Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 2:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಗಿರುವ ನಾವು ನಮ್ಮ ನಮ್ಮ ಭಾಷೆಗಳಲ್ಲಿ ಇವರು ದೇವರ ಮಹತ್ತುಗಳ ವಿಷಯವಾಗಿ ಹೇಳುವುದನ್ನು ಕೇಳುತ್ತಿದ್ದೇವಲ್ಲಾ” ಎಂದು ಅಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಯೆಹೂದ್ಯರೂ ಯೆಹೂದ್ಯ ಧರ್ಮಾವಲಂಬಿಗಳೂ ಆದ ಅನ್ಯರೂ, ಕ್ರೇಟ್ ಮತ್ತು ಅರೇಬಿಯದವರೂ ಇಲ್ಲಿದ್ದಾರೆ. ದೇವರ ಮಹತ್ಕಾರ್ಯಗಳನ್ನು ಕುರಿತು ಇವರು ಮಾತನಾಡುತ್ತಿರುವುದನ್ನು ನಾವೆಲ್ಲರೂ ನಮ್ಮ ನಮ್ಮ ಭಾಷೆಗಳಲ್ಲೇ ಕೇಳುತ್ತಿದ್ದೇವಲ್ಲಾ!” ಎಂದು ಅಚ್ಚರಿಯನ್ನು ವ್ಯಕ್ತಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅರಬೀದೇಶದವರೂ ಆಗಿರುವ ನಾವು ನಮ್ಮ ನಮ್ಮ ಭಾಷೆಗಳಲ್ಲಿ ಇವರು ದೇವರ ಮಹತ್ತುಗಳ ವಿಷಯವಾಗಿ ಹೇಳುವದನ್ನು ಕೇಳುತ್ತೇವೆ ಅಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಕ್ರೇಟ್‌ನವರು ಮತ್ತು ಅರೇಬಿಯವರು ಇದ್ದಾರೆ. ನಮ್ಮಲ್ಲಿರುವ ಕೆಲವು ಜನರು ಹುಟ್ಟು ಯೆಹೂದ್ಯರು. ಉಳಿದವರು ಮತಾಂತರ ಹೊಂದಿದವರು. ನಾವು ಬೇರೆಬೇರೆ ದೇಶಗಳವರು. ಆದರೆ ಈ ಜನರು ಮಾತಾಡುತ್ತಿರುವುದು ನಮ್ಮ ಸ್ವಂತ ಭಾಷೆಗಳಲ್ಲಿ ನಮಗೆ ಕೇಳಿಸುತ್ತಿದೆ! ಅವರು ದೇವರ ಬಗ್ಗೆ ಹೇಳುತ್ತಿರುವ ಮಹಾಸಂಗತಿಗಳು ನಮಗೆಲ್ಲರಿಗೂ ಅರ್ಥವಾಗುತ್ತಿವೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಇವರಲ್ಲದೆ, ಯೆಹೂದ್ಯರು ಮತ್ತು ಯೆಹೂದಿ ವಿಶ್ವಾಸಕ್ಕೆ ಬಂದಿದ್ದವರೂ ಇಲ್ಲಿದ್ದಾರೆ. ಅವರೊಂದಿಗೆ ಕ್ರೇತದವರು ಹಾಗೂ ಅರಬೀಯರು ನಮ್ಮ ಭಾಷೆಗಳಲ್ಲಿಯೇ ದೇವರ ಮಹತ್ಕಾರ್ಯಗಳನ್ನು ಹೇಳುತ್ತಿರುವದನ್ನು ಕೇಳುತ್ತಿದ್ದೇವಲ್ಲಾ!” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಜುದೆವಾಂಚೆ ಅನಿ ಜುದೆವಾಂಚೊ ಧರ್ಮ್ ಚಾಲ್ವನ್ ಘೆವ್ನ್ ಜಾತಲಿ ದುಸ್ರಿ ಲೊಕಾ ಕ್ರೆತಾತ್ಲಿ ಅನಿ ಅರೆಬಿಯಾತ್ಲಿ ಜಾಲ್ಯಾರ್ಬಿ, ದೆವಾನ್ ಕರಲ್ಲ್ಯಾ ಮೊಟ್ಯಾ ಕಾಮಾಂಚ್ಯಾ ವಿಶಯಾತ್ ಅಮ್ಚ್ಯಾ ಸ್ವತಾಚ್ಯಾ ಬಾಶಾನಿ ಸಾಂಗ್ತಲೆ ಅಮಿ ಆಯ್ಕಿಸಾರ್ಕೆ ಹೊಲೆ ಮನುನ್ ಬೊಲುನ್ ಘೆಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 2:11
36 ತಿಳಿವುಗಳ ಹೋಲಿಕೆ  

ಮತ್ತೊಬ್ಬನಿಗೆ ಮಹತ್ಕಾರ್ಯಗಳನ್ನು ಮಾಡುವ ವರವು, ಇನ್ನೊಬ್ಬನಿಗೆ ಪ್ರವಾದನೆಯ ವರವು, ಒಬ್ಬನಿಗೆ ಆತ್ಮವನ್ನು ವಿವೇಚಿಸುವ ವರವು, ಮತ್ತೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ವರವು, ಒಬ್ಬನಿಗೆ ಭಾಷೆಗಳ ಅರ್ಥವನ್ನು ಬಿಡಿಸಿ ಹೇಳುವ ವರವು ಕೊಡಲ್ಪಡುತ್ತದೆ.


ಯೆಹೋವನೇ, ದೇವರುಗಳಲ್ಲಿ ನಿನಗೆ ಸಮಾನರು ಯಾರು? ನಿನ್ನ ಹಾಗೆ ಪರಿಶುದ್ಧತ್ವದಲ್ಲಿ ಸರ್ವೋತ್ತಮನು ಮಹಿಮೆ ಹೊಂದಿದವನು, ಭಯಂಕರನೂ, ಅದ್ಭುತ ಕೃತ್ಯಗಳನ್ನು ನಡಿಸುವವನೂ ಆಗಿರುವ ನಿನಗೆ ಸಮಾನರು ಯಾರಿದ್ದಾರೆ?


ಸೂಚಕ ಕಾರ್ಯಗಳಿಂದಲೂ, ಅದ್ಭುತಕಾರ್ಯಗಳಿಂದಲೂ, ನಾನಾ ವಿಧವಾದ ಮಹತ್ಕಾರ್ಯಗಳಿಂದಲೂ ಮತ್ತು ತನ್ನಿಚ್ಛೆಯಂತೆ ಪವಿತ್ರಾತ್ಮವರಗಳನ್ನು ನೀಡುವುದರ ಮೂಲಕವೂ ದೇವರು ತಾನೇ ಅದನ್ನು ಸಾಕ್ಷಿಕರಿಸಿದನು.


“ಕ್ರೇತ್ ದ್ವೀಪದವರು ಯಾವಾಗಲೂ ಸುಳ್ಳುಗಾರರೂ, ದುಷ್ಟಮೃಗಗಳೂ, ಸೋಮಾರಿಗಳಾದ ಹೊಟ್ಟೆಬಾಕರೂ” ಆಗಿದ್ದಾರೆಂದು ಅವರ ಸ್ವಂತ ಪ್ರವಾದಿಗಳಲ್ಲಿಯೇ ಒಬ್ಬ ಪ್ರವಾದಿಯು ಹೇಳಿದ್ದಾನೆ.


ಅರಬಿಯದ ಎಲ್ಲಾ ಅರಸರು, ಅರಣ್ಯವಾಸಿಗಳಾದ ಮಿಶ್ರಜಾತಿಯವರ ಎಲ್ಲಾ ಅರಸರು,


ನಿನ್ನ ಅದ್ಭುತಕೃತ್ಯಗಳ ವರ್ಣನೆಯ ಸ್ತೋತ್ರ ಮಾಡುತ್ತಾ, ನಿನ್ನ ಯಜ್ಞವೇದಿಯನ್ನು ಪ್ರದಕ್ಷಿಣೆಮಾಡುವೆನು.


ಅಪ್ರಮೇಯ ಮಹಾಕಾರ್ಯಗಳನ್ನೂ, ಅಸಂಖ್ಯಾತವಾದ ಅದ್ಭುತಕೃತ್ಯಗಳನ್ನೂ ಮಾಡುತ್ತಾನೆ.


ಕ್ರೇತ್ ದ್ವೀಪದಲ್ಲಿ ಇನ್ನೂ ಕ್ರಮಕ್ಕೆ ಬಾರದಿರುವ ಕಾರ್ಯಗಳನ್ನು ಕ್ರಮಪಡಿಸಿ, ಪಟ್ಟಣ ಪಟ್ಟಣಗಳಲ್ಲಿ ಹಿರಿಯರನ್ನು ನೇಮಿಸಬೇಕೆಂದು ನಾನು ನಿನಗೆ ಅಪ್ಪಣೆಕೊಟ್ಟು ನಿನ್ನನ್ನು ಅಲ್ಲಿ ಬಿಟ್ಟು ಬಂದೆ.


ಆ ಬಂದರು ಪ್ರದೇಶ; ಚಳಿಗಾಲವನ್ನು ಕಳೆಯುವುದಕ್ಕೆ ಅನುಕೂಲವಲ್ಲವಾದುದರಿಂದ, ಅಲ್ಲಿಂದ ಹೊರಟು ಸಾಧ್ಯವಾದರೆ ಹೇಗೂ ಫೊಯಿನಿಕ್ಸ ಊರನ್ನು ಸೇರಿ, ಅಲ್ಲೇ ಆ ಚಳಿಗಾಲವನ್ನು ಕಳೆಯಬೇಕೆಂದು ಹೆಚ್ಚು ಜನರು ತಮ್ಮ ಅಭಿಪ್ರಾಯಗಳನ್ನು ಹೇಳಿದರು. ಫೊಯಿನಿಕ್ಸವು ಕ್ರೇತ ದ್ವೀಪದ ಒಂದು ಬಂದರು ಪ್ರದೇಶ, ಈಶಾನ್ಯ ದಿಕ್ಕಿಗೂ, ಆಗ್ನೇಯ ದಿಕ್ಕಿಗೂ ಅಭಿಮುಖವಾಗಿದೆ.


ಅನೇಕ ದಿನಗಳ ಕಾಲ ನಿಧಾನವಾಗಿ ಸಾಗುತ್ತಾ ಎಷ್ಟೋ ಪ್ರಯಾಸದಿಂದ ಕ್ನೀದಕ್ಕೆ ಸಮೀಪವಾಗಿ ಬಂದಾಗ ಗಾಳಿಯು ನಮ್ಮನ್ನು ಅಲ್ಲಿಗೆ ಮುಟ್ಟಗೊಡಿಸದೆ ಇದ್ದುದರಿಂದ ಕ್ರೇತ ದ್ವೀಪದ ಮರೆಯಲ್ಲಿ ಸಾಗಿ ಸಲ್ಮೋನೆಗೆ ಸಮೀಪವಾಗಿ ಬಂದು,


ಕಣ್ಣೆತ್ತಿ ಬೋಳು ಗುಡ್ಡಗಳನ್ನು ನೋಡು, ಯಾವುದರಲ್ಲಿ ನಿನ್ನನ್ನು ನೀನು ಕೆಡಿಸಿಕೊಳ್ಳಲಿಲ್ಲ? ಅರಬಿಯನು ಅಡವಿಯಲ್ಲಿ ಹೊಂಚುಹಾಕುವ ಹಾಗೆ ನೀನು ದಾರಿಯ ಮಗ್ಗುಲಲ್ಲಿ ಅವರಿಗಾಗಿ ಹೊಂಚು ಹಾಕುತ್ತಾ ಕುಳಿತಿದ್ದಿ; ನಿನ್ನ ವ್ಯಭಿಚಾರದಿಂದಲೂ, ನಿನ್ನ ಕೆಟ್ಟತನದಿಂದಲೂ ದೇಶವನ್ನು ಅಪವಿತ್ರಮಾಡಿದ್ದಿ.


ಈ ವಿವೇಕವು ಸಹ ಅತಿಶಯವಾದ ಆಲೋಚನಾಪರನೂ, ಸುಜ್ಞಾನ ಶ್ರೇಷ್ಠನೂ ಆಗಿರುವ, ಸೇನಾಧೀಶ್ವರನಾದ ಯೆಹೋವನಿಂದಲೇ ಉಂಟಾಗುತ್ತದೆ.


ಯೆಹೋವನೇ, ನೀನೇ ನನ್ನ ದೇವರು; ನೀನು ಸತ್ಯ ಪ್ರಾಮಾಣಿಕತೆಗಳನ್ನು ಅನುಸರಿಸಿ, ಆದಿ ಸಂಕಲ್ಪಗಳನ್ನು ನೆರವೇರಿಸುತ್ತಾ, ಅದ್ಭುತಗಳನ್ನು ನಡೆಸಿದ ಕಾರಣ ನಿನ್ನನ್ನು ಕೊಂಡಾಡುವೆನು, ನಿನ್ನ ನಾಮವನ್ನು ಮಹಿಮೆಪಡಿಸುವೆನು.


ಅದು ಎಂದಿಗೂ ನಿವಾಸ ಸ್ಥಳವಾಗದು. ತಲತಲಾಂತರಕ್ಕೂ ಅಲ್ಲಿ ಯಾರೂ ವಾಸಿಸರು; ಯಾವ ಅರಬಿಯನೂ ಗುಡಾರ ಹಾಕನು ಅಥವಾ ಕುರುಬರು ಮಂದೆಯನ್ನು ತಂಗಿಸರು.


ಮಹತ್ಕಾರ್ಯಗಳನ್ನು ನಡೆಸುವುದಕ್ಕೆ ಆತನೊಬ್ಬನೇ ಶಕ್ತನು, ಆತನ ಪ್ರೀತಿಯು ಶಾಶ್ವತವಾದದ್ದು.


ಆತನು ತನ್ನ ಅದ್ಭುತಕೃತ್ಯಗಳ ಜ್ಞಾಪಕವನ್ನು ಉಳಿಯಮಾಡಿದ್ದಾನೆ. ಯೆಹೋವನು ಕೃಪೆಯೂ, ಕನಿಕರವೂ ಉಳ್ಳವನು.


ಅವರು ಯೆಹೋವನ ಕೃಪೆಗೋಸ್ಕರವೂ, ಆತನು ಮಾನವರಿಗಾಗಿ ನಡೆಸಿದ ಅದ್ಭುತಗಳಿಗೋಸ್ಕರವೂ, ಆತನನ್ನು ಕೊಂಡಾಡಲಿ.


ಅವರು ಯೆಹೋವನ ಕೃಪೆಗೋಸ್ಕರವೂ, ಆತನು ಮಾನವರಿಗಾಗಿ ನಡೆಸಿದ ಅದ್ಭುತಗಳಿಗೋಸ್ಕರವೂ, ಆತನನ್ನು ಕೊಂಡಾಡಲಿ.


ಅವರು ಯೆಹೋವನ ಕೃಪೆಗೋಸ್ಕರವೂ, ಆತನು ಮಾನವರಿಗಾಗಿ ನಡೆಸಿದ ಅದ್ಭುತಗಳಿಗೋಸ್ಕರವೂ, ಆತನನ್ನು ಕೊಂಡಾಡಲಿ.


ಜನಾಂಗಗಳಲ್ಲಿ ಆತನ ಘನತೆಯನ್ನೂ, ಎಲ್ಲಾ ಜನರಲ್ಲಿ ಆತನ ಅದ್ಭುತಕೃತ್ಯಗಳನ್ನೂ ಪ್ರಸಿದ್ಧಪಡಿಸಿರಿ.


ಯೆಹೋವನೇ, ಗಗನವು ನಿನ್ನ ಮಹತ್ತನ್ನು ಪ್ರಸಿದ್ಧಪಡಿಸುವುದು; ನಿನ್ನ ಸತ್ಯವನ್ನು ಪರಿಶುದ್ಧರ ಸಭೆಯಲ್ಲಿ ಕೀರ್ತಿಸುವೆನು.


ಯೆಹೋವನ ಘನತೆಯನ್ನು, ಆತನ ಪರಾಕ್ರಮವನ್ನು, ಅದ್ಭುತಕೃತ್ಯಗಳನ್ನು ಮುಂದಣ ಸಂತತಿಯವರಿಗೆ ವಿವರಿಸುವೆವು.


ಯೆಹೋವನ ಕೃತ್ಯಗಳನ್ನು ವರ್ಣಿಸುವೆನು; ಪೂರ್ವದಿಂದ ನೀನು ನಡೆಸಿದ ಅದ್ಭುತಗಳನ್ನು ನೆನಪು ಮಾಡಿಕೊಳ್ಳುವೆನು.


ದೇವರೇ, ನೀನು ಬಾಲ್ಯದಿಂದಲೂ ನನ್ನನ್ನು ಉಪದೇಶಿಸುತ್ತಾ ಬಂದಿದ್ದಿ. ನಾನು ನಿನ್ನ ಅದ್ಭುತಕೃತ್ಯಗಳನ್ನು ಇಂದಿನ ವರೆಗೂ ಪ್ರಚುರಪಡಿಸುತ್ತಿದ್ದೇನೆ.


ಯೆಹೋವನೇ, ನನ್ನ ದೇವರೇ, ನಿನಗೆ ಸಮಾನನಾದ ದೇವರು ಯಾರು? ನಮ್ಮ ಹಿತಕ್ಕಾಗಿ ನೀನು ಮಾಡಿದ ಆಲೋಚನೆಗಳೂ, ಅದ್ಭುತಕಾರ್ಯಗಳೂ ಎಷ್ಟೋ ವಿಶೇಷವಾಗಿವೆ; ಅವುಗಳನ್ನು ವಿವರಿಸಿ ಹೇಳೋಣವೆಂದರೆ ಅಸಾಧ್ಯ; ಅವು ಅಸಂಖ್ಯಾತವಾಗಿವೆ.


ಫಿಲಿಷ್ಟಿಯರೊಡನೆ ಗೂರ್ ಬಾಳಿನಲ್ಲಿರುವ ಅರಬಿಯರೊಡನೆ ಹಾಗು ಮೆಗೂನ್ಯರೊಡನೆ ಯುದ್ಧ ಮಾಡಿದಾಗ ಯೆಹೋವನು ಅವನಿಗೆ ಸಹಾಯ ಮಾಡಿದನು.


ಫಿಲಿಷ್ಟಿಯರಲ್ಲಿ ಕೆಲವರು ಯೆಹೋಷಾಫಾಟನಿಗೆ ಕಾಣಿಕೆಯನ್ನೂ, ಕಪ್ಪವನ್ನಾಗಿ ಬೆಳ್ಳಿಯನ್ನೂ ತಂದುಕೊಡುತ್ತಿದ್ದರು. ಅರಬಿಯರು ತಮ್ಮ ಪಶುಪ್ರಾಣಿಗಳ ಹಿಂಡುಗಳಿಂದ ಏಳು ಸಾವಿರದ ಏಳು ನೂರು ಟಗರುಗಳನ್ನೂ, ಏಳು ಸಾವಿರದ ಏಳು ನೂರು ಆಡುಗಳನ್ನೂ ಕೊಡುತ್ತಿದ್ದರು.


ಅದರ ಜೊತೆಗೆ ದೇಶಾಂತರ ವ್ಯಾಪಾರಿಗಳೂ, ವರ್ತಕರೂ, ಅರಬಿಯ ಅರಸರೂ, ಪ್ರದೇಶಾಧಿಪತಿಗಳೂ ಸಹ ಸೊಲೊಮೋನನಿಗೆ ಬೆಳ್ಳಿ ಬಂಗಾರವನ್ನು ಕೊಡುತ್ತಿದ್ದರು.


ಹಾಗರಳು ಅಂದರೆ ಅರಬಸ್ಥಾನದಲ್ಲಿರುವ ಸೀನಾಯಿ ಪರ್ವತವನ್ನು ಸೂಚಿಸುವಂತಹದ್ದು ಈಗಿನ ಯೆರೂಸಲೇಮಿಗೆ ಎಂಬುವಳಿಗೆ ಹೋಲಿಕೆಯಾಗಿದ್ದಾಳೆ, ಏಕೆಂದರೆ ಆಕೆಯು ತನ್ನ ಮಕ್ಕಳೊಂದಿಗೆ ಈಗ ದಾಸತ್ವದಲ್ಲಿದ್ದಾಳೆ.


ಯೆರೂಸಲೇಮಿಗೆ ನನಗಿಂತ ಮೊದಲು ಅಪೊಸ್ತಲರಾಗಿದ್ದವರ ಬಳಿಗೂ ಹೋಗದೆ ಅರಬಸ್ಥಾನಕ್ಕೆ ಹೋಗಿ ತಿರುಗಿ ದಮಸ್ಕಕ್ಕೆ ಬಂದೆನು.


ಅರಬಿಯ ವಿಷಯವಾದ ದೈವೋಕ್ತಿ. ಓ ದೇದಾನ್ಯರೇ, ಅರಬಿಯದ ಮರುಭೂಮಿಯಲ್ಲಿ ಇಳಿದುಕೊಳ್ಳಿರಿ.


ದೇವರು ತನ್ನ ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ಇಟ್ಟಿದ್ದಾನೆ. ಆ ಮೇಲೆ ಮಹತ್ಕಾರ್ಯ ಮಾಡುವ ಶಕ್ತಿಯನ್ನು, ನಾನಾ ರೋಗಗಳನ್ನು ವಾಸಿಮಾಡುವ ವರವನ್ನೂ, ಪರಸಹಾಯ ಮಾಡುವ ಗುಣವನ್ನೂ, ಕಾರ್ಯಗಳನ್ನು ನಿರ್ವಹಿಸುವ ಜ್ಞಾನವನ್ನು ಮತ್ತು ವಿವಿಧ ಭಾಷೆಗಳನ್ನಾಡುವ ವರವನ್ನೂ ಅವರವರಿಗೆ ಬೇರೆ ಬೇರೆಯಾಗಿ ಕೊಟ್ಟಿದ್ದಾನೆ.


ಫ್ರುಗ್ಯ, ಪಂಫುಲ್ಯ, ಐಗುಪ್ತ ಮತ್ತು ಕುರೇನೆಯ ಮಗ್ಗುಲಲ್ಲಿರುವ ಲಿಬ್ಯ, ಈ ಸೀಮೆಗಳಲ್ಲಿ ವಾಸವಾಗಿರುವವರೂ, ರೋಮಾಪುರದಿಂದ ಬಂದಿರುವ ಯೆಹೂದ್ಯರೂ, ಯೆಹೂದ್ಯ ಮತಾವಲಂಬಿಗಳೂ, ಕ್ರೇತ್ಯರೂ, ಅರಬ್ಬೀದೇಶದವರೂ


ಎಲ್ಲರೂ ಬೆರಗಾಗಿ ಕಳವಳಗೊಂಡು, “ಇದೇನಾಗಿರಬಹುದು ಎಂದು ಒಬ್ಬರನ್ನೊಬ್ಬರು ಕೇಳುತ್ತಿದ್ದರು?”


ತೆಂಕಣ ಗಾಳಿ ಮೆಲ್ಲಗೆ ಬೀಸಲಾಗಿ ತಮ್ಮ ಉದ್ದೇಶವು ಸಾರ್ಥಕವಾಯಿತೆಂದು ಭಾವಿಸಿ ಲಂಗರುಗಳನ್ನು ತೆಗೆದು ಕ್ರೇತ ದ್ವೀಪವನ್ನು ಅನುಸರಿಸಿ ತೀರದ ಮಗ್ಗುಲಲ್ಲೇ ಹೋಗುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು