Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 21:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವರು ಅದನ್ನು ಕೇಳಿ ದೇವರನ್ನು ಕೊಂಡಾಡಿದರು. ಆಗ ಅವರು ಅವನಿಗೆ; “ಸಹೋದರನೇ, ಯೆಹೂದ್ಯರಲ್ಲಿ ಯೇಸುವನ್ನು ನಂಬಿರುವವರು ಸಾವಿರಾರು ಮಂದಿ ಇದ್ದಾರೆಂಬುದನ್ನು ನೋಡುತ್ತಿದ್ದೀಯಲ್ಲಾ. ಅವರೆಲ್ಲರೂ ಧರ್ಮಶಾಸ್ತ್ರದ ಅಭಿಮಾನಿಗಳಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಇದನ್ನು ಕೇಳಿದ ಅವರು ದೇವರನ್ನು ಕೊಂಡಾಡಿದರು. ಅನಂತರ ಅವರು ಪೌಲನಿಗೆ ಹೀಗೆಂದರು: "ಸಹೋದರಾ, ನಿನಗೆ ತಿಳಿದಿರುವಂತೆ ಯೆಹೂದ್ಯರಲ್ಲಿ ಭಕ್ತವಿಶ್ವಾಸಿಗಳಾಗಿರುವವರು ಸಾವಿರಾರು ಮಂದಿ ಇದ್ದಾರೆ; ಅವರೆಲ್ಲರೂ ಯೆಹೂದ್ಯ ಧರ್ಮಶಾಸ್ತ್ರದಲ್ಲಿ ಬಹಳ ಶ್ರದ್ಧೆ ಉಳ್ಳವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವರು ಇದನ್ನು ಕೇಳಿ ದೇವರನ್ನು ಕೊಂಡಾಡಿದರು. ಆಗ ಅವರು ಅವನಿಗೆ ಹೇಳಿದ್ದು - ಸಹೋದರನೇ, ಯೆಹೂದ್ಯರಲ್ಲಿ ಯೇಸುವನ್ನು ನಂಬಿರುವವರು ಎಷ್ಟೋ ಸಾವಿರ ಮಂದಿ ಇದ್ದಾರೆಂಬದನ್ನು ನೋಡುತ್ತೀಯಲ್ಲಾ. ಅವರೆಲ್ಲರೂ ಧರ್ಮಶಾಸ್ತ್ರದಲ್ಲಿ ಅಭಿಮಾನಿಗಳಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಈ ಸಂಗತಿಗಳನ್ನು ಕೇಳಿದ ಹಿರಿಯರು ದೇವರನ್ನು ಕೊಂಡಾಡಿದರು. ಬಳಿಕ ಅವರು ಪೌಲನಿಗೆ, “ಸಹೋದರನೇ, ವಿಶ್ವಾಸಿಗಳಿಗಾಗಿ ಪರಿವರ್ತನೆಗೊಂಡಿರುವ ಸಾವಿರಾರು ಮಂದಿ ಯೆಹೂದ್ಯರನ್ನು ನೀನು ಇಲ್ಲಿ ಕಾಣಬಹುದು. ಆದರೆ ಮೋಶೆಯ ಧರ್ಮಶಾಸ್ತ್ರಕ್ಕೆ ವಿಧೇಯರಾಗುವುದು ಬಹಳ ಮುಖ್ಯವೆಂಬುದು ಇವರ ಆಲೋಚನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅವರು ಅದನ್ನು ಕೇಳಿ, ದೇವರನ್ನು ಕೊಂಡಾಡಿದರು. ಅನಂತರ ಪೌಲನಿಗೆ, “ಸಹೋದರನೇ, ಸಾವಿರಾರು ಜನ ಯೆಹೂದ್ಯರು ನಂಬಿರುವುದನ್ನು ಕಾಣುತ್ತೀಯಲ್ಲಾ, ಅವರೆಲ್ಲರೂ ಮೋಶೆಯ ನಿಯಮದ ಅಭಿಮಾನಿಗಳಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ತೆನಿ ಹೆ ಆಯಿಕ್ಲ್ಯಾನಿ ದೆವಾಕ್ ಸ್ತುತಿ ಕರ್‍ಲ್ಯಾನಿ, ಅನಿ ತೆನಿ ಪಾವ್ಲುಕ್ ಭಾವಾ, ಹಜಾರ್ಘಟ್ಲಿ ಜುದೆವಾಂಚಿ ಲೊಕಾ ವಿಶ್ವಾಸಿ ಹೊವ್ನ್ ಬದಲಲ್ಲೆ ತಿಯಾ ಬಗುಕ್ ಲಾಗ್ಲೈಯ್, ಅನಿ ಖಾಯ್ದ್ಯಾಂಚೆ ಪುಸ್ತಕ್ ದೆವಸ್ಪಾನ್ ವಾಚುಲ್ಲಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 21:20
28 ತಿಳಿವುಗಳ ಹೋಲಿಕೆ  

ದೇವರ ಬಗ್ಗೆ ಆಸಕ್ತಿಯುಳ್ಳವರಾಗಿದ್ದಾರೆಂದು ನಾನು ಅವರ ವಿಷಯದಲ್ಲಿ ಸಾಕ್ಷಿ ಕೊಡುತ್ತೇನೆ; ಆದರೂ ಅವರ ಆಸಕ್ತಿಯು ಜ್ಞಾನಾನುಸಾರವಾದುದಲ್ಲ.


ಇದಲ್ಲದೆ ನಾನು ನನ್ನ ಪೂರ್ವಿಕರಿಂದ ಬಂದ ಸಂಪ್ರದಾಯಗಳ ಬಗ್ಗೆ ಬಹು ಅಭಿಮಾನವುಳ್ಳವನಾಗಿ, ನನ್ನ ಜನರೊಳಗೆ ಸಮಪ್ರಾಯದವರಾದ ಅನೇಕರಿಗಿಂತ ಯೆಹೂದ್ಯ ಮತಾಚಾರದಲ್ಲಿ ಆಸಕ್ತನಾಗಿದ್ದೆನು.


“ನಾನು ಯೆಹೂದ್ಯನು, ಕಿಲಿಕ್ಯದ ತಾರ್ಸದಲ್ಲಿ ಹುಟ್ಟಿದವನು, ಆದರೆ ಈ ಪಟ್ಟಣದಲ್ಲೇ ಬೆಳೆದವನು. ಗಮಲಿಯೇಲನ ಪಾದಸನ್ನಿಧಿಯಲ್ಲಿ, ನಮ್ಮ ಪೂರ್ವಿಕರ ಧರ್ಮಶಾಸ್ತ್ರದಲ್ಲಿ ಪೂರ್ಣ ಶಿಕ್ಷಣವನ್ನು ಪಡೆದವನು; ನೀವೆಲ್ಲರೂ ಈಹೊತ್ತು ದೇವರ ವಿಷಯದಲ್ಲಿ ಅಭಿಮಾನಿಗಳಾಗಿರುವಂತೆಯೇ, ನಾನೂ ಅಭಿಮಾನಿಯಾಗಿದ್ದೆನು.


ಬಳಿಕ ಕೆಲವರು ಯೂದಾಯದಿಂದ ಅಂತಿಯೋಕ್ಯಕ್ಕೆ ಬಂದು; “ನೀವು ಮೋಶೆಯ ಧರ್ಮಶಾಸ್ತ್ರದಲ್ಲಿ ಹೇಳಿರುವ ನಿಯಮದ ಪ್ರಕಾರ ಸುನ್ನತಿಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗಲಾರದು” ಎಂಬುದಾಗಿ ಸಹೋದರರಿಗೆ ಉಪದೇಶಮಾಡುತ್ತಿದ್ದರು.


ಈ ಮಾತುಗಳನ್ನು ಅವರು ಕೇಳಿ ಆಕ್ಷೇಪಣೆ ಮಾಡುವುದನ್ನು ಬಿಟ್ಟು; “ಹಾಗಾದರೆ ದೇವರು ಅನ್ಯಜನರಿಗೂ ಜೀವಕೊಡಬೇಕೆಂದು ಅವರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿದ್ದಾನೆ” ಎಂದು ದೇವರನ್ನು ಕೊಂಡಾಡಿದರು.


ಆದರೆ ಫರಿಸಾಯ ಮತದವರಲ್ಲಿ ಯೇಸುವನ್ನು ನಂಬಿದ್ದ ಕೆಲವರು ಎದ್ದು; “ದೇವರ ಕಡೆಗೆ ತಿರುಗಿಕೊಂಡಿರುವ ಅನ್ಯಜನರಿಗೆ ಸುನ್ನತಿಮಾಡಿಸಬೇಕು, ಮತ್ತು ಮೋಶೆಯ ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುವುದಕ್ಕೆ ಅವರಿಗೆ ಅಪ್ಪಣೆಕೊಡಬೇಕು” ಎಂದು ಹೇಳಿದರು.


ಆ ದಿನದಲ್ಲಿ ಆತನು ಬರುವಾಗ ತನ್ನ ಪರಿಶುದ್ಧ ಜನರಿಂದ ಮಹಿಮೆ ಹೊಂದಿದವನಾಗಿಯೂ ಮತ್ತು ನಾವು ನಿಮಗೆ ಹೇಳಿದ ಸಾಕ್ಷಿಯನ್ನು ನಂಬಿದವರೆಲ್ಲರ ಮೂಲಕ ತನ್ನ ವಿಷಯದಲ್ಲಿ ಆಶ್ಚರ್ಯ ಹುಟ್ಟಿಸುವನು.


“ನಮ್ಮೊಳಗಿಂದ ಹೊರಟು ಕೆಲವರು ನಮ್ಮಿಂದ ಯಾವ ಅಪ್ಪಣೆಯನ್ನು ಹೊಂದದೆ ತಮ್ಮ ಮಾತುಗಳಿಂದ ನಿಮ್ಮಲ್ಲಿ ಅಸಮಾಧಾನವನ್ನು ಹುಟ್ಟಿಸಿ ನಿಮ್ಮ ಮನಸ್ಸುಗಳನ್ನು ಕಳವಳಗೊಳಿಸಿದ್ದಾರೆಂಬುದನ್ನು ಕೇಳಿದ್ದರಿಂದ,


ದೇವರ ವಾಕ್ಯವು ಪ್ರಬಲವಾಯಿತು; ಶಿಷ್ಯರ ಸಂಖ್ಯೆಯು ಯೆರೂಸಲೇಮಿನಲ್ಲಿ ಬಹಳವಾಗಿ ಹೆಚ್ಚುತ್ತಾ ಬಂದಿತು. ಯಾಜಕರಲ್ಲಿಯೂ ಬಹುಜನರು ಕ್ರಿಸ್ತ ನಂಬಿಕೆಗೆ ಒಳಗಾಗುತ್ತಾ ಬಂದರು.


ನಡೆದಿದ್ದ ಸೂಚಕ ಕಾರ್ಯಕ್ಕೋಸ್ಕರ ಜನರೆಲ್ಲರು ದೇವರನ್ನು ಕೊಂಡಾಡುತ್ತಿದ್ದ ಕಾರಣ ಅವರ ದೆಸೆಯಿಂದ ಸಭೆಯವರು ಅಪೊಸ್ತಲರನ್ನು ದಂಡಿಸತಕ್ಕ ಉಪಾಯವನ್ನು ಕಾಣದೆ ಅವರನ್ನು ಇನ್ನಷ್ಟು ಬೆದರಿಸಿ ಬಿಟ್ಟು ಬಿಟ್ಟರು.


ಆದರೆ ವಾಕ್ಯವನ್ನು ಕೇಳಿದವರಲ್ಲಿ ಅನೇಕರು ನಂಬಿದರು; ಗಂಡಸರ ಸಂಖ್ಯೆ ಸುಮಾರು ಐದು ಸಾವಿರಕ್ಕೆ ಏರಿತು.


ಅವನ ಬೋಧನೆಯನ್ನು ಅಂಗೀಕರಿಸಿದ ಅನೇಕರು ದೀಕ್ಷಾಸ್ನಾನಮಾಡಿಸಿ ಕೊಂಡರು. ಆ ದಿನ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಕೊಂಡರು.


ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಗೋದಿಯ ಕಾಳು ಭೂಮಿಯಲ್ಲಿ ಬಿದ್ದು ಸಾಯದಿದ್ದರೆ ಒಂಟಿಯಾಗಿ ಉಳಿಯುವುದು. ಆದರೆ ಅದು ಸತ್ತರೆ ಬಹಳ ಫಲ ಕೊಡುವುದು


ಆದರೆ ಉಲ್ಲಾಸಪಡುವುದೂ ಸಂತೋಷಗೊಳ್ಳುವುದೂ ನ್ಯಾಯವಾದದ್ದೇ, ಏಕೆಂದರೆ ಈ ನಿನ್ನ ತಮ್ಮ ಸತ್ತವನಾಗಿದ್ದನು, ತಿರುಗಿ ಬದುಕಿ ಬಂದಿದ್ದಾನೆ; ಪೋಲಿಹೋಗಿದ್ದನು, ಸಿಕ್ಕಿದನು’” ಎಂದು ಹೇಳಿದನು.


ಇಷ್ಟರಲ್ಲಿ ಸಾವಿರಾರು ಜನರು ಒಬ್ಬರನ್ನೊಬ್ಬರು ತುಳಿಯುವಷ್ಟು ಕೂಡಿಬಂದಿರಲಾಗಿ ಯೇಸು ಮೊದಲು ತನ್ನ ಶಿಷ್ಯರಿಗೆ ಉಪದೇಶಿಸಿ ಹೇಳಿದ್ದೇನೆಂದರೆ, “ಫರಿಸಾಯರ ಹುಳಿಹಿಟ್ಟಿನ ಬಗ್ಗೆ, ಅಂದರೆ ಅವರ ಕಪಟತನದ ವಿಷಯದಲ್ಲಿ ಜಾಗರೂಕರಾಗಿರಿ.


ಭೂಮಂಡಲದವರೆಲ್ಲರೂ ಎಚ್ಚರಗೊಂಡು ಯೆಹೋವನ ಕಡೆಗೆ ತಿರುಗಿಕೊಳ್ಳುವರು; ಯೆಹೋವನೇ, ಎಲ್ಲಾ ಜನಾಂಗಗಳವರು ನಿನಗೆ ಅಡ್ಡಬೀಳುವರು.


ಯೆಹೋವನ ಭಕ್ತರೇ, ಆತನನ್ನು ಸ್ತುತಿಸಿರಿ; ಯಾಕೋಬ ವಂಶದವರೇ, ನೀವೆಲ್ಲರೂ ಆತನನ್ನು ಕೊಂಡಾಡಿರಿ. ಇಸ್ರಾಯೇಲ್ ವಂಶಸ್ಥರೇ, ನೀವೆಲ್ಲರೂ ಆತನಲ್ಲಿ ಭಯಭಕ್ತಿಯುಳ್ಳವರಾಗಿರಿ.


ನನ್ನ ಕುರಿತಾಗಿ ದೇವರನ್ನು ಕೊಂಡಾಡಿದರು.


ಜನರು ಇದನ್ನು ನೋಡಿ ಆಶ್ಚರ್ಯಚಕಿತರಾಗಿ, ಮನುಷ್ಯರಿಗೆ ಇಂಥ ಅಧಿಕಾರವನ್ನು ಕೊಟ್ಟ ದೇವರನ್ನು ಕೊಂಡಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು