Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 20:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆದಕಾರಣ ನಾನು ಕಣ್ಣೀರು ಸುರಿಸುತ್ತಾ ಮೂರು ವರ್ಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬನಿಗೆ ಬುದ್ಧಿ ಹೇಳಿದೆನೆಂಬುದನ್ನು ನೀವು ನೆನಪಿಸಿಕೊಂಡು ಎಚ್ಚರವಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಆದುದರಿಂದ ಎಚ್ಚರಿಕೆ! ನಾನು ಮೂರು ವರ್ಷಗಳ ಕಾಲ ಹಗಲಿರುಳು ಕಣ್ಣೀರಿಡುತ್ತಾ ಪ್ರತಿಯೊಬ್ಬನಿಗೂ ಬುದ್ಧಿ ಹೇಳಿದ್ದೇನೆಂಬುದನ್ನು ಮರೆಯಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಆದಕಾರಣ ನಾನು ಕಣ್ಣೀರುಸುರಿಸುತ್ತಾ ಮೂರು ವರುಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬನಿಗೆ ಬುದ್ಧಿಹೇಳಿದೆನೆಂದು ನೀವು ಜ್ಞಾಪಕಮಾಡಿಕೊಂಡು ಎಚ್ಚರವಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಆದ್ದರಿಂದ ಎಚ್ಚರಿಕೆಯಿಂದಿರಿ! ನಾನು ಮೂರು ವರ್ಷಗಳ ಕಾಲ ನಿಮ್ಮೊಂದಿಗೆ ಇದ್ದೆನು. ಈ ಕಾಲಾವಧಿಯಲ್ಲಿ ನಾನು ನಿಮಗೆ ಹಗಲಿರುಳು ಉಪದೇಶಿಸುತ್ತಾ ನಿಮಗಾಗಿ ಕಣ್ಣೀರಿಡುತ್ತಾ ನಿಮ್ಮನ್ನು ಎಚ್ಚರಿಸಿದ್ದನ್ನು ಮರೆಯದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಆದ್ದರಿಂದ ನಾನು ಮೂರು ವರ್ಷಗಳ ಕಾಲ ಹಗಲುರಾತ್ರಿ ಕಣ್ಣೀರಿಡುತ್ತಾ ಎಡಬಿಡದೆ ನಿಮ್ಮನ್ನು ಎಚ್ಚರಿಸುತ್ತಾ ಇದ್ದೇನೆಂಬುದನ್ನು ಜ್ಞಾಪಕದಲ್ಲಿಟ್ಟುಕೊಂಡು ಎಚ್ಚರವಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ತೆಸೆ ಹೊವ್ನ್, ಮಿಯಾ ರಡುನ್ಗೆತ್ ತಿನ್ ವರ್ಸಾಚೊ ದಿಸ್ ತುಮ್ಚ್ಯಾತ್ಲ್ಯಾ ಹರ್ ಎಕ್ಲ್ಯಾಕ್ಬಿ ಶಿಕ್ವಲ್ಲೆ ಹುಶ್ಯಾರ್ಕಿನ್ ಯಾದ್ ಥವ್ನ್ ಘೆವಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 20:31
22 ತಿಳಿವುಗಳ ಹೋಲಿಕೆ  

ಯೆಹೂದ್ಯರ ಒಳಸಂಚುಗಳಿಂದ ಸಂಭವಿಸಿದ ಸಂಕಷ್ಟಗಳಲ್ಲಿ, ನಾನು ಅತಿ ನಮ್ರತೆಯಿಂದಲೂ, ಕಣ್ಣೀರಿನಿಂದಲೂ ಕರ್ತನ ಸೇವೆ ಮಾಡುತ್ತಿದ್ದೇನೆ.


ಇದು ಎರಡು ವರ್ಷಗಳ ವರೆಗೂ ನಡೆದಿದ್ದರಿಂದ ಅಸ್ಯಸೀಮೆಯಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರೂ, ಗ್ರೀಕರೂ, ಕರ್ತನ ವಾಕ್ಯವನ್ನು ಕೇಳಿದರು.


ಆ ಪಟ್ಟಣದಲ್ಲಿ ಪೌಲನು ಸಭಾಮಂದಿರದೊಳಗೆ ಹೋಗಿ, ಮೂರು ತಿಂಗಳು ಅಲ್ಲೇ ದೇವರ ರಾಜ್ಯದ ವಿಷಯಗಳನ್ನು ಕುರಿತು, ವಾದಿಸುತ್ತಾ ಜನರನ್ನು ಒಡಂಬಡಿಸುತ್ತಾ ಧೈರ್ಯದಿಂದ ಮಾತನಾಡಿದನು.


ನಿಮ್ಮ ಸಭಾನಾಯಕರ ಮಾತನ್ನು ಕೇಳಿರಿ, ಅವರಿಗೆ ಅಧೀನರಾಗಿರಿ. ಅವರು ಲೆಕ್ಕ ಒಪ್ಪಿಸಬೇಕಾದವರಾಗಿರುವುದರಿಂದ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ದುಃಖಿಸದೆ ಸಂತೋಷದಿಂದ ಇದನ್ನು ಮಾಡುವಂತೆ ನಡೆದುಕೊಳ್ಳಿರಿ. ಏಕೆಂದರೆ ಅವರು ವ್ಯಸನದಿಂದಿರುವುದು ನಿಮಗೆ ಪ್ರಯೋಜನಕರವಾದದ್ದಲ್ಲ.


ನಾವು ಆತನನ್ನು ಸಾರುತ್ತಲಿದ್ದೇವೆ, ಸಕಲರಿಗೂ ಬುದ್ಧಿ ಹೇಳುತ್ತಾ, ಸರ್ವರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ, ದೇವರ ಮುಂದೆ ಎಲ್ಲರನ್ನೂ ಕ್ರಿಸ್ತನಲ್ಲಿ ಪ್ರವೀಣರನ್ನಾಗಿ ನಿಲ್ಲಿಸುವುದಕ್ಕೆ ಪ್ರಯತ್ನಿಸುತ್ತಿದ್ದೇವೆ.


ಆದರೆ ನೀನು ಎಲ್ಲಾ ವಿಷಯಗಳಲ್ಲಿಯೂ ಸ್ವಸ್ಥಚಿತ್ತನಾಗಿರು, ಹಿಂಸೆಯನ್ನು ತಾಳಿಕೋ, ಸುವಾರ್ತಿಕನ ಕೆಲಸವನ್ನು ಮಾಡು, ನಿನಗೆ ನೇಮಿಸಿರುವ ಸೇವೆಯನ್ನು ಲೋಪವಿಲ್ಲದೆ ಮಾಡು.


ಆದರೆ ಅಂದು ಬರುವುದಕ್ಕಿರುವ ಇವೆಲ್ಲವುಗಳಿಂದ ತಪ್ಪಿಸಿಕೊಳ್ಳುವುದಕ್ಕೂ, ಮನುಷ್ಯಕುಮಾರನ ಮುಂದೆ ನಿಂತುಕೊಳ್ಳುವುದಕ್ಕೂ, ನೀವು ಪೂರ್ಣ ಶಕ್ತರಾಗುವಂತೆ, ಎಲ್ಲಾ ಕಾಲದಲ್ಲಿಯೂ ದೇವರಿಗೆ ವಿಜ್ಞಾಪನೆಮಾಡಿಕೊಳ್ಳುತ್ತಾ ಎಚ್ಚರವಾಗಿರಿ” ಅಂದನು.


ಆದರೆ ಜನರು ನಿದ್ರೆ ಮಾಡುವ ಸಮಯದಲ್ಲಿ ಅವನ ವೈರಿಯು ಬಂದು ಗೋದಿಯ ನಡುವೆ ಕಳೆಯನ್ನು ಬಿತ್ತಿ ಹೋದನು.


“ಇಗೋ ಕಳ್ಳನು ಬರುವಂತೆ ಬರುತ್ತೇನೆ. ತಾನು ಬೆತ್ತಲೆಯಾಗಿ ತಿರುಗಾಡಿ ಜನರಿಂದ ಅವಮಾನಕ್ಕೆ ಗುರಿಯಾಗದಂತೆ ಎಚ್ಚರವಾಗಿದ್ದು ತನ್ನ ವಸ್ತ್ರಗಳನ್ನು ಜಾಗರೂಕತೆಯಿಂದ ಕಾಪಾಡಿಕೊಳ್ಳುವವನು ಧನ್ಯನು.”


ನಾವು ಹಣಕೊಡದೆ ಯಾರ ಬಳಿಯಲ್ಲಿಯೂ ಊಟ ಮಾಡಲಿಲ್ಲ, ನಿಮ್ಮಲ್ಲಿ ಯಾರಿಗೂ ಭಾರವಾಗಬಾರದೆಂದು ಹಗಲಿರುಳು ಕಷ್ಟದಿಂದಲೂ ಪ್ರಯಾಸದಿಂದಲೂ ದುಡಿದು ಜೀವನ ಮಾಡಿದೆವು.


ಸಹೋದರರೇ, ಮೈಗಳ್ಳರಿಗೆ ಬುದ್ಧಿಹೇಳಿರಿ, ಮನಗುಂದಿದವರನ್ನು ಧೈರ್ಯಪಡಿಸಿರಿ, ಬಲಹೀನರಿಗೆ ಆಧಾರವಾಗಿರಿ, ಎಲ್ಲರೊಂದಿಗೆ ದೀರ್ಘಶಾಂತಿಯಿಂದಿರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.


ನಿಮ್ಮನ್ನು ನಾಚಿಕೆಪಡಿಸುವುದಕ್ಕಾಗಿ ಬರೆಯದೆ ನನ್ನ ಪ್ರಿಯ ಮಕ್ಕಳೆಂದು ಭಾವಿಸಿ ನಿಮಗೆ ಬುದ್ಧಿ ಹೇಳುವುದಕ್ಕಾಗಿಯೇ ಈ ಮಾತುಗಳನ್ನು ಬರೆದಿದ್ದೇನೆ.


“ಕೆಲವು ವರ್ಷಗಳಾದ ಮೇಲೆ ನಾನು, ನನ್ನ ಸ್ವದೇಶದವರಿಗೆ ಧರ್ಮದ್ರವ್ಯಗಳನ್ನು, ತರುವುದಕ್ಕೂ, ಕಾಣಿಕೆಗಳನ್ನು ಒಪ್ಪಿಸುವುದಕ್ಕೂ ಬಂದೆನು.


ಆಗ ಅವನು ಮೇಲಕ್ಕೆ ಹೋಗಿ ರೊಟ್ಟಿ ಮುರಿದು ಊಟಮಾಡಿ ಬಹಳ ಹೊತ್ತು ಬೆಳಗಾಗುವ ತನಕ ಮಾತನಾಡಿ ಹೊರಟುಹೋದನು.


ವಾರದ ಮೊದಲನೆಯ ದಿನದಲ್ಲಿ ನಾವು ರೊಟ್ಟಿ ಮುರಿಯುವ ನಿಯಮಕ್ಕಾಗಿ ಸೇರಿಬಂದಾಗ ಪೌಲನು ಅಲ್ಲಿ ನೆರೆದಂತಹ ವಿಶ್ವಾಸಿಗಳಿಗೆ ಬೋಧನೆಮಾಡಿದನು. ಮರುದಿನ ಹೊರಡಬೇಕೆಂದಿದ್ದ ಪೌಲನು ಅವರಿಗೆ ಬೋಧಿಸುತ್ತಾ ಮಧ್ಯರಾತ್ರಿಯವರೆಗೂ ಉಪನ್ಯಾಸವನ್ನು ನೀಡಿದನು.


ಆದರೆ ಯೋಹಾನನು ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ದೀಕ್ಷಾಸ್ನಾನಮಾಡಿಸಿಕೊಳ್ಳುವುದಕ್ಕೆ ಬರುವುದನ್ನು ಕಂಡು ಅವರಿಗೆ, “ಎಲೈ ಸರ್ಪಸಂತತಿಯವರೇ, ಮುಂದೆ ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಚ್ಚರಿಸಿದವರಾರು?


ನೀನು ನೀತಿವಂತನನ್ನು ಪಾಪ ಮಾಡದಂತೆ ಎಚ್ಚರಿಸಿದ ಮೇಲೆ ಅವನು ಪಾಪಮಾಡದೆ ಎಚ್ಚರಗೊಂಡ ಕಾರಣ ಜೀವದಿಂದ ಉಳಿಯುವನು; ನೀನೂ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ.”


ಯಾಕೆಂದರೆ ಅನೇಕರು ಕ್ರಿಸ್ತನ ಶಿಲುಬೆಗೆ ವಿರೋಧಿಗಳಾಗಿ ನಡೆಯುತ್ತಾರೆ. ಅವರ ವಿಷಯದಲ್ಲಿ ನಿಮಗೆ ಎಷ್ಟೋ ಸಾರಿ ಹೇಳಿದೆನು, ಈಗಲೂ ಅಳುತ್ತಾ ಹೇಳುತ್ತೇನೆ.


ನಾನು ನಿಮ್ಮ ಸಂಗಡ ಇದ್ದಾಗ ಈ ಸಂಗತಿಗಳನ್ನು ಹೇಳಿದ್ದು ಜ್ಞಾಪಕವಿಲ್ಲವೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು