Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 2:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಏಕೆಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ, ನಿನ್ನ ಪವಿತ್ರನಿಗೆ ಕೊಳೆಯಲು ಬಿಡಲಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಏಕೆನೆ, ದೂಡಲಾರೆ ಪಾತಾಳಕೆ ನೀನೆನ್ನ ಜೀವಾತ್ಮವನು, ಕೊಳೆಯಬಿಡಲಾರೆ ನೀನೊಲಿದಾತನನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಯಾಕಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವದಿಲ್ಲ, ನಿನ್ನ ಪ್ರಿಯನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಯಾಕೆಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ತೊರೆದುಬಿಡುವುದಿಲ್ಲ. ನಿನ್ನ ಪರಿಶುದ್ಧನ ದೇಹವು ಸಮಾಧಿಯಲ್ಲಿ ಕೊಳೆಯಲು ನೀನು ಅವಕಾಶ ಕೊಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಏಕೆಂದರೆ ನೀವು ನನ್ನ ಪ್ರಾಣವನ್ನು ಪಾತಾಳದಲ್ಲಿ ಬಿಟ್ಟುಬಿಡುವುದಿಲ್ಲ, ನಿಮ್ಮ ಪರಿಶುದ್ಧ ವ್ಯಕ್ತಿಯನ್ನು ಕೊಳೆಯುವಂತೆ ಬಿಡುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಕಶ್ಯಾಕ್ ಮಟ್ಲ್ಯಾರ್ ತಿಯಾ ಮಾಜೊ ಜಿವಾಚೊ ಆತ್ಮೊ ಪಾತಾಳಾತ್ ಘಾಲಿನೆಯ್, ತಿಯಾ ಪವಿತ್ರ್ ಹೊವ್ನ್ ಹೊತ್ತೆ ಮಾಜೆ ಆಂಗ್ ಕುಸುನ್ ಜಾವ್ಕ್ ಅವಕಾಸ್ ದಿನೆಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 2:27
26 ತಿಳಿವುಗಳ ಹೋಲಿಕೆ  

ಏಕೆಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ; ನಿನ್ನ ಭಕ್ತನಿಗೆ ಅಧೋಲೋಕವನ್ನು ನೋಡಗೊಡಿಸುವುದಿಲ್ಲ.


ಕ್ರಿಸ್ತನ ಪುನರುತ್ಥಾನವನ್ನೇ ಕುರಿತು, ಆತನು ಪಾತಾಳದಲ್ಲಿ ಬಿಡಲ್ಪಡಲಿಲ್ಲವೆಂತಲೂ, ಆತನ ಶರೀರವು ಕೊಳೆಯುವ ಅವಸ್ಥೆಯನ್ನು ಅನುಭವಿಸುವುದಿಲ್ಲವೆಂತಲೂ ಹೇಳಿದನು.


ಸದಾ ಜೀವಿಸುವವನೂ ಆಗಿದ್ದೇನೆ. ಸತ್ತವನಾಗಿದ್ದೆನು, ಆದರೆ ಇಗೋ ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ. ಮೃತ್ಯುವಿನ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿ ಇವೆ.


ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು. ಮೃತ್ಯುವೂ ಪಾತಾಳವೂ ತಮ್ಮ ವಶದಲ್ಲಿದ್ದ ಸತ್ತವರನ್ನು ಒಪ್ಪಿಸಿದವು. ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳ ಪ್ರಕಾರ ನ್ಯಾಯತೀರ್ಪಾಯಿತು.


“ಹೇ! ಮರಣವೇ ನಿನ್ನ ಜಯವೆಲ್ಲಿ? ಹೇ! ಮರಣವೇ ನಿನ್ನ ವಿಷದ ಕೊಂಡಿ ಎಲ್ಲಿ?”


ಕಡೆ ತುತ್ತೂರಿಯ ಧ್ವನಿಯು ಮೊಳಗುವಲ್ಲಿ, ಕ್ಷಣಮಾತ್ರದಲ್ಲಿ, ರೆಪ್ಪೆಬಡಿಯುವಷ್ಟರೊಳಗಾಗಿ ನಾವೆಲ್ಲರೂ ಮಾರ್ಪಡುವೆವು. ಹೌದು, ತುತ್ತೂರಿಯು ಮೊಳಗಿ ಸತ್ತವರು ನಿರ್ಲಯರಾಗಿ ಎಬ್ಬಿಸಲ್ಪಡುವರು, ನಾವು ರೂಪಾಂತರ ಹೊಂದುವೆವು.


ಯೇಸು, “ಆ ಕಲ್ಲನ್ನು ತೆಗೆದು ಹಾಕಿರಿ” ಎನ್ನಲು, ತೀರಿಹೋದವನ ಸಹೋದರಿಯಾದ ಮಾರ್ಥಳು ಆತನಿಗೆ, “ಕರ್ತನೇ, ಅವನು ಸತ್ತು ನಾಲ್ಕು ದಿನಗಳಾದವು, ಈಗ ದುರ್ವಾಸನೆ ಬಂದಿರಬಹುದು” ಎಂದಳು.


ನೀನು ಬಹಳವಾಗಿ ಕನಿಕರಿಸಿ, ನನ್ನ ಪ್ರಾಣವನ್ನು ಪಾತಾಳದ ತಳದಿಂದ ತಪ್ಪಿಸಿದ್ದಿಯಲ್ಲಾ.


“ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ, ಪರಿಶುದ್ಧನೂ, ಸತ್ಯವಂತನೂ, ದಾವೀದನ ಬೀಗದಕೈಯುಳ್ಳವನೂ, ಯಾರಿಂದಲೂ ಮುಚ್ಚಲಾಗದಂತೆ ತೆರೆಯುವವನೂ, ಯಾರಿಂದಲೂ ತೆರೆಯಲಾಗದಂತೆ ಮುಚ್ಚುವವನೂ ಆಗಿರುವಾತನು ಹೇಳುವುದೇನಂದರೆ,


ಆದರೆ ನೀವು ಪವಿತ್ರನಾಗಿರುವಾತನಿಂದ ಅಭಿಷೇಕವನ್ನು ಹೊಂದಿದವರಾಗಿದ್ದೀರಿ ಎಂಬ ಸತ್ಯವನ್ನೂ ತಿಳಿದವರಾಗಿದ್ದೀರಿ.


ಅದಕ್ಕೆ ದೂತನು, “ಪವಿತ್ರಾತ್ಮನು ನಿನ್ನ ಮೇಲೆ ಬರುವನು; ಪರಾತ್ಪರನಾದ ದೇವರ ಶಕ್ತಿಯು ನಿನ್ನನ್ನು ಅವರಿಸುವುದು; ಆದುದರಿಂದ ನಿನಗೆ ಹುಟ್ಟುವ ಆ ಪವಿತ್ರ ಶಿಶು ದೇವರ ಮಗನೆನಿಸಿಕೊಳ್ಳುವನು.


ಆ ದೆವ್ವವು, “ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನೀನು ನಮ್ಮನ್ನು ನಾಶಮಾಡುವುದಕ್ಕೆ ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು. ನೀನು ದೇವರಿಂದ ಬಂದ ಪರಿಶುದ್ಧನು” ಎಂದು ಕೂಗಿ ಹೇಳಿತು.


ಎಲೈ ಕಪೆರ್ನೌಮೇ ನೀನು ಪರಲೋಕಕ್ಕೇರುವೇ ಎಂದು ನೆನಸುತ್ತೀಯೋ? ಇಲ್ಲ, ಪಾತಾಳಕ್ಕೆ ಇಳಿಯುವೆ. ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ ಅದು ಇಂದಿನ ವರೆಗೆ ಉಳಿದಿರುತ್ತಿತ್ತು.


ಪರ್ವತಗಳ ತಳಹದಿಗೆ ಇಳಿದುಹೋದೆನು, ಭೂಲೋಕದ ದ್ವಾರಗಳ ಚಿಲಕಗಳು ಎಂದಿಗೂ ತೆಗೆಯದ ಹಾಗೆ ನನ್ನನ್ನು ಬಂಧಿಸಿದವು; ನನ್ನ ದೇವರಾದ ಯೆಹೋವನೇ, ನೀನು ನನ್ನ ಪ್ರಾಣವನ್ನು ಅಧೋಲೋಕದೊಳಗಿನಿಂದ ಉದ್ಧರಿಸಿದ್ದೀ.


ಮರಣಪಾಶಗಳು ನನ್ನನ್ನು ಸುತ್ತಿಕೊಂಡಿದ್ದವು; ಪಾತಾಳ ವೇದನೆಗಳು ನನ್ನನ್ನು ಹಿಡಿದಿದ್ದವು. ಚಿಂತೆಯಲ್ಲಿಯೂ, ಇಕ್ಕಟ್ಟಿನಲ್ಲಿಯೂ ಬಿದ್ದುಹೋಗಿದ್ದೆನು.


ಆ ಕಾಲದಲ್ಲಿ ನೀನು ದರ್ಶನದಲ್ಲಿ ನಿನ್ನ ಭಕ್ತರಿಗೆ ಹೇಳಿದ್ದೇನೆಂದರೆ, “ಒಬ್ಬ ಶೂರನಿಗೆ ರಕ್ಷಾಬಲವನ್ನು ಅನುಗ್ರಹಿಸಿದ್ದೇನೆ; ಪ್ರಜೆಗಳಲ್ಲಿ ಒಬ್ಬ ಯೌವನಸ್ಥನನ್ನು ಆರಿಸಿ ಉನ್ನತಸ್ಥಾನದಲ್ಲಿಟ್ಟಿದ್ದೇನೆ.


ಆದರೆ ದೇವರು ನನ್ನ ಪ್ರಾಣವನ್ನು ಮೃತ್ಯುಹಸ್ತದಿಂದ ತಪ್ಪಿಸಿ, ನನ್ನನ್ನು ಸ್ವೀಕಾರಮಾಡುವನು. ಸೆಲಾ


ಆ ಮಾತಿಗೆ ಅನುಸಾರವಾಗಿಯೇ ಈ ಪಟ್ಟಣದಲ್ಲಿ ಹೆರೋದನೂ, ಪೊಂತ್ಯ ಪಿಲಾತನೂ, ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಅನ್ಯಜನರೊಡನೆ ಮತ್ತು ಇಸ್ರಾಯೇಲ್ ಜನರೊಡನೆ ಒಟ್ಟಾಗಿ ಸೇರಿಕೊಂಡು,


ನೀವು ಪರಿಶುದ್ಧನೂ, ನೀತಿವಂತನೂ ಆಗಿರುವ ಯೇಸುವನ್ನು ಬೇಡವೆಂದು ಹೇಳಿ ಕೊಲೆಗಾರನಾದ ಒಬ್ಬನನ್ನು ಬಿಡಿಸಿಕೊಡಬೇಕೆಂದು ಬೇಡಿಕೊಂಡು ಜೀವದಾಯಕನಾದ ಕ್ರಿಸ್ತನನ್ನು ಕೊಲ್ಲಿಸಿದ್ದೀರಿ.


ಅವನು ಪಾತಾಳದೊಳಗೆ ಯಾತನೆಪಡುತ್ತಾ ಇರುವಲ್ಲಿ ಕಣ್ಣೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಗೆ ಒರಗಿಕೊಂಡಿದ್ದ ಲಾಜರನನ್ನೂ ನೋಡಿ,


ತರುವಾಯ ಯೇಸು, “ನಾನು ನಿಮ್ಮ ಸಂಗಡ ಇದ್ದಾಗ ಇದೆಲ್ಲಾ ನಿಮಗೆ ತಿಳಿಸಲಿಲ್ಲವೇ? ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿಯೂ, ಪ್ರವಾದಿಗಳ ಗ್ರಂಥಗಳಲ್ಲಿಯೂ, ಕೀರ್ತನೆಗಳಲ್ಲಿಯೂ ಬರೆದಿರುವುದೆಲ್ಲಾ ನೆರವೇರುವುದು ಅಗತ್ಯವೆಂದು ನಿಮಗೆ ಹೇಳಲಿಲ್ಲವೇ?” ಅಂದನು.


ಆದಕಾರಣ ನನ್ನ ಹೃದಯವು ಹರ್ಷಿಸಿತು; ನನ್ನ ನಾಲಿಗೆಯು ಉಲ್ಲಾಸಧ್ವನಿಯನ್ನು ಮಾಡಿತು, ನನ್ನ ಶರೀರವೂ ನಿರೀಕ್ಷೆಯಿಂದ ನೆಲೆಯಾಗಿರುವುದು;


ಜೀವದ ಮಾರ್ಗಗಳನ್ನು ನನಗೆ ತಿಳಿಯಪಡಿಸಿದ್ದೀ; ನಿನ್ನ ಸಮ್ಮುಖದಲ್ಲಿ ನನ್ನನ್ನು ಆನಂದಭರಿತನನ್ನಾಗಮಾಡುವಿ’ ಎಂದು ಹೇಳಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು