Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 21:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವನು ಒಪ್ಪದೆ ಇದ್ದುದರಿಂದ; “ಕರ್ತನ ಚಿತ್ತದಂತೆ ಆಗಲಿ” ಎಂದು ಹೇಳಿ ನಾವು ಸುಮ್ಮನಾದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಪೌಲನು ಸಮ್ಮತಿಸುವುದಿಲ್ಲವೆಂದು ನಮಗೆ ಸ್ಪಷ್ಟವಾದಾಗ “ಪ್ರಭುವಿನ ಚಿತ್ತದಂತೆ ಆಗಲಿ,” ಎಂದು ಸುಮ್ಮನಾದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅವನು ಒಡಂಬಡದೆ ಇದ್ದದರಿಂದ ಕರ್ತನ ಚಿತ್ತವಿದ್ದಂತೆ ಆಗಲಿ ಎಂದು ಹೇಳಿ ನಾವು ಸುಮ್ಮಗಾದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಜೆರುಸಲೇಮಿಗೆ ಹೋಗದಂತೆ ನಾವು ಅವನನ್ನು ಒಪ್ಪಿಸಲಾಗಲಿಲ್ಲ. ಆದ್ದರಿಂದ ಬೇಡಿಕೊಳ್ಳುವುದನ್ನು ನಿಲ್ಲಿಸಿ, “ಪ್ರಭುವಿನ ಚಿತ್ತವು ನೆರವೇರಲೆಂದು ಪ್ರಾರ್ಥಿಸುತ್ತೇವೆ” ಎಂದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಪೌಲನು ಸಮ್ಮತಿಸದೆ ಇದ್ದ ಕಾರಣ, “ಕರ್ತ ಯೇಸುವಿನ ಚಿತ್ತ ನೆರವೇರಲಿ,” ಎಂದು ಹೇಳಿ ನಾವು ಸುಮ್ಮನಾದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತೆನಿ ಒಪ್ಪಿನಸ್ತಾನಾ ಹೊತ್ತ್ಯಾ ಸಾಟ್ನಿ ಧನಿಯಾಚ್ಯಾ ಇಚ್ಚಾ ಸಾರ್ಕೆ ಹೊಂವ್ದಿ ಮನುನ್ ಗಪ್ಪ್ ರಾಲ್ಯಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 21:14
10 ತಿಳಿವುಗಳ ಹೋಲಿಕೆ  

“ತಂದೆಯೇ, ನಿನಗೆ ಇಷ್ಟವಿದ್ದರೆ ಈ ಪಾತ್ರೆಯನ್ನು ನನ್ನಿಂದ ತೊಲಗಿಸು. ಹೇಗೂ ನನ್ನ ಚಿತ್ತವಲ್ಲ, ನಿನ್ನ ಚಿತ್ತದಂತೆಯೇ ಆಗಲಿ” ಪ್ರಾರ್ಥಿಸಿದನು.


ತಿರುಗಿ ಎರಡನೇ ಸಾರಿ ಹೋಗಿ, “ನನ್ನ ತಂದೆಯೇ, ನಾನು ಕುಡಿಯದ ಹೊರತು ಈ ಪಾತ್ರೆ ಬಿಟ್ಟುಹೋಗಲಾರದು ಎಂದಿದ್ದರೆ ನಿನ್ನ ಚಿತ್ತದಂತೆಯೇ ಆಗಲಿ” ಎಂದು ದೇವರನ್ನು ಪ್ರಾರ್ಥಿಸಿದನು.


ಆತನು ಸ್ವಲ್ಪ ಮುಂದೆ ಹೋಗಿ ಬೋರಲು ಬಿದ್ದು, “ನನ್ನ ತಂದೆಯೇ, ಸಾಧ್ಯವಾದರೆ ಈ ಪಾನಪಾತ್ರೆಯು ನನ್ನನ್ನು ಬಿಟ್ಟುಹೋಗಲಿ; ಆದರೂ ನನ್ನ ಚಿತ್ತದಂತಾಗದೆ ನಿನ್ನ ಚಿತ್ತದಂತೆಯೇ ಆಗಲಿ” ಎಂದು ದೇವರನ್ನು ಪ್ರಾರ್ಥಿಸಿದನು.


“ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವೆಂದು ಎಣಿಸಲ್ಪಡಲಿ. ನಿನ್ನ ರಾಜ್ಯವು ಬರಲಿ. ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರುವ ಪ್ರಕಾರ ಭೂಲೋಕದಲ್ಲಿಯೂ ನೆರವೇರಲಿ.


ಹಿಜ್ಕೀಯನು ಯೆಶಾಯನಿಗೆ, “ನೀನು ತಿಳಿಸಿದ ಯೆಹೋವನ ಮಾತು ಒಳ್ಳೆಯದಾಗಿದೆ. ನನ್ನ ಜೀವಮಾನ ಕಾಲದಲ್ಲಿ ಸಮಾಧಾನವೂ, ಭದ್ರತೆಯೂ ಇರುವುದಲ್ಲವೇ?” ಎಂದು ಕೊಂಡನು.


ಅದಕ್ಕಾತನು, “ನೀವು ಪ್ರಾರ್ಥಿಸುವಾಗ ಈ ರೀತಿಯಾಗಿ ಪ್ರಾರ್ಥಿಸಿರಿ, “ತಂದೆಯೇ, ನಿನ್ನ ನಾಮವು ಪರಿಶುದ್ಧವೆಂದು ಎಣಿಸಲ್ಪಡಲಿ. ನಿನ್ನ ರಾಜ್ಯವು ಬರಲಿ.


ಸಮುವೇಲನು ಮುಚ್ಚುಮರೆಯಿಲ್ಲದೆ ಎಲ್ಲವನ್ನು ತಿಳಿಸಿದನು. ಏಲಿಯು ಅದನ್ನು ಕೇಳಿ, “ಆತನು ಯೆಹೋವನು; ತನಗೆ ಸರಿಕಾಣುವುದನ್ನು ಮಾಡಲಿ” ಎಂದನು.


ಸರ್ವಶಕ್ತನಾದ ದೇವರು ನಿಮ್ಮ ಇನ್ನೊಬ್ಬ ಅಣ್ಣನನ್ನೂ, ಬೆನ್ಯಾಮೀನನನ್ನೂ ನಿಮ್ಮೊಂದಿಗೆ ಕಳುಹಿಸಿಕೊಡುವಂತೆ ನಿಮ್ಮ ಮೇಲೆ ಕರುಣೆ ತೋರುವಂತೆ ಮಾಡಲಿ. ನಾನಂತೂ ಮಕ್ಕಳನ್ನು ಕಳೆದುಕೊಂಡವನಾಗಿರಬೇಕು ಎಂದರೆ ಹಾಗೆಯೇ ಆಗಲಿ” ಎಂದು ಹೇಳಿದನು.


ಆಕೆಯು ತನ್ನ ಜೊತೆಯಲ್ಲಿ ಬರುವುದಕ್ಕೆ ನಿರ್ಧರಿಸಿದ್ದಾಳೆಂದು ನವೊಮಿಯು ತಿಳಿದು ಸುಮ್ಮನಾದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು