Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 20:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯೆಹೂದ್ಯರ ಒಳಸಂಚುಗಳಿಂದ ಸಂಭವಿಸಿದ ಸಂಕಷ್ಟಗಳಲ್ಲಿ, ನಾನು ಅತಿ ನಮ್ರತೆಯಿಂದಲೂ, ಕಣ್ಣೀರಿನಿಂದಲೂ ಕರ್ತನ ಸೇವೆ ಮಾಡುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಯೆಹೂದ್ಯರ ಕುತಂತ್ರಗಳಿಂದ ನನಗೆ ಬಂದೊದಗಿದ ಸಂಕಷ್ಟಗಳಲ್ಲಿ ನಾನು ಅತಿ ನಮ್ರತೆಯಿಂದಲೂ ಕಣ್ಣೀರಿಡುತ್ತಲೂ ಪ್ರಭುವಿನ ಸೇವೆಮಾಡಿಕೊಂಡು ಬಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಾನು ಬಹು ನಮ್ರತೆಯಿಂದಲೂ ಕಣ್ಣೀರಿನಿಂದಲೂ ಕರ್ತನ ಸೇವೆಮಾಡುತ್ತಿದ್ದೆನು. ಇದರಲ್ಲಿ ಯೆಹೂದ್ಯರ ಒಳ ಸಂಚುಗಳಿಂದ ಸಂಭವಿಸಿದ ಕಷ್ಟಗಳನ್ನು ಸಹಿಸುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಯೆಹೂದ್ಯರು ನನಗೆ ವಿರೋಧವಾಗಿ ಮಾಡಿದ ಒಳಸಂಚುಗಳಿಂದ ನಾನು ಬಹಳ ಕಷ್ಟಪಡಬೇಕಾಯಿತು. ಅನೇಕ ಸಲ ಕಣ್ಣೀರಿಡಬೇಕಾಯಿತು. ಆದರೆ ನಾನು ಯಾವಾಗಲೂ ಪ್ರಭುವಿನ ಸೇವೆ ಮಾಡಿದೆನೆಂಬುದು ನಿಮಗೆ ಗೊತ್ತಿದೆ. ನಾನು ನನ್ನ ಬಗ್ಗೆ ಚಿಂತಿಸದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಯೆಹೂದ್ಯರ ಒಳಸಂಚುಗಳಿಂದ ನಾನು ಕಠಿಣ ಪರೀಕ್ಷೆಗಳಿಗೆ ಒಳಗಾಗಿದ್ದರೂ ಬಹಳ ದೀನತೆಯಿಂದಲೂ ಕಣ್ಣೀರಿನಿಂದಲೂ ಕರ್ತ ಯೇಸುವಿನ ಸೇವೆ ಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಜುದೆವಾಂಚ್ಯಾ ಲೊಕಾನಿ ಮಾಕಾ ವಿರೊದ್ ಹೊವ್ನ್ ಕರಲ್ಲ್ಯಾ ಘುಟ್ಟಾನಿ ಡೊಳ್ಯಾತ್ನಿ ಪಾನಿ ಘಾಲುನ್ಗೆತ್ ಧನಿಯಾಚ್ಯಾ ಸೆವಕಾನ್ ಸಾರ್ಕೆ ಮಾಜೆ ಕಾಮ್ ಕರುನ್ಗೆತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 20:19
37 ತಿಳಿವುಗಳ ಹೋಲಿಕೆ  

ಕರ್ತನಿಂದ ಬಾಧ್ಯತೆಯೆಂಬ ಪ್ರತಿಫಲವನ್ನು ಹೊಂದುವಿರೆಂದು ತಿಳಿದುಕೊಂಡು ಕರ್ತನಾದ ಕ್ರಿಸ್ತನನ್ನು ಸೇವಿಸುವವರಾಗಿರಿ.


ನಿಮ್ಮ ಮೇಲೆ ನನಗಿರುವ ಅಧಿಕವಾದ ಪ್ರೀತಿಯನ್ನು ನೀವು ತಿಳಿದುಕೊಳ್ಳಬೇಕೆಂತಲೇ ನಾನು ಬಹಳವಾಗಿ ಕಣ್ಣೀರಿಡುತ್ತಾ ಹೃದಯದ ಬಹು ಸಂಕಟದಿಂದಲೂ ವ್ಯಾಕುಲದಿಂದಲೂ ನಿಮಗೆ ಬರೆದೆನೇ ಹೊರತು ನಿಮ್ಮನ್ನು ನೋಯಿಸುವುದಕ್ಕಾಗಿಯಲ್ಲ.


ಜಾಗ್ರತೆ ಬೇಕಾದಲ್ಲಿ ಆಲಸ್ಯವಾಗಿರದೆ ಆಸಕ್ತಚಿತ್ತರಾಗಿದ್ದು ಕರ್ತನ ಸೇವೆ ಮಾಡುವವರಾಗಿರಿ.


ಅಲ್ಲಿ ಮೂರು ತಿಂಗಳು ಕಳೆದ ನಂತರ ಸಿರಿಯ ದೇಶಕ್ಕೆ ಸಮುದ್ರಮಾರ್ಗವಾಗಿ ಹೋಗಬೇಕೆಂದಿದ್ದಾಗ ಅವನಿಗೆ ವಿರುದ್ಧವಾಗಿ ಯೆಹೂದ್ಯರು ಒಳಸಂಚುಮಾಡಿದ್ದು ಅವನಿಗೆ ತಿಳಿದು ಬಂದ್ದುದರಿಂದ ಅವನು ಮಕೆದೋನ್ಯದ ಮಾರ್ಗವಾಗಿ ಹಿಂತಿರುಗಿ ಹೋಗುವುದಕ್ಕೆ ತೀರ್ಮಾನಿಸಿದನು.


ನಾವು ಮಕೆದೋನ್ಯಕ್ಕೆ ಬಂದ ಮೇಲೂ ನಮ್ಮ ದೇಹಕ್ಕೆ ನೆಮ್ಮದಿ ಇರಲಿಲ್ಲ, ಬದಲಾಗಿ ಎಲ್ಲಾ ವಿಷಯಗಳಲ್ಲಿಯೂ ನಮಗೆ ತೊಂದರೆಗಳಿದ್ದವು. ಹೊರಗೆ ಜಗಳ, ಒಳಗೆ ಭಯ


ನೀವು ಕೇಳದಿದ್ದರೆ ನನ್ನ ಆತ್ಮವು ಗುಟ್ಟಾದ ಸ್ಥಳದಲ್ಲಿ ನಿಮ್ಮ ಗರ್ವದ ನಿಮಿತ್ತ ಗೋಳಾಡುವುದು. ಯೆಹೋವನ ಮಂದೆಯು ಸೆರೆಯಾಗಿ ಹೋದುದರಿಂದ ಬಹಳವಾಗಿ ಅಳುವೆನು, ನನ್ನ ನೇತ್ರವು ಅಶ್ರುಧಾರೆಯನ್ನು ಸುರಿಸುವುದು.


ನನ್ನ ಸಹೋದರರೇ, ನೀವು ನಾನಾವಿಧವಾದ ಕಷ್ಟಗಳನ್ನು ಅನುಭವಿಸುವಾಗ ಅದನ್ನು ಕೇವಲ ಆನಂದಕರವಾದದ್ದೆಂದು ತಿಳಿಯಿರಿ.


ಯಾಕೆಂದರೆ ಅನೇಕರು ಕ್ರಿಸ್ತನ ಶಿಲುಬೆಗೆ ವಿರೋಧಿಗಳಾಗಿ ನಡೆಯುತ್ತಾರೆ. ಅವರ ವಿಷಯದಲ್ಲಿ ನಿಮಗೆ ಎಷ್ಟೋ ಸಾರಿ ಹೇಳಿದೆನು, ಈಗಲೂ ಅಳುತ್ತಾ ಹೇಳುತ್ತೇನೆ.


ಮನುಷ್ಯರಿಗೋಸ್ಕರವಲ್ಲ, ಕರ್ತನಿಗೋಸ್ಕರ ಸೇವೆಮಾಡುತ್ತೇವೆಂದು ಮನಃಪೂರ್ವಕವಾಗಿ ಸೇವೆಮಾಡಿರಿ.


ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯರನ್ನು ಮೆಚ್ಚಿಸುವುದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ಸೇವಕನಲ್ಲ.


ನಮ್ಮಿಂದಲೇ ಏನಾದರೂ ಉಂಟಾಯಿತೆಂದು ತೀರ್ಮಾನಿಸಿಕೊಳ್ಳುವುದಕ್ಕೆ ನಮಗೆ ನಾವೇ ಯೋಗ್ಯರಲ್ಲ ನಮಗಿರುವ ಯೋಗ್ಯತೆಯೂ ದೇವರಿಂದಲೇ ಬಂದದ್ದು.


ಆದಕಾರಣ ನಾನು ಕಣ್ಣೀರು ಸುರಿಸುತ್ತಾ ಮೂರು ವರ್ಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬನಿಗೆ ಬುದ್ಧಿ ಹೇಳಿದೆನೆಂಬುದನ್ನು ನೀವು ನೆನಪಿಸಿಕೊಂಡು ಎಚ್ಚರವಾಗಿರಿ.


ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸಿಮೆಯೋನ ಪೇತ್ರನು ನಮ್ಮ ದೇವರು ಮತ್ತು ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮಂತೆಯೇ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವುದೇನಂದರೆ,


ಆದ್ದರಿಂದ ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ ನಾನಾ ವಿಧ ಕಷ್ಟಗಳಲ್ಲಿ ದುಃಖಿಸುವವರಾಗಿದ್ದರೂ, ಹರ್ಷಿಸುವವರಾಗಿದ್ದೀರಿ.


ನಾವು ನಿಮ್ಮಲ್ಲಿಗೆ ಬಂದಾಗ ನೀವು ನಮ್ಮನ್ನು ಹೇಗೆ ಸ್ವಾಗತಿಸಿದಿರಿ; ನೀವು ವಿಗ್ರಹಗಳನ್ನು ತೊರೆದು ದೇವರ ಕಡೆಗೆ ತಿರುಗಿಕೊಂಡು ಜೀವಸ್ವರೂಪನಾದ ಸತ್ಯ ದೇವರನ್ನು ಸೇವಿಸುವವರಾಗಿದ್ದೀರಿ


ನಾನು ಪ್ರಾರ್ಥನೆ ಮಾಡುವಾಗೆಲ್ಲಾ ಎಡೆಬಿಡದೆ ನಿಮಗೋಸ್ಕರ ವಿಜ್ಞಾಪನೆ ಮಾಡುತ್ತೇನೆ. ದೇವರ ಮಗನ ಸುವಾರ್ತೆಯನ್ನು ಸಾರುತ್ತಾ ದೈವಸೇವೆಯನ್ನು ಮನಃಪೂರ್ವಕವಾಗಿ ಮಾಡಿಕೊಂಡು ಬರುತ್ತಿರುವ ದೇವರೇ ನನಗೆ ಸಾಕ್ಷಿ.


ಯೇಸು ಕ್ರಿಸ್ತನ ದಾಸನೂ, ಅಪೊಸ್ತಲನಾಗುವುದಕ್ಕೆ ಕರೆಯಲ್ಪಟ್ಟವನೂ, ದೇವರ ಸುವಾರ್ತೆಯನ್ನು ಸಾರುವುದಕ್ಕೆ ಪ್ರತ್ಯೇಕಿಸಲ್ಪಟ್ಟವನೂ ಆಗಿರುವ ಪೌಲನು,


ಏಕೆಂದರೆ, ನಾನು ಯಾರವನಾಗಿದ್ದೇನೋ, ಯಾರನ್ನು ಸ್ತುತಿಸುತ್ತೇನೋ ಆ ದೇವರಿಂದ ಬಂದ ಒಬ್ಬ ದೂತನು ಕಳೆದ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು;


ಆದರೆ ಪೌಲನು ಬೆರೋಯದಲ್ಲಿಯೂ ದೇವರ ವಾಕ್ಯವನ್ನು ಪ್ರಸಿದ್ಧಪಡಿಸುತ್ತಾನೆಂಬ ವರ್ತಮಾನವು ಥೆಸಲೋನಿಕದ ಯೆಹೂದ್ಯರಿಗೆ ತಿಳಿದು ಬಂದಾಗ ಅವರು ಅಲ್ಲಿಗೂ ಬಂದು ಜನರ ಗುಂಪುಗಳನ್ನು ಪ್ರಚೋದಿಸಿ ಕದಡಿದರು.


ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನನ್ನು ಹಿಂಬಾಲಿಸಲಿ, ಮತ್ತು ಎಲ್ಲಿ ನಾನು ಇರುತ್ತೇನೋ ಅಲ್ಲಿ ನನ್ನ ಸೇವಕನೂ ಸಹ ಇರುವನು. ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು.


ತರುವಾಯ ಆತನು ಯೆರೂಸಲೇಮ್ ಪಟ್ಟಣದ ಸಮೀಪಕ್ಕೆ ಬಂದಾಗ ಆ ಪಟ್ಟಣವನ್ನು ನೋಡಿ ಅದರ ವಿಷಯವಾಗಿ ಕಣ್ಣೀರಿಡುತ್ತಾ,


ಅಯ್ಯೋ, ನನ್ನ ಶಿರಸ್ಸು ಜಲಮಯವಾಗಿಯೂ, ನನ್ನ ನೇತ್ರಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಎಷ್ಟೋ ಲೇಸು! ನನ್ನ ಜನರಲ್ಲಿ ಹತರಾದವರ ನಿಮಿತ್ತ ಹಗಲಿರುಳೂ ಅಳಬೇಕಲ್ಲಾ!


ನಿನ್ನ ಧರ್ಮಶಾಸ್ತ್ರವನ್ನು ಅನುಸರಿಸದವರ ನಿಮಿತ್ತ, ನನ್ನ ಕಣ್ಣೀರು ಪ್ರವಾಹವಾಗಿ ಹರಿಯುತ್ತದೆ. ಸಾದ್ದಿ.


ಈ ಕಾರಣದಿಂದ ಅವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು ಆತನ ಆಲಯದಲ್ಲಿ ಹಗಲಿರುಳೂ ಆತನಿಗೆ ಆರಾಧನೆ ಮಾಡುತ್ತಾ ಇದ್ದಾರೆ. ಸಿಂಹಾಸನದ ಮೇಲೆ ಕುಳಿತಿರುವಾತನೇ ಅವರಿಗೆ ಬಿಡಾರವಾಗಿರುವನು.


ನಾನು ನಿನ್ನ ಕಣ್ಣೀರನ್ನು ನೆನಪಿಗೆ ತಂದು ನಿನ್ನನ್ನು ನೋಡಿ ಸಂತೋಷಭರಿತನಾಗಬೇಕೆಂದು ಬಯಸುತ್ತೇನೆ.


ನಂಬದಿರುವ ಯೆಹೂದ್ಯರು ಹೊಟ್ಟೆಕಿಚ್ಚುಪಟ್ಟು ಪೇಟೆಯಲ್ಲಿ ತಿರುಗಾಡುವ ಕೆಲವು ಪುಂಡರನ್ನು ಕರೆದುಕೊಂಡು ಬಂದು ಗುಂಪು ಕೂಡಿಸಿ ಊರಲ್ಲಿ ಗದ್ದಲ ಎಬ್ಬಿಸಿ ಪೌಲ ಮತ್ತು ಸೀಲರನ್ನು ಪಟ್ಟಣದ ಸಭೆ ಎದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯನ್ನು ಮುತ್ತಿದರು.


ಆ ಏಳು ದಿನಗಳು ಮುಗಿಯುತ್ತಿದ್ದಂತೆ ಅಸ್ಯಸೀಮೆಯಿಂದ ಬಂದಿದ್ದ ಯೆಹೂದ್ಯರು ಪೌಲನನ್ನು ದೇವಾಲಯದಲ್ಲಿ ಕಂಡು ಗುಂಪುಕೂಡಿದ ಜನರೆಲ್ಲರನ್ನು ಚದುರಿಸಿ ಅವನನ್ನು ಹಿಡಿದು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು