Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 2:42 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಅವರು ಅಪೊಸ್ತಲರ ಬೋಧನೆಯಲ್ಲಿಯೂ, ಸಹೋದರರೊಂದಿಗೆ ಅನ್ಯೋನ್ಯತೆಯಲ್ಲಿಯೂ, ರೊಟ್ಟಿಮುರಿಯುವುದರಲ್ಲಿಯೂ, ಪ್ರಾರ್ಥನೆಗಳಲ್ಲಿಯೂ ನಿರತರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಅಂದಿನಿಂದ ಅವರು ಪ್ರೇಷಿತರ ಬೋಧನೆಯನ್ನು ಕೇಳುವುದರಲ್ಲಿ ನಿರತರಾಗಿದ್ದರು; ಅನ್ಯೋನ್ಯವಾಗಿ ಬಾಳುತ್ತಿದ್ದರು; ರೊಟ್ಟಿ ಮುರಿಯುವ ಸಹಭೋಜನದಲ್ಲಿ ಪಾಲ್ಗೊಳ್ಳುತ್ತಿದ್ದರು ಹಾಗೂ ಪ್ರಾರ್ಥನಾಕೂಟಗಳಲ್ಲಿ ಭಾಗವಹಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಇವರು ಅಪೊಸ್ತಲರ ಬೋಧನೆಯನ್ನು ಕೇಳುವದರಲ್ಲಿಯೂ ಸಹೋದರರ ಅನ್ಯೋನ್ಯತೆಯಲ್ಲಿಯೂ ರೊಟ್ಟಿ ಮುರಿಯುವದರಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನಿರತರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಇವರೆಲ್ಲರೂ ಅಪೊಸ್ತಲರ ಬೋಧನೆಯನ್ನು ಕೇಳುವುದರಲ್ಲಿಯೂ ಸಹೋದರರ ಅನ್ಯೋನ್ಯತೆಯಲ್ಲಿಯೂ ರೊಟ್ಟಿ ಮುರಿಯುವುದರಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನಿರತರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಅವರೆಲ್ಲರು ಅಪೊಸ್ತಲರ ಬೋಧನೆಯಲ್ಲಿ, ಅನ್ಯೋನ್ಯತೆಯಲ್ಲಿ, ರೊಟ್ಟಿ ಮುರಿಯುವುದರಲ್ಲಿ, ಪ್ರಾರ್ಥನೆ ಮಾಡುವುದರಲ್ಲಿ ತಮ್ಮನ್ನು ಸಮರ್ಪಿಸಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

42 ತೆನಿ ಅಪೊಸ್ತಲಾಂಚಿ ಶಿಕಾಪಾ ಆಯಿಕ್ತಲ್ಯಾತ್, ಭಾವ್ ಭೆನಿಯಾಂಚ್ಯಾ ಎಕ್ವಟ್ಟಾತ್ ಅನಿ ಎಕ್ ಹೊವ್ನ್ ಜೆವಾನ್ ಕರ್‍ತಲ್ಯಾತ್ ಅನಿ ಮಾಗ್ನೆ ಕರ್‍ತಲ್ಯಾತ್ ಅಪ್ಲೊ ಎಳ್ ಖರಚ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 2:42
35 ತಿಳಿವುಗಳ ಹೋಲಿಕೆ  

ಸಭೆಯಾಗಿ ಸೇರುವ ರೂಢಿಯನ್ನು ಕೆಲವರು ಬಿಟ್ಟಂತೆ ನಾವು ಬಿಟ್ಟು ಬಿಡದೆ, ಆ ದಿನವು ಸಮೀಪಿಸುತ್ತಾ ಬರುತ್ತದೆಂದು ನೀವು ತಿಳಿದುಕೊಂಡಿರುವುದರಿಂದ ಒಬ್ಬರನ್ನೊಬ್ಬರು ಮತ್ತಷ್ಟು ಹೆಚ್ಚಾಗಿಯೇ ಪ್ರೋತ್ಸಾಹಿಸುತ್ತಿರೋಣ.


ಅಲ್ಲಿ ಕೆಲವು ಮಂದಿ ಸ್ತ್ರೀಯರೂ, ಯೇಸುವಿನ ತಾಯಿಯಾದ ಮರಿಯಳೂ, ಆತನ ತಮ್ಮಂದಿರೂ ಅವರ ಸಂಗಡ ಇದ್ದರು, ಇವರೆಲ್ಲರೂ ಏಕಮನಸ್ಸಿನಿಂದ ಪ್ರಾರ್ಥನೆಯಲ್ಲಿ ನಿರತರಾಗಿದ್ದರು.


ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಸೇರಬೇಕೆಂದು ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಚುರಪಡಿಸುತ್ತೇವೆ. ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರುವಂಥದ್ದಾಗಿದೆ.


ಆದರೆ ಆತನು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲ್ಲೊಬ್ಬರು ಅನ್ಯೋನ್ಯತೆಯಲ್ಲಿರುತ್ತೇವೆ. ಆತನ ಒಬ್ಬನೇ ಕುಮಾರನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಬಿಡಿಸಿ ಶುದ್ಧೀಕರಿಸುತ್ತದೆ.


ಅವರು ಪ್ರತಿದಿನ ಏಕಮನಸ್ಸಿನಿಂದ ದೇವಾಲಯದಲ್ಲಿ ಸೇರಿಬರುತ್ತಾ, ಮನೆಮನೆಗಳಲ್ಲಿ ರೊಟ್ಟಿಮುರಿದು ಉಲ್ಲಾಸದಿಂದಲೂ, ಸರಳ ಸಹೃದಯದಿಂದಲೂ ಸಹಭೋಜನ ಮಾಡುತ್ತಾ ಇದ್ದರು.


ವಾರದ ಮೊದಲನೆಯ ದಿನದಲ್ಲಿ ನಾವು ರೊಟ್ಟಿ ಮುರಿಯುವ ನಿಯಮಕ್ಕಾಗಿ ಸೇರಿಬಂದಾಗ ಪೌಲನು ಅಲ್ಲಿ ನೆರೆದಂತಹ ವಿಶ್ವಾಸಿಗಳಿಗೆ ಬೋಧನೆಮಾಡಿದನು. ಮರುದಿನ ಹೊರಡಬೇಕೆಂದಿದ್ದ ಪೌಲನು ಅವರಿಗೆ ಬೋಧಿಸುತ್ತಾ ಮಧ್ಯರಾತ್ರಿಯವರೆಗೂ ಉಪನ್ಯಾಸವನ್ನು ನೀಡಿದನು.


ನೀವು ಪವಿತ್ರಾತ್ಮಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಗಳಿಂದಲೂ ದೇವರನ್ನು ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ದೇವಜನರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರಿ. ನನಗಾಗಿಯೂ ಪ್ರಾರ್ಥನೆ ಮಾಡಿರಿ.


ಪ್ರಿಯರೇ, ನೀವಾದರೋ ನಿಮಗಿರುವ ಅತಿ ಪರಿಶುದ್ಧವಾದ ಕ್ರಿಸ್ತ ನಂಬಿಕೆಯನ್ನು ಆಧಾರವಾಗಿಟ್ಟುಕೊಂಡು ಅಭಿವೃದ್ಧಿಹೊಂದುತ್ತಾ, ಪವಿತ್ರಾತ್ಮಪ್ರೇರಿತರಾಗಿ ಪ್ರಾರ್ಥನೆ ಮಾಡಿರಿ.


ಪ್ರಾರ್ಥನೆಯನ್ನು ತಪ್ಪದೆ ಮಾಡುವವರಾಗಿ, ಎಚ್ಚರವಾಗಿದ್ದು ದೇವರಿಗೆ ಕೃತಜ್ಞತಾಸ್ತುತಿಮಾಡಿರಿ.


ಆಕಾಶದ ಕೆಳಗಿರುವ ಸರ್ವ ಸೃಷ್ಟಿಗೂ ಸಾರಲ್ಪಟ್ಟಂತಹ ಮತ್ತು ನೀವು ಕೇಳಿದಂತಹ ಸುವಾರ್ತೆಯಿಂದ ಉಂಟಾದ ನಿರೀಕ್ಷೆಯಿಂದ ಕದಲಿಹೋಗದಂತೆ ನಂಬಿಕೆಯಲ್ಲಿ ದೃಢವಾಗಿರಿ ಮತ್ತು ನೆಲೆಗೊಂಡಿರಿ. ಇದೇ ಸುವಾರ್ತೆಗೆ ಪೌಲನೆಂಬ ನಾನು ಸೇವಕನಾಗಿದ್ದೇನೆ.


ನೀನಾದರೋ ಕಲಿತು ದೃಢವಾಗಿ ನಂಬಿದ ಬೋಧನೆಗಳಲ್ಲಿ ನೆಲೆಯಾಗಿರು. ಕಲಿಸಿಕೊಟ್ಟವರು ಯಾರೆಂಬುದನ್ನು ಆಲೋಚಿಸು.


ಅಪೊಸ್ತಲರೂ ಪ್ರವಾದಿಗಳೂ ಎಂಬ ಅಡಿಪಾಯದ ಮೇಲೆ ನೀವೂ ಮಂದಿರದೋಪಾದಿಯಲ್ಲಿ ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯವಾದ ಮೂಲೆಗಲ್ಲು.


ಅಲ್ಲಿ ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿ ಕ್ರಿಸ್ತ ನಂಬಿಕೆಯಲ್ಲಿ ಸ್ಥಿರವಾಗಿ ನಿಲ್ಲಿರಿ ಎಂದು ಪ್ರೋತ್ಸಾಹಿಸಿದರು. ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕಾಗಿದೆ ಎಂದು ಬೋಧಿಸಿದರು.


ನಾವಾದರೋ ಪ್ರಾರ್ಥನೆಯನ್ನೂ, ವಾಕ್ಯೋಪದೇಶವನ್ನೂ ಮಾಡುವುದರಲ್ಲಿ ನಿರತರಾಗಿರುವೆವು” ಎಂದು ಹೇಳಿದರು.


ಹೀಗೆ ಪ್ರಾರ್ಥನೆ ಮಾಡಿದ ಕೂಡಲೇ ಅವರು ನೆರೆದಿದ್ದ ಸ್ಥಳವು ನಡುಗಿತು. ಅವರೆಲ್ಲರು ಪವಿತ್ರಾತ್ಮ ಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಹೇಳತೊಡಗಿದರು.


ನೀವು ಕರ್ತನ ಪಾನಪಾತ್ರೆಯಲ್ಲಿಯೂ ಹಾಗೂ ದೆವ್ವಗಳ ಪಾನಪಾತ್ರೆಯಲ್ಲಿಯೂ ಕುಡಿಯಲಾರಿರಿ. ಕರ್ತನ ಪಂಕ್ತಿಯಲ್ಲಿಯೂ ಮತ್ತು ದೆವ್ವಗಳ ಪಂಕ್ತಿಯಲ್ಲಿಯೂ ಊಟಮಾಡಲಾರಿರಿ.


ಕ್ರೈಸ್ತರು ನಿರೀಕ್ಷಿಸುವ ಮಹಾಪದವಿಯನ್ನು ನೆನಸಿ ಉಲ್ಲಾಸವಾಗಿರಿ, ಕಷ್ಟಗಳಲ್ಲಿ ಸೈರಣೆಯುಳ್ಳವರಾಗಿರಿ. ಬೇಸರಗೊಳ್ಳದೆ ಪ್ರಾರ್ಥನೆ ಮಾಡಿರಿ.


ನಾವಾದರೋ ಹಿಂಜರಿದವರಾಗಿ ನಾಶವಾಗುವವರಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವರಾಗಿದ್ದೇವೆ.


ಅವನು ಒಳ್ಳೆಯವನೂ, ಪವಿತ್ರಾತ್ಮ ಭರಿತನೂ, ನಂಬಿಕೆಯಿಂದ ತುಂಬಿದವನೂ ಆಗಿದ್ದನು.


ನೀವು ಎಲ್ಲಾದರಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಂಡು ನಾನು ನಿಮಗೆ ತಿಳಿಸಿಕೊಟ್ಟ ಕಟ್ಟಳೆಗಳನ್ನು ಅನುಸರಿಸಿ ನಡೆಯುತ್ತೀರೆಂದು ನಿಮ್ಮನ್ನು ಹೊಗಳುತ್ತೇನೆ.


ಆಗ ಅವನು ಮೇಲಕ್ಕೆ ಹೋಗಿ ರೊಟ್ಟಿ ಮುರಿದು ಊಟಮಾಡಿ ಬಹಳ ಹೊತ್ತು ಬೆಳಗಾಗುವ ತನಕ ಮಾತನಾಡಿ ಹೊರಟುಹೋದನು.


ಅವರು ನಮ್ಮಿಂದ ಹೊರಟುಹೋದವರು. ಏಕೆಂದರೆ ಅವರು ನಮ್ಮವರಾಗಿರಲಿಲ್ಲ. ಅವರು ನಮ್ಮವರಾಗಿದ್ದರೆ, ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟುಹೋದುದರಿಂದ ಅವರೆಲ್ಲರೂ ನಮ್ಮವರಲ್ಲವೆಂಬುದು ಸ್ಪಷ್ಟವಾಗಿ ತೋರಿಬಂದಿದೆ.


ಕ್ರಿಸ್ತನ ಕೃಪೆಯಿಂದ ನಿಮ್ಮನ್ನು ಕರೆದಾತನನ್ನು ಬಿಟ್ಟು, ಇಷ್ಟು ಬೇಗನೆ ಬೇರೆ ಸುವಾರ್ತೆಯ ಕಡೆಗೆ ನೀವು ತಿರುಗಿದಿರೆಂದು ನಾನು ಆಶ್ಚರ್ಯಪಡುತ್ತೇನೆ.


ಅವರು ಬಿಡುಗಡೆ ಹೊಂದಿ ಸ್ವಂತ ಜನರ ಬಳಿಗೆ ಹೋಗಿ ಮುಖ್ಯಯಾಜಕರೂ ಹಿರಿಯರೂ ತಮಗೆ ಹೇಳಿದ ಮಾತುಗಳನ್ನೆಲ್ಲಾ ತಿಳಿಸಿದರು.


ಆಗ ಅವರಿಬ್ಬರು ದಾರಿಯಲ್ಲಿ ನಡೆದ ಸಂಗತಿಯನ್ನೂ ರೊಟ್ಟಿ ಮುರಿಯುವುದರಲ್ಲಿ ತಾವು ಆತನ ಗುರುತು ಹಿಡಿದೆವೆಂಬುದನ್ನೂ ವಿವರಿಸಿದರು.


ಆತನು ಅವರ ಸಂಗಡ ಊಟಕ್ಕೆ ಕುಳಿತುಕೊಂಡಾಗ ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ, ಮುರಿದು ಅವರಿಗೆ ಕೊಡುತ್ತಿರಲಾಗಿ,


ಆದರೆ ಸಹೋದರರೇ, ನಾನು ನಿಮ್ಮ ಬಳಿಗೆ ಬಂದು ದೇವರು ತಿಳಿಸಿದ್ದನ್ನು ಪ್ರಕಟಿಸದೆ, ಜ್ಞಾನವಾಕ್ಯಗಳನ್ನಾಡದೆ, ಪ್ರವಾದನೆಯನ್ನು ಹೇಳದೆ, ಉಪದೇಶಮಾಡದೆ, ಅನ್ಯಭಾಷೆಗಳನ್ನು ಮಾತ್ರ ಮಾತನಾಡುವವನಾಗಿದ್ದರೆ ನನ್ನಿಂದ ನಿಮಗೇನು ಪ್ರಯೋಜನವಾದೀತು?


ನೀವು ಮೊದಲಿನಿಂದ ಇಂದಿನವರೆಗೂ ಸುವಾರ್ತಾಪ್ರಚಾರದಲ್ಲಿ ಸಹಕಾರಿಗಳಾಗಿದ್ದೀರೆಂದು ನನ್ನ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು