Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 20:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಏಕೆಂದರೆ ಒಂದನ್ನೂ ಮರೆಮಾಡದೆ ದೇವರ ಸಂಕಲ್ಪವನ್ನೆಲ್ಲಾ ನಿಮಗೆ ತಿಳಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಏಕೆಂದರೆ, ದೈವಯೋಜನೆಯನ್ನು ಕಿಂಚಿತ್ತೂ ಮರೆಮಾಚದೆ ತಿಳಿಯಪಡಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಯಾಕಂದರೆ ಒಂದನ್ನೂ ಮರೆಮಾಡದೆ ದೇವರ ಸಂಕಲ್ಪವನ್ನೆಲ್ಲಾ ನಿಮಗೆ ತಿಳಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಯಾಕೆಂದರೆ ದೇವರ ಅಪೇಕ್ಷೆಗನುಸಾರವಾಗಿ ನೀವು ತಿಳಿದುಕೊಳ್ಳಬೇಕಾದ ಪ್ರತಿಯೊಂದನ್ನೂ ನಾನು ನಿಮಗೆ ನಿಶ್ಚಯವಾಗಿ ತಿಳಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಏಕೆಂದರೆ ದೇವರ ಸಂಕಲ್ಪವನ್ನೆಲ್ಲಾ ನಿಮಗೆ ಬೋಧಿಸುವುದರಲ್ಲಿ ನಾನು ಹಿಂಜರಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಕಶ್ಯಾಕ್ ಮಟ್ಲ್ಯಾರ್, ಎಕ್ ಬಿ ದಾಪುನ್ ಥೈ ನಸ್ತಾನಾ ದೆವಾಚೊ ಉದ್ದೆಶ್ ಕಾಯ್ ಮನ್ತಲೆ ಮಿಯಾ ತುಮ್ಕಾ ಕಳ್ವುಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 20:27
23 ತಿಳಿವುಗಳ ಹೋಲಿಕೆ  

ನಾನು ನಿಮಗೆ ಹಿತಕರವಾದದ್ದೆಲ್ಲವನ್ನು ಹೇಳುವುದಕ್ಕೂ, ಸಭೆಯಲ್ಲಿಯೂ, ಮನೆಮನೆಯಲ್ಲಿಯೂ, ಉಪದೇಶಿಸುವದಕ್ಕೂ ಹಿಂತೆಗೆಯದೆ


ದೇವರು ನಮ್ಮನ್ನು ಯೋಗ್ಯರೆಂದೆಣಿಸಿ, ಸುವಾರ್ತೆಯನ್ನು ನಮ್ಮ ವಶಕ್ಕೆ ಒಪ್ಪಿಸಿದನು. ಆದುದರಿಂದ ಮನುಷ್ಯರನ್ನು ಮೆಚ್ಚಿಸುವುದಕ್ಕಾಗಿಯಲ್ಲ ಹೃದಯವನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತಿದ್ದೇವೆ.


ನಾಚಿಕೆಪಡುವಂತಹ ಗುಪ್ತಕಾರ್ಯಗಳನ್ನು ಬಿಟ್ಟು ಕುತಂತ್ರದಲ್ಲಿ ನಡೆಯದೆ ದೇವರ ವಾಕ್ಯವನ್ನು ಬೆರಕೆ ಮಾಡದೆ, ಸತ್ಯವನ್ನು ಪ್ರಾಮಾಣಿಕವಾಗಿ ಬೋಧಿಸುತ್ತಾ ನಾವು ನೀತಿವಂತರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನಡೆಯುತ್ತೇವೆ.


ಹೀಗಿರಲಾಗಿ ನಾನು ನಿಮಗೆ ಸತ್ಯವನ್ನು ಹೇಳುವುದರಿಂದ ನಿಮಗೆ ಶತ್ರುವಾಗಿದ್ದೇನೋ?


ಇದಲ್ಲದೆ ತನ್ನ ಚಿತ್ತದ ಉದ್ದೇಶಕ್ಕನುಸಾರವಾಗಿ ಎಲ್ಲಾ ಕಾರ್ಯಗಳನ್ನು ನಡೆಸುವಾತನು ತನ್ನ ಸಂಕಲ್ಪದ ಪ್ರಕಾರ ಮೊದಲೇ ನೇಮಿಸಲ್ಪಟ್ಟವರಾದ ನಮ್ಮನ್ನು ಕ್ರಿಸ್ತನಲ್ಲಿ ತನ್ನ ಸ್ವಕೀಯ ಜನರನ್ನಾಗಿ ಅರಿಸಿಕೊಂಡನು.


ನಾನು ನಿಮಗೆ ತಿಳಿಸಿಕೊಟ್ಟ ಉಪದೇಶವನ್ನು ಕರ್ತನಿಂದ ಹೊಂದಿದೆನು. ಅದೇನೆಂದರೆ, ಕರ್ತನಾದ ಯೇಸು ತಾನು ಹಿಡಿದು ಕೊಡಲ್ಪಟ್ಟ ರಾತ್ರಿಯಲ್ಲಿ ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಅದನ್ನು ಮುರಿದು,


ಎಲ್ಲಾ ವಿಷಯಗಳಲ್ಲಿ ನಾನು ನಿಮಗೆ ಮಾದರಿ ತೋರಿಸಿದ್ದೇನೆ. ನೀವು ಹಾಗೆಯೇ ದುಡಿದು ಬಲವಿಲ್ಲದವರಿಗೆ ಉಪಕಾರಮಾಡಬೇಕು; ಮತ್ತು; ‘ತೆಗೆದುಕೊಳ್ಳುವುದಕ್ಕಿಂತ ಕೊಡುವುದೇ ಹೆಚ್ಚಿನ ಭಾಗ್ಯವೆಂಬುದಾಗಿ’ ಕರ್ತನಾದ ಯೇಸು ತಾನೇ ಹೇಳಿದ ಮಾತುಗಳನ್ನು ನೆನಪಿನಲ್ಲಿಟ್ಟುಕೊಂಡಿರಬೇಕು” ಅಂದನು.


ಆದರೂ ಆ ಯೇಸು ದೇವರ ಸ್ಥಿರಸಂಕಲ್ಪಕ್ಕೂ, ಭವಿಷ್ಯದ ಜ್ಞಾನಕ್ಕೂ ಅನುಸಾರವಾಗಿ ಒಪ್ಪಿಸಲ್ಪಟ್ಟಿರಲು ನೀವು ಅನ್ಯಜನರ ಕೈಯಿಂದ ಆತನನ್ನು ಶಿಲುಬೆಗೆ ಹಾಕಿ ಮೊಳೆ ಜಡಿದು ಕೊಂದಿರಿ.


ಆದರೆ ಫರಿಸಾಯರೂ ಧರ್ಮೋಪದೇಶಕರೂ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳದೆ ಹೋದದ್ದರಿಂದ ಅವರು ತಮ್ಮ ಕುರಿತಾದ ದೈವಸಂಕಲ್ಪವನ್ನು ನಿರಾಕರಿಸಿದರು.


ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ” ಎಂದು ಹೇಳಿದನು.


ನೀತಿವಂತರೇ, ಯೆಹೋವನಲ್ಲಿ ಸಂತೋಷಿಸುತ್ತಾ ಉಲ್ಲಾಸವಾಗಿರಿ; ಯಥಾರ್ಥಚಿತ್ತರೇ, ಆತನ ವಿಷಯದಲ್ಲಿ ಉತ್ಸಾಹ ಧ್ವನಿಮಾಡಿರಿ.


ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳೆಂದು ಕರೆಯುವುದಿಲ್ಲ, ಏಕೆಂದರೆ, ಯಜಮಾನನು ಮಾಡುವಂಥದ್ದು ಆಳಿಗೆ ತಿಳಿಯುವುದಿಲ್ಲ. ನಿಮ್ಮನ್ನು ಸ್ನೇಹಿತರೆಂದು ಕರೆದಿದ್ದೇನೆ, ಏಕೆಂದರೆ ತಂದೆಯ ಕಡೆಯಿಂದ ನಾನು ಕೇಳಿದ್ದನ್ನೆಲ್ಲಾ ನಾನು ನಿಮಗೆ ತಿಳಿಸಿದ್ದೇನೆ.


ಇವರು ಆಲೋಚನಾಸಭೆಯಲ್ಲಿ ನಿಂತಿದ್ದರೆ, ನನ್ನ ಮಾತುಗಳನ್ನು ನನ್ನ ಜನರ ಕಿವಿಗೆ ಮುಟ್ಟಿಸಿ, ಅವರನ್ನು ಅವರ ದುರ್ಮಾರ್ಗದಿಂದಲೂ ಮತ್ತು ದುಷ್ಕೃತ್ಯಗಳಿಂದಲೂ ತಪ್ಪಿಸುತ್ತಿದ್ದರು” ಎಂದು ಹೇಳುತ್ತಾನೆ.


“ದಾವೀದನಾದರೋ ತನ್ನ ಜೀವಮಾನ ಕಾಲದಲ್ಲಿ ದೇವರ ಸಂಕಲ್ಪಕ್ಕನುಸಾರವಾಗಿ ಸೇವೆಮಾಡಿದ ನಂತರ, ಸತ್ತಾಗ ತನ್ನ ಪೂರ್ವಜರ ಬಳಿ ಅವನನ್ನು ಸಮಾಧಿಮಾಡಲಾಯಿತು, ಅವನ ದೇಹವು ಕೊಳೆಯುವ ಅವಸ್ಥೆಯನ್ನು ಅನುಭವಿಸಿತು.


ನಿನ್ನ ನೀತಿಸಾಧನೆಯನ್ನು ಮರೆಮಾಡಲಿಲ್ಲ; ನಿನ್ನ ನಂಬಿಕೆಯನ್ನೂ, ರಕ್ಷಣೆಯನ್ನೂ ಪ್ರಸಿದ್ಧಪಡಿಸಿದೆನು; ನಿನ್ನ ಕೃಪಾಸತ್ಯತೆಗಳನ್ನು ಮಹಾಸಮುದಾಯದಲ್ಲಿ ತಿಳಿಸದೆ ಇರಲಿಲ್ಲ.


“ಯೆಹೋವನು ಇಂತೆನ್ನುತ್ತಾನೆ, ನೀನು ಯೆಹೋವನ ಆಲಯದ ಪ್ರಾಕಾರದಲ್ಲಿ ನಿಂತು ಆ ಮಂದಿರದಲ್ಲಿ ಆರಾಧಿಸುವುದಕ್ಕೆ ಬರುವ ಯೆಹೂದದ ಎಲ್ಲಾ ಊರಿನವರಿಗೆ ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಹೇಳು, ಒಂದು ಮಾತನ್ನೂ ಬಿಡಬೇಡ.


ನಾನು ಯೆಹೋವನ ಅಪ್ಪಣೆಯನ್ನು ಈ ದಿನ ನಿಮಗೆ ತಿಳಿಸಿದ್ದೇನೆ; ನೀವಾದರೆ ನಿಮ್ಮ ದೇವರಾದ ಯೆಹೋವನು ನನ್ನ ಮೂಲಕ ನಿಮಗೆ ಹೇಳಿ ಕಳುಹಿಸಿದ ಯಾವ ಮಾತನ್ನೂ ಕೇಳಲಿಲ್ಲ.


ಆ ಪುರುಷನು ನನಗೆ, “ನರಪುತ್ರನೇ, ನೀನು ಕಣ್ಣಿಟ್ಟು ನೋಡು, ಕಿವಿಗೊಟ್ಟು ಕೇಳು; ನಾನು ನಿನಗೆ ತೋರಿಸುವುದನ್ನೆಲ್ಲಾ ಮನಸ್ಸಿಟ್ಟು ತಿಳಿದುಕೋ. ನಾನು ನಿನಗೆ ತೋರಿಸುವುದನ್ನು ನೀನು ನೋಡಬೇಕೆಂದೇ ಇಲ್ಲಿಗೆ ಬರಮಾಡಿದ್ದೇನೆ. ನೀನು ನೋಡುವುದನ್ನೆಲ್ಲಾ ಇಸ್ರಾಯೇಲ್ ವಂಶದವರಿಗೆ ಪ್ರಕಟಿಸು” ಎಂದು ಹೇಳಿದನು.


ಮೋಶೆಯು ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಬಿಡದೆ ಹೆಂಗಸರಿಗೂ, ಚಿಕ್ಕವರಿಗೂ, ಪರದೇಶದವರಿಗೂ ಕೇಳಿಸುವಂತೆ ಸರ್ವಸಮೂಹದ ಮುಂದೆ ಅದನ್ನು ಓದಿದನು.


ಆಗ ಪ್ರವಾದಿಯಾದ ಯೆರೆಮೀಯನು ಈ ಮಾತುಗಳನ್ನೆಲ್ಲಾ ಯೆರೂಸಲೇಮಿನಲ್ಲಿ ಯೆಹೂದದ ಅರಸನಾದ ಚಿದ್ಕೀಯನಿಗೆ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು