ಬೊಬ್ ಮಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 19:34
10 ತಿಳಿವುಗಳ ಹೋಲಿಕೆ  

ಅವರು ಈ ಮಾತುಗಳನ್ನು ಕೇಳಿ ಕೋಪಗೊಂಡು; “ಎಫೆಸದವರ ಅರ್ತೆಮೀದೇವಿ ಮಹಾದೇವಿ” ಎಂದು ಅರ್ಭಟಿಸಿದರು.


ಘಟಸರ್ಪನು ಆ ಮೃಗಕ್ಕೆ ಅಧಿಕಾರವನ್ನು ಕೊಟ್ಟವನಾದ್ದರಿಂದ ಅವರು ಆ ಘಟಸರ್ಪನಿಗೆ ಆರಾಧನೆ ಮಾಡಿದರು. ಇದಲ್ಲದೆ ಆ ಮೃಗಕ್ಕೂ ಆರಾಧನೆ ಮಾಡಿ, “ಈ ಮೃಗಕ್ಕೆ ಸಮಾನರು ಯಾರು? ಇದರ ವಿರುದ್ಧ ಯುದ್ಧ ಮಾಡುವುದಕ್ಕೆ ಯಾರು ಶಕ್ತರು?” ಎಂದರು.


ಅವರನ್ನು ಅಧಿಕಾರಿಗಳ ಮುಂದೆ ತಂದು; “ಈ ಮನುಷ್ಯರು ನಮ್ಮ ಪಟ್ಟಣವನ್ನು ಬಹಳವಾಗಿ ಕದಡುತ್ತಿದ್ದಾರೆ;


ಆದರೆ ಪ್ರಾರ್ಥನೆಮಾಡುವಾಗ ಅನ್ಯಜನಗಳ ಹಾಗೆ ಹೇಳಿದ್ದನ್ನೇ ಸುಮ್ಮನೆ ಮತ್ತೆ ಮತ್ತೆ ಹೇಳಬೇಡ; ಅವರು ಬಹಳ ಮಾತುಗಳನ್ನಾಡಿದರೆ ತಮ್ಮ ಪ್ರಾರ್ಥನೆಯನ್ನು ದೇವರು ಕೇಳುತ್ತಾನೆಂದು ಭಾವಿಸುತ್ತಾರೆ.


ಹಾದರ ಮಾಡಬಾರದೆಂದು ಹೇಳುವ ನೀನೇ ವ್ಯಭಿಚಾರ ಮಾಡುತ್ತೀಯೋ? ವಿಗ್ರಹಗಳನ್ನು ವಿರೋಧಿಸುವ ನೀನು ದೇವಾಲಯವನ್ನೇ ದೋಚುತ್ತಿಯೇನು?


ಆದರೆ ಕೈಯಿಂದ ಮಾಡಿದ ಮೂರ್ತಿಗಳು ದೇವರುಗಳಲ್ಲವೆಂದು ಆ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಹೆಚ್ಚುಕಡಿಮೆ ಆಸ್ಯಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿಬಿಟ್ಟಿದ್ದಾನೆ ಎಂಬುದನ್ನು ನೀವು ನೋಡುತ್ತಿದ್ದೀರಿ, ಕೇಳುತ್ತಿದ್ದೀರಿ.


ಅವರು ತರಲ್ಪಟ್ಟ ಹೋರಿಗಳಲ್ಲಿ ಒಂದನ್ನು ತೆಗೆದುಕೊಂಡು ಸಿದ್ಧಪಡಿಸಿ, ತಮ್ಮ ದೇವರಾದ ಬಾಳನ ಹೆಸರು ಹೇಳಿ, “ಬಾಳನೇ ನಮಗೆ ಕಿವಿಗೊಡು” ಎಂದು ಹೊತ್ತಾರೆಯಿಂದ ಮಧ್ಯಾಹ್ನದವರೆಗೆ ಕೂಗಿದರೂ ಆಕಾಶವಾಣಿಯಾಗಲಿಲ್ಲ. ಅವರು ಯಜ್ಞವೇದಿಯ ಸುತ್ತಲೂ ಕುಣಿದಾಡಿದರೂ ಯಾರೂ ಉತ್ತರ ದಯಪಾಲಿಸಲಿಲ್ಲ.


ಹೇಗೆಂದರೆ, ದೇಮೇತ್ರಿಯನೆಂಬ ಒಬ್ಬ ಅಕ್ಕಸಾಲಿಗನು ಬೆಳ್ಳಿಯಿಂದ ಅರ್ತೆಮೀ ದೇವಿಯ ಗುಡಿಯಂತೆ ಸಣ್ಣಸಣ್ಣ ಗುಡಿಗಳನ್ನು ಮಾಡಿಸುವವನಾಗಿದ್ದು ಆ ಕಸುಬಿನವರಿಗೆ ಬಹಳ ಲಾಭವನ್ನು ಕೊಡುತ್ತಿದ್ದನು.


ಯೆಹೂದ್ಯರು ಅಲೆಕ್ಸಾಂದ್ರನನ್ನು ಮುಂದಕ್ಕೆ ನೂಕಲು, ಗುಂಪಿನಲ್ಲಿ ಕೆಲವರು ಅವನಿಗೆ ಸೂಚನೆ ಕೊಟ್ಟರು. ಆಗ ಅಲೆಕ್ಸಾಂದ್ರನು ಕೈಸನ್ನೆ ಮಾಡಿ ಕೂಡಿದ್ದ ಜನರಿಗೆ ಪ್ರತಿವಾದ ಮಾಡಬೇಕೆಂದಿದ್ದನು.


ಕೊನೆಗೆ ಪಟ್ಟಣದ ಯಜಮಾನನು ಜನರ ಗುಂಪನ್ನು ಸಮಾಧಾನಪಡಿಸಿ; “ಎಫೆಸದವರೇ, ಎಫೆಸ ಪಟ್ಟಣದವರು ಅರ್ತೆಮೀ ಮಹಾದೇವಿಯ ದೇವಸ್ಥಾನಕ್ಕೂ, ಆಕಾಶದಿಂದ ಬಿದ್ದ ಆಕೆಯ ಮೂರ್ತಿಗೂ, ಪಾಲಕರಾಗಿದ್ದಾರೆಂಬುದನ್ನು ತಿಳಿಯದಿರುವ ಮನುಷ್ಯನು ಯಾವನಿದ್ದಾನೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು