Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 20:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆದರೆ ಪ್ರಾಣವನ್ನು ಉಳಿಸಿಕೊಳ್ಳುವುದೇ ಶ್ರೇಷ್ಠವೆಂದು ನಾನು ಎಣಿಸುವುದಿಲ್ಲ; ದೇವರ ಕೃಪೆಯ ವಿಷಯವಾದ ಸುವಾರ್ತೆಯನ್ನು ಆಸಕ್ತಿಯಿಂದ ಸಾಕ್ಷ್ಯಪೂರಕವಾಗಿ ಸಾರುವ ನಿಯೋಗವನ್ನು ಕರ್ತನಾದ ಯೇಸುವಿನಿಂದ ನಾನು ಹೊಂದಿದ್ದೇನೆ ಈ ನಿಯೋಗವನ್ನು ಪೂರ್ಣಗೊಳಿಸುವುದೊಂದೇ ನನ್ನ ಅಪೇಕ್ಷೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಪ್ರಭು ಯೇಸು ನನಗೆ ವಿಧಿಸಿದ ಆಯೋಗವನ್ನು, ಅಂದರೆ ದೈವಾನುಗ್ರಹ ಕುರಿತಾದ ಶುಭಸಂದೇಶವನ್ನು ಸಾಕ್ಷ್ಯಪೂರ್ವಕವಾಗಿ ಸಾರುವ ಆಯೋಗವನ್ನು, ಪೂರೈಸುತ್ತಾ ನನ್ನ ಬಾಳಿನ ಗುರಿಯನ್ನು ಮುಟ್ಟುವೆನಾದರೆ, ನನಗೆ ಅಷ್ಟೇ ಸಾಕಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆದರೆ ಪ್ರಾಣವನ್ನು ಉಳಿಸಿಕೊಳ್ಳುವದೇ ವಿಶೇಷವೆಂದು ನಾನು ಎಣಿಸುವದಿಲ್ಲ. ದೇವರ ಕೃಪೆಯ ವಿಷಯವಾದ ಸುವಾರ್ತೆಯನ್ನು ಆಸಕ್ತಿಯಿಂದ ಪ್ರಕಟಿಸಬೇಕೆಂಬದಾಗಿ ಕರ್ತನಾದ ಯೇಸುವಿನಿಂದ ನಾನು ಹೊಂದಿರುವ ಸೇವೆಯೆಂಬ ಓಟವನ್ನು ಕಡೆಗಾಣಿಸುವದೊಂದೇ ನನ್ನ ಅಪೇಕ್ಷೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನಾನು ನನ್ನ ಸ್ವಂತ ಪ್ರಾಣದ ಬಗ್ಗೆ ಚಿಂತಿಸುವುದಿಲ್ಲ. ಪ್ರಭುವಾದ ಯೇಸು ನನಗೆ ಕೊಟ್ಟಿರುವ ಕೆಲಸವನ್ನು ಪೂರೈಸುವುದೇ ನನಗೆ ಅತ್ಯಂತ ಮುಖ್ಯವಾಗಿದೆ. ದೇವರ ಕೃಪೆಯ ವಿಷಯವಾದ ಸುವಾರ್ತೆಯ ಬಗ್ಗೆ ಸಾಕ್ಷಿ ನೀಡುವುದೇ ನನ್ನ ಕೆಲಸವಾಗಿದೆ. ಆ ಕೆಲಸವನ್ನು ಮಾಡಿ ಪೂರೈಸುವುದೇ ನನ್ನ ಅಪೇಕ್ಷೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆದರೂ ನನ್ನ ಪ್ರಾಣ ನನಗೆ ಅಮೂಲ್ಯವೆಂದು ನಾನು ಎಣಿಸುವುದಿಲ್ಲ. ಕರ್ತ ಯೇಸು ನನಗೆ ಕೊಟ್ಟ, ದೇವರ ಕೃಪೆಯ ಸುವಾರ್ತೆಗೆ ಸಾಕ್ಷಿ ಕೊಡುವ ಸೇವೆಯ ಓಟವನ್ನು ಓಡಿ ಮುಗಿಸುವುದೇ ನನ್ನ ಬಾಳಿನ ಒಂದೇ ಗುರಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಕಾಯ್ ಬಿ ಹೊಂವ್ದಿತ್, ಮಿಯಾ ಮಾಜ್ಯಾ ಸ್ವತಾಚ್ಯಾ ಜಿವಾಚ್ಯಾ ವಿಶಯಾತ್ ಚಿಂತಾ ಕರಿನಾ ಮಾಕಾ ಧನಿಯಾ ಜೆಜುನ್ ದಿಲ್ಲಿ ಎಕುಚ್ ಗುರಿ ಹಾಯ್, ಮಾಜೆ ಪಳಾಪ್ ಮಿಯಾ ಪಳುನ್ ಸಾರುಚೆ, ತೆ ದೆವಾಚ್ಯಾ ಬರ್‍ಯಾ ಖಬ್ರೆಚ್ಯಾ ಕುರ್ಪೆಕ್ ಸಾಕ್ಷಿ ಹೊತಲ್ಲೆ ಹೊವ್ನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 20:24
59 ತಿಳಿವುಗಳ ಹೋಲಿಕೆ  

ಆದ್ದರಿಂದ ದೇವರ ಕರುಣೆಯಿಂದ ಈ ಸೇವೆಯನ್ನು ಹೊಂದಿದವರಾದ ನಾವು ಧೈರ್ಯಗೆಟ್ಟು ಹಿಂಜರಿಯುವುದಿಲ್ಲ.


ಆದ್ದರಿಂದ ಕ್ರಿಸ್ತನ ನಿಮಿತ್ತ ನನಗೆ ಬಲಹೀನತೆಯಲ್ಲಿಯೂ, ತಿರಸ್ಕಾರದಲ್ಲಿಯೂ, ಕೊರತೆಯಲ್ಲಿಯೂ, ಹಿಂಸೆಯಲ್ಲಿಯೂ ಮತ್ತು ಇಕ್ಕಟ್ಟೂ ಸಂಭವಿಸಿದಾಗಲೂ ಸಂತುಷ್ಟನಾಗಿದ್ದೇನೆ. ಯಾಕೆಂದರೆ ನಾನು ಯಾವಾಗ ದುರ್ಬಲನಾಗಿರುವೆನೋ, ಆವಾಗಲೇ ಬಲವುಳ್ಳವನೂ ಆಗಿರುತ್ತೇನೆ.


ಅದಕ್ಕೆ ಪೌಲನು; “ನೀವು ದುಃಖಿಸುತ್ತಾ ಏಕೆ ನನ್ನ ಎದೆಯೊಡೆಯುವಂತೆ ಮಾಡುತ್ತೀರಿ? ನಾನು ಕರ್ತನಾದ ಯೇಸುವಿನ ಹೆಸರಿನ ನಿಮಿತ್ತವಾಗಿ ಯೆರೂಸಲೇಮಿನಲ್ಲಿ ಬೇಡೀಹಾಕಿಸಿಕೊಳ್ಳುವುದಕ್ಕೆ ಮಾತ್ರವಲ್ಲ ಸಾಯುವುದಕ್ಕೂ ಸಿದ್ಧವಾಗಿದ್ದೇನೆ” ಅಂದನು.


ಆದ್ದರಿಂದ, ನನ್ನ ಸಹೋದರರೇ, ಸ್ಥಿರಚಿತ್ತರಾಗಿಯೂ, ನಿಶ್ಚಲರಾಗಿರಿ. ಯಾಕೆಂದರೆ ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವುದಿಲ್ಲ. ಅದನ್ನು ತಿಳಿದು ಕರ್ತನ ಕೆಲಸವನ್ನು ಸದಾ ಅತ್ಯಾಸಕ್ತಿಯಿಂದಲೂ ಮತ್ತು ನಿರಂತರ ಶ್ರದ್ಧೆಯುಳ್ಳವರಾಗಿಯೂ ಮಾಡುವವರಾಗಿರಿ.


ಕೃಪೆಯಿಂದ ಆರಿಸಿಕೊಂಡನು ಅಂದ ಮೇಲೆ ಒಳ್ಳೆಯ ಕಾರ್ಯದಿಂದಲ್ಲ. ಹಾಗಲ್ಲದ ಪಕ್ಷಕ್ಕೆ ಕೃಪೆಯನ್ನು ಇನ್ನು ಕೃಪೆಯನ್ನುವುದಕ್ಕಾಗುವುದಿಲ್ಲ.


ಹೀಗಿರಲಾಗಿ ಅವರು ಬಹುಕಾಲ ಅಲ್ಲಿದ್ದು ಕರ್ತನು ಅವರ ಕೈಯಿಂದ ಸೂಚಕಕಾರ್ಯಗಳೂ, ಅದ್ಭುತಕಾರ್ಯಗಳೂ ನಡೆಯುವಂತೆ ದಯಪಾಲಿಸಿ ತನ್ನ ಕೃಪಾವಾಕ್ಯಕ್ಕೆ ಸಾಕ್ಷಿಕೊಟ್ಟಿದ್ದರಿಂದ ಆತನ ಮೇಲೆ ಭರವಸವಿಟ್ಟು ಧೈರ್ಯದಿಂದ ಮಾತನಾಡುತ್ತಿದ್ದರು.


ನಿಮ್ಮನ್ನು ಪ್ರೋತ್ಸಾಹಿಸುವುದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವುದಕ್ಕೂ ನಾನು ಸಂಕ್ಷೇಪವಾಗಿ ಬರೆದು, ನಂಬಿಗಸ್ತನಾದ ಸಹೋದರನೆಂದು ನಾನು ಎಣಿಸುವ ಸಿಲ್ವಾನನ ಕೈಯಲ್ಲಿ ಇದನ್ನು ಕಳುಹಿಸಿದ್ದೇನೆ. ಈ ನಿಜವಾದ ಕೃಪೆಯಲ್ಲಿ ನಿಲ್ಲಿರಿ.


ಸುಳ್ಳಾಡದ ದೇವರು, ಅನಾದಿಕಾಲದಲ್ಲಿಯೇ ವಾಗ್ದಾನ ಮಾಡಿದ ನಿತ್ಯಜೀವದ ನಿರೀಕ್ಷೆಯನ್ನು, ತಾನು ಆರಿಸಿಕೊಂಡವರ ನಂಬಿಕೆಯನ್ನು ಮತ್ತು ದೈವ ಭಕ್ತಿಯನ್ನು ಸತ್ಯದ ಜ್ಞಾನಕ್ಕನುಸಾರವಾಗಿ ದೃಢಪಡಿಸಲು ನಾನು ಕಾರ್ಯ ನಿರ್ವಹಿಸುತ್ತೇನೆ.


ಮನುಷ್ಯರಿಂದಾಗಲಿ ಮನುಷ್ಯರ ಮುಖಾಂತರದಿಂದಾಗಲಿ ಅಪೊಸ್ತಲನಾಗಿರದೆ ಯೇಸು ಕ್ರಿಸ್ತನ ಮುಖಾಂತರವೂ ಮತ್ತು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ತಂದೆಯಾದ ದೇವರಿಂದಲೂ ಅಪೊಸ್ತಲೋದ್ಯೋಗವನ್ನು ಹೊಂದಿದ ಪೌಲನೆಂಬ ನಾನು ಹಾಗೂ


ಇದನ್ನು ಕುರಿತು ಆಲೋಚಿಸಿ ನಾವು ಧೈರ್ಯವುಳ್ಳವರಾಗಿದ್ದು ದೇಹವನ್ನು ಬಿಟ್ಟು ಕರ್ತನ ಬಳಿಯಲ್ಲಿ ಇರುವುದೇ ಉತ್ತಮವೆಂದು ಎಣಿಸುವವರಾಗಿದ್ದೇವೆ.


ನಾನೀಗ ನಿಮ್ಮನ್ನು ದೇವರಿಗೂ, ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತೇನೆ. ಆತನು ನಿಮ್ಮಲ್ಲಿ ಭಕ್ತಿವೃದ್ಧಿಯನ್ನುಂಟುಮಾಡುವುದಕ್ಕೂ, ಪರಿಶುದ್ಧರೊಂದಿಗೆ ನಿಮಗೆ ಹಕ್ಕನ್ನು ಅನುಗ್ರಹಿಸುವುದಕ್ಕೆ ಶಕ್ತನಾಗಿದ್ದಾನೆ.


ಅವನು ಒಳ್ಳೆಯವನೂ, ಪವಿತ್ರಾತ್ಮ ಭರಿತನೂ, ನಂಬಿಕೆಯಿಂದ ತುಂಬಿದವನೂ ಆಗಿದ್ದನು.


ನಿಮ್ಮ ನಂಬಿಕೆಯೆಂಬ ಯಜ್ಞವನ್ನು ದೇವರಿಗರ್ಪಿಸುವ ಸೇವೆಯಲ್ಲಿ ನಾನೇ ಪಾನದ್ರವ್ಯವಾಗಿ ಅರ್ಪಿತವಾಗಬೇಕಾದರೂ ನನಗೆ ಸಂತೋಷವೇ, ನಿಮ್ಮೆಲ್ಲರೊಂದಿಗೂ ಸಂತೋಷ ಪಡುತ್ತೇನೆ.


ಕರ್ತನು ಅವನಿಗೆ, “ನೀನು ಹೋಗು; ಆ ಮನುಷ್ಯನು ಅನ್ಯಜನರಿಗೂ, ಅರಸುಗಳಿಗೂ, ಇಸ್ರಾಯೇಲ್ಯರಿಗೂ ನನ್ನ ಹೆಸರನ್ನು ತಿಳಿಸುವುದಕ್ಕಾಗಿ ನಾನು ಆರಿಸಿಕೊಂಡ ಸಾಧನವಾಗಿದ್ದಾನೆ.


ಯೂದನು ನಮ್ಮೊಂದಿಗೆ ಸೇರಿ ಈ ಸೇವೆಯಲ್ಲಿ ಪಾಲು ಹೊಂದಿದವನಾಗಿದ್ದನು.”


ನೀನು ನನಗೆ ಕೊಟ್ಟ ಕೆಲಸವನ್ನು ನಾನು ನೆರವೇರಿಸಿ ಭೂಲೋಕದಲ್ಲಿ ನಾನು ನಿನ್ನನ್ನು ಮಹಿಮೆಪಡಿಸಿದ್ದೇನೆ.


ಅವರು ಮರಣದವರೆಗೆ ತಮ್ಮ ಪ್ರಾಣವನ್ನು ಪ್ರೀತಿಸದೆ, ಯಜ್ಞದ ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವನನ್ನು ಜಯಿಸಿದರು.


ಕ್ರಿಸ್ತನು ನಮಗೋಸ್ಕರ ತನ್ನ ಪ್ರಾಣವನ್ನು ಅರ್ಪಿಸಿದ್ದರಿಂದ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ.


ಅದರ ನಿಮಿತ್ತದಿಂದಲೇ ಈ ಕಷ್ಟಗಳನ್ನು ಅನುಭವಿಸುತ್ತಾ ಇದ್ದೇನೆ. ಆದರೂ ನಾನು ನಾಚಿಕೆಪಡುವುದಿಲ್ಲ. ನಾನು ನಂಬಿರುವಾತನನ್ನು ಬಲ್ಲೆನು. ಆತನು ನನಗೆ ಒಪ್ಪಿಸಿಕೊಟ್ಟಿರುವುದನ್ನು ಆತನು ಆ ದಿನದವರೆಗೆ ಕಾಪಾಡುವುದಕ್ಕೆ ಶಕ್ತನಾಗಿದ್ದಾನೆಂದು ದೃಢವಾಗಿ ನಂಬಿದ್ದೇನೆ.


ನಾನು ಈಗ ನಿಮಗೋಸ್ಕರ ಅನುಭವಿಸುತ್ತಿರುವ ಬಾಧೆಗಳಲ್ಲಿ ನನಗೆ ಸಂತೋಷವಿದೆ. ಕ್ರಿಸ್ತನ ಯಾತನೆಗಳಲ್ಲಿ ಕೊರತೆಯಾಗಿರುವುದನ್ನು ಆತನ ಸಭೆಯೆಂಬ ದೇಹಕೋಸ್ಕರ ನಾನು ನನ್ನ ದೇಹದಲ್ಲಿ ಅನುಭವಿಸಿ ತೀರಿಸುತ್ತೇನೆ.


ಆದ್ದರಿಂದ ನಿಮ್ಮ ನಿಮಿತ್ತ ನನಗೆ ಉಂಟಾದ ಕಷ್ಟಗಳನ್ನು ನೋಡಿ ನೀವು ಧೈರ್ಯಗೆಡಬಾರದೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಈ ಕಷ್ಟಗಳು ನಿಮಗೆ ಘನತೆಯನ್ನು ಉಂಟುಮಾಡುತ್ತವೆ.


ನಿಮ್ಮಲ್ಲಿ ನನಗೆ ಬಹಳ ಭರವಸೆ ಉಂಟು, ಗಾಢವಾದ ಅಭಿಮಾನವುಂಟು. ನಾನು ಎಲ್ಲಾ ಸಂಕಟಗಳಲ್ಲಿಯೂ ಎದೆಗುಂದದೆ ಆನಂದಭರಿತನಾಗಿದ್ದೇನೆ.


ನೀವು ಸೆರೆಯವರಿಗೆ ಅನುತಾಪ ತೋರಿಸಿ, ನಿಮಗೋಸ್ಕರವಾಗಿ ಉತ್ತಮವಾಗಿಯೂ, ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ಚೆನ್ನಾಗಿ ಅರಿತುಕೊಂಡು, ನಿಮ್ಮ ಸೊತ್ತನ್ನು ಸುಲುಕೊಳ್ಳುವವರಿಗೆ ಸಂತೋಷದಿಂದ ಬಿಟ್ಟು ಕೊಟ್ಟಿದ್ದೀರಿ.


ಏಕೆಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟುಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು;


ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರಲ್ಪಡುವಂತೆಯೂ, ಅನ್ಯ ಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು. ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.


ಆದರೆ ಆತನು; ‘ನೀನು ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುತ್ತೇನೆಂದು’” ಹೇಳಿದನು.


ಸಂಕಟಗಳನ್ನು ಅನುಭವಿಸುವುದಕ್ಕಾಗಿಯೇ ನಾವು ನೇಮಿಸಲ್ಪಟ್ಟವರೆಂದು ನೀವೇ ಬಲ್ಲಿರಷ್ಟೆ.


ನಮಗೆ ಫಿಲಿಪ್ಪಿ ಪಟ್ಟಣದಲ್ಲಿ ಹಿಂಸೆಯೂ ಅವಮಾನವೂ ಮೊದಲು ಸಂಭವಿಸಿತ್ತಾದರೂ, ನಾವು ನಮ್ಮ ದೇವರ ಮೂಲಕ ಧೈರ್ಯಗೊಂಡು ಬಹು ವಿರೋಧವನ್ನು ಎದುರಿಸುವವರಾಗಿ ನಿಮಗೆ ದೇವರ ಸುವಾರ್ತೆಯನ್ನು ತಿಳಿಸಿದ್ದೇವೆಂಬುದನ್ನು ನೀವೇ ಬಲ್ಲಿರಿ.


ಯೆಹೂದ್ಯರಿಗೂ, ಗ್ರೀಕರಿಗೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ನಮ್ಮ ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡಬೇಕೆಂತಲೂ ದೃಢವಾಗಿ ಬೋಧಿಸುವವನಾಗಿದ್ದೆನು, ಇದೆಲ್ಲಾ ನಿಮಗೇ ತಿಳಿದಿದೆ.


ತನ್ನ ಪ್ರಿಯನಲ್ಲಿಯೇ ನಮಗೆ ಉಚಿತವಾಗಿ ಅನುಗ್ರಹಿಸಿರುವ ತನ್ನ ಮಹಿಮೆಯುಳ್ಳ ಕೃಪೆಯ ಸ್ತುತಿಗಾಗಿ ಇದೆಲ್ಲಾವನ್ನು ಮಾಡಿದನು.


ಅಂತಿಯೋಕ್ಯ, ಇಕೋನ್ಯ, ಲುಸ್ತ್ರ ಎಂಬ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಹಿಂಸೆಗಳನ್ನೂ, ಕಷ್ಟಾನುಭವಗಳನ್ನೂ ತಿಳಿದವನಾಗಿದ್ದೀ. ನಾನು ಎಂಥೆಂಥ ಹಿಂಸೆಗಳನ್ನು ಸಹಿಸಿಕೊಂಡೆನು, ಅವೆಲ್ಲವುಗಳೊಳಗಿನಿಂದ ಕರ್ತನು ನನ್ನನ್ನು ಬಿಡಿಸಿದನು.


ಕೆಲಸ ಮಾಡಿದವನಿಗೆ ಬರುವ ಕೂಲಿಯು ಕೃಪೆಯಿಂದ ದೊರಕುವಂಥದೆಂದು ಎಣಿಕೆಯಾಗುವುದಿಲ್ಲ; ಅದು ಅವನಿಗೆ ಸಲ್ಲತಕ್ಕದ್ದೇ ಎಂದು ಎಣಿಕೆಯಾಗುವುದು.


ನೀವು ಮೊದಲಿನಿಂದ ನನ್ನ ಸಂಗಡ ಇದ್ದುದರಿಂದ ನೀವೂ ಸಹ ನನಗೆ ಸಾಕ್ಷಿಗಳಾಗಿದ್ದೀರಿ.


ನನಗೆ ಐದು ಮಂದಿ ಅಣ್ಣತಮ್ಮಂದಿರಿದ್ದಾರೆ. ಅವರು ಸಹ ಈ ಯಾತನೆಯ ಸ್ಥಳಕ್ಕೆ ಬಾರದಂತೆ ಅವನು ತಾನು ಕಂಡದ್ದನ್ನು ಅವರಿಗೆ ಚೆನ್ನಾಗಿ ತಿಳಿಸಿ ಹೇಳಲಿ’ ಅಂದನು.


ಯೋಹಾನನು ತನ್ನ ಸೇವೆಯನ್ನು ಪೂರೈಸುತ್ತಿರುವಾಗ ಜನರಿಗೆ; ‘ನನ್ನನ್ನು ಯಾರೆಂದು ಯೋಚಿಸುತ್ತೀರಿ? ನಾನು ಆತನಲ್ಲ, ಆದರೆ ನನ್ನ ಹಿಂದೆ ಒಬ್ಬನು ಬರುತ್ತಾನೆ, ಆತನ ಪಾದರಕ್ಷೆಯನ್ನು ಬಿಚ್ಚುವುದಕ್ಕೆ ನಾನು ಯೋಗ್ಯನಲ್ಲ’ ಎಂದು ಹೇಳಿದನು.


“ಸಹೋದರರೇ, ಅನ್ಯಜನರು ನನ್ನ ಬಾಯಿಂದ ಸುವಾರ್ತೆಯ ವಾಕ್ಯವನ್ನು ಕೇಳಿ ನಂಬಬೇಕೆಂದು ದೇವರು ಬಹಳ ದಿನಗಳ ಹಿಂದೆ ನಿಮ್ಮೊಳಗಿಂದ ನನ್ನನ್ನು ಆರಿಸಿಕೊಂಡದ್ದು ನಿಮಗೇ ತಿಳಿದಿದೆ.


ಸೀಲನೂ ಮತ್ತು ತಿಮೊಥೆಯನೂ ಮಕೆದೋನ್ಯದಿಂದ ಬಂದಾಗ ಪೌಲನು ದೇವರ ವಾಕ್ಯವನ್ನು ಬೋಧಿಸುವುದರಲ್ಲಿ ಅತ್ಯಾಸಕ್ತಿಯುಳ್ಳವನಾಗಿ ಯೇಸುವೇ ಕ್ರಿಸ್ತನೆಂದು ಯೆಹೂದ್ಯರಿಗೆ ಖಚಿತವಾಗಿ ಸಾಕ್ಷಿಹೇಳಿದನು.


ನಿನಗೆ ಬೇಡಿಗಳೂ, ಹಿಂಸೆಗಳೂ ಕಾದುಕೊಂಡಿವೆ ಎಂದು ಪವಿತ್ರಾತ್ಮನು ಎಲ್ಲಾ ಪಟ್ಟಣಗಳಲ್ಲಿಯೂ ನನಗೆ ಎಚ್ಚರಿಕೆ ನೀಡಿದ್ದಾನೆ ಎಂಬುದನ್ನು ಬಲ್ಲೆನು.


ಆಗ ಅವರಲ್ಲಿ ಪ್ರತಿಯೊಬ್ಬನಿಗೆ ಒಂದೊಂದು ಬಿಳೀ ನಿಲುವಂಗಿಯು ಕೊಡಲ್ಪಟ್ಟಿತು ಇನ್ನೂ ಸ್ವಲ್ಪ ಸಮಯ ವಿಶ್ರಮಿಸಿಕೊಂಡಿರಬೇಕು. ನಿಮ್ಮ ಹಾಗೆ ವಧಿಸಲ್ಪಡಬೇಕಾಗಿರುವ ನಿಮ್ಮ ಸಹೋದರರ ಮತ್ತು ನಿಮ್ಮ ಜೊತೆ ಸೇವಕರ ಸಂಖ್ಯೆ ಪೂರ್ಣವಾಗುವ ತನಕ ಕಾದಿರಬೇಕೆಂದು ಅವರಿಗೆ ಅಪ್ಪಣೆಯಾಯಿತು.


ಕೂಡಲೆ ಆ ಮೂವರು ವೀರರು ಫಿಲಿಷ್ಟಿಯರ ದಂಡಿನೊಳಗೆ ನುಗ್ಗಿ ಹೋಗಿ, ಬೇತ್ಲೆಹೇಮ್ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ, ದಾವೀದನಿಗೆ ತಂದು ಕೊಟ್ಟರು.


ಹೀಗೆ ನಮ್ಮಲ್ಲಿ ಮರಣವು ನಿಮ್ಮಲ್ಲಿ ಜೀವವು ವ್ಯಾಪಿಸುತ್ತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು