Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 2:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಪಾರ್ಥ್ಯರೂ, ಮೇದ್ಯರೂ, ಏಲಾಮ್ಯರೂ, ಮೆಸೊಪೊತಾಮ್ಯ, ಯೂದಾಯ, ಕಪ್ಪದೋಕ್ಯ, ಪೊಂತ, ಆಸ್ಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಮ್ಮಲ್ಲಿ ಪಾರ್ಥಿಯರು, ಮೀಡಿಯರು ಮತ್ತು ಎಲಾಮಿನವರೂ, ಮೆಸಪೊಟೇಮಿಯ, ಜುದೇಯ ಮತ್ತು ಕಪ್ಪದೋಸಿಯದವರೂ ಇದ್ದಾರೆ. ಪೊಂತ ಮತ್ತು ಏಷ್ಯದವರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಪಾರ್ಥ್ಯರೂ ಮೇದ್ಯರೂ ಏಲಾಮ್ಯರೂ ಮೆಸೊಪೊತಾಮ್ಯ, ಯೂದಾಯ, ಕಪ್ಪದೋಕ್ಯ, ಪೊಂತ, ಆಸ್ಯ, ಫ್ರುಗ್ಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಮ್ಮಲ್ಲಿ ಪಾರ್ಥ್ಯರು, ಮೇದ್ಯರು, ಏಲಾಮಿನವರು, ಮೆಸೊಪೊಟೇಮದವರು, ಯೂದಾಯದವರು, ಕಪ್ಪದೋಕ್ಯಯದವರು, ಪೊಂತದವರು, ಏಷ್ಯಾದವರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಪಾರ್ಥಿಯರು, ಮೇದ್ಯರು ಹಾಗೂ ಏಲಾಮ್ಯರು, ಮೆಸೊಪೊಟೇಮಿಯ, ಯೂದಾಯ, ಕಪ್ಪದೋಕ್ಯ, ಪೊಂತ, ಏಷ್ಯಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಅಮಿ ಸಗ್ಳೆ ಖಲ್ಯಾ ಖಲ್ಯಾ ಗಾಂವಾಂಚೆ ಮಟ್ಲ್ಯಾರ್, ಪಾರ್ಥಿಯಾತ್ಲೆ, ಮೆದಿಯಾತ್ಲೆ, ಎಲಾಮಾತ್ಲೆ , ಮೆಸಾಪೊತಾಮಿಯಾತ್ಲೆ, ಜುದೆಯಾತ್ಲೆ, ಕಪ್ಪದೊಸಿಯಾತ್ಲೆ, ಪೊಂತ್ಯಾತ್ಲೆ, ಎಶ್ಯಾತ್ಲೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 2:9
34 ತಿಳಿವುಗಳ ಹೋಲಿಕೆ  

ಯೇಸು ಕ್ರಿಸ್ತನ ಅಪೊಸ್ತಲನಾದ ಪೇತ್ರನು ಪೊಂತ, ಗಲಾತ್ಯ, ಕಪ್ಪದೋಕ್ಯ, ಆಸ್ಯ, ಬಿಥೂನ್ಯ ಎಂಬ ಸೀಮೆಗಳಲ್ಲಿ ಚದುರಿಹೋಗಿರುವಂಥ ಪರದೇಶಸ್ಥರಾದ ದೇವಜನರಿಗೆ ಅಂದರೆ,


ಆಸ್ಯಸೀಮೆಯಲ್ಲಿರುವ ಏಳು ಸಭೆಗಳಿಗೆ ಯೋಹಾನನು ಬರೆಯುವುದೇನಂದರೆ; ಇರುವಾತನೂ, ಇದ್ದಾತನೂ, ಬರುವಾತನೂ ಆಗಿರುವಾತನಿಂದ ಮತ್ತು ಆತನ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ


ಆಸ್ಯಸೀಮೆಯಲ್ಲಿರುವವರೆಲ್ಲರೂ ನನ್ನನ್ನು ಕೈಬಿಟ್ಟರೆಂಬುದನ್ನು ನೀನು ಬಲ್ಲೆ. ಅವರಲ್ಲಿ ಪುಗೇಲನೂ ಹೆರ್ಮೊಗೇನನೂ ಸೇರಿದ್ದಾರೆ.


ಪೊಂತದಲ್ಲಿ ಹುಟ್ಟಿದ ಅಕ್ವಿಲನೆಂಬ ಒಬ್ಬ ಯೆಹೂದ್ಯನನ್ನು ಅಲ್ಲಿ ಕಂಡನು. ಯೆಹೂದ್ಯರೆಲ್ಲರೂ ರೋಮಾಪುರವನ್ನು ಬಿಟ್ಟುಹೋಗಬೇಕೆಂದು ಕ್ಲೌದಿಯ ಚಕ್ರವರ್ತಿಯು ಆಜ್ಞೆ ವಿಧಿಸಿದ ಕಾರಣ ಅಕ್ವಿಲನೂ ಅವನ ಹೆಂಡತಿಯಾದ ಪ್ರಿಸ್ಕಿಲ್ಲಳೂ ಕೆಲವು ದಿನಗಳ ಮೊದಲೇ ಇತಾಲ್ಯ ದೇಶದಿಂದ ಅಲ್ಲಿಗೆ ಬಂದಿದ್ದರು.


ಆಸ್ಯಸೀಮೆಯಲ್ಲಿ ವಾಕ್ಯವನ್ನು ಹೇಳಬಾರದೆಂದು ಪವಿತ್ರಾತ್ಮನು ತಡೆದ್ದುದರಿಂದ ಅವರು ಫ್ರುಗ್ಯ, ಗಲಾತ್ಯ ಸೀಮೆಯನ್ನು ಹಾದುಹೋಗಿ,


ಇದು ಎರಡು ವರ್ಷಗಳ ವರೆಗೂ ನಡೆದಿದ್ದರಿಂದ ಅಸ್ಯಸೀಮೆಯಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರೂ, ಗ್ರೀಕರೂ, ಕರ್ತನ ವಾಕ್ಯವನ್ನು ಕೇಳಿದರು.


ಆದರೆ ಲಿಬೆರ್ತೀನರೆಂಬವರ ಸಮಾಜಕ್ಕೆ ಸೇರಿದ ಕುರೇನ್ಯದವರು ಮತ್ತು ಅಲೆಕ್ಸಾಂದ್ರಿಯದವರು, ಕಿಲಿಕ್ಯ ಮತ್ತು ಆಸ್ಯ ಸೀಮೆಗಳಿಂದ ಬಂದವರಲ್ಲಿ ಕೆಲವರು ಎದ್ದು ಸ್ತೆಫನನ ಸಂಗಡ ತರ್ಕಮಾಡುತ್ತಾ ಇದ್ದರು.


ನಾನು ಕಂಡ ಕನಸಿನಲ್ಲಿ ಏಲಾಮ್ ಸಂಸ್ಥಾನದ ಶೂಷನ್ ಕೋಟೆಯಲ್ಲಿದ್ದೆನು. ಕನಸಿನಲ್ಲಿ ಊಲಾ ಕಾಲುವೆಯ ದಡದ ಮೇಲೆ ನಿಂತುಕೊಂಡಿದ್ದ ಹಾಗೆ ತೋರಿತು.


ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವುದಕ್ಕೆ ಎರಡನೆಯ ಸಾರಿ ಕೈಹಾಕಿ, ಅಶ್ಶೂರ, ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಸಮುದ್ರದ ಕರಾವಳಿ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.


ಹೋಶೇಯನ ಆಳ್ವಿಕೆಯ ಒಂಭತ್ತನೆಯ ವರ್ಷದಲ್ಲಿ, ಅಶ್ಶೂರದ ಅರಸನು ಸಮಾರ್ಯವನ್ನು ವಶಪಡಿಸಿಕೊಂಡು, ಎಲ್ಲಾ ಇಸ್ರಾಯೇಲರನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ಒಯ್ದನು. ಅವರನ್ನು ಹಲಹು ಪ್ರಾಂತ್ಯದಲ್ಲಿಯೂ, ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತ್ಯದಲ್ಲಿಯೂ, ಮೇದ್ಯರ ಪಟ್ಟಣಗಳಲ್ಲಿಯೂ ಇರಿಸಿದನು.


ತರುವಾಯ ಆ ಸೇವಕನು ತನ್ನ ದಣಿಯ ಒಂಟೆಗಳಲ್ಲಿ ಹತ್ತು ಒಂಟೆಗಳನ್ನು ಸಿದ್ಧಮಾಡಿ, ದಣಿಯ ಬಳಿಯಿದ್ದ ಶ್ರೇಷ್ಠವಾದ ಒಡವೆಗಳನ್ನು ತನ್ನ ವಶಕ್ಕೆ ತೆಗೆದುಕೊಂಡು ಹೊರಟು, ಅರಾಮ್ ನಾಹಾರಾಯಿಮ್ ಸೀಮೆಗೆ ಸೇರಿದ ನಾಹೋರನು ವಾಸಿಸಿದ ಊರನ್ನು ಮುಟ್ಟಿದನು.


ಆ ದಿನಗಳಲ್ಲಿ ಶಿನಾರಿನ ಅರಸನಾದ ಅಮ್ರಾಫೆಲನು, ಎಲ್ಲಜಾರಿನ ಅರಸನಾದ ಅರಿಯೋಕನು, ಏಲಾಮಿನ ಅರಸನಾದ ಕೆದೊರ್ಲಗೋಮರನು, ಗೋಯಿಮದ ಅರಸನಾದ ತಿದ್ಗಾಲನು ಈ ನಾಲ್ವರು ಈಗಿನ ಲವಣಸಮುದ್ರ ಎನ್ನಿಸಿಕೊಳ್ಳುವ ಸಿದ್ದೀಮ್,


ಅದು, “ನೀನು ನೋಡುವುದನ್ನು ಒಂದು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯ, ಎಂಬೀ ಏಳು ಸಭೆಗಳಿಗೆ ಕಳುಹಿಸಬೇಕು” ಎಂದು ನುಡಿಯಿತು.


ಸಹೋದರರೇ, ಆಸ್ಯ ಸೀಮೆಯಲ್ಲಿ ನಾವು ಅನುಭವಿಸಿದ ಕಷ್ಟ-ಸಂಕಟಗಳು ನಿಮಗೆ ತಿಳಿದಿರಲಿ ಎಂದು ನಾನು ಬಯಸುತ್ತೇನೆ. ಅಲ್ಲಿ ನಮ್ಮ ಶಕ್ತಿಗೆ ಮೀರಿದಂಥ ತೊಂದರೆಗಳನ್ನು ಅನುಭವಿಸಿ ನಾವು ಕುಗ್ಗಿಹೋಗಿ ಬದುಕುವ ನಿರೀಕ್ಷೆಯೇ ಇಲ್ಲವಾದವು.


ಆಸ್ಯಸೀಮೆಯ ಸಭೆಗಳವರು ನಿಮ್ಮನ್ನು ವಂದಿಸುತ್ತಾರೆ. ಅಕ್ವಿಲನೂ ಮತ್ತು ಪ್ರಿಸ್ಕಿಲ್ಲಳೂ ತಮ್ಮ ಮನೆಯಲ್ಲಿ ಕೂಡಿ ಬರುವ ಸಭೆಯವರೊಂದಿಗೆ ಕರ್ತನ ಹೆಸರಿನಲ್ಲಿ ಬಹಳವಾಗಿ ನಿಮ್ಮನ್ನು ವಂದಿಸುತ್ತಿದ್ದಾರೆ.


ಅವರ ಮನೆಯಲ್ಲಿ ಸೇರಿಬರುವ ಸಭೆಗೆ ಸಹ ನನ್ನ ವಂದನೆಯನ್ನು ತಿಳಿಸಿರಿ. ಆಸ್ಯ ಸೀಮೆಯಲ್ಲಿ ಕ್ರಿಸ್ತನಿಗೆ ಪ್ರಥಮಫಲವಾಗಿರುವ ನನ್ನ ಪ್ರಿಯನಾದ ಎಫೈನೆತನಿಗೆ ವಂದನೆ.


ಅವರು ಅವನ ಬಳಿಗೆ ಬಂದಾಗ ಅವರಿಗೆ ಅವನು ಹೇಳಿದ್ದೇನಂದರೆ; “ನಾನು ಆಸ್ಯಸೀಮೆಯಲ್ಲಿ ಕಾಲಿಟ್ಟ ಮೊದಲನೆಯ ದಿನದಿಂದ ನಿಮ್ಮ ಮಧ್ಯೆ ಎಲ್ಲಾ ಕಾಲಗಳಲ್ಲಿಯೂ ಹೇಗೆ ನಡೆದುಕೊಂಡೆನೆಂಬುದನ್ನು ನೀವೇ ಬಲ್ಲಿರಿ.


ಪೌಲನು ತನಗೆ ಸಾಧ್ಯವಾದರೆ ಪಂಚಾಶತ್ತಮ ದಿನದ ಹಬ್ಬಕ್ಕೆ ಯೆರೂಸಲೇಮಿನಲ್ಲಿರಬೇಕೆಂದು ಅವಸರಪಡುತ್ತಾ ಇದ್ದುದರಿಂದ ಆಸ್ಯಸೀಮೆಯಲ್ಲಿ ಕಾಲವನ್ನು ಕಳೆಯುವುದಕ್ಕೆ ಮನಸ್ಸಿಲ್ಲದೆ ಎಫೆಸ ಪಟ್ಟಣವನ್ನು ದಾಟಿಹೋಗಬೇಕೆಂದು ತೀರ್ಮಾನಿಸಿಕೊಂಡಿದ್ದನು.


ಇದಲ್ಲದೆ ಆಸ್ಯಸೀಮೆಯ ಅಧಿಕಾರಿಗಳಲ್ಲಿ ಕೆಲವರು ಪೌಲನ ಸ್ನೇಹಿತರಾಗಿದ್ದುದರಿಂದ ಅವನ ಬಳಿಗೆ ಜನರನ್ನು ಕಳುಹಿಸಿ; ನೀನು ನಾಟಕ ಶಾಲೆಯೊಳಗೆ ಹೋಗ ಬೇಡ ಎಂದು ಬೇಡಿಕೊಂಡರು.


ಇದರಿಂದ ನಮ್ಮ ಉದ್ಯೋಗಕ್ಕೆ ಕುಂದು ಬರುವುದಲ್ಲದೆ ಅರ್ತೆಮೀ ಮಹಾದೇವಿಯ ದೇವಸ್ಥಾನವು ಗಣನೆಗೆ ಬಾರದೆಹೋಗುವ ಹಾಗೆಯೂ, ಎಲ್ಲಾ ಆಸ್ಯಸೀಮೆಯೂ, ಲೋಕವೆಲ್ಲಾ ಪೂಜಿಸುವ ಈ ದೇವಿಯ ವೈಭವಕ್ಕೆ ಹಾನಿಬರುವ ಹಾಗೆ ಗಂಡಾಂತರವುಂಟಾಗುತ್ತದೆಂದು” ಹೇಳಿದನು.


ನಮ್ಮ ಮೂಲಪುರುಷನಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಮೆಸೊಪೊತಾಮ್ಯದಲ್ಲಿದ್ದಾಗ ಮಹಿಮೆಯುಳ್ಳ ದೇವರು ಅವನಿಗೆ ಕಾಣಿಸಿಕೊಂಡು;


ನೀನು ನೋಡಿದ ಎರಡು ಕೊಂಬಿನ ಟಗರು ಮೇದ್ಯ ಮತ್ತು ಪಾರಸಿಯ ರಾಜರು.


ಘೋರದರ್ಶನವು ನನಗೆ ತಿಳಿಯ ಬಂದಿದೆ; ಬಾಧಕನು ಬಾಧಿಸುತ್ತಿದ್ದಾನೆ, ಸೂರೆಗಾರನು ಸೂರೆಮಾಡುತ್ತಿದ್ದಾನೆ. ಏಲಾಮೇ, ಏಳು! ಮೇದ್ಯವೇ, ಮುತ್ತಿಗೆ ಹಾಕು! ನಿಮ್ಮ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ.


ಅವರು ಹುಡುಕಿದಾಗ ಮೇದ್ಯ ಸಂಸ್ಥಾನದಲ್ಲಿರುವ ಅಹ್ಮೆತಾ ರಾಜಧಾನಿಯಲ್ಲಿ ಒಂದು ಸುರುಳಿ ಸಿಕ್ಕಿತು.


ತಾವು ದಾವೀದನಿಗೆ ಅಸಹ್ಯರಾದೆವೆಂದು ಹಾನೂನನೂ ಮತ್ತು ಅಮ್ಮೋನಿಯರೂ ತಿಳಿದು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ಸೀಮೆಯಿಂದಲೂ, ಮಾಕದಿಂದಲೂ, ಚೋಬಾ ರಾಜ್ಯದಿಂದಲೂ ರಥಗಳನ್ನೂ, ರಾಹುತರನ್ನು ತರಿಸುವುದಕ್ಕೋಸ್ಕರ ಸಾವಿರ ತಲಾಂತು ಬೆಳ್ಳಿಯನ್ನೂ ಕಳುಹಿಸಿದರು.


ಆದ್ದರಿಂದ ಆತನು ಇಸ್ರಾಯೇಲ್ಯರ ಮೇಲೆ ಕೋಪಗೊಂಡು, ಅವರನ್ನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ನಹರಾಯಿಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮ್ ಎಂಬುವವನಿಗೆ ಮಾರಿಬಿಟ್ಟನು. ಅವರು ಎಂಟು ವರ್ಷಗಳ ವರೆಗೆ ಅವನಿಗೆ ದಾಸರಾಗಿದ್ದರು.


ಯಾಕೆಂದರೆ ನೀವು ಐಗುಪ್ತದೇಶದಿಂದ ಬಂದಾಗ ಅಮ್ಮೋನಿಯರು ಅನ್ನಪಾನಗಳನ್ನು ತಂದು ನಿಮ್ಮನ್ನು ಎದುರುಗೊಳ್ಳಲಿಲ್ಲ; ಮೋವಾಬ್ಯರು ನಿಮ್ಮನ್ನು ಶಪಿಸುವುದಕ್ಕಾಗಿ ಬೆಯೋರನ ಮಗನಾದ ಬಿಳಾಮನಿಗೆ ಹಣಕೊಟ್ಟು ಎರಡು ನದಿಗಳ ಮಧ್ಯದಲ್ಲಿರುವ ಅರಾಮಿನ ಪೆತೋರ್ ಊರಿನಿಂದ ಅವನನ್ನು ಕರೆಯಿಸಿದರು.


ಶೇಮನ ಮಕ್ಕಳು - ಏಲಾಮ್, ಅಶ್ಶೂರ್, ಅರ್ಪಕ್ಷದ್, ಲೂದ್, ಅರಾಮ್ ಎಂಬವರು.


ಪೆರೇಸ್ ಎಂದರೆ, ನಿನ್ನ ರಾಜ್ಯವು ವಿಭಾಗವಾಗಿ ಮೇದ್ಯಯರಿಗೂ, ಪಾರಸಿಯರಿಗೂ ಕೊಡಲ್ಪಟ್ಟಿದೆ” ಎಂದು ಅರಿಕೆಮಾಡಿದನು.


ಆದರೆ ನಾವು ಪ್ರತಿಯೊಬ್ಬರು ನಮ್ಮ ನಮ್ಮ ಮಾತೃಭಾಷೆಯಲ್ಲಿ ಇವರು ಮಾತನಾಡುವುದನ್ನು ಕೇಳುತ್ತಿದ್ದೇವಲ್ಲಾ, ಇದು ಹೇಗೆ?


ಪುರ್ರನ ಮಗನಾದ ಬೆರೋಯ ಪಟ್ಟಣದ ಸೋಪತ್ರನೂ, ಥೆಸಲೋನಿಕದವರಲ್ಲಿ ಅರಿಸ್ತಾರ್ಕನೂ, ಸೆಕುಂದನೂ ದೆರ್ಬೆಪಟ್ಟಣದ ಗಾಯನೂ, ತಿಮೊಥೆಯನೂ, ಆಸ್ಯಸೀಮೆಯವರಲ್ಲಿ ತುಖಿಕನೂ, ತ್ರೊಫಿಮನೂ, ಆಸ್ಯಸೀಮೆಯ ವರೆಗೂ ಅವನ ಜೊತೆಯಲ್ಲಿ ಹೋದರು.


ಆ ಏಳು ದಿನಗಳು ಮುಗಿಯುತ್ತಿದ್ದಂತೆ ಅಸ್ಯಸೀಮೆಯಿಂದ ಬಂದಿದ್ದ ಯೆಹೂದ್ಯರು ಪೌಲನನ್ನು ದೇವಾಲಯದಲ್ಲಿ ಕಂಡು ಗುಂಪುಕೂಡಿದ ಜನರೆಲ್ಲರನ್ನು ಚದುರಿಸಿ ಅವನನ್ನು ಹಿಡಿದು;


ನಾನು ಶುದ್ಧಮಾಡಿಕೊಂಡವನಾಗಿ, ಅವುಗಳನ್ನು ಒಪ್ಪಿಸುತ್ತಿರುವಲ್ಲಿ, ಇವರು ನನ್ನನ್ನು ದೇವಾಲಯದಲ್ಲಿ ಕಂಡರು; ಆಗ ನನ್ನೊಂದಿಗೆ ಜನರ ಗುಂಪೇನೂ ಇರಲಿಲ್ಲ; ಗದ್ದಲವೂ ಇರಲಿಲ್ಲ. ನನ್ನನ್ನು ಕಂಡವರು ಆಸ್ಯಸೀಮೆಯಿಂದ ಬಂದ ಕೆಲವು ಯೆಹೂದ್ಯರೇ.


ಆಗ ಅದ್ರಮಿತ್ತಿಯದಿಂದ ಬಂದು ಆಸ್ಯಸೀಮೆಯ ಕರಾವಳಿಯ ಸ್ಥಳಗಳಿಗೆ ಹೋಗುವುದಕ್ಕಿದ್ದ ಒಂದು ಹಡಗನ್ನು ಹತ್ತಿ ಸಮುದ್ರಪ್ರಯಾಣವನ್ನು ಪ್ರಾರಂಭಿಸಿದೆವು. ಮಕೆದೋನ್ಯಕ್ಕೆ ಸೇರಿದ ಥೆಸಲೋನಿಕದ ಅರಿಸ್ತಾರ್ಕನು ನಮ್ಮ ಜೊತೆಯಲ್ಲಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು