Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 20:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ನಾನೀಗ ನಿಮ್ಮನ್ನು ದೇವರಿಗೂ, ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತೇನೆ. ಆತನು ನಿಮ್ಮಲ್ಲಿ ಭಕ್ತಿವೃದ್ಧಿಯನ್ನುಂಟುಮಾಡುವುದಕ್ಕೂ, ಪರಿಶುದ್ಧರೊಂದಿಗೆ ನಿಮಗೆ ಹಕ್ಕನ್ನು ಅನುಗ್ರಹಿಸುವುದಕ್ಕೆ ಶಕ್ತನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 “ಈಗ ನಿಮ್ಮನ್ನು ದೇವರ ಕೈಗೂ, ಅವರ ಅನುಗ್ರಹ ಸಂದೇಶಕ್ಕೂ ಒಪ್ಪಿಸಿಕೊಡುತ್ತೇನೆ. ಅದು ನಿಮ್ಮನ್ನು ಅಭಿವೃದ್ಧಿಗೊಳಿಸಬಲ್ಲದು. ಮಾತ್ರವಲ್ಲ, ಪಾವನಪುರುಷರ ಬಾಧ್ಯತೆಯಲ್ಲಿ ಭಾಗಿಗಳಾಗುವಂತೆ ಮಾಡಬಲ್ಲದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ನಾನೀಗ ನಿಮ್ಮನ್ನು ಕರ್ತನಿಗೂ ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತೇನೆ. ಆತನು ನಿಮ್ಮಲ್ಲಿ ಭಕ್ತಿವೃದ್ಧಿಯನ್ನುಂಟುಮಾಡುವದಕ್ಕೂ ಪವಿತ್ರರಾದವರೆಲ್ಲರಲ್ಲಿ ನಿಮಗೆ ಹಕ್ಕನ್ನು ಅನುಗ್ರಹಿಸುವದಕ್ಕೂ ಶಕ್ತನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 “ಈಗ ನಾನು ನಿಮ್ಮನ್ನು ದೇವರಿಗೂ ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತಿದ್ದೇನೆ. ಆತನ ಕೃಪಾವಾಕ್ಯವು ನಿಮ್ಮ ಭಕ್ತಿಯನ್ನು ವೃದ್ಧಿಪಡಿಸಿ ಪರಿಶುದ್ಧರ ಬಾಧ್ಯತೆಯಲ್ಲಿ ಪಾಲುಗಾರರನ್ನಾಗಿ ಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 “ಆದಕಾರಣ ನಾನು ದೇವರಿಗೂ ಅವರ ಕೃಪಾವಾಕ್ಯಕ್ಕೂ ಈಗ ನಿಮ್ಮನ್ನು ಒಪ್ಪಿಸಿಕೊಡುತ್ತೇನೆ. ಆ ವಾಕ್ಯವು ನಿಮ್ಮಲ್ಲಿ ಭಕ್ತಿವೃದ್ಧಿ ಮಾಡಿ, ಪವಿತ್ರರಾದವರೆಲ್ಲರಲ್ಲಿ ನಿಮಗೆ ಬಾಧ್ಯತೆಯನ್ನು ಕೊಡಲು ಸಾಮರ್ಥ್ಯವುಳ್ಳದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ಅತ್ತಾ ಮಿಯಾ ತುಮ್ಕಾ ದೆವಾಚ್ಯಾ, ಅನಿ ತೆಚ್ಯಾ ಕುರ್ಪೆಚ್ಯಾ ಬರ್‍ಯಾ ಖಬ್ರೆಚ್ಯಾ ಜಗ್ಗೊಳ್ ಒಪ್ಸುನ್ ದಿತಾ,ತೆಕಾ ತುಮ್ಕಾ ಪವಿತ್ರ್ ಕರ್ತಲಿ ಬಳ್ ಹಾಯ್, ಅನಿ ತುಮ್ಕಾ ದೆವ್ ಅಪ್ಲ್ಯಾ ಸಗ್ಳ್ಯಾ ಲೊಕಾಕ್ನಿ ದಿತಲೊ ಆಶಿರ್ವಾದ್ ದಿತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 20:32
37 ತಿಳಿವುಗಳ ಹೋಲಿಕೆ  

ದೇವಭಕ್ತರಿಗಾಗಿ ಬೆಳಕಿನಲ್ಲಿರುವ ಬಾಧ್ಯತೆಯಲ್ಲಿ ಪಾಲುಗಾರರಾಗುವುದಕ್ಕೆ ನಮ್ಮನ್ನು ಯೋಗ್ಯರನ್ನಾಗಿ ಮಾಡಿದ ತಂದೆಯಾದ ದೇವರಿಗೆ ಆನಂದಪೂರ್ವಕವಾಗಿ ಕೃತಜ್ಞತಾಸ್ತುತಿಯನ್ನು ಸಲ್ಲಿಸುವವರಾಗಬೇಕೆಂತಲೂ ದೇವರನ್ನು ಬೇಡಿಕೊಳ್ಳುತ್ತೇನೆ.


ಕರ್ತನಿಂದ ಬಾಧ್ಯತೆಯೆಂಬ ಪ್ರತಿಫಲವನ್ನು ಹೊಂದುವಿರೆಂದು ತಿಳಿದುಕೊಂಡು ಕರ್ತನಾದ ಕ್ರಿಸ್ತನನ್ನು ಸೇವಿಸುವವರಾಗಿರಿ.


ದೇವರು ತನ್ನ ಸ್ವಕೀಯ ಜನರಿಗೆ ವಿಮೋಚನೆಯುಂಟಾಗುತ್ತದೆ ಎಂಬುದಕ್ಕೆ ಪವಿತ್ರಾತ್ಮನು ನಮ್ಮ ಬಾಧ್ಯತೆಗೆ ಸಂಚಕಾರವಾಗಿದ್ದಾನೆ. ಈ ಕಾರಣ ದೇವರಿಗೆ ಮಹಿಮೆಯನ್ನು ಸಲ್ಲಿಸೋಣ.


ಅವರು ಕತ್ತಲೆಯಿಂದ ಬೆಳಕಿಗೂ, ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು, ನನ್ನಲ್ಲಿ ನಂಬಿಕೆಯಿಡುವುದರಿಂದ ಪಾಪಕ್ಷಮಾಪಣೆಯನ್ನೂ, ಪರಿಶುದ್ಧರೊಂದಿಗೆ ಹಕ್ಕನ್ನೂ ಹೊಂದುವಂತೆ, ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ’ ಅಂದನು.


ದೇವರಿಂದ ಕರೆಯಲ್ಪಟ್ಟ ಜನರು, ದೇವರ ವಾಗ್ದಾನವಾದ ನಿತ್ಯಬಾಧ್ಯತೆಯನ್ನು ಹೊಂದಿಕೊಳ್ಳಲೆಂದು ಕ್ರಿಸ್ತನು ಈ ಹೊಸ ಒಡಂಬಡಿಕೆಗೆ ಮಧ್ಯಸ್ಥನಾದನು. ಏಕೆಂದರೆ ಮೊದಲನೆ ಒಡಂಬಡಿಕೆಯ ಕಾಲದಲ್ಲಿ ಮಾಡಿದ ಪಾಪಗಳಿಂದ ಅವರನ್ನು ಬಿಡುಗಡೆಗೊಳಿಸುವುದಕ್ಕಾಗಿ ಕ್ರಿಸ್ತನು ಮರಣ ಹೊಂದಿದನು.


ಆತನೇ ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ, ಆತನ ಕರೆಯ ನಿರೀಕ್ಷೆಯು ಎಂಥದೆಂಬುದನ್ನೂ ಮತ್ತು ದೇವಜನರಲ್ಲಿರುವ ಆತನ ಸ್ವತ್ತಿನ ಮಹಿಮಾತಿಶಯವು ಎಂಥದೆಂಬುದನ್ನೂ,


ಆತನಲ್ಲಿ ಬೇರೂರಿಕೊಂಡು, ಆತನಲ್ಲಿ ಕಟ್ಟಲ್ಪಟ್ಟು ಮತ್ತು ನಿಮಗೆ ಬೋಧಿಸಲ್ಪಟ್ಟ ಉಪದೇಶದ ಪ್ರಕಾರವೇ ಕ್ರಿಸ್ತ ನಂಬಿಕೆಯಲ್ಲಿ ನೆಲೆಗೊಂಡು ದೇವರಿಗೆ ಹೆಚ್ಚೆಚ್ಚಾಗಿ ಸ್ತೋತ್ರ ಸಲ್ಲಿಸುವವರಾಗಿರಿ.


“ಇಸ್ರಾಯೇಲೇ, ನಾನು ಎಷ್ಟೋ ಸಂತೋಷದಿಂದ ಗಂಡು ಮಕ್ಕಳೊಳಗೆ ನಿನ್ನನ್ನೂ ಆರಿಸಿಕೊಂಡು, ನಿನಗೆ ಮನೋಹರವಾದ ದೇಶವನ್ನು ಅಂದರೆ ಸಮಸ್ತ ಜನಾಂಗಗಳ ಬಾಧ್ಯತೆಗಳಲ್ಲಿ ರಮಣೀಯವಾದದ್ದನ್ನು ಕೊಡುವೆನು; ನೀನು ನನ್ನ ಅನುಸರಣೆಯನ್ನು ಬಿಟ್ಟು ಓರೆಯಾಗದೆ ನನ್ನನ್ನು ‘ತಂದೆ’ ಎನ್ನುವಿ ಅಂದುಕೊಂಡೆನು.


ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಿಕೊಳ್ಳಬೇಡಿರಿ. ಏಕೆಂದರೆ ದೇವರ ಕೃಪೆಯಿಂದ ಹೃದಯವನ್ನು ದೃಢಪಡಿಸಿಕೊಳ್ಳುವುದು ಒಳ್ಳೆಯದು. ಭೋಜನ ಪದಾರ್ಥಗಳ ಕುರಿತಾದ ನಿಯಮಗಳನ್ನು ಅನುಸರಿಸುವವರಿಗೆ ಏನೂ ಪ್ರಯೋಜನವಾಗುವುದಿಲ್ಲ.


ಜಾರನಿಗಾಗಲಿ, ದುರಾಚಾರಿಗಾಗಲಿ, ವಿಗ್ರಹಾರಾಧಕನಾಗಿರುವ ಲೋಭಿಗಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯತೆ ಇಲ್ಲವೆಂದು ನಿಮಗೆ ನಿಶ್ಚಯವಾಗಿ ತಿಳಿದಿರಲಿ.


ಆದರೆ ಪ್ರಾಣವನ್ನು ಉಳಿಸಿಕೊಳ್ಳುವುದೇ ಶ್ರೇಷ್ಠವೆಂದು ನಾನು ಎಣಿಸುವುದಿಲ್ಲ; ದೇವರ ಕೃಪೆಯ ವಿಷಯವಾದ ಸುವಾರ್ತೆಯನ್ನು ಆಸಕ್ತಿಯಿಂದ ಸಾಕ್ಷ್ಯಪೂರಕವಾಗಿ ಸಾರುವ ನಿಯೋಗವನ್ನು ಕರ್ತನಾದ ಯೇಸುವಿನಿಂದ ನಾನು ಹೊಂದಿದ್ದೇನೆ ಈ ನಿಯೋಗವನ್ನು ಪೂರ್ಣಗೊಳಿಸುವುದೊಂದೇ ನನ್ನ ಅಪೇಕ್ಷೆಯಾಗಿದೆ.


ಪ್ರಿಯರೇ, ನೀವಾದರೋ ನಿಮಗಿರುವ ಅತಿ ಪರಿಶುದ್ಧವಾದ ಕ್ರಿಸ್ತ ನಂಬಿಕೆಯನ್ನು ಆಧಾರವಾಗಿಟ್ಟುಕೊಂಡು ಅಭಿವೃದ್ಧಿಹೊಂದುತ್ತಾ, ಪವಿತ್ರಾತ್ಮಪ್ರೇರಿತರಾಗಿ ಪ್ರಾರ್ಥನೆ ಮಾಡಿರಿ.


ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೆ ನೀವು ಕರ್ತನಾದ ಯೇಸು ಕ್ರಿಸ್ತನ ಹೆಸರಿನಿಂದಲೂ ಮತ್ತು ನಮ್ಮ ದೇವರ ಆತ್ಮದಿಂದಲೂ ತೊಳೆಯಲ್ಪಟ್ಟು, ಶುದ್ಧೀಕರಿಸಲ್ಪಟ್ಟಿದ್ದೀರಿ, ದೇವರಿಂದ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ.


ಇದಲ್ಲದೆ ಪ್ರತಿ ಕ್ರೈಸ್ತ ಸಭೆಗೂ ಹಿರಿಯರನ್ನು ನೇಮಿಸಿದರು. ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರು ನಂಬಿದ್ದ ಕರ್ತನಿಗೆ ಅವರನ್ನು ಒಪ್ಪಿಸಿದರು.


ಆತನು ಶುದ್ಧೀಕರಿಸಲ್ಪಡುವವರನ್ನು ಒಂದೇ ಸಮರ್ಪಣೆಯಿಂದ ನಿರಂತರವಾಗಿ ಪರಿಪೂರ್ಣರನ್ನಾಗಿ ಮಾಡಿದ್ದಾನೆ.


ಯಾಕೆಂದರೆ ಪವಿತ್ರಗೊಳಿಸುವವನಿಗೂ ಪವಿತ್ರರಾದವರಿಗೂ ಒಬ್ಬಾತನೇ ಮೂಲ ಆತನು ದೇವರೇ. ಈ ಕಾರಣದಿಂದ ಅವರನ್ನು ಪವಿತ್ರಗೊಳಿಸುವಾತನು ಅವರನ್ನು ಸಹೋದರರೆಂದು ಕರೆಯುವುದಕ್ಕೆ ನಾಚಿಕೆಪಡಲಿಲ್ಲ.


ಅವರು ಈವರೆಗೆ ನೆರವೇರಿಸಿ ಬಂದಿರುವ ಕೆಲಸಕ್ಕೋಸ್ಕರ ತಮ್ಮನ್ನೇ ದೇವರ ಕೃಪಾಶ್ರಯಕ್ಕೆ ಮೊದಲು ಒಪ್ಪಿಸಿಕೊಟ್ಟದ್ದು ಈ ಊರಿನಲ್ಲಿಯೇ.


ನೀನು ಸತ್ಯದಿಂದ ಇವರನ್ನು ಪ್ರತಿಷ್ಠೆಪಡಿಸು, ನಿನ್ನ ವಾಕ್ಯವೇ ಸತ್ಯ.


ದೇಹವೆಲ್ಲಾ ಆತನ ಮುಖಾಂತರ ಪ್ರತಿ ಕೀಲಿನಿಂದ ಬಿಗಿಯಾಗಿ ಜೋಡಿಸಲ್ಪಟ್ಟು ಐಕ್ಯವಾಗಿದ್ದು, ಪ್ರತಿಯೊಂದು ಅಂಗವು ತನ್ನ ಕೆಲಸವನ್ನು ಮಾಡುವುದರಿಂದ ದೇಹವು ಪ್ರೀತಿಯಲ್ಲಿ ಬೆಳೆದು ಕ್ಷೇಮಾಭಿವೃದ್ಧಿಯನ್ನು ಹೊಂದುತ್ತದೆ.


ನಾವೆಲ್ಲರೂ ನಂಬಿಕೆಯಿಂದಲೂ ದೇವಕುಮಾರನ ವಿಷಯವಾದ ಜ್ಞಾನದಿಂದಲೂ ಉಂಟಾಗುವ ಐಕ್ಯತೆಯನ್ನು ಹೊಂದಿ, ಪರಿಪಕ್ವತೆಯನ್ನು ಪಡೆದು, ಕ್ರಿಸ್ತನ ಪರಿಪೂರ್ಣತೆಯ ಮಟ್ಟವನ್ನು ತಲುಪುವ ತನಕ,


ಹೀಗಿರಲಾಗಿ ಅವರು ಬಹುಕಾಲ ಅಲ್ಲಿದ್ದು ಕರ್ತನು ಅವರ ಕೈಯಿಂದ ಸೂಚಕಕಾರ್ಯಗಳೂ, ಅದ್ಭುತಕಾರ್ಯಗಳೂ ನಡೆಯುವಂತೆ ದಯಪಾಲಿಸಿ ತನ್ನ ಕೃಪಾವಾಕ್ಯಕ್ಕೆ ಸಾಕ್ಷಿಕೊಟ್ಟಿದ್ದರಿಂದ ಆತನ ಮೇಲೆ ಭರವಸವಿಟ್ಟು ಧೈರ್ಯದಿಂದ ಮಾತನಾಡುತ್ತಿದ್ದರು.


ನಾನು ನಿಮಗೆ ಹೇಳಿದ ವಾಕ್ಯದ ದೆಸೆಯಿಂದ ಈಗ ನೀವು ಶುದ್ಧರಾಗಿದ್ದೀರಿ.


ಯೇಸು ಕ್ರಿಸ್ತನ ಸೇವಕನೂ, ಯಾಕೋಬನ ತಮ್ಮನೂ ಆಗಿರುವ ಯೂದನು ಕರೆಯಲ್ಪಟ್ಟವರಿಗೆ, ತಂದೆಯಾದ ದೇವರಲ್ಲಿ ಪ್ರಿಯರಾದವರಿಗೆ, ಯೇಸು ಕ್ರಿಸ್ತನಿಗಾಗಿ ಕಾಪಾಡಲ್ಪಟ್ಟವರಿಗೆ ಬರೆಯುವುದೇನೆಂದರೆ,


ಕೊರಿಂಥದಲ್ಲಿನ ದೇವರ ಸಭೆಗೆ ಅಂದರೆ ಕ್ರಿಸ್ತ ಯೇಸುವಿನಲ್ಲಿ ಪ್ರತಿಷ್ಠಿತರಾದವರಿಗೂ, ಪರಿಶುದ್ಧರಾಗಿರಲು ಕರೆಯಲ್ಪಟ್ಟವರಿಗೂ, ನಮ್ಮ ಮತ್ತು ಅವರ ಕರ್ತನಾಗಿರುವ ಯೇಸು ಕ್ರಿಸ್ತನ ನಾಮಸ್ಮರಣೆಯನ್ನು ಮಾಡುವವರೆಲ್ಲಿದ್ದರೂ ಅವರೆಲ್ಲರಿಗೂ ಬರೆಯುವುದು ಏನೆಂದರೆ,


ಪೌಲನು ಸೀಲನನ್ನು ಆರಿಸಿಕೊಂಡು ಸಹೋದರರಿಂದ ಕರ್ತನ ಕೃಪಾಶ್ರಯಕ್ಕೆ ಒಪ್ಪಿಸಲ್ಪಟ್ಟವನಾಗಿ ಅಲ್ಲಿಂದ


ಹೀಗಿರಲಾಗಿ ಯೂದಾಯ, ಗಲಿಲಾಯ, ಸಮಾರ್ಯ ಸೀಮೆಗಳಲ್ಲಿದ್ದ ಸಭೆಯು ಸಮಾಧಾನ ಹೊಂದಿತು; ಮತ್ತು ಭಕ್ತಿಯಲ್ಲಿ ಬೆಳೆದು ಕರ್ತನ ಭಯದಲ್ಲಿ ನಡೆದು, ಪವಿತ್ರಾತ್ಮನಿಂದ ಪ್ರೋತ್ಸಾಹವನ್ನು ಹೊಂದಿ ಬೆಳೆಯುತ್ತಾ ಬಂದಿತು.


ನೀನು ನಿನ್ನ ಅನಾಥರನ್ನು ಬಿಡು, ನಾನೇ ಅವರನ್ನು ಉಳಿಸುವೆನು; ನಿನ್ನ ವಿಧವೆಯರು ನನ್ನಲ್ಲಿ ಭರವಸೆಯಿಡಲಿ.


ಯೋಸೇಫನು ತನ್ನ ಅಣ್ಣತಮ್ಮಂದಿರಿಗೆ, “ನನಗೆ ಅವಸಾನಕಾಲ ಸಮೀಪಿಸಿತು. ಆದರೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ತಾನು ಅಬ್ರಹಾಮ, ಇಸಾಕ್, ಯಾಕೋಬರಿಗೆ ಕೊಡುತ್ತೇನೆಂದು ಪ್ರಮಾಣಮಾಡಿ ಹೇಳಿದ ದೇಶಕ್ಕೆ ನೀವು ಹೋಗಿ ಸೇರುವಂತೆ ಮಾಡುವನು” ಎಂದು ತಿಳಿದುಕೊಳ್ಳಿರಿ.


ಅಲ್ಲಿಂದ ಯೇಸು ಪ್ರಯಾಣವನ್ನು ಪ್ರಾರಂಭಿಸಿದಾಗ, ದಾರಿಯಲ್ಲಿ ಒಬ್ಬನು ಓಡುತ್ತಾ ಆತನ ಎದುರಿಗೆ ಬಂದು ಮೊಣಕಾಲೂರಿ, “ಒಳ್ಳೆಯ ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯಸ್ಥನಾಗಬೇಕಾದರೆ ಏನು ಮಾಡಬೇಕೆಂದು” ಆತನನ್ನು ಕೇಳಿದನು.


ಅವನು ಒಳ್ಳೆಯವನೂ, ಪವಿತ್ರಾತ್ಮ ಭರಿತನೂ, ನಂಬಿಕೆಯಿಂದ ತುಂಬಿದವನೂ ಆಗಿದ್ದನು.


ಮಕ್ಕಳಾಗಿದ್ದರೆ ಬಾಧ್ಯಸ್ಥರೂ ಆಗಿದ್ದೇವೆ; ದೇವರಿಗೆ ಬಾಧ್ಯಸ್ಥರೂ ಹಾಗೂ ಕ್ರಿಸ್ತನೊಂದಿಗೆ ಸಹಾ ಬಾಧ್ಯರು ಆಗಿದ್ದೇವೆ. ಹೇಗೆಂದರೆ ಕ್ರಿಸ್ತನ ಕಷ್ಟಗಳಲ್ಲಿ ನಾವು ಪಾಲುಗಾರರಾಗುವುದಾದರೆ ಆತನ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.


ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲವೆಂಬುದು ನಿಮಗೆ ತಿಳಿಯದೋ? ಸುಳ್ಳನ್ನು ನಂಬಬೇಡಿರಿ. ಜಾರರು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಪುರುಷಗಾಮಿಗಳು, ಕಳ್ಳರು,


ಲೋಭಿಗಳು, ಕುಡುಕರು, ಜಗಳಮಾಡುವವರು, ಸುಲುಕೊಳ್ಳುವವರು ಇವರೊಳಗೆ ಒಬ್ಬರಾದರೂ ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು