Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 21:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಮರುದಿನ ಪೌಲನು ನಮ್ಮನ್ನು ಕರೆದುಕೊಂಡು ಯಾಕೋಬನ ಬಳಿಗೆ ಹೋದನು. ಸಭೆಯ ಹಿರಿಯರೆಲ್ಲರು ಸಹ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಮಾರನೆಯ ದಿನ ಪೌಲನು ನಮ್ಮನ್ನು ಕರೆದುಕೊಂಡು ಯಕೋಬನನ್ನು ನೋಡಲು ಹೋದನು. ಧರ್ಮಸಭೆಯ ಹಿರಿಯರೆಲ್ಲರೂ ಅಲ್ಲಿ ಹಾಜರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಮರುದಿನ ಪೌಲನು ನಮ್ಮನ್ನು ಕರೆದುಕೊಂಡು ಯಾಕೋಬನ ಬಳಿಗೆ ಹೋದನು. ಸಭೇಹಿರಿಯರೆಲ್ಲರು ಸಹ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಮರುದಿನ ಯಾಕೋಬನನ್ನು ಸಂದರ್ಶಿಸಲು ಪೌಲನು ನಮ್ಮನ್ನು ಕರೆದುಕೊಂಡು ಹೋದನು. ಹಿರಿಯರೆಲ್ಲರು ಅಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಮರುದಿನ ನಾವೆಲ್ಲರೂ ಪೌಲನೊಂದಿಗೆ ಯಾಕೋಬನನ್ನು ನೋಡಲು ಹೋದೆವು. ಅಲ್ಲಿ ಎಲ್ಲಾ ಸಭೆಹಿರಿಯರೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ದುಸ್ರ್ಯಾಂದಿಸಿ ಪಾವ್ಲುನ್ ಅಮ್ಕಾ ಬಲ್ವುನ್ ಘೆವ್ನ್ ಜಾಕೊಬಾಕ್ ಭೆಟುಕ್ ನ್ಹೆಲ್ಯಾನ್, ತನ್ನಾ ಮುಖಂಡಾ ಸಗ್ಳಿ ಥೈ ಮಿಳುನ್ ಯೆಲ್ಲಿ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 21:18
12 ತಿಳಿವುಗಳ ಹೋಲಿಕೆ  

ಆದರೆ ಕರ್ತನ ಸಹೋದರನಾದ ಯಾಕೋಬನಲ್ಲದೆ ಅಪೊಸ್ತಲರಲ್ಲಿ ಬೇರೆ ಯಾರನ್ನೂ ನಾನು ಕಾಣಲಿಲ್ಲ.


ಸಭೆಯ ಸ್ತಂಭಗಳೆಂದು ಕರೆಸಿಕೊಂಡಿರುವ ಯಾಕೋಬ, ಕೇಫ, ಯೋಹಾನರು ದೇವರು ನನಗೆ ದಯಪಾಲಿಸಿರುವ ವರವನ್ನು ತಿಳಿದುಕೊಂಡು, ಅನ್ಯೋನ್ಯತೆಯನ್ನು ತೋರಿಸುವುದಕ್ಕಾಗಿ ನನಗೂ ಬಾರ್ನಬನಿಗೂ ಸಹಕಾರ ನೀಡಿ ಬಲಗೈ ಕೊಟ್ಟು, ನೀವು ಅನ್ಯಜನಗಳ ಬಳಿಗೆ ಹೋಗಿರಿ, ನಾವು ಸುನ್ನತಿಯವರ ಬಳಿಗೆ ಹೋಗುತ್ತೇವೆ ಅಂದರು.


ಅವರು ಮಾತನಾಡುವುದನ್ನು ಮುಗಿಸಿದ ಮೇಲೆ ಯಾಕೋಬನು ಆ ಸಂಗತಿಯನ್ನು ಕುರಿತು ಹೇಳಿದ್ದೇನಂದರೆ;


ಹಾಗೆಯೇ ಮಾಡಿ, ಅದನ್ನು ಬಾರ್ನಬನ ಮತ್ತು ಸೌಲರ ಕೈಯಿಂದ ಸಭೆಯ ಹಿರಿಯರಿಗೆ ಕಳುಹಿಸಿಕೊಟ್ಟರು.


ದೇವರಿಗೂ ಕರ್ತನಾದ ಯೇಸು ಕ್ರಿಸ್ತನಿಗೂ ದಾಸನಾಗಿರುವ ಯಾಕೋಬನು ಅನ್ಯದೇಶಗಳಲ್ಲಿ ಚದುರಿರುವ ಇಸ್ರಾಯೇಲ್ಯರ ಹನ್ನೆರಡು ಗೋತ್ರದವರಿಗೂ ಬರೆಯುವುದೇನೆಂದರೆ, “ನಿಮಗೆ ಶುಭವಾಗಲಿ.”


ಅವನು ಮಿಲೇತದಿಂದ ಎಫೆಸಕ್ಕೆ ಹೇಳಿಕಳುಹಿಸಿ ಅಲ್ಲಿಯ ಸಭೆಯ ಹಿರಿಯರನ್ನು ಕರಿಸಿದನು.


ಅವರ ಕೈಯಲ್ಲಿ ಬರೆದುಕೊಟ್ಟದ್ದೇನಂದರೆ; “ಸಹೋದರರೂ, ಅಪೊಸ್ತಲರೂ ಮತ್ತು ಹಿರಿಯರೂ, ಅಂತಿಯೋಕ್ಯ, ಸಿರಿಯ, ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೂ ಮಾಡುವ ವಂದನೆ;


ಅಪೊಸ್ತಲರೂ ಸಭೆಯ ಹಿರಿಯರೂ ಈ ವಿಷಯವನ್ನು ಕುರಿತು ಆಲೋಚಿಸುವುದಕ್ಕೆ ಸೇರಿ ಬಂದಾಗ, ಅವರಲ್ಲಿ ಬಹು ವಿವಾದವು ನಡೆದ ಮೇಲೆ ಪೇತ್ರನು ಎದ್ದು ಅವರಿಗೆ;


ಅವರೊಂದಿಗೆ ಪೌಲ ಮತ್ತು ಬಾರ್ನಬರಿಗೆ ಚರ್ಚೆಯೂ ಮಹಾ ವಿವಾದವೂ ಉಂಟಾದಾಗ ಇದರ ವಿಷಯವಾಗಿ ಪೌಲ, ಬಾರ್ನಬರು ಮತ್ತು ತಮ್ಮಲ್ಲಿ ಬೇರೆ ಕೆಲವರು ಯೆರೂಸಲೇಮಿನಲ್ಲಿದ್ದ ಅಪೊಸ್ತಲರ ಮತ್ತು ಸಭೆಯ ಹಿರಿಯರ ಬಳಿಗೆ ಹೋಗಬೇಕೆಂದು ಸಹೋದರರು ತೀರ್ಮಾನಿಸಿದರು.


ಅವನು ಸುಮ್ಮನಿರಿ ಎಂದು ಅವರಿಗೆ ಕೈಸನ್ನೆ ಮಾಡಿ ತನ್ನನ್ನು ಕರ್ತನು ಸೆರೆಮನೆಯೊಳಗಿಂದ ಹೊರಗೆ ಕರೆದುಕೊಂಡು ಬಂದ ರೀತಿಯನ್ನು ವಿವರಿಸಿ; “ಈ ಸಂಗತಿಗಳನ್ನು ಯಾಕೋಬನಿಗೂ, ಸಹೋದರರೆಲ್ಲರಿಗೂ ತಿಳಿಸಿರೆಂದು” ಹೇಳಿ ಬೇರೆ ಸ್ಥಳಕ್ಕೆ ಹೊರಟುಹೋದನು.


ಈ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು ಯಾವುವೆಂದರೆ, ಮೊದಲನೆಯವನು ಪೇತ್ರನೆನಿಸಿಕೊಳ್ಳುವ ಸೀಮೋನನು, ಅವನ ತಮ್ಮ ಅಂದ್ರೆಯ, ಜೆಬೆದಾಯನ ಮಗ ಯಾಕೋಬ, ಅವನ ತಮ್ಮನಾದ ಯೋಹಾನ,


ನಾನು ದೇವಾರಾಧನೆಮಾಡುವುದಕ್ಕೆ, ಯೆರೂಸಲೇಮಿಗೆ ಹೋಗಿ, ಹನ್ನೆರಡು ದಿನಗಳು ಮಾತ್ರವಾಗಿದೆಯೆಂದು ನೀನು ತಿಳಿದುಕೊಳ್ಳಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು